ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಮೇಳಿಗೆಯಿಂದ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ದನಗಳ್ಳರನ್ನು ತಡೆಯಲು ಯತ್ನಿಸಿದ ಇಬ್ಬರು ಯುವಕರ ಮೇಲೆ ಪಿಕ್ಅಪ್ ಹತ್ತಿಸಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳವಾರ ನಡೆದಿದೆ.
ಘಟನೆ ಹಿನ್ನೆಲೆ:
ದನಗಳನ್ನು ಸಾಗಿಸುತ್ತಿದ್ದ ಪಿಕ್ಅಪ್ ವಾಹನವನ್ನು ಮೇಳಿಗೆಯಿಂದ ಹಿಂಬಾಲಿಸಿಕೊಂಡು ಬಂದ ಯುವಕರ ಮೇಲೆ ಬೆಜ್ಜವಳ್ಳಿಯಲ್ಲಿ ವಾಹನ ಹತ್ತಿಸಲಾಗಿದೆ. ಕುಡುಮಲ್ಲಿಗೆ ರೈಸ್ ಮಿಲ್ ಬಳಿಯೂ ಕೆಲವರ ಮೇಲೆ ಪಿಕ್ಅಪ್ ವಾಹನ ಹತ್ತಿಸಿದ ಘಟನೆ ನಡೆದಿದೆ.
ಕಿತ್ತನಗದ್ದೆ ಮಂಜುನಾಥ್ ಅವರ ಪುತ್ರರಾದ ಕಿರಣ್(೨೩), ಚರಣ್(೨೪) ಗಂಭೀರ ಗಾಯಗೊಂಡಿದ್ದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಸ್ಪತ್ರೆಯ ಮುಂದೆ ಜನ ಜಮಾವಣೆ:
ಘಟನೆ ನಡೆದ ಬಳಿಕ ಆಸ್ಪತ್ರೆಯ ಮುಂದೆ ನೂರಾರು ಜನ ಸೇರಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.
ಆರೋಪಿಗಳ ಮೇಲೆ ಕಠಿಣ ಕ್ರಮ:
ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಗೃಹ ಸಚಿವರು, ಘಟನೆಯಲ್ಲಿ ಗಾಯಗೊಂಡಿರುವ ಇಬ್ಬರು ಯುವಕರ ಚಿಕಿತ್ಸೆಗೆ ಮಣಿಪಾಲದಲ್ಲಿ ವ್ಯವಸ್ಥೆ ಮಾಡಲಾಗಿದೆ. ಆರೋಪಿಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಭಜರಂಗದಳದ ಆಕ್ರೋಶ:
ಮಲೆನಾಡಿನಲ್ಲಿ ಅಕ್ರಮ ಗೋ ಸಾಗಣೆ ಹೆಚ್ಚುತ್ತಿದೆ. ಒಂದು ತಿಂಗಳ ಹಿಂದೆ ನಡೆದ ಗುರುಮೂರ್ತಿ ಪ್ರಕರಣ ಇನ್ನು ತನಿಖೆಯಾಗಿಲ್ಲ. ಪ್ರತಿ ದಿನ ಗೋವುಗಳ ಕಳ್ಳ ಸಾಗಣೆ ನಡೆಯುತ್ತಲಿದೆ. ಕೂಡಲೇ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹಿಂದೂ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post