No Result
View All Result
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ
English Articles

Tragic Accident in Gujarat | Head-on Collision Between Two MSRTC Buses | 7 Burnt Alive

by ಕಲ್ಪ ನ್ಯೂಸ್
June 3, 2026
0

Kalpa Media House  |  Surat   | At least seven people were killed and over 35 others injured in a horrific...

Read moreDetails
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಇದು ದೇಶದ ಇತಿಹಾಸದಲ್ಲೇ ಪ್ರಥಮ: ಕೆಎಸ್’ಆರ್’ಟಿಸಿ ಸಿಬ್ಬಂದಿಗೆ 1 ಕೋಟಿ ರೂ. ವಿಮೆ

ಸಿಬ್ಬಂದಿಗೆ ವಾರ್ಷಿಕ ಎಷ್ಟು ಪ್ರೀಮಿಯಂ ಪಾವತಿಸಬೇಕು? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 14, 2022
in ರಾಜಕೀಯ
0

Representational File Photo Only

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಕೆಎಸ್’ಆರ್’ಟಿಸಿ ಸಿಬ್ಬಂದಿಗಳಿಗೆ 1 ಕೋಟಿ ರೂ. ಮೊತ್ತದ ಅಪಘಾತ ವಿಮಾ ಯೋಜನೆ ಸೌಲಭ್ಯ ಜಾರಿ ಮಾಡಿದೆ.

ಈ ಕುರಿತಂತೆ ಮಾತನಾಡಿದ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ, ನಿಗಮವು ಜಾರಿಗೊಳಿಸುತ್ತಿರುವ ಈ ವಿಮಾ ಯೋಜನೆಯು ಕಾರ್ಮಿಕ ಮತ್ತು ಅವರ ಕುಟುಂಬದವರ ಹಿತದೃಷ್ಟಿಯಿಂದ ಜಾರಿಗೊಳಿಸುತ್ತಿರುವ ಅತ್ಯುತ್ತಮವಾದ ಯೋಜನೆಯಾಗಿದ್ದು, ಅಪಘಾತ ವಿಮಾ ಯೋಜನೆಯಾಗಿರುವುದು ಸಿಬ್ಬಂದಿಗಳಿಗೆ ಮತ್ತಷ್ಟು ಅನುಕೂಲವಾಗಲಿದೆಯೆಂದು ಸಂತಸ ವ್ಯಕ್ತಪಡಿಸಿದರು.
ಈ ಯೋಜನೆಗೆ ತುಂಬು ಹೃದಯದ ಸಹಕಾರ ನೀಡಿದ ಜಂಟಿ ಕ್ರಿಯಾ ಸಮಿತಿಯ ಕಾರ್ಮಿಕ ಮುಖಂಡರಾದ ಅನಂತ ಸುಬ್ಬರಾವ್ ಮತ್ತು ಇತರೆ ಕಾರ್ಮಿಕ ಮುಖಂಡರುಗಳಿಗೆ ಧನ್ಯವಾದಗಳನ್ನು ಸಲ್ಲಿಸಿದರು. ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ಸಹಯೋಗವನ್ನು ಶ್ಲಾಘಿಸಿದರು.

ನಿಗಮದ ಕೇಂದ್ರ ಕಚೇರಿಯಲ್ಲಿ ಶಾಸಕರು ಹಾಗೂ ಅಧ್ಯಕ್ಷರಾದ ಎಂ. ಚಂದ್ರಪ್ಪರವರ ಸಮ್ಮುಖದಲ್ಲಿ ಕೆಎಸ್’ಆರ್’ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್, ಯುನೈಟೆಡ್ ಇಂಡಿಯಾ ಇನ್ಷೂರೆನ್ಸ್ ಪ್ರಧಾನ ವ್ಯವಸ್ಥಾಪಕ ಅಂಗ್ರೂಪ್ ಸೋನಂ ಅವರು ಒಡಂಬಡಿಕೆಗೆ ಸಹಿ ಹಾಕಿದರು.

ಡಾ. ನವೀನ್ ಭಟ್ ವೈ, ನಿರ್ದೇಶಕರು (ಸಿಬ್ಬಂದಿ ಜಾಗೃತ) ಜಂಟಿ ಕ್ರಿಯಾ ಸಮಿತಿಯ ಕಾರ್ಮಿಕ ಮುಖಂಡರುಗಳಾದ ಅನಂತ ಸುಬ್ಬರಾವ್ ಮತ್ತು ಇತರೆ ಕಾರ್ಮಿಕ ಸಂಘಗಳ ಮುಖಂಡರುಗಳು , ಉಷಾ ಚಂದ್ರಮೌಳಿ, ಪ್ರಾದೇಶಿಕ ವ್ಯವಸ್ಥಾಪಕರು, ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿ. ಬೆಂಗಳೂರು ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಿಬ್ಬಂದಿಗಳು ಸಂಸ್ಥೆಗಾಗಿ ಹಗಲಿರುಳು ದುಡಿಯುತ್ತಾರೆ. ಅವರ ಆಕಸ್ಮಿಕ ಅಗಲಿಕೆಯು ಅಥವಾ ಅಂಗವೈಕಲ್ಯತೆಯು ಅವರ ಪರಿವಾರದವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದೆಂಬ ಕಾರಣದಿಂದ ಅವರ ಅವಲಂಬಿತರ ಹಿತ ಕಾಪಾಡುವ ಈ ಅಪಘಾತ ವಿಮಾ ಪ್ಯಾಕೇಜ್ ಯೋಜನೆಯ ಒಡಂಬಡಿಕೆಯನ್ನು ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿಯೊಂದಿಗೆ ಮಾಡಿಕೊಂಡಿದೆ. ಕೆಲವು ದಿನಗಳಷ್ಟು ಹಿಂದೆಯಷ್ಟೇ, ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾರವರೊಡನೆ ಸಹಿ ಹಾಕಿರುವ ಒಡಂಬಡಿಕೆಯು ಕಾರ್ಮಿಕರ ಹಿತ ಕಾಪಾಡುವಲ್ಲಿ ಚರಿತಾರ್ಹವಾದ ಕ್ಷಣಕ್ಕೆ ಸಾಕ್ಷಿಯಾಗಿದೆ.

ವಿಮೆಯ ವಿಶೇಷತೆಗಳೇನು?

  • ನಿಗಮದ ಸಿಬ್ಬಂದಿಗಳು ಅಪಘಾತದಲ್ಲಿ (ಕರ್ತವ್ಯದ ಮೇಲೆ ಅಥವಾ ಕರ್ತವ್ಯದಲ್ಲಿ ಇಲ್ಲದಿರುವಾಗಲೂ) ಮೃತಪಟ್ಟರೆ ಅಥವಾ ಶಾಶ್ವತ / ತಾತ್ಕಾಲಿಕ ಅಂಗವೈಕಲ್ಯಕ್ಕೆ ತುತ್ತಾದರೆ ಅವರಿಗೆ ರೂ. 50 ಲಕ್ಷಗಳ ಪರಿಹಾರ ನೀಡುವ ಪ್ರೀಮಿಯಂ ರಹಿತ ಅಪಘಾತ ಪರಿಹಾರ ವಿಮಾ ಯೋಜನೆಯನ್ನು ನಿಗಮವು ಭಾರತೀಯ ಸ್ಟೇಟ್ ಬ್ಯಾಂಕ್ ಜೊತೆಯಲ್ಲಿ ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಜಾರಿಗೆ ತಂದಿದೆ. ಇದರ ಮುಂದುವರಿದ ಭಾಗವಾಗಿ, ನಿಗಮವು ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು , ಅದರಂತೆ ಸಿಬ್ಬಂದಿಗಳಿಗೆ ರೂ.50 ಲಕ್ಷದವರೆಗೆ ಅಪಘಾತ ಪರಿಹಾರ ವಿಮಾ ಯೋಜನೆಯನ್ನು ಈಗಾಗಲೇ ಜಾರಿಗೆ ತಂದಿದೆ.
  • ಈ ವಿಮಾ ಯೋಜನೆಗೆ ಸಿಬ್ಬಂದಿಗಳು ಮಾಹೆಯಾನ ರೂ.62.50 + ಜಿಎಸ್’ಟಿ ಸೇರಿದಂತೆ (ವಾರ್ಷಿಕ ರೂ.885/- ಪ್ರೀಮಿಯಂ) ಪಾವತಿಸಬೇಕಾಗುತ್ತದೆ.

  • ಈ ಯೋಜನೆಯಲ್ಲಿ ಸಿಬ್ಬಂದಿಗಳು ಪ್ರತಿ ಮಾಹೆ ರೂ.62.50 + ಜಿ ಎಸ್ ಟಿ ಸೇರಿ ಪ್ರೀಮಿಯಂ (ವಾರ್ಷಿಕ ರೂ.750+ ಜಿಎಸ್’ಟಿ ಸೇರಿದಂತೆ ಒಟ್ಟು ರೂ.885/-) ಪಾವತಿಸಬೇಕಾಗುತ್ತದೆ.
  • ಈ ವೈಯಕ್ತಿಕ ವಿಮಾ ಯೋಜನೆಯಿಂದ ಪಾಲಿಸಿದಾರರು ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ 50 ಲಕ್ಷ ರೂ.ಗಳ ಪರಿಹಾರದ ಹಣ ಕೂಡಲೇ ದೊರೆಯಲಿದೆ.
  • ಅಪಘಾತದಲ್ಲಿ ಸಿಬ್ಬಂದಿಗಳು ಶಾಶ್ವತವಾಗಿ ಪೂರ್ಣ ಅಂಗ ವೈಕಲ್ಯಕ್ಕೆ ತುತ್ತಾದಲ್ಲಿ ಸಹ ರೂ. 50 ಲಕ್ಷಗಳ ವಿಮಾ ಪರಿಹಾರ ದೊರೆಯಲಿದೆ.
  • ಈ ವಿಮಾ ಯೋಜನೆಯಲ್ಲಿ ಮತ್ತೊಂದು ಉಪಯಕ್ತ ಕ್ರಮವೆಂದರೆ ಕರ್ತವ್ಯ ನಿರತ ಹಾಗೂ ಕರ್ತವ್ಯದಲ್ಲಿ ಇಲ್ಲದ ಸಮಯದಲ್ಲೂ ಆಗುವ ವೈಯಕ್ತಿಕ ಅಪಘಾತಗಳಿಗೂ ವಿಮೆ ಅನ್ವಯಿಸುತ್ತದೆ.
  • ಒಂದು ವೇಳೆ ಸಿಬ್ಬಂದಿಯು ಅಪಘಾತಕ್ಕೆ ಒಳಗಾಗಿ ತಾತ್ಕಾಲಿಕ ಅಂಗವೈಕಲ್ಯ ಉಂಟಾಗಿ, ತನ್ನ ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಅಸಮರ್ಥನಾದ ಪಕ್ಷದಲ್ಲಿ, ಆತನು ಚೇತರಿಸಿಕೊಳ್ಳುವವರೆಗೆ, ಅವನಿಗೆ ವಿಮಾ ಮಾಡಲಾದ ರೂ.50 ಲಕ್ಷ ಮೊತ್ತದ ಶೇ.1ರಷ್ಟು ಮೊತ್ತವನ್ನು ಪ್ರತಿವಾರ ರೂ.5000 ಕ್ಕೆ ಹೆಚ್ಚದಂತೆ ಅಥವಾ ಅವರ ಮಾಸಿಕ ಸಂಬಳದ ಶೇಕಡಾ 25ರಷ್ಟನ್ನು, ಯಾವುದು ಕಡಿಮೆಯೋ ಅದನ್ನು ಸಿಬ್ಬಂದಿಗೆ ವಿಮಾ ಸಂಸ್ಥೆಯು ನೀಡುತ್ತದೆ.
  • ಈ ಎರಡು ವಿಮಾ ಯೋಜನೆಗಳಿಂದ ನಿಗಮವು ತನ್ನ ಸಿಬ್ಬಂದಿಗಳಿಗೆ 1 ಕೋಟಿ ರೂ. ಮೊತ್ತದ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿಗೆ ತಂದಂತಾಗಿದೆ. ಇಲ್ಲಿಯವರೆಗೂ ನಿಗಮದ ಸಿಬ್ಬಂದಿಗಳಿಗೆ ಯಾವುದೇ ಅಪಘಾತ ವಿಮಾ ಯೋಜನೆಯ ಸೌಲಭ್ಯವಿರಲಿಲ್ಲ.

(ವರದಿ: ಡಿ.ಎಲ್. ಹರೀಶ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Accident insurance planBENGALURUHealth InsuranceKannada News WebsiteKSRTCLatest News KannadaUNITED INDIA INSURANCE COMPANY LIMITEDಅಪಘಾತ ವಿಮಾ ಯೋಜನೆಕೆಎಸ್'ಆರ್'ಟಿಸಿಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್
Share198Tweet123Send
Previous Post

ನ.18ರಿಂದ ಜೆಡಿಎಸ್’ನಿಂದ ಪಂಚರತ್ನ ರಥಯಾತ್ರೆ

Next Post

ಭಾರತೀಯ ಧಾರ್ಮಿಕ ಪರಿಕಲ್ಪನೆ ಅಧ್ಯಯನಕ್ಕೆ ಪೂರಕ: ಧೃವಾಗೋರಿಕ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತೀಯ ಧಾರ್ಮಿಕ ಪರಿಕಲ್ಪನೆ ಅಧ್ಯಯನಕ್ಕೆ ಪೂರಕ: ಧೃವಾಗೋರಿಕ್

ಭಾರತೀಯ ಧಾರ್ಮಿಕ ಪರಿಕಲ್ಪನೆ ಅಧ್ಯಯನಕ್ಕೆ ಪೂರಕ: ಧೃವಾಗೋರಿಕ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ

June 3, 2026
ವಿದ್ಯಾರ್ಥಿಗಳ ಸಾಧನೆ ವಿದ್ಯಾಸಂಸ್ಥೆಯ ಮೌಲ್ಯ ಹೆಚ್ಚಿಸುತ್ತದೆ: ನಾರಾಯಣ ರಾವ್ ಅಭಿಪ್ರಾಯ

ವಿದ್ಯಾರ್ಥಿಗಳ ಸಾಧನೆ ವಿದ್ಯಾಸಂಸ್ಥೆಯ ಮೌಲ್ಯ ಹೆಚ್ಚಿಸುತ್ತದೆ: ನಾರಾಯಣ ರಾವ್ ಅಭಿಪ್ರಾಯ

June 3, 2026
ಮೋದಿ ಅವಧಿಯಲ್ಲಿ RBI ನಿಜಕ್ಕೂ ಚಿನ್ನ ಮಾರಿದೆಯೇ? ಇಲ್ಲಿದೆ PIB ಫ್ಯಾಕ್ಟ್ ಚೆಕ್ ವರದಿ

ಮೋದಿ ಅವಧಿಯಲ್ಲಿ RBI ನಿಜಕ್ಕೂ ಚಿನ್ನ ಮಾರಿದೆಯೇ? ಇಲ್ಲಿದೆ PIB ಫ್ಯಾಕ್ಟ್ ಚೆಕ್ ವರದಿ

June 3, 2026
ಸಿರಿಂಜ್ ಹಿಡಿಯುವ ಕೈ ಪೆನ್ನು ಹಿಡಿದಾಗ – ಆವೃತ್ತಿ ಎರಡು ಪುಸ್ತಕ ಬಿಡುಗಡೆ

ಆರೋಗ್ಯ ಜಾಗೃತಿಗಾಗಿ ರಾಜ್ಯ ಮಟ್ಟದ ಕವನ ಮತ್ತು ಕಥಾ ಸ್ಪರ್ಧೆ

June 3, 2026
ದೇವೇಗೌಡರ ಕಾಲು ಮುಟ್ಟಿ ಆರ್ಶೀವಾದ ಪಡೆದ ಡಿ.ಕೆ. ಶಿವಕುಮಾರ್, ಯಡಿಯೂರಪ್ಪ ನಿವಾಸಕ್ಕೂ ಭೇಟಿ

ದೇವೇಗೌಡರ ಕಾಲು ಮುಟ್ಟಿ ಆರ್ಶೀವಾದ ಪಡೆದ ಡಿ.ಕೆ. ಶಿವಕುಮಾರ್, ಯಡಿಯೂರಪ್ಪ ನಿವಾಸಕ್ಕೂ ಭೇಟಿ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL