ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ತಾಲೂಕಿನ ಕೆಲವು ಭಾಗದಲ್ಲಿ ಭೀತಿ ಮೂಡಿಸಿದ್ದ ಕಾಡಾನೆಯನ್ನು ಹನಿ ಟ್ರಾಪ್ ಮೂಲಕ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಕಾಡಾನೆಯೊಂದು ತೀರ್ಥಹಳ್ಳಿಯ ಹೊರ ಪ್ರದೇಶ ಮೇಲಿನ ಕುರುವಳ್ಳಿ, ದೇವಂಗಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಂಚರಿಸಿ ಜನರಲ್ಲಿ ಭಯ ಮೂಡಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯವಂತೆ ಸಾರ್ವಜನಿಕರು ಬಹಳಷ್ಟು ದೂರಿದ್ದಾರೆ.
ಹೀಗಾಗಿ, ಹೆಣ್ಣಾನೆಯನ್ನು ಬಳಿಸಿಕೊಂಡು ಹನಿಟ್ರಾಪ್ ಮೂಲಕ ಕಾಡಾನೆಯನ್ನು ಹಿಡಿಯಲು ಅರಣ್ಯ ಇಲಾಖೆ ಯೋಜನೆ ರೂಪಿಸಿತು. ಸಕ್ರೆಬೈಲು ಬಿಡಾರದ ಹೆಣ್ಣಾನೆಯನ್ನು ಬಳಕೆ ಮಾಡಿಕೊಳ್ಳಲಾಗಿದ್ದು, ಭಾನುಮತಿ ಆನೆಯನ್ನು ಕಾಡಿನಲ್ಲಿ ಕಟ್ಟಿ ಹಾಕಿ, ಕಾಡಾನೆಯನ್ನು ಸೆಳೆಯುವ ಹನಿಟ್ರಾಪ್ ತಂತ್ರವನ್ನು ಬಳಕೆ ಮಾಡಲಾಗಿತ್ತು. ಎರಡು ದಿನದ ಹಿಂದೆ ಭಾನುಮತಿಯನ್ನು ಗಮನಿಸಿ ಕಾಡಾನೆ ಹತ್ತಿರಕ್ಕೆ ಬಂದಿತ್ತು. ಅಷ್ಟು ಹೊತ್ತಿಗೆ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಕಂಡು ಕಾಡಿನೊಳಗ್ಗೆ ಪರಾರಿಯಾಗಿತ್ತು. ಕಳೆದ ರಾತ್ರಿ ಪುನಃ ಭಾನುಮತಿಯನ್ನು ಅರಸಿ ಬಂದ ಕಾಡಾನೆಗೆ ಅರಣ್ಯ ಇಲಾಖೆ ಸಿಬ್ಬಂದಿ ಡಾರ್ಟ್ ಮಾಡಿದ್ದಾರೆ. ಅಂತಿಮವಾಗಿ ನಿನ್ನೆ ತಡರಾತ್ರಿ ದೇವಂಗಿ ಸಮೀಪದ ಮಾಳೂರಿನಲ್ಲಿ ಆನೆಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಶಿವಮೊಗ್ಗ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಸಕ್ರೆ ಬೈಲಿನ ಆನೆಗಳ ಸಹಾಯದಿಂದ ಕಾರ್ಯಾಚರಣೆ ನಡೆಯಿತು.
ಸದ್ಯ ಸೆರೆ ಸಿಕ್ಕ ಆನೆಯನ್ನು ಮಾಳೂರಿನಲ್ಲಿಯೇ ಕಟ್ಟಿ ಹಾಕಲಾಗಿದ್ದು, ಇದನ್ನು ಎಲ್ಲ ಬಿಡಬೇಕು ಎಂಬುದು ಇನ್ನೂ ನಿರ್ಧಾರವಾಗಿಲ್ಲ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















