ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ತಾಲೂಕಿನಲ್ಲಿ ಗುರುವಾರ ಮೂವರಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಹಲವು ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ.
ಸುಭಾಷ್ ನಗರದಲ್ಲಿ 21 ವರ್ಷದ ಯುವಕನಲ್ಲಿ ಪಾಸಿಟಿವ್ ಕಾಣಿಸಿದ್ದು, ಇದು ವಾರದ ಹಿಂದ ಸೀಲ್ ಡೌನ್ ಮಾಡಲಾಗಿದ್ದ ಪ್ರದೇಶವಾಗಿದೆ.

ಭದ್ರಾವತಿ ನಗರ ಪ್ರದೇಶದದಲ್ಲಿ ಕಂಡುಬಂದ ಸೋಂಕಿತ ವ್ಯಕ್ತಿಗಳ ನಿವಾಸ ಸ್ಥಳಕ್ಕೆ ತಹಶೀಲ್ದಾರ್ ಶಿವಕುಮಾರ್, ನಗರಸಭಾ ಆಯುಕ್ತ ಮನೋಹರ್, ತಾಲೂಕು ಮುಖ್ಯ ವೈದ್ಯಾಧಿಕಾರಿ ಡಾ.ಗಾಯತ್ರಿ, ಆರೋಗ್ಯ ಇಲಾಖೆ ಮುಖ್ಯ ಸಿಬ್ಬಂದಿ ನೀಲೇಶ್ ರಾಜ್ ಹಾಗೂ ಪೋಲಿಸ್ ಅಧಿಕಾರಿಗಳು ತೆರಳಿ ಸದರಿ ಸೋಂಕಿತರ ನಿವಾಸದ ಪ್ರದೇಶದ ನೂರು ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಸೀಲ್ ಡೌನ್ ಮಾಡಿದರು.
ಎಲ್ಲಾ ಮೂವರು ಸೋಂಕಿತರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ಕಳುಹಿಸಲಾಯಿತು.
ಇದರೊಂದಿಗೆ ಹೊಳೆಹೊನ್ನೂರು ಸೇರಿದಂತೆ ಭದ್ರಾವತಿ ತಾಲೂಕಿನಲ್ಲಿ ಈವರೆಗೆ ಒಟ್ಟು 51 ಜನರಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾದಂತಾಗಿದೆ.
Get In Touch With Us info@kalpa.news Whatsapp: 9481252093








Discussion about this post