No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Saturday, March 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎಸ್’ಎಸ್’ಎಲ್’ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಯೋಗ ತರಗತಿ ಆರಂಭಿಸಲು ಚಿಂತನೆ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 24, 2020
in ಶಿವಮೊಗ್ಗ
0
ಎಸ್’ಎಸ್’ಎಲ್’ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಯೋಗ ತರಗತಿ ಆರಂಭಿಸಲು ಚಿಂತನೆ: ಸಚಿವ ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಬಹುದಿನಗಳಿಂದ ಸ್ಥಗಿತಗೊಂಡಿದ್ದ ಶಾಲೆಗಳು ಸರ್ಕಾರದ ಸೂಚನೆಯನ್ವಯ 2021ರ ಜ.1ರಿಂದ ಆರಂಭಗೊಳ್ಳಲಿವೆ. ನಡೆಯುವ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಪ್ರತಿದಿನ ಯೋಗ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕೋರೋನ ಮಹಾಮಾರಿಯಿಂದ ರಕ್ಷಣೆ ಹೊಂದಲು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುತ್ತಿರುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ದೈಹಿಕ ಕ್ಷಮತೆ ಹೆಚ್ಚಿಸುವ ನಿಟ್ಟಿನಲ್ಲಿ ಯೋಗಶಿಕ್ಷಣ ಸಹಕಾರಿಯಾಗಲಿರುವುದಾಗಿ ತಿಳಿಸಿದ ಅವರು, ಈಗಾಗಲೇ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಈಗಾಗಲೇ ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಯೋಗಕೇಂದ್ರಗಳಿಂದ ತರಬೇತಿ ಪಡೆದ ಶಿಕ್ಷಕರನ್ನು ಈ ತರಗತಿಗಳ ನಿರ್ವಹಣೆಗಾಗಿ ಅವರ ಸೇವೆಯನ್ನು ಬಳಸಿಕೊಳ್ಳಲಾಗುವುದು ಎಂದರು.

ಇನ್ನು ಕೆಲವು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರ ಕೊರತೆ ಇರುವ ಹಿನ್ನೆಲೆಯಲ್ಲಿ ಸಂಭಾವನೆ ರಹಿತವಾಗಿ ಸ್ವಯಂಪ್ರೇರಿತವಾಗಿ ಯೋಗ ತರಬೇತಿ ನೀಡಲಿಚ್ಚಿಸುವ ತರಬೇತುದಾರರನ್ನು ಕೋರಲಾಗುವುದು. ಈ ಸಂಬಂಧ ಡಿ.31ರಂದು ಶಿಕ್ಷಕರಿಗೆ ಯೋಗಶಿಕ್ಷಣ ತರಬೇತಿ ನೀಡಲಾಗುವುದಲ್ಲದೆ 30 ನಿಮಿಷಗಳ ಅವಧಿಯ ಯೋಗಶಿಕ್ಷಣ ಪಠ್ಯಕ್ರಮವನ್ನು ನಿಗಧಿಪಡಿಸಲಾಗುವುದು ಎಂದರು.


ಜ.1ರಿಂದ ಪ್ರತಿದಿನ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಎಸ್.ಎಸ್.ಎಲ್.ಸಿ ತರಗತಿಗಳು ನಡೆಯಲಿವೆ. 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ವಿದ್ಯಾಗಮ ತರಗತಿಗಳು ದಿನಬಿಟ್ಟು ದಿನ ಮಧ್ಯಾಹ್ನದಿಂದ ಸಂಜೆಯವರೆಗೆ ನಡೆಯಲಿವೆ. ಈ ನಡುವೆ ಸಮಯದ ಹೊಂದಾಣಿಕೆ ಮಾಡಿಕೊಂಡು ಯೋಗಶಿಕ್ಷಣ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ. ಒಂದರಿಂದ ಐದನೆ ತರಗತಿಗಳನ್ನು ನಡೆಸಲು ಸರ್ಕಾರದ ಮಾರ್ಗಸೂಚಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದರು.

ಕಳೆದ ಮಳೆಗಾಲದಲ್ಲಿ ಶಿವಮೊಗ್ಗ ನಗರದಲ್ಲಿನ ಆಯ್ದ ಶಾಲೆಗಳಲ್ಲಿ ಶೌಚಾಲಯಗಳು ಶಿಥಿಲವಾಗಿದ್ದು ಅವುಗಳನ್ನು ಪುನರ್ ನಿರ್ಮಿಸಲು ನೆಲಸಮಗೊಳಿಸಲಾಗಿದೆ. ಅಂತಹ ಶಾಲೆಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ತಾತ್ಕಾಲಿಕ ಶೌಚಾಲಯಗಳನ್ನು ಕಲ್ಪಿಸುವಂತೆ ಸಚಿವರು ಮಹಾನಗರಪಾಲಿಕೆ ಆಯುಕ್ತರಿಗೆ ಸೂಚಿಸಿದರು.

ಜ.1ರಿಂದ ಆರಂಭವಾಗುತ್ತಿರುವ ಶಾಲೆಗೆ ಪೋಷಕರು ತಮ್ಮ ಮಕ್ಕಳನ್ನು ಶೈಕ್ಷಣಿಕ ಹಿತದೃಷ್ಠಿಯಿಂದ ಸುರಕ್ಷತೆಯೊಂದಿಗೆ ಕಳುಹಿಸುವಂತೆ ಮನವಿ ಮಾಡಿದ ಅವರು ಶಾಲೆಗೆ ತೆರಳುವ ಮಕ್ಕಳ ಅಗತ್ಯಗಳಿಗೆ ತಕ್ಕಂತೆ ಬಸ್ ಸಂಪರ್ಕ ಕಲ್ಪಿಸಲು, ವಸತಿ ಶಾಲೆ, ಶಾಲಾ ಆವರಣದಲ್ಲಿ ಸ್ಯಾನಿಟೈಜರ್ ಮುಂತಾದ ಅಗತ್ಯ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ ಎಂದರು.

ಜಿಲ್ಲೆಯ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿ 340 ಅಂಗನವಾಡಿ ಕೇಂದ್ರಗಳನ್ನು ದುರಸ್ತಿಗೊಳಿಸಲು ಈಗಾಗಲೇ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೇ 126 ಹೊಸ ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಬೇಡಿಕೆ ಇದ್ದು, ಅವುಗಳ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸುವಂತೆಯೂ ಸೂಚಿಸಲಾಗಿದೆ. ಅಂತೆಯೇ ನಗರದಲ್ಲಿನ ಶಾಸಕರ ದತ್ತು ಶಾಲೆಗಳಿಗೆ ಅಗತ್ಯವಿರುವ ಸೌಲಭ್ಯವನ್ನು ಒದಗಿಸಲು ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿರು.

ಕೊರೋನಾ
ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ 39ಕೋರೋನ ಬಾಧಿತರು ಚಿಕತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ಇತ್ತೀಚಿಗೆ ಬ್ರಿಟನ್‌ನಿಂದ ಬಂದ 23ಜನರನ್ನು ಗುರುತಿಸಿ ಅವರ ಆರೋಗ್ಯ ಪ್ರಾಥಮಿಕ ಹಂತದ ತಪಾಸಣೆ ನಡೆಸಲಾಗಿದೆ ಅಲ್ಲದೆ ರೂಪಾಂತರಗೊಂಡ ಸೋಂಕು ಹಾಗೂ ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿನ ಲ್ಯಾಬೋರೇಟರಿಗೆ ರವಾನಿಸಲಾಗಿದ್ದು, ಅದರ ವರದಿ ನಾಳೆ ಸಂಜೆ ಬರುವ ನಿರೀಕ್ಷೆ ಇದೆ ಎಂದರು.

ಮೆಗ್ಗಾನ್ ಆಸ್ಪತ್ರೆ ಮತ್ತು ಬೋಧನಾ ಆಸ್ಪತ್ರೆಯಲ್ಲಿನ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂಧಿಗಳ ಕಾರ್ಯನಿರ್ವಹಣೆ ಕುರಿತು ಸಾರ್ವಜನಿಕ ವಲಯದಿಂದ ಗಂಭೀರಸ್ವರೂಪದ ಅನೇಕ ದೂರುಗಳು ಕೇಳಿಬರುತ್ತಿವೆ. ಅದರ ನ್ಯೂನತೆಗಳ ಹಾಗೂ ವಾಸ್ತವತೆಯನ್ನು ತಿಳಿಯಲು ಸಿಮ್ಸ್‌ ಆಡಳಿತಾಧಿಕಾರಿಗಳಿಂದ ವರದಿ ಪಡೆದು ಕ್ರಮಕೈಗೊಳ್ಳಲಾಗುವುದು ಎಂದರು.


ಕೊರೋನಾ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜ.1ರವರೆಗೆ ಪ್ರತಿದಿನ ರಾತ್ರಿ 11ರಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ ವಿಧಿಸಲಾಗಿದ್ದು, ಬಾರ್, ವೈನ್ಸ್‌ಗಳನ್ನು ಕಡ್ಡಾಯವಾಗಿ ಬಂದ್ ಮಾಡಿಸಲಾಗುವುದಲ್ಲದೆ ಅನಗತ್ಯವಾಗಿ ಸಂಚಾರವನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಸೋಂಕಿನ ನಿಯಂತ್ರಣ ಹಿನ್ನೆಲೆಯಲ್ಲಿ ಸಾರ್ವಜನಿಕರು ಸರ್ಕಾರವು ಈಗಾಗಲೇ ಹೊರಡಿಸಿರುವ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅವರು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ. ಅನುರಾಧ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: AnganavadiK S EshwarappaKannada News WebsiteLatest News KannadaShimogaShivamoggaShivamogga NewsYogaಅಂಗನವಾಡಿ ಶಾಲೆಕೆ.ಎಸ್. ಈಶ್ವರಪ್ಪಯೋಗ ತರಬೇತಿಶಿವಮೊಗ್ಗ
Share198Tweet123Send
Previous Post

ಜಮ್ಮು ಕಾಶ್ಮೀರದ ಡಿಡಿಸಿ ಗೆಲುವಿನಿಂದ ಬಿಜೆಪಿ ಅಲೆ ಸಾಬೀತು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌

Next Post

ಒಂಟಿ ಮನೆ, ಗ್ರಾಮೀಣ ಭಾಗದ ದೇಗುಲಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಿ: ಸಾಗರ ಗ್ರಾಮಾಂತರ ಪಿಎಸ್’ಐ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಒಂಟಿ ಮನೆ, ಗ್ರಾಮೀಣ ಭಾಗದ ದೇಗುಲಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಿ: ಸಾಗರ ಗ್ರಾಮಾಂತರ ಪಿಎಸ್’ಐ ಸಲಹೆ

ಒಂಟಿ ಮನೆ, ಗ್ರಾಮೀಣ ಭಾಗದ ದೇಗುಲಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಿ: ಸಾಗರ ಗ್ರಾಮಾಂತರ ಪಿಎಸ್’ಐ ಸಲಹೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಕನ್ನಡ ಪಂಡಿತ ಹಾಗೂ ಜ್ಞಾನಯೋಗಿಗೆ ಅರ್ಪಿಸಿದ ಶ್ರದ್ಧಾ ಕುಸುಮ

ಕನ್ನಡ ಪಂಡಿತ ಹಾಗೂ ಜ್ಞಾನಯೋಗಿಗೆ ಅರ್ಪಿಸಿದ ಶ್ರದ್ಧಾ ಕುಸುಮ

March 21, 2026
ಪ್ರಾಣಿ-ಪಕ್ಷಿ, ಪರಿಸರವನ್ನು ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ | ಸುರೇಶ್ ಎನ್ ಋಗ್ವೇದಿ

ಪ್ರಾಣಿ-ಪಕ್ಷಿ, ಪರಿಸರವನ್ನು ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ | ಸುರೇಶ್ ಎನ್ ಋಗ್ವೇದಿ

March 21, 2026
ಕೋಟ್ಯಾಂತರ ಜನರ ಹೃದಯ ಗೆದ್ದ ಮಾನವ ದೇವರು ಪುನೀತ್ ರಾಜಕುಮಾರ್: ಸುರೇಶ್ ಎನ್ ಋಗ್ವೇದಿ

ಕೋಟ್ಯಾಂತರ ಜನರ ಹೃದಯ ಗೆದ್ದ ಮಾನವ ದೇವರು ಪುನೀತ್ ರಾಜಕುಮಾರ್: ಸುರೇಶ್ ಎನ್ ಋಗ್ವೇದಿ

March 21, 2026
ಡಿವಿಜಿಯವರ ಮಂಕುತಿಮ್ಮನ ಕಗ್ಗ ಜೀವನದ ಮೌಲ್ಯಗಳು : ಸುರೇಶ್ ಎನ್ ಋಗ್ವೇದಿ

ಡಿವಿಜಿಯವರ ಮಂಕುತಿಮ್ಮನ ಕಗ್ಗ ಜೀವನದ ಮೌಲ್ಯಗಳು : ಸುರೇಶ್ ಎನ್ ಋಗ್ವೇದಿ

March 21, 2026
ಜಾಗತಿಕ ಸೈಬರ್ ವಾರ್ಫೇರ್ ಎದುರಿಸಲು ಸಜ್ಜುಗೊಳ್ಳಬೇಕಿದೆ ಭಾರತ

ಜಾಗತಿಕ ಸೈಬರ್ ವಾರ್ಫೇರ್ ಎದುರಿಸಲು ಸಜ್ಜುಗೊಳ್ಳಬೇಕಿದೆ ಭಾರತ

March 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL