ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ತಾಲ್ಲೂಕಿನ ಕುರುವಳ್ಳಿ ಪುತ್ತಿಗೆ ಮಠದ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಮಂಜಪ್ಪ (45) ಬೀರಪ್ಪ (46) ಹತ್ಯೆಗೀಡಾದವರು ಎಂದು ಗುರುತಿಸಲಾಗಿದ್ದು, ಇವರು ದಾವಣಗೆರೆ ಜಿಲ್ಲೆಯಿಂದ ಕಟ್ಟಡ ನಿರ್ಮಾಣ ಕೆಲಸಕ್ಕೆ ಬಂದಿದ್ದ ಕಾರ್ಮಿಕರು ಎನ್ನಲಾಗಿದೆ.
ಸಮುದಾಯ ಭವನ ನಿರ್ಮಾಣ ಕಾರ್ಯದಲ್ಲಿ ಮೂವರು ಕೆಲಸಗಾರರಾಗಿದ್ದರು. ಕಳೆದ ರಾತ್ರಿ ಮೂವರ ಮಧ್ಯೆ ಜಗಳವಾಗಿದ್ದು, ರಾಜಣ್ಣ, ಇಬ್ಬರನ್ನು ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Also read: ಮೇ 20ರಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ: ಕಾಂಗ್ರೆಸ್ ಹೈಕಮಾಂಡ್
ಘಟನಾ ಸ್ಥಳಕ್ಕೆ ತೀರ್ಥಹಳ್ಳಿ ಠಾಣೆಯ ಪೊಲೀಸರು ದೌಡಾಯಿಸಿದ್ದು ಸೇರಿದಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದೇ ತಿಂಗಳ 25 ರಂದು ಸಮುದಾಯ ಭವನ ಉದ್ಘಾಟನಾ ಕಾರ್ಯಕ್ರಮ ನಿಗಧಿಯಾಗಿದ್ದು, ಈ ದುರ್ಘನೆ ಸ್ಥಳೀಯಲ್ಲಿ ಆತಂಕ ಮೂಡಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post