ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಈ ಬಾರಿಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ತೀರ್ಥಹಳ್ಳಿಯಿಂದ ಸ್ಪರ್ಧಿಸಿದ್ದ ಹಾಲಿ ಗೃಹಸಚಿವ ಆರಗ ಜ್ಞಾನೇಂದ್ರ, ಜಯಭೇರಿ ಭಾರಿಸಿದ್ದಾರೆ.
ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರನ್ನು ಸುಮಾರು 12080 ಸಾವಿರ ಮತಗಳ ಅಂತರದಲ್ಲಿ ಸೋಲಿಸಿದ್ದಾರೆ.
ಆರಗ ಜ್ಞಾನೇಂದ್ರ 83,871, ಕಿಮ್ಮನೆ ರತ್ನಾಕರ್ 71,791 ಮತಗಳನ್ನು ಪಡೆದಿದ್ದಾರೆ.
ಸತತ ಐದನೇ ಬಾರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ ಪರಸ್ಪರ ಸ್ಪರ್ಧಿಸಿದ್ದರು. ಈ ಹಿಂದೆ ಮೂರು ಬಾರಿ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದರೆ ಕಿಮ್ಮನೆ ಎರಡು ಬಾರಿ ಗೆದ್ದಿದ್ದಾರೆ. ಒಟ್ಟಾರೆ 4 ಬಾರಿ ತೀರ್ಥಹಳ್ಳಿ ಕ್ಷೇತ್ರವನ್ನು ಆರಗ ಜ್ಞಾನೇಂದ್ರ ಪ್ರತಿನಿಧಿಸಿದ್ದಾರೆ.
ವಿಶೇಷವಾಗಿ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ, ಎಐಸಿಸಿ ಅಧ್ಯಕ್ಷ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತುಪಡಿಸಿದರೆ ರಾಜ್ಯದಲ್ಲಿ 10ನೇ ಬಾರಿ ವಿಧಾನಸಭೆಗೆ ಸ್ಪರ್ಧಿಸುತ್ತಿರುವವರಲ್ಲಿ ಆರಗ ಜ್ಞಾನೇಂದ್ರ ಪ್ರಮುಖರು. ಮಲ್ಲಿಕಾರ್ಜುನ ಖರ್ಗೆಯವರು 10 ಬಾರಿ ವಿಧಾನಸಭೆಗೆ ಸ್ಪರ್ಧಿಸಿ ದಾಖಲೆ ನಿರ್ಮಿಸಿದ್ದಾರೆ. ಈಗ ಆರಗ ಜ್ಞಾನೇಂದ್ರ ಕೂಡ 10ನೇ ಬಾರಿ ವಿಧಾನಸಭೆಗೆ ಸ್ಪರ್ಧಿಸಿದ್ದಾರೆ. ಜೊತೆಗೆ, 10 ಬಾರಿಯೂ ಒಂದೇ ಪಕ್ಷ ಮತ್ತು ಒಂದೇ ಚಿಹ್ನೆಯಡಿ ಸ್ಪರ್ಧೆ ಮಾಡಿದ್ದಾರೆ. 1983ರಲ್ಲಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಮೊದಲ ಬಾರಿಗೆ ಅವರು ಬಿಜೆಪಿಯಿಂದ ವಿಧಾನಸಭೆಗೆ ಸ್ಪರ್ಧಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post