ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಪ್ರೀತಿ ನಿರಾಕರಿಸಿದ #Rejection of love ಕಾರಣ ಯುವಕನೋರ್ವ ಯುವತಿಗೆ ಬಿಯರ್ ಬಾಟಲಿಯಿಂದ ಚುಚ್ಚಿ ಹಲ್ಲೆ #attacked with a beer bottle ನಡೆಸಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.
ತೂದೂರು ಗ್ರಾಮದ ಸ್ವರೂಪ್, ಅಪೂರ್ವ ಎಂಬ ಯುವತಿಯ ಮನೆಗೆ ನುಗ್ಗಿ ಬಿಯರ್ ಬಾಟಲಿಯಿಂದ ಚುಚ್ಚಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಘಟನೆ ಹಿನ್ನೆಲೆ:
ಅಪೂರ್ವ ಎಂಬ ಯುವತಿಯನ್ನು ಕಳೆದ ಆರು ತಿಂಗಳಿಂದ ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕ ಸ್ವರೂಪ್, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು. ನಿನ್ನೆ ಸಂಜೆ ಏಕಾಏಕಿ ಅಪೂರ್ವ ಮನೆಗೆ ನುಗ್ಗಿ ದಾಂದಲೇ ನಡೆಸಿದ್ದಾನೆ. ಸ್ವರೂಪ್ ಮನೆಗೆ ನುಗ್ಗುತ್ತಿದಂತೆ ವಿರೋಧ ವ್ಯಕ್ತಪಡಿಸಿದ ಅಪೂರ್ವ ತಾಯಿ ಪೂರ್ಣಿಮಾರನ್ನ ಹೊರಗೆ ತಳ್ಳಿ ಮನೆಯ ಬಾಗಿಲು ಹಾಕಿ ಯುವತಿ ಮೇಲೆ ಸ್ವರೂಪ್ ಹಲ್ಲೆ ನಡೆಸಿದ್ದಾನೆ.
ಮನೆಯ ಒಳಗೆ ಅಪೂರ್ವಳನ್ನು ಲಾಕ್ ಮಾಡಿ ಮೊದಲೇ ತಂದಿದ್ದ ಬಿಯರ್ ಬಾಟಲ್ ನಿಂದ ಮನಸೋಇಚ್ಚೆ ಚುಚ್ಚಿ ಅಪೂರ್ವ ಕತ್ತಿನ ಭಾಗ ಹಾಗೂ ಹೊಟ್ಟೆ, ಬೆನ್ನಿನ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ.
ನಂತರ ಸ್ವಲ್ಪ ದೂರದಲ್ಲೇ ಇದ್ದ ಯುವತಿ ತಂದೆ ಸುಧಾಕರ್ ಬಾಗಿಲು ಒಡೆದು ಯುವತಿಯ ರಕ್ಷಣೆ ಮಾಡಿದ್ದಾರೆ. ಈ ವೇಳೆ ಘಟನಾ ಸ್ಥಳದಿಂದ ಸ್ವರೂಪ್ ಪರಾರಿಯಾಗಿದ್ದಾನೆ.
ಹತ್ತಿರದ ತಾಲೂಕು ಆಸ್ಪತ್ರೆಯಲ್ಲಿ ಯುವತಿಗೆ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ಗೆ ಕರೆದೊಯ್ಯಲಾಗಿದೆ. ಪಾಗಲ್ ಪ್ರೇಮಿ ಸ್ವರೂಪ್ ನನ್ನು ತೀರ್ಥಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ತನಿಖೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















