ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಮೂರು ದಿನಗಳ ಕಾಲ ದತ್ತ ಜಯಂತಿ #DattaJayanthi ಅಂಗವಾಗಿ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ #Chikkamagaluru ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಜಿಲ್ಲೆ ಪೊಲೀಸರ ಭದ್ರಕೋಟೆಯಾಗಿ ಮಾರ್ಪಟ್ಟಿದೆ.
ಜಿಲ್ಲೆಯ ಚಂದ್ರದ್ರೋಣ ಪರ್ವತದಲ್ಲಿ #ChandradronaHills ಡಿ.24ರಿಂದ 26ರವರೆಗೂ ದತ್ತ ಜಯಂತಿ ನಡೆಯಲಿದ್ದು, ಸಾವಿರಾರು ಭಕ್ತರು ದತ್ತ ಮಾಲಾಧಾರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿಗಿ ಭದ್ರತೆ ವಹಿಸಲಾಗಿದೆ.
ಇನ್ನು, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮದ್ಯಪಾನ ನಿಷೇಧ ಮಾಡಲಾಗಿದೆ. ಜೊತೆಗೆ ದತ್ತಪೀಠ #DattaPeeta ಮಾರ್ಗದಲ್ಲಿ ಬಾರಿ ವಾಹನಗಳ ಸಂಚಾರನ್ನು ಬಂದ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಮಾಹಿತಿ ನೀಡಿದ್ದಾರೆ.
ಎಷ್ಟು ಪೊಲೀಸರು? ಏನೆಲ್ಲಾ ಭದ್ರತೆ?
ದತ್ತ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ 4000ಕ್ಕೂ ಅಧಿಕ ಪೊಲೀಸರನ್ನು #Police ನಿಯೋಜಿಸಲಾಗಿದೆ. ಜಿಲ್ಲೆಯಾದ್ಯಂತ 28 ಚೆಕ್ ಪೋಸ್ಟ್, ಸಿಸಿಟಿವಿ ಅಳವಡಿಗೆ ಮಾಡಲಾಗಿದ್ದು, ಪ್ರತಿ ಚೆಕ್ ಪೋಸ್ಟ್’ಗೂ ವಿಶೇಷ ದಂಡಾಧಿಕಾರಿಗಳ ನೇಮಕ ಮಾಡಲಾಗಿದೆ.
ಜಿಲ್ಲೆಯಾದ್ಯಂತ ಭದ್ರತೆಗಾಗಿ 4000 ಪೊಲೀಸರು, 7 ಎಎಸ್’ಪಿ, 30 ಡಿವೈಎಸ್’ಪಿ, 30 ಇನ್ಸ್ಪೆಕ್ಟರ್, ನೂರಾರು ಹೋಂಗಾರ್ಡ್, 20 ಕೆಎಸ್’ಆರ್’ಪಿ ತುಕಡಿ ಸೇರಿದಂತೆ ಹಲವು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.
ಸಿಸಿ ಕ್ಯಾಮೆರಾ ಕಣ್ಗಾವಲು
300ಕ್ಕೂ ಅಧಿಕ ಸಿಸಿ ಕ್ಯಾಮೆರಾ #CCCamera ಹಾಗೂ 50ಕ್ಕೂ ಬಾಡಿ ಕ್ಯಾಮೆರಾ, #BodyCamera 2 ಸಿಸಿಟಿವಿ ಕ್ಯಾಮೆರಾ ವೀಕ್ಷಣಾ ತಂಡಗಳ ರಚನೆ ಮಾಡಲಾಗಿದೆ.
ಇನ್ನು, ಜಿಲ್ಲೆಯಾದ್ಯಂತ ಹೋಂ ಸ್ಟೇ #HomeStay ಹಾಗೂ ರೆಸಾರ್ಟ್’ಗಳಿಗೆ #Resort ಮುಂಗಡ ಬುಕ್ಕಿಂಗ್ ಮಾಡಿದವರಿಗೆ ಮಾತ್ರ ಅವಕಾಶವಿದ್ದು, ಈಗ ಬುಕ್ಕಿಂಗ್ ಮಾಡಿದವರಿಗೆ ಹಾಗೂ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post