ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿಯ ಶಿವಮೊಗ್ಗ ದಸರಾ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.
ಈ ಕುರಿತಂತೆ ನಡೆದ ಸಭೆಯಲ್ಲಿ ದಸರಾ ಸಂದರ್ಭದಲ್ಲಿ ಶಿವಮೊಗ್ಗ ನಗರಾದ್ಯಂತ ಪ್ರತಿವರ್ಷದಂತೆ ಗರಿಷ್ಠ ಅಲಂಕಾರ ಮಾಡಲು ತೀರ್ಮಾನಿಸಲಾಗಿದೆ.
ಚಂದ್ರಶೇಖರ ಆಜಾದ್ ಮೈದಾನದಲ್ಲಿ ನಡೆಯುವ ಬನ್ನಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸದೇ ಸಹಕರಿಸಬೇಕು. ದಸರಾ ಆಚರಣೆಯ ಎಲ್ಲಾ ಕಾರ್ಯಕ್ರಮಗಳನ್ನು ಟಿವಿ, ಇಂಟರ್ನೆಟ್ ಮೂಲಕ ನೇರ ಪ್ರಸಾರ ಮಾಡಲು ವ್ಯವಸ್ಥೆ ಕಲ್ಪಿಸಲಾಗುವುದು. ಜನರು ಮನೆಯಲ್ಲಿಯೇ ಕುಳಿತು ಎಲ್ಲಾ ಕಾರ್ಯಕ್ರಮಗಳನ್ನು ವೀಕ್ಷಿಸಬಹುದಾಗಿದೆ ಎಂದು ತೀರ್ಮಾನಿಸಲಾಗಿದೆ.
Get In Touch With Us info@kalpa.news Whatsapp: 9481252093

















