ಬೆಂಗಳೂರು: ವಿವಾದಿತ ಟಿಪ್ಪು ಜಯಂತಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲೇ ಟಿಪ್ಪು ಜಯಂತಿಯನ್ನು ಆಚರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಟಿಪ್ಪು ಜಯಂತಿ ಆಚರಣೆಯ ಸ್ಥಳದ ವಿಚಾರದಲ್ಲಿ ಗೊಂದಲವಿದ್ದರೂ ಸಹ ಮೂರು ವರ್ಷಗಳಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲೇ ಆಚರಿಸಲಾಗುತ್ತಿದೆ. ಈ ಬಾರಿಯೂ ಸಹ ಅಲ್ಲೇ ಆಚರಿಸಲಾಗುತ್ತದೆ ಎಂದಿದ್ದಾರೆ.
ಹೆಚ್ಚು ಜನ ಸೇರಲು ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕಾಗಿ ಟಿಪ್ಪು ಜಯಂತಿಯನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಆಚರಿಸಲಾಗುತ್ತದೆ ಎನ್ನಲಾಗಿತ್ತು. ಆದರೆ, ಸಚಿವ ಜಮೀರ್ ಅಹಮದ್ ಒತ್ತಡದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿಯೇ ಆಚರಿಸಲು ನಿರ್ಧರಿಸಲಾಗಿದೆ.
Discussion about this post