Read - 2 minutes
ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಅನಂತ ಕಲ್ಲಾಪುರ ತೀರ್ಥಹಳ್ಳಿ ಇವರ ಸಾಹಿತ್ಯದಲ್ಲಿ ಮೂಡಿ ಬಂದಿರುವ ಶ್ರೀ ರಾಮೇಶ್ವರ ಉತ್ಸವ ಹಾಡಿನ ಧ್ವನಿಸುರುಳಿಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಅವರು, ಅನಂತ ಕಲ್ಲಾಪುರ ಅವರ ಹಾಡಿನ ಸಾಹಿತ್ಯ ಶ್ರೀ ರಾಮೇಶ್ವರ ಹಾಗೂ ಜಾತ್ರೆಯ ವೈಭವ ಜನರ ಮನಕ್ಕೆ ಮುಟ್ಟುವಂತೆ ಇದೆ. ಅವರಿಂದ ಇನ್ನೂ ಹೆಚ್ಚಿನ ಭಕ್ತಿ ಗೀತೆಗಳು ಮೂಡಿ ಬರಲಿ ಎಂದು ಹಾರೈಸಿದರು.

ಮಲೆನಾಡ ಕೋಗಿಲೆ ಗರ್ತಿಕೆರೆ ರಾಘಣ್ಣ ಅನಂತ ಕಲ್ಲಾಪುರ ಅವರ ಸಾಹಿತ್ಯಕ್ಕೆ ರಾಗ ಸಂಯೋಜಿಸಿದ್ದು, ಡಿ.ಜಿ. ರಾಘವೇಂದ್ರ ಮತ್ತು ತಂಡ ತೀರ್ಥಹಳ್ಳಿ ಇವರ ಗಾಯನದಲ್ಲಿ ಎಸ್.ಯು ಮ್ಯೂಸಿಕ್ ಕುಂದಾಪುರ ಇವರು ಸಂಗೀತ ಸಂಯೋಜಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಜಾತ್ರಾ ಸಮಿತಿ ಮತ್ತು ಪಟ್ಟಣ ಪಂಚಾಯತ್ ಸದಸ್ಯರಾದ ರಾಘವೇಂದ್ರ ಸೊಪ್ಪು ಗುಡ್ಡೆ,ತೀರ್ಥಹಳ್ಳಿ ಭಾಜಪ ಅಧ್ಯಕ್ಷರಾದ ರಾಘವೇಂದ್ರ ನಾಯಕ್ , ರಂಗಾಯಣ ನಿರ್ದೇಶಕರು ಮತ್ತು ಪಟ್ಟಣ ಪಂಚಾಯತ್ ಸದಸ್ಯರಾದ ಸಂದೇಶ್ ಜವಳಿ , ವಿಶ್ವ ಹಿಂದು ಪರಿಷತ್ ಕಾರ್ಯದರ್ಶಿ ಗಣೇಶ್ ಪ್ರಸಾದ್ ಮತ್ತು ತೀರ್ಥಳ್ಳಿ ಭಾಜಪ ಯುವ ಮೋರ್ಚಾದ ಅಧ್ಯಕ್ಷರಾದ ಸಂತೋಷ್ ದೇವಾಡಿಗ ಹಾಗು ಗಾಯಕರಾಘವೇಂದ್ರ ಡಿ.ಜಿ.ಮತ್ತು ತಂಡ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

ನಂತರ ಮಾತನಾಡಿದ ಅವರು, ಅನಂತ ಕಲ್ಲಾಪುರ ಅವರ ಹಾಡಿನ ಸಾಹಿತ್ಯ ಶ್ರೀ ರಾಮೇಶ್ವರ ಹಾಗೂ ಜಾತ್ರೆಯ ವೈಭವ ಜನರ ಮನಕ್ಕೆ ಮುಟ್ಟುವಂತೆ ಇದೆ. ಅವರಿಂದ ಇನ್ನೂ ಹೆಚ್ಚಿನ ಭಕ್ತಿ ಗೀತೆಗಳು ಮೂಡಿ ಬರಲಿ ಎಂದು ಹಾರೈಸಿದರು.
ಮಲೆನಾಡ ಕೋಗಿಲೆ ಗರ್ತಿಕೆರೆ ರಾಘಣ್ಣ ಅನಂತ ಕಲ್ಲಾಪುರ ಅವರ ಸಾಹಿತ್ಯಕ್ಕೆ ರಾಗ ಸಂಯೋಜಿಸಿದ್ದು, ಡಿ.ಜಿ. ರಾಘವೇಂದ್ರ ಮತ್ತು ತಂಡ ತೀರ್ಥಹಳ್ಳಿ ಇವರ ಗಾಯನದಲ್ಲಿ ಎಸ್.ಯು ಮ್ಯೂಸಿಕ್ ಕುಂದಾಪುರ ಇವರು ಸಂಗೀತ ಸಂಯೋಜಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಜಾತ್ರಾ ಸಮಿತಿ ಮತ್ತು ಪಟ್ಟಣ ಪಂಚಾಯತ್ ಸದಸ್ಯರಾದ ರಾಘವೇಂದ್ರ ಸೊಪ್ಪು ಗುಡ್ಡೆ,ತೀರ್ಥಹಳ್ಳಿ ಭಾಜಪ ಅಧ್ಯಕ್ಷರಾದ ರಾಘವೇಂದ್ರ ನಾಯಕ್ , ರಂಗಾಯಣ ನಿರ್ದೇಶಕರು ಮತ್ತು ಪಟ್ಟಣ ಪಂಚಾಯತ್ ಸದಸ್ಯರಾದ ಸಂದೇಶ್ ಜವಳಿ , ವಿಶ್ವ ಹಿಂದು ಪರಿಷತ್ ಕಾರ್ಯದರ್ಶಿ ಗಣೇಶ್ ಪ್ರಸಾದ್ ಮತ್ತು ತೀರ್ಥಳ್ಳಿ ಭಾಜಪ ಯುವ ಮೋರ್ಚಾದ ಅಧ್ಯಕ್ಷರಾದ ಸಂತೋಷ್ ದೇವಾಡಿಗ ಹಾಗು ಗಾಯಕರಾಘವೇಂದ್ರ ಡಿ.ಜಿ.ಮತ್ತು ತಂಡ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post