No Result
View All Result
Cervical Cancer | Early Detection and Prevention Can Save Lives
English Articles

Cervical Cancer | Early Detection and Prevention Can Save Lives

by ಕಲ್ಪ ನ್ಯೂಸ್
January 16, 2026
0

Kalpa Media House  |  Special Article  |Cervical cancer remains one of the most preventable yet life-threatening cancers affecting women worldwide....

Read moreDetails
From Global Gold to Mumbai Spirit: Andre De Grasse Brings Olympic Legacy to the Tata Mumbai Marathon

From Global Gold to Mumbai Spirit: Andre De Grasse Brings Olympic Legacy to the Tata Mumbai Marathon

January 16, 2026
ಟಾಟಾ ಮುಂಬೈ ಮ್ಯಾರಥಾನ್ 2026ರಲ್ಲಿ ದಾಖಲೆ ನಿಧಿ ಸಂಗ್ರಹ

Haseena Themali Raises Over ₹5 Lakh for Palliative Care at the Tata Mumbai Marathon 2026 in her bid

January 15, 2026
ಚಳಿಗಾಲದ ಸೋಂಕುಗಳು & ಆಂಟಿಬಯೋಟಿಕ್ ದುರ್ಬಳಕೆ | ವೈರಲ್ ಯಾವುದು? ಅಪಾಯಕಾರಿ ಯಾವುದು?

Winter Infections and Antibiotic Misuse: What Is Viral? What Is Dangerous?

January 12, 2026
ಶಿವಮೊಗ್ಗ | ಜ.5-9 | ಕೃಷಿ ವಿವಿಯಲ್ಲಿ ನಡೆಯಲಿದೆ ಅಂತಾರಾಷ್ಟ್ರೀಯ ಮಹತ್ವದ ಕಾರ್ಯಾಗಾರ

Shivamogga | An international workshop will be held at the Agricultural University from Jan 5-9

January 1, 2026
  • Advertise With Us
  • Grievances
  • About Us
  • Contact Us
Sunday, January 18, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಪುರಂದರಗುರುಂ ವಂದೇ ದಾಸಶ್ರೇಷ್ಠಂ ದಯಾನಿಧಿಮ್…

ಜ.29 ರಂದು ಶ್ರೀ ಪುರಂದರದಾಸರ ಆರಾಧನೆ ನಿಮಿತ್ತ ವಿಶೇಷ ಲೇಖನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 28, 2025
in Special Articles
0
ನೀನು ಈಶ ನಾನು ದಾಸ | ದಾಸರೆಂದರೆ ಪುರಂದರ ದಾಸರಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಡಾ. ವ್ಯಾಸನಕೆರೆ ಪ್ರಭಂಜನಾಚಾರ್ಯ  |

ಮನ್ಮನೋಭೀಷ್ಟವರದಂ ಸರ್ವಾಭೀಷ್ಟಫಲಪ್ರದಮ್|
ಪುರಂದರಗುರುಂ ವಂದೇ ದಾಸಶ್ರೇಷ್ಠಂ ದಯಾನಿಧಿಮ್||

ಶ್ರೀಪುರಂದರದಾಸರು #SriPurandaradasaru ಕನ್ನಡ ನಾಡು ಕಂಡ ಅಪ್ರತಿಮ ಧರ್ಮಪ್ರಸಾರಕರು. ಕನ್ನಡ ಭಾಷೆಗೆ ವಿಶಿಷ್ಟವಾದ ಗೇಯತೆಯನ್ನು ತಂದುಕೊಟ್ಟ ಮಹಾಮಹಿಮರು.

ಶ್ರೀಪುರಂದರದಾಸರ ಮೂಲಸ್ಥಾನ ಪಂಢರಪುರದ ಬಳಿಯ ಪುರಂದರಗಡ. ಪೂರ್ವ ಜೀವನದಲ್ಲಿ ಚಿನಿವಾರರಾಗಿದ್ದ ಇವರು ಅಪಾರ ಐಶ್ವರ್ಯವನ್ನು ಗಳಿಸಿದ್ದರು. ನವಕೋಟಿ ನಾರಾಯಣ #NavakotiNarayana ಎಂಬ ಇವರ ಪ್ರಶಸ್ತಿಯಲ್ಲಿ ಅವರ ಅಗಾಧ ಸಂಪತ್ತಿನ ಹಿರಿಮೆಯನ್ನು ಕಾಣಬಹುದು.

ಪೂರ್ವಜೀವನದಲ್ಲಿ ಜಿಪುಣಾಗ್ರೇಸರರೆಂದು ಸುಪ್ರಸಿದ್ಧರಾಗಿದ್ದ ಇವರು, ಅನಂತರ ಸರ್ವಸ್ವ ದಾನಮಾಡಿದ ದಾನಶೂರರೆನ್ನಿಸಿದ್ದು ವಿಶಿಷ್ಟ ದೈವಸಂಕಲ್ಪ. ನವಕೋಟಿ ಎನ್ನಿಸಿದ ಮಹಾಲಕ್ಷ್ಮಿಯನ್ನು ತೊರೆದು ಅವಳ ಪತಿಯಾದ ನಾರಾಯಣನನ್ನು ಆರಾಧಿಸಿದ್ದು ಇವರ ಅಮೋಘಸಾಧನೆ. ಕೇವಲ ಮಹಾಲಕ್ಷ್ಮಿಯ ಉಪಾಸನೆ ಅನರ್ಥಕರ. ನಾರಾಯಣನ ಉಪಾಸನೆಯೇ ತಾರಕ ಎಂಬ ಭಗವದ್ಗೀತೆಯ #Bhagavdgeeta ಹನ್ನೆರಡನೆಯ ಅಧ್ಯಾಯದ ನಿರೂಪಣೆಗೆ ಇವರ ಜೀವನ ನಿದರ್ಶನ.
ಪೂರ್ವಜೀವನದಲ್ಲಿ ಚಿನಿವಾರರಾಗಿ ಸುವರ್ಣ ವ್ಯಾಪಾರಿಗಳಾಗಿದ್ದರೆ ಅನಂತರದಲ್ಲಿ ಮಧ್ವಮತ ಪ್ರಸಾರಕರಲ್ಲಿ ಶಾಸ್ತ್ರಸುವರ್ಣದ ದಾನ ಶೂರರೆನ್ನಿಸಿದ್ದು ವಿಶೇಷ. ಅವರ ಇಂತಹ ಪರಿವರ್ತನೆಗೆ ಒಂದು ರೀತಿಯಲ್ಲಿ ಅವರ ಧರ್ಮಪತ್ನಿ ಸರಸ್ವತೀಬಾಯಿಯ ಧರ್ಮಶ್ರದ್ಧೆ ಕಾರಣವಾಯಿತು. ಇದರ ಸ್ಮರಣೆಗೆಂಬಂತೆ `ಹೆಂಡತಿ ಸಂತತಿ ಸಾವಿರವಾಗಲಿ ದಂಡಿಗೆ ಬೆತ್ತ ಹಿಡಿಸಿದಳಯ್ಯ’ ಎಂದು ಅವರು ಅನಂತರ ಹಾಡಿದರು. ಪತಿಯು ಸನ್ಮಾರ್ಗ ಹಿಡಿಯಲು ಪತ್ನಿಯು ವಹಿಸಬೇಕಾದ ಎಚ್ಚರಿಕೆಯನ್ನು ಸರಸ್ವತೀಬಾಯಿಯ ಪ್ರಸಂಗ ಸ್ತ್ರೀಕುಲಕ್ಕೆ ನೀಡಿದೆ.

ಶ್ರೀವ್ಯಾಸರಾಜರಂತಹ #SriVyasarajaru ವಿದ್ವನ್ಮಣಿಗಳ ಸಂಪರ್ಕ ಇವರನ್ನು ಮಧ್ವ ಸಿದ್ಧಾಂತದ #Madhwamatha ವಿಶ್ವರೂಪದರ್ಶನಕ್ಕೆ ಅಣಿಯಾಗಿಸಿತು. `ಮಧ್ವಮತದ ಸಿದ್ಧಾಂತದ ಪದ್ಧತಿ ಬಿಡಬೇಡಿ ಬಿಟ್ಟು ಕೆಡಬೇಡಿ’ ಎಂಬ ಇವರ ಸಂದೇಶ ಜಿಜ್ಞಾಸುಗಳ ಪಾಲಿಗೆ ಅಮೃತಧಾರೆ.

Also Read>> ಜೈನ ನಿರ್ವಾಣ ಉತ್ಸವ ವೇದಿಕೆ ಕುಸಿತ | 7 ಮಂದಿ ಸಾವು | 40ಕ್ಕೂ ಅಧಿಕ ಜನರಿಗೆ ಗಾಯ

ವಿಜಯನಗರವೆನ್ನಿಸಿದ ಹಂಪಿ ಇವರ ಹರಿದಾಸ ಜೀವನದ ಮುಖ್ಯ ಕಾರ್ಯಕ್ಷೇತ್ರ. ದಶಕಗಳ ಕಾಲದ ಹಂಪಿಯ ಸಂಪರ್ಕ ಇವರನ್ನು ವಿಜಯನಗರದ ಹರಿದಾಸರೆಂದೇ ಗುರುತಿಸುವಂತೆ ಮಾಡಿದೆ.

ಪುರಂದರದಾಸರ ದೇಶ ಸಂಚಾರದ ವೈಖರಿಯೂ ಅಗಾಧವಾದುದು. ಸಮಗ್ರ ಭರತ ಖಂಡವನ್ನೇ ಅವರು ಸಂಚರಿಸಿದ್ದುದಕ್ಕೆ ಅವರ ಕೃತಿಗಳಲ್ಲಿಯೇ ಸಾಕ್ಷ್ಯ ದೊರೆಯುತ್ತದೆ. ಅವರ ಸಂಚಾರ ಕೇವಲ ತೀರ್ಥ ದರ್ಶನವಾಗದೇ ತೀರ್ಥಮಹಿಮೆಯ ಪ್ರಸಾರ ಕಾರ್ಯವೂ ಆಗಿನಕಾರ್ಯವೆನ್ನಿಸಿತು.
ಅಪಾರ ಸಂಖ್ಯೆಯಲ್ಲಿ ತೀರ್ಥಕ್ಷೇತ್ರಗಳ ಮಹಿಮೆಯನ್ನು ಕುರಿತು ಅವರು ರಚಿಸಿರುವ ಕೃತಿಗಳು ಒಂದರ್ಥದಲ್ಲಿ ಕನ್ನಡ ತೀರ್ಥಪ್ರಬಂಧದಂತೆ ಮಾನ್ಯವಾಗಿವೆ.

ಸಂಗೀತ ಪ್ರಪಂಚದ ಮಟ್ಟಿಗೆ ಶ್ರೀಪುರಂದರದಾಸರನ್ನು ಕರ್ನಾಟಕ ಸಂಗೀತ ಪಿತಾಮಹ #FatherofCarnaticMusic ಎಂದೇ ಪರಂಪರೆ ಗುರುತಿಸಿದೆ. ತ್ಯಾಗರಾಜರಂತಹ ಸಂಗೀತ ಕ್ಷೇತ್ರದ ರಸ ಋಷಿಗಳು ಶ್ರೀಪುರಂದರದಾಸರನ್ನು ಮಹಾನುಭಾವರೆಂದು ಕೊಂಡಾಡಿರುವುದು ಅವರ ಸಂಗೀತ ಕ್ಷೇತ್ರದ ಸಾಧನೆಯ ಬಗೆಗಿನ ಉಜ್ವಲ ನಿದರ್ಶನ.

ಸಂಗೀತದ #Music ಸಕಲ ಸಾಧ್ಯತೆಗಳನ್ನು ತೆರೆದಿಟ್ಟ ಶ್ರೇಯಸ್ಸು ಸಹ ಶ್ರೀಪುರಂದರದಾಸರದು. ಕೀರ್ತನೆ ಉಗಾಭೋಗ, ಸುಳಾದಿ, ವೃತ್ತನಾಮ ಮೊದಲಾದ ಮುಖ್ಯಪ್ರಾಕಾರಗಳಿಗೆಲ್ಲ ಶ್ರೀಪುರಂದರದಾಸರ ಕೊಡುಗೆ ಸಂದಿದೆ. ಆ ಅರ್ಥದಲ್ಲಿ ಶ್ರೀಪುರಂದರದಾಸರದು ದಾಸಸಾಹಿತ್ಯದ ಮೇರು ಸಾಧನೆ.

Also Read>> ಸೊರಬ | ಪಾರಂಪರಿಕ ಕಾಡಿಗೆ ದುಷ್ಕರ್ಮಿಗಳ ಲಗ್ಗೆ | ಅಪಾರ ಪ್ರಮಾಣದ ಮರಗಳ ಮಾರಣ

ಸಂಖ್ಯೆಯಲ್ಲೂ ಶ್ರೀಪುರಂದರದಾಸರ ಕೃತಿಗಳಿಗೆ ಅಗ್ರಸ್ಥಾನ. ಅವರೇ ತಿಳಿಸಿರುವಂತೆ ಹಾಗೂ ಮುಂದೆ ಶ್ರೀವಿಜಯದಾಸರಂತಹ ಶ್ರೇಷ್ಠ ದಾಸವರೇಣ್ಯರು ತಿಳಿಸಿರುವಂತೆ ಅವರ ಕೃತಿಗಳ ಸಂಖ್ಯೆ ನಾಲ್ಕು ಲಕ್ಷದ ಎಪ್ಪತ್ತೈದು ಸಾವಿರ. ಕನ್ನಡದ ಮಟ್ಟಿಗೆ ಇದೊಂದು ದಾಖಲೆ. ಕನ್ನಡದ ಬೇರಾವ ಕೃತಿಕಾರರು ಇಷ್ಟು ವ್ಯಾಪಕವಾದ ರಚನೆಯನ್ನು ಮಾಡಿದ ದಾಖಲೆ ಕಂಡುಬರುವುದಿಲ್ಲ. ವೈವಿಧ್ಯದಲ್ಲೂ ಶ್ರೀಪುರಂದರದಾಸರ ಕೃತಿಗಳಿಗೆ ಅಗ್ರಸ್ಥಾನ ಎಂಬುದು ಶ್ರೀಪ್ರಸನ್ನವೇಂಕಟದಾಸರ ಕೃತಿಯೊಂದರಿಂದ ತಿಳಿಯುತ್ತದೆ `ಗೀತಾಠಾಯಿ ಸುಳಾದ್ಯುಗಾಭೋಗ ಪದ್ಯಪದವ್ರಾತ ಪ್ರಬಂಧ ರಚಿಸಿ ವಿಟ್ಠಲನ ಪ್ರೀತಿ ಪಡಿಸಿ ಪ್ರತ್ಯಕ್ಷ ಕಂಡು ನಲಿವ ವೈಷ್ಣವನಾಥ ಪ್ರಸನ್ನವೇಂಕಟಕೃಷ್ಣ ಪ್ರಿಯನ’.

ಶ್ರೀಕೃಷ್ಣಲೀಲೆಗಳನ್ನು ಕುರಿತ ಶ್ರೀಪುರಂದರದಾಸರ ಕೃತಿಗಳು ಶ್ರೀಮದ್ಭಾಗವತವನ್ನು ಕನ್ನಡ ದಶಮಸ್ಕಂಧದ ಸಂಗೀತ ರೂಪಕವನ್ನಾಗಿಸಿದೆ. ಪುರಾಣ ಪ್ರಪಂಚದ ಮಹೋನ್ನತ ವಿಚಾರಗಳನ್ನೂ ಕಥೆ ಉಪಕಥೆಗಳನ್ನೂ ಕನ್ನಡದಲ್ಲಿ ಸಂಗೀತಬದ್ಧವಾಗಿ ಒದಗಿಸಿದ ಶ್ರೇಯಸ್ಸು ಹರಿದಾಸ ಸಾಹಿತ್ಯದ್ದು. ಆ ಕೀರ್ತಿಯ ಸಿಂಹಪಾಲು ಶ್ರೀಪುರಂದರದಾಸರದು.

ತಮ್ಮ ಜೀವನದ ಸುಮಾರು 40ರ ಪ್ರಾಯದಲ್ಲಿ ಅಧ್ಯಾತ್ಮಕ್ಕೆ ತೆರೆದುಕೊಂಡ ಶ್ರೀದಾಸರು ಅನಂತರದ ಸುಮಾರು 40 ವರ್ಷಗಳ ಅವಧಿಯಲ್ಲಿ ಮಾಡಿದ ಸಾಧನೆ ಕನ್ನಡದಲ್ಲಿ ಅಭೂತಪೂರ್ವ ಎನ್ನಿಸಿತು. ತಾವು ಮಾತ್ರವಲ್ಲದೇ ತಮ್ಮ ಪತ್ನಿಪುತ್ರರೂ ಸಹ ಹರಿದಾಸರಾಗುವಂತೆ ಪ್ರೇರೇಪಿಸಿದ್ದು ಶ್ರೀದಾಸರ ಮತ್ತೊಂದು ಸಾಧನೆ.

ಶ್ರೀವ್ಯಾಸರಾಜರು, ಶ್ರೀವಾದಿರಾಜರು ಮೊದಲಾದ ಯತಿಶೇಖರರೊಂದಿಗೂ, ಕೃಷ್ಣದೇವರಾಜನಂತಹ ಅರಸನೊಂದಿಗೂ, ಶ್ರೀಕನಕದಾಸರಂತಹ ಶ್ರೀಹರಿದಾಸರೊಂದಿಗೂ ಶ್ರೀಪುರಂದರದಾಸರ ಒಡನಾಟ ಅವರ ಬಹುಮುಖ ಹಿರಿಮೆಗೆ ದ್ಯೋತಕ.ಕನಕದಾಸರ ಹಿರಿಮೆಯನ್ನು ಗುರುತಿಸುವಲ್ಲಿ ಶ್ರೀವ್ಯಾಸರಾಜ, ಶ್ರೀವಾದಿರಾಜರ ಪಾತ್ರದಂತೆ ಶ್ರೀಪುರಂದರದಾಸರ ಪಾತ್ರವೂ ಅಮೋಘವಾದುದು. ಕನಕದಾಸರ ಬಗ್ಗೆ ಅವರು ರಚಿಸಿರುವ `ಕನಕದಾಸನ ಮೇಲೆ ದಯಮಾಡಲು ವ್ಯಾಸಮುನಿ ಮಠದವರೆಲ್ಲ ದೂರಿಕೊಂಬುವರು’ ಎಂಬ ಕೃತಿ ಕನಕದಾಸರ ಬಗೆಗಿನ ಒಂದು ಅಪೂರ್ವ ದಾಖಲೆಯಾಗಿ ಮಾನ್ಯವಾಗಿದೆ.

ವಿದ್ಯೆಯ ಮೇರುವೆನ್ನಿಸಿದ್ದ ಶ್ರೀವ್ಯಾಸರಾಜರಿಂದ `ದಾಸರೆಂದರೆ ಪುರಂದರ-ದಾಸರಯ್ಯ’ ಎನ್ನಿಸಿಕೊಂಡ ಶ್ರೀಪುರಂದರದಾಸರದು ಪರಮ ಸಾರ್ಥಕ ಜೀವನ. ಅವರ ಕೃತಿಗಳಲ್ಲಿ ವೇದಾಂತದ ಸಾರ ತುಂಬಿದೆ. ಪುರಂದರೋಪನಿಷತ್ತು ಎಂದು ಕರೆಯುವ ಮೂಲಕ ಅವುಗಳ ಹಿರಿಮೆಯನ್ನು ಜಗತ್ತಿಗೆ ಸಾರಿದ ಶ್ರೀವ್ಯಾಸರಾಜರ ಹೃದಯವೈಶಾಲ್ಯ ಐತಿಹಾಸಿಕ ಮಹತ್ತ್ವದ್ದು.

ಶ್ರೀವಿಜಯದಾಸರಿಗೆ ಸ್ವಪ್ನದಲ್ಲಿ ಶ್ರೀಪುರಂದರದಾಸರ ರೂಪದಲ್ಲಿಯೇ ಅಂಕಿತವನ್ನು ಅನುಗ್ರಹಿಸುವ ಮೂಲಕ ಅವರ ಸ್ಥಾನವನ್ನು ಅಜರಾಮರವನ್ನಾಗಿ ಶ್ರೀಹರಿ ಮಾಡಿದ. ದಾಸಕೂಟದ ವ್ಯಾಪಕ ಪ್ರಸಾರಕ್ಕೆ ಹೀಗೆ ಪರೋಕ್ಷವಾಗಿಯೂ ಪುರಂದರದಾಸರ ಕೊಡುಗೆ ಅಪಾರವಾದುದು.

ಶ್ರೀಪುರಂದರದಾಸರು ಶ್ರೀಶ್ರೀಪಾದರಾಜರು, ಶ್ರೀವ್ಯಾಸರಾಜರು, ಶ್ರೀವಾದಿರಾಜರು ಎಂಬ ರಾಜತ್ರಯರಾದ ಮುನಿತ್ರಯರ ಅನಂತರ ಒಬ್ಬ ಗೃಹಸ್ಥವರೇಣ್ಯರಾಗಿ ಶ್ರೀಹರಿದಾಸಸಾಹಿತ್ಯವನ್ನು ಉತ್ತುಂಗಕ್ಕೆ ಒಯ್ದರು. ಅವರ ಸಾಧನೆ ನಿಜವಾದ ಅರ್ಥದಲ್ಲಿ ಶ್ರೀವ್ಯಾಸರಾಜರು ಹೇಳಿದಂತೆ `ಪೂತಾತ್ಮ ಪುರಂದರದಾಸರಿವರಯ್ಯ’ ಎನ್ನಿಸಿದೆ.

ತಮ್ಮ ಪ್ರಧಾನ ಕಾರ್ಯಕ್ಷೇತ್ರವಾದ ಹಂಪಿಯಲ್ಲಿಯೇ ಅವರು ತಮ್ಮ ಕೊನೆಯ ದಿನಗಳನ್ನು ಕಳೆದರು. ಅವರು ಹರಿಪುರಕ್ಕೆ ತೆರಳಿದ್ದು ಸಹ ಹಂಪೆಯಲ್ಲಿಯೇ ಎಂಬುದು ಅವರ ಪುತ್ರ ಮಧ್ವಪತಿದಾಸರ ಕೃತಿಯಿಂದ ತಿಳಿಯುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalahamsa Infotech private limited

Tags: BhagavatamCarnatic musicFather of Carnatic MusicMadhwa MathaMusicSri Vyasanakere Prabhanjanacharyaಕನಕದಾಸರುಕರ್ನಾಟಕ ಸಂಗೀತ ಪಿತಾಮಹಡಾ. ವ್ಯಾಸನಕೆರೆ ಪ್ರಭಂಜನಾಚಾರ್ಯಭಗವದ್ಗೀತೆಮಧ್ವ ಸಿದ್ಧಾಂತವಿಜಯನಗರಶ್ರೀಪುರಂದರದಾಸರುಶ್ರೀಮದ್ಭಾಗವತಶ್ರೀವಿಜಯದಾಸರುಶ್ರೀವ್ಯಾಸರಾಜರುಸಂಗೀತ
Share196Tweet123Send
Previous Post

ಜೈನ ನಿರ್ವಾಣ ಉತ್ಸವ ವೇದಿಕೆ ಕುಸಿತ | 7 ಮಂದಿ ಸಾವು | 40ಕ್ಕೂ ಅಧಿಕ ಜನರಿಗೆ ಗಾಯ

Next Post

ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ವಿಶೇಷ ರೈಲಿನ ಮೇಲೆ ಕಲ್ಲು ಎಸೆತ | ನಡೆದಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ವಿಶೇಷ ರೈಲಿನ ಮೇಲೆ ಕಲ್ಲು ಎಸೆತ | ನಡೆದಿದ್ದೇನು?

ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ವಿಶೇಷ ರೈಲಿನ ಮೇಲೆ ಕಲ್ಲು ಎಸೆತ | ನಡೆದಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತೀರ್ಥಹಳ್ಳಿ ಭೀಕರ ಅಪಘಾತ | ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

ತೀರ್ಥಹಳ್ಳಿ ಭೀಕರ ಅಪಘಾತ | ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

January 14, 2026
ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

January 9, 2026
ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

January 12, 2026
ಇಂದಿನ ಪಂಚಾಂಗ : 2026ರ ಜನವರಿ 7, ಮಂಗಳವಾರ

ಇಂದಿನ ಪಂಚಾಂಗ | 2026ರ ಜನವರಿ 18, ಭಾನುವಾರ

January 17, 2026
ದೆಹಲಿ ಬ್ಲಾಸ್ಟ್ | ಯಾರೊಬ್ಬರನ್ನೂ ಬಿಡಲ್ಲ | ಮೋದಿ ಶಪಥ | ಸದ್ಯದಲ್ಲಿ ಕಾದಿದೆ ಮಾರಿಹಬ್ಬ?

ಕ್ರೂರ ತೃಣಮೂಲ ಸರ್ಕಾರವನ್ನು ಕಿತ್ತೊಗೆಯಿರಿ | ಪ.ಬಂಗಾಳದ ಜನರಿಗೆ ಪ್ರಧಾನಿ ಮೋದಿ ಮನವಿ

January 17, 2026
ಆರ್’ಸಿಬಿಗೆ ಭರವಸೆ | ಸ್ಪೋಟಕ ಬ್ಯಾಟಿಂಗ್’ಗೆ ಬೆಚ್ಚಿ ಬಿದ್ದ ಬೌಲರ‍್ಸ್

ಆರ್’ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ | ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಕ್ಕೆ ಗ್ರೀನ್ ಸಿಗ್ನಲ್

January 17, 2026
ಉದ್ಯೋಗ ಮೇಳದ ಪೂರ್ವಭಾವಿ ತರಬೇತಿಯಿಂದ ಸಂದರ್ಶನ ಕೌಶಲ್ಯ ವೃದ್ಧಿ | ಗುರುಮೂರ್ತಿ ಅಭಿಮತ

ಉದ್ಯೋಗ ಮೇಳದ ಪೂರ್ವಭಾವಿ ತರಬೇತಿಯಿಂದ ಸಂದರ್ಶನ ಕೌಶಲ್ಯ ವೃದ್ಧಿ | ಗುರುಮೂರ್ತಿ ಅಭಿಮತ

January 17, 2026
ಮೈಸೂರು ವಿವಿ ಕುಲಪತಿ ಹೇಳಿಕೆಗೆ ಕುವೆಂಪು ವಿವಿ ಕುಲಪತಿ ಶರತ್ ಅನಂತಮೂರ್ತಿ ಖಂಡನೆ | ಏನಿದು ವಿಚಾರ?

ಮೈಸೂರು ವಿವಿ ಕುಲಪತಿ ಹೇಳಿಕೆಗೆ ಕುವೆಂಪು ವಿವಿ ಕುಲಪತಿ ಶರತ್ ಅನಂತಮೂರ್ತಿ ಖಂಡನೆ | ಏನಿದು ವಿಚಾರ?

January 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL