No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೊಲ್ಲಂ | ಬಸ್ ನಿಲ್ದಾಣಕ್ಕೆ ಟಿಪ್ಪರ್ ಲಾರಿ ಡಿಕ್ಕಿ, ಮಗು ಸೇರಿ ಮೂವರು ಸಾವು

ಮರಳು ಹೊತ್ತ ಲಾರಿ ನಿಯಂತ್ರಣ ತಪ್ಪಿ ನಿಲ್ದಾಣಕ್ಕೆ ನುಗ್ಗಿದ ದುರಂತ

kalpa News by kalpa News
June 23, 2026
in ರಾಷ್ಟ್ರೀಯ
1
Kollam Tragedy Sand-Laden Lorry Rams Bus Shelter, 3 Killed
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕೊಲ್ಲಂ  |

ಕೊಲ್ಲಂ ಜಿಲ್ಲೆಯ ನೆಡುವತ್ತೂರು ತಾಲೂಕಿನ ನೀಲೇಶ್ವರಂನ ಮುಕ್ಕೋಣಿಮುಕ್ಕು ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಮೂವರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ.

ಬೆಳಿಗ್ಗೆ ಸುಮಾರು 7.15ರ ಸುಮಾರಿಗೆ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಲಾರಿಯಲ್ಲಿದ್ದ ಭಾರಿ ಪ್ರಮಾಣದ ಮರಳು ನಿಲ್ದಾಣದ ಮೇಲೆ ಉರುಳಿ ಬಿದ್ದಿದ್ದು, ಬಸ್‌ಗಾಗಿ ಕಾಯುತ್ತಿದ್ದ ಪ್ರಯಾಣಿಕರು ಮರಳಿನಡಿ ಸಿಲುಕಿಕೊಂಡಿದ್ದರು ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.

Also Read>> ಮಳೆಗಾಲದ ಪ್ರಯಾಣಿಕರ ಸುರಕ್ಷತೆಗೆ ನೈಋತ್ಯ ರೈಲ್ವೆಯ ಮುನ್ನೆಚ್ಚರಿಕಾ ಕ್ರಮಗಳೇನು?

ಅಪಘಾತದಲ್ಲಿ ಹರಿಲಾಲ್ (52), ಪಾರ್ಥಿಪ್ (15) ಮತ್ತು ಅಜಯ ಕುಮಾರ್ (45) ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಕೊಟ್ಟಾರಕ್ಕರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಗಾಯಗಳು ಗಂಭೀರವಾಗಿಲ್ಲ ಎಂದು ತಿಳಿದುಬಂದಿದೆ.

ಹೇಗಾಯ್ತು ಕೊಲ್ಲಂ ದುರಂತದ ಘಟನೆ?

ಕೊಟ್ಟಾರಕ್ಕರ ಅಗ್ನಿಶಾಮಕ ದಳದ ಅಧಿಕಾರಿಗಳ ಪ್ರಕಾರ, ಅತಿವೇಗದಲ್ಲಿ ಬಂದ ಲಾರಿ ಮುಕ್ಕೋಣಿಮುಕ್ಕು ಜಂಕ್ಷನ್‌ನಲ್ಲಿ ಬೈಕೊಂದನ್ನು ಓವರ್‌ಟೇಕ್ ಮಾಡಲು ಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮವಾಗಿ ಲಾರಿ ರಸ್ತೆ ಬದಿಯಲ್ಲಿದ್ದ ಮನೆಯ ಗೋಡೆಗೆ ಹೊಂದಿಕೊಂಡಿದ್ದ ಬಸ್ ನಿಲ್ದಾಣಕ್ಕೆ ನೇರವಾಗಿ ನುಗ್ಗಿದೆ. ಡಿಕ್ಕಿಯ ರಭಸಕ್ಕೆ ಲಾರಿಯಲ್ಲಿದ್ದ ಮರಳು ಸಂಪೂರ್ಣ ನಿಲ್ದಾಣದ ಮೇಲೆ ಸುರಿದಿದೆ. ಅಪಘಾತಕ್ಕೆ ಕಾರಣವಾದ ಬೈಕ್ ಸವಾರ ನಾಪತ್ತೆಯಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
PES Public School Shivamoggaಮುಂಜಾನೆ ಸಮಯವಾಗಿದ್ದರಿಂದ ಶಾಲೆ, ಕಾಲೇಜು ಹಾಗೂ ಟ್ಯೂಷನ್‌ಗೆ ತೆರಳುವ ವಿದ್ಯಾರ್ಥಿಗಳ ಸಂಚಾರ ಹೆಚ್ಚಾಗಿತ್ತು. ಅಪಘಾತದ ವೇಳೆ ಒಂಬತ್ತು ವಿದ್ಯಾರ್ಥಿಗಳು ಸೇರಿ ಸುಮಾರು 12 ಮಂದಿ ನಿಲ್ದಾಣದಲ್ಲಿದ್ದರು. ಕೆಲ ವಿದ್ಯಾರ್ಥಿಗಳು ಅಪಾಯವನ್ನು ಗಮನಿಸಿ ತಕ್ಷಣವೇ ಸ್ಥಳದಿಂದ ಓಡಿಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಮತ್ತು ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ ಮರಳಿನಡಿ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಇಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲೇ ಮೃತಪಟ್ಟರೆ, ಮತ್ತೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Also Read>> ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು | ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸಾಧನೆಗೆ ಮನ್ನಣೆ!

ಜಿಲ್ಲಾಧಿಕಾರಿಗಳ ಮಾಹಿತಿ ಪ್ರಕಾರ, ಗಾಯಾಳುಗಳನ್ನು ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆ, ಖಾಸಗಿ ಆಸ್ಪತ್ರೆ ಹಾಗೂ ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ಅಪಘಾತದ ತೀವ್ರತೆಗೆ ರಸ್ತೆ ಬದಿಯ ಅಂಗಡಿ ಗೋಡೆ ಹಾಗೂ ವಿದ್ಯುತ್ ಕಂಬ ಧರಾಶಾಹಿಯಾಗಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಕಾಡುಹಂದಿ ತಪ್ಪಿಸಲು ಯತ್ನಿಸಿದ ವ್ಯಾನ್ ಅಪಘಾತ – 15 ಮಂದಿ ಗಾಯ

ತ್ರಿಶೂರ್: ಇನ್ನು ಒಂದು ವೃದ ಮುಂದೆ ಇದೇ ರೀತಿಯ ಒಂದು ಘಟನೆ ನಡೆದಿತ್ತು. ಅದು ಮಾಸುವ ಮುನ್ನವೇ ಈ ಘಟನೆ ನಡೆದಿದೆ.

ಒಂದು ವಾರದ ಹಿಂದೆ ಕೇರಳದ ತ್ರಿಶೂರಿನಲ್ಲಿ ಕಾಡುಹಂದಿಯನ್ನು ತಪ್ಪಿಸಲು ಯತ್ನಿಸಿದ ವ್ಯಾನ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಗಾಯಗೊಂಡಿರುವ ಘಟನೆ ನಡೆದಿತ್ತು.

ಜೂನ್ 14ರಂದು ರಾತ್ರಿ ಸುಮಾರು 1.30ರ ಸುಮಾರಿಗೆ ವಡಕ್ಕಂಚೇರಿ-ಕುನ್ನಂಕುಳಂ ರಾಜ್ಯ ಹೆದ್ದಾರಿಯಲ್ಲಿ ನಡೆದಿತ್ತು. ಪಾಲಕ್ಕಾಡಿನಿಂದ ಗುರುವಾಯೂರಿನತ್ತ ಸಾಗುತ್ತಿದ್ದ ವ್ಯಾನ್ ವಡಕ್ಕಂಚೇರಿ ಪ್ರದೇಶದ ಮೂಲಕ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿತ್ತು.

Also Read>> Model Democracy At KRCS | Student Council Election Concluded Successfully

ಪೊಲೀಸರ ಮಾಹಿತಿ ಪ್ರಕಾರ, ಅಕಸ್ಮಾತ್ ರಸ್ತೆ ಮೇಲೆ ಕಾಡುಹಂದಿ ಬಂದ ಹಿನ್ನೆಲೆಯಲ್ಲಿ ಚಾಲಕ ಅದನ್ನು ತಪ್ಪಿಸಲು ವಾಹನವನ್ನು ತೀವ್ರವಾಗಿ ತಿರುಗಿಸಿದ್ದಾನೆ. ಈ ವೇಳೆ ವ್ಯಾನ್ ಮೊದಲಿಗೆ ರಸ್ತೆ ಬದಿಯ ಲಾಟರಿ ಅಂಗಡಿಗೆ ಡಿಕ್ಕಿ ಹೊಡೆದಿದ್ದು, ನಂತರ ಮುಂದುವರೆದು ಮರಕ್ಕೆ ಡಿಕ್ಕಿ ಹೊಡೆದು ನಿಂತಿತ್ತು.

ಈ ಹೆದ್ದಾರಿ ಭಾಗದಲ್ಲಿ ಈ ಹಿಂದೆ ಕೂಡ ಇಂತಹ ಅಪಘಾತಗಳು ಸಂಭವಿಸಿರುವುದಾಗಿ ಅಧಿಕಾರಿಗಳು ಸೂಚಿಸಿದ್ದು, ವಿಶೇಷವಾಗಿ ರಾತ್ರಿ ವೇಳೆ ವಾಹನ ಚಾಲಕರು ಹೆಚ್ಚು ಎಚ್ಚರಿಕೆಯಿಂದ ಸಂಚರಿಸಲು ಸೂಚನೆ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalahamsa Infotech private limited

Tags: Kannada News WebsiteKeralaKollamLatest News KannadaRoad AccidentTipper Lorry CrashesTragedy NewsTrissurಕೊಲ್ಲಂತ್ರಿಶೂರ್ಭೀಕರ ರಸ್ತೆ ಅಪಘಾತ
Share203Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ಮಳೆಗಾಲದ ಪ್ರಯಾಣಿಕರ ಸುರಕ್ಷತೆಗೆ ನೈಋತ್ಯ ರೈಲ್ವೆಯ ಮುನ್ನೆಚ್ಚರಿಕಾ ಕ್ರಮಗಳೇನು?

Next Post

ಮಾನಸಿಕ ಒತ್ತಡ ಕಡಿಮೆ ಮಾಡಲು ಯೋಗ ಸಹಕಾರಿ | ಪ್ರಾಚಾರ್ಯ ವಿಶ್ವನಾಥ್ ಅಭಿಮತ

kalpa News

kalpa News

Next Post
ಮಾನಸಿಕ ಒತ್ತಡ ಕಡಿಮೆ ಮಾಡಲು ಯೋಗ ಸಹಕಾರಿ | ಪ್ರಾಚಾರ್ಯ ವಿಶ್ವನಾಥ್ ಅಭಿಮತ

ಮಾನಸಿಕ ಒತ್ತಡ ಕಡಿಮೆ ಮಾಡಲು ಯೋಗ ಸಹಕಾರಿ | ಪ್ರಾಚಾರ್ಯ ವಿಶ್ವನಾಥ್ ಅಭಿಮತ

Comments 1

  1. Pingback: ಪ್ರಯಾಣಿಕರ ಜಾಗೃತಿ ಅಭಿಯಾನ: ಇಬ್ಬರು ಮಕ್ಕಳನ್ನು ರಕ್ಷಿಸಿದ RPF

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL