ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಮೋದಿಯ #Modi ಭ್ರಮಲೋಕದಲ್ಲಿ ತೇಲುತ್ತಿರುವ ನಮ್ಮ ಯುವಕರಿಗೆ ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪನವರು #Bangarappa ಮಾಡಿರುವ ಸಹಾಯದಿಂದ ನಮ್ಮ ಬದುಕು ಹಸನಾಗಿದೆ ಎಂಬ ಅರಿವನ್ನು ಮೂಡಿಸಬೇಕಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಹಾಗೂ ತೀರ್ಥಹಳ್ಳಿ ಕ್ಷೇತ್ರದ ಲೋಕಸಭಾ ಚುನಾವಣೆ ಉಸ್ತುವಾರಿ ಎಂ. ರಮೇಶ್ ಶೆಟ್ಟಿ ಶಂಕರಘಟ್ಟ #Ramesh Shankaraghatta ಇವರು ಅಭಿಪ್ರಾಯಪಟ್ಟರು.
ಅವರು ಇಂದು ತೀರ್ಥಹಳ್ಳಿ ತಾಲ್ಲೂಕಿನ ಗಾಜನೂರು, ಸಿಂಗನಬಿದ್ರೆ, ಮಂಡಗದ್ದೆ, ತೂದೂರು, ಬೆಜ್ಜುವಳ್ಳಿ, ಕನ್ನಂಗಿ ಹಾಗೂ ಹಣಿಗೆರೆಕಟ್ಟೆಯಲ್ಲಿ ಆಯೋಜಿಸಿದ್ದ ಲೋಕಸಭಾ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದರು.

Also read: ಪುರುಷ ಪ್ರಯಾಣಿಕರಿಗೆ ಬಸ್ಸೇ ದೊರೆಯದ ಹಾಗೆ ಮಾಡಿದ್ದೆ ಕಾಂಗ್ರೆಸ್ ಸಾಧನೆ | ರಾಘವೇಂದ್ರ ಕಿಡಿ
ಗ್ರಾಮೀಣ ಭಾಗದ ಮಕ್ಕಳು ಇಂದು ದೊಡ್ಡ, ಡೊಡ್ಡ ಸರ್ಕಾರಿ ಹುದ್ದೆಯಲ್ಲಿದ್ದಾರೆಂದರೆ ಗ್ರಾಮೀಣ ಕೃಪಾಂಕದ ಕೃಪೆ. ಬಂಗಾರಪ್ಪಜಿಯವರ ಎಲ್ಲಾ ಕಾರ್ಯಕ್ರಮಗಳು ನಮಗೆ ಗೊತ್ತಿದೆ. ಆದರೆ ಮಕ್ಕಳಿಗೆ ಇದರ ಬಗ್ಗೆ ಅರಿವಿಲ್ಲ. ಇದನ್ನು ಮಕ್ಕಳಲ್ಲಿ ಜಾಗೃತೆ ಮೂಡಿಸುವ ಕಾರ್ಯವಾಗಬೇಕಿದೆ ಹಾಗು ನಮಗೆ ಸಹಾಯ ಮಾಡಿದವರ ಋಣ ತೀರಿಸಬೇಕಿದೆ ಎಂದು ತಿಳಿಸಬೇಕು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post