Saturday, October 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ ಸೇವೆಗಳ ಭಾಗಶಃ ನಿರ್ಬಂಧಕ್ಕೆ ಚಿಂತನೆ: ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್

March 23, 2020
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ ಹಾಗೂ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ ಸೇವೆಯನ್ನು ಹೊರತುಪಡಿಸಿ ಇತರ ಎಲ್ಲಾ ಸೇವೆಗಳನ್ನು ಭಾಗಶಃ ನಿರ್ಬಂಧಿಸಲು ಕ್ರಮ ಕೈಗೊಳ್ಳಲಾಗುವುದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು.

ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಹಾಲು, ತರಕಾರಿ, ಔಷಧಿ, ದಿನಸಿ ವಸ್ತುಗಳು ಸೇರಿದಂತೆ ಅಗತ್ಯ ಸೇವೆಗಳ ಅಂಗಡಿ ಮುಂಗಟ್ಟುಗಳನ್ನು ಮಾತ್ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 2ಗಂಟೆಯವರೆಗೆ ತೆರೆಯಲು ಅವಕಾಶ ಮಾಡಲಾಗುವುದು. ಇನ್ನಿತರ ಉತ್ಪಾದನಾ ವಸ್ತುಗಳ ಮಳಿಗೆಗಳನ್ನು ಮಾರ್ಚ್ 31ರವರೆಗೆ ಮುಚ್ಚಲು ಸೂಚಿಸಲಾಗುವುದು. ರಾತ್ರಿ 8ಗಂಟೆಯಿಂದ ಬೆಳಿಗ್ಗೆ 7ಗಂಟೆಯವರೆಗೆ ಬಸ್ ಸೇವೆಯನ್ನು ನಿರ್ಬಂಧಿಸಲಾಗುವುದು. ಸಾರ್ವಜನಿಕರು ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಬರಬೇಕು ಎಂದು ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.

ಕಾರ್ಯಪಡೆ ರಚನೆ
ಕರೋನಾ ವೈರಸ್ ಹರಡುವಿಕೆಯನ್ನು ತಡೆಯಲು ಜಿಲ್ಲೆಯಲ್ಲಿ ಎರಡು ಕಾರ್ಯಪಡೆಗಳನ್ನು ರಚಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳು, ಚಿಕಿತ್ಸೆ ಪ್ರಕ್ರಿಯೆ ಇತ್ಯಾದಿಗಳನ್ನು ನಿರ್ವಹಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಕಾರ್ಯಪಡೆ ರಚಿಸಲಾಗಿದೆ. ಇದೇ ರೀತಿ ಜಿಲ್ಲಾಡಳಿತಕ್ಕೆ ವೈದ್ಯಕೀಯ ಸಲಹೆಗಳು ಮತ್ತು ನೆರವು ಒದಗಿಸಲು ಖಾಸಗಿ ಆಸ್ಪತ್ರೆಗಳ ಹಿರಿಯ ವೈದ್ಯರನ್ನು ಒಳಗೊಂಡ ಮೆಡಿಕಲ್ ಕಾರ್ಯಪಡೆ ರಚಿಸಲಾಗಿದೆ. ಈ ಕಾರ್ಯಪಡೆ ಪ್ರತಿ ದಿನ ಬೆಳಿಗ್ಗೆ 10 ಗಂಟೆಗೆ ಸಭೆ ಸೇರಿ ಕಾರ್ಯ ಯೋಜನೆ ರೂಪಿಸಲಿದೆ ಎಂದರು.

ಖಾಸಗಿ ಆಸ್ಪತ್ರೆ ಸೌಲಭ್ಯ ಬಳಕೆ
ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ವೆಂಟಿಲೇಟರ್ ಸೇರಿದಂತೆ ಎಲ್ಲಾ ವೈದ್ಯಕೀಯ ಸೇವೆಗಳ ವಿವರಗಳನ್ನು ಪಡೆಯಲಾಗಿದ್ದು, ಅಗತ್ಯ ಬಿದ್ದರೆ ಈ ಸೌಲಭ್ಯಗಳನ್ನು ಬಳಸಿಕೊಳ್ಳುವ ಕುರಿತು ಸೂಚನೆ ನೀಡಲಾಗಿದೆ. ಅಗತ್ಯ ಬಿದ್ದರೆ ಖಾಸಗಿ ವೈದ್ಯರ ಸೇವೆಯನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಕೀಟ ನಾಶಕ ಸಿಂಪಡಿಸುವಿಕೆ
ನಗರ ವ್ಯಾಪ್ತಿಯಲ್ಲಿ ಕೀಟನಾಶಕ ಸಿಂಪಡಿಸುವಿಕೆ ಕಾರ್ಯವನ್ನು ನಿರಂತರವಾಗಿ ಮಾಡಬೇಕು. ಬಸ್ ನಿಲ್ದಾಣ, ಬಸ್‍ಗಳಿಗೆ ಸಹ ಕೀಟನಾಶಕ ಸಿಂಪಡಿಸುವಿಕೆ ಪ್ರತಿದಿನ ಮಾಡಲು ಸೂಚನೆ ನೀಡಲಾಗಿದೆ. ಹೂ ಹಣ್ಣು ಸೇರಿದಂತೆ ಎಲ್ಲಾ ಮಾರುಕಟ್ಟೆಗಳಿಗೆ ನಿಗದಿಪಡಿಸಲಾದ ವ್ಯವಹಾರ ಅವಧಿ ಮುಗಿದ ಬಳಿಕ ಸಂಪೂರ್ಣವಾಗಿ ಕೀಟನಾಶಕ ಸಿಂಪಡಿಸುವ ಕಾರ್ಯ ಕೈಗೊಳ್ಳಬೇಕು. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ದೊಡ್ಡ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯವನ್ನು ನಿರಂತರವಾಗಿ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಲಾಡ್ಜ್‍ಗಳಿಗೆ ಸೂಚನೆ
ತಮ್ಮಲ್ಲಿಗೆ ಬರುವ ಪ್ರತಿಯೊಬ್ಬರ ಪ್ರಯಾಣ ಇತಿಹಾಸ ಸೇರಿದಂತೆ ಸಮಗ್ರ ವಿವರಗಳನ್ನು ಪಡೆದ ಬಳಿಕ ಮಾತ್ರ ಕೋಣೆ ಒದಗಿಸುವಂತೆ ಎಲ್ಲಾ ಲಾಡ್ಜ್ ಮಾಲಕರಿಗೆ ಸೂಚನೆ ನೀಡಲಾಗಿದೆ. ವಿದೇಶಗಳಿಂದ ಅಥವಾ ಕರೋನಾ ಪೀಡಿತ ಜಿಲ್ಲೆಗಳಿಂದ ಆಗಮಿಸುವವರ ವಿವರಗಳನ್ನು ಸ್ಥಳೀಯ ಆಡಳಿತಕ್ಕೆ ತಕ್ಷಣ ನೀಡಲು ತಿಳಿಸಲಾಗಿದೆ. ಪ್ರತಿಯೊಬ್ಬರು ನೀಡಿರುವ ಮಾಹಿತಿಯನ್ನು ಪರಿಶೀಲಿಸಲಾಗುವುದು ಎಂದು ಅವರು ಹೇಳಿದರು.

ಹಬ್ಬ ಸರಳವಾಗಿ ಆಚರಿಸಿ
ಯುಗಾದಿ ಹಬ್ಬವನ್ನು ಪ್ರತಿಯೊಬ್ಬರೂ ಸರಳವಾಗಿ ಆಚರಿಸುವ ಮೂಲಕ ಕರೋನಾ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

ಎಲ್ಲಾ ಪ್ರಮುಖ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗಿದ್ದು, ಕರೋನಾ ತಡೆಗಟ್ಟಲು ಎಲ್ಲರೂ ಸಹಕರಿಸುವ ಭರವಸೆ ನೀಡಿದ್ದಾರೆ.

ಭಿಕ್ಷುಕರ ಪುನರ್ವಸತಿ
ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ಭಿಕ್ಷುಕರನ್ನು ಸಮಾಜ ಕಲ್ಯಾಣ ಇಲಾಖೆಯ ಪುನರ್ವಸತಿ ಕೇಂದ್ರಕ್ಕೆ ಸೇರಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಹಕ್ಕಿ ಜ್ವರ
ನೆರೆಯ ಜಿಲ್ಲೆಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೋಳಿ ಮಾಂಸ ಮತ್ತು ಮೊಟ್ಟೆ ಮಾರಾಟದ ಮೇಲೆ ನಿರ್ಬಂಧ ವಿಧಿಸಲಾಗಿದೆ.

ಕೆಎಫ್‍ಡಿ ನಿಯಂತ್ರಣದಲ್ಲಿದೆ
ಮಂಗನ ಕಾಯಿಲೆ ನಿಯಂತ್ರಣದಲ್ಲಿದ್ದು, ನಿರಂತರ ನಿಗಾ ವಹಿಸಲಾಗಿದೆ. ಸೋಂಕು ಪೀಡಿತರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಚೆಕ್‍ಪೋಸ್ಟ್
ಮಂಗಳೂರಿನಲ್ಲಿ ಕರೋನಾ ಪಾಸಿಟಿವ್ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಆಗಮಿಸುವ ವಾಹನಗಳನ್ನು ಹಾಗೂ ದಾವಣಗೆರೆಯಲ್ಲಿ ಕೋಳಿ ಜ್ವರ ಪ್ರಕರಣ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ತಪಾಸಣೆ ನಡೆಸಲು ಗಡಿಭಾಗದಲ್ಲಿ ಚೆಕ್‍ಪೋಸ್ಟ್ ತೆರೆಯಲಾಗುವುದು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಮತ್ತಿತರರು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: CoronaUpdatesInIndiacoronavirus updatesCovid_19indiahospitalMalnadNewsShivamoggaUgadi Festivalಆಸ್ಪತ್ರೆಕೊರೋನಾ ವೈರಸ್ದಾವಣಗೆರೆಮಂಗನ ಕಾಯಿಲೆಯುಗಾದಿ ಹಬ್ಬ
Previous Post

ಕೊರೋನಾ ಹಿನ್ನೆಲೆ: ಶಿವಮೊಗ್ಗ ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಕಂಟ್ರೋಲ್ ರೂಂ

Next Post

ಕೊನೆಯದಾಗಿ ಎಚ್ಚರಿಕೆ ನೀಡುತ್ತಿದ್ದೇನೆ, ಪೊಲೀಸರು ಕ್ರಮ ಕೈಗೊಂಡರೆ ನನ್ನನ್ನು ದೂಷಿಸಬೇಡಿ: ಸಿಎಂ ಬಿಎಸ್’ವೈ ಖಡಕ್ ವಾರ್ನಿಂಗ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Photo

ಕೊನೆಯದಾಗಿ ಎಚ್ಚರಿಕೆ ನೀಡುತ್ತಿದ್ದೇನೆ, ಪೊಲೀಸರು ಕ್ರಮ ಕೈಗೊಂಡರೆ ನನ್ನನ್ನು ದೂಷಿಸಬೇಡಿ: ಸಿಎಂ ಬಿಎಸ್’ವೈ ಖಡಕ್ ವಾರ್ನಿಂಗ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೈಸೂರು | ಅ.26-ನ.1 ರವರೆಗೆ ವಿಶೇಷ ಜ್ಞಾನಸತ್ರ | ಮಾಹುಲಿ ವಿದ್ಯಾಸಿಂಹಾಚಾರ್ಯ ಸಾರಥ್ಯ

October 25, 2025

ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನೋತ್ಸವ | ಅ.31ರಿಂದ ನವೆಂಬರ್ 26ರವರೆಗೆ ಏಕತಾಯಾತ್ರೆ

October 25, 2025

ಸುಪ್ರೀಂ ಕೊರ್ಟ್ ಸೂಚನೆ ಪಾಲಿಸುವಲ್ಲಿ ವಿಫಲ | ಅಜಾನ್ ವಿರುದ್ದ ಹೋರಾಟ: ಡಿ.ಎಸ್. ಅರುಣ್

October 25, 2025

ಸರ್ದಾರ್ ವಲ್ಲಭಭಾಯಿ ಪಟೇಲ್ ಯುವಕರಿಗೆ ರೋಲ್ ಮಾಡೆಲ್ ಆಗಬೇಕು: ಡಿ.ಎಸ್. ಅರುಣ್

October 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೈಸೂರು | ಅ.26-ನ.1 ರವರೆಗೆ ವಿಶೇಷ ಜ್ಞಾನಸತ್ರ | ಮಾಹುಲಿ ವಿದ್ಯಾಸಿಂಹಾಚಾರ್ಯ ಸಾರಥ್ಯ

October 25, 2025

ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನೋತ್ಸವ | ಅ.31ರಿಂದ ನವೆಂಬರ್ 26ರವರೆಗೆ ಏಕತಾಯಾತ್ರೆ

October 25, 2025

ಸುಪ್ರೀಂ ಕೊರ್ಟ್ ಸೂಚನೆ ಪಾಲಿಸುವಲ್ಲಿ ವಿಫಲ | ಅಜಾನ್ ವಿರುದ್ದ ಹೋರಾಟ: ಡಿ.ಎಸ್. ಅರುಣ್

October 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!