No Result
View All Result
Hotel Management Students Participate in Tree Census
English Articles

Hotel Management Students Participate in Tree Census

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru  | The management and students of the Mysore Institute of Hotel Management and Culinary (MIHMC),...

Read moreDetails
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
  • Advertise With Us
  • Grievances
  • About Us
  • Contact Us
Monday, March 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಎಷ್ಟೇ ತಡೆದರೂ ಇಂದು ಕಲಾಂ ಮೇಷ್ಟ್ರ ನೆನೆದು ಕಣ್ಣೀರು ಬರುತ್ತಿದೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 27, 2018
in Army
0
Share on FacebookShare on TwitterShare on WhatsApp

‘ಕಳಬೇಡ-ಕೊಲಬೇಡ….ಅಂತರಂಗ ಶುದ್ಧಿ-ಬಹಿರಂಗ ಶುದ್ಧಿ…’ ಎಂಬ ಬಸವಣ್ಣರ ಈ ವಚನಕ್ಕೆ ಇಡೀ ಭಾರತದಲ್ಲಿ ಅಂಕಿತರಾದವರು ಡಾ.ಎಪಿಜೆ ಅಬ್ದುಲ್ ಕಲಾಂಜೀ. ಅಂತರ್ರಾಷ್ಟ್ರೀಯ ಮಟ್ಟದ ಕ್ಷಿಪಣಿ ತಜ್ಞ, ಪುಟ್ಟ ಮಕ್ಕಳ ಪಾಲಿಗೆ ಕಲಾಂ ಅಂಕಲ್, ದೇಶಾಭಿವೃದ್ಧಿ ಕನಸು ಕಂಡ ಹರಿಕಾರ, ಮಿಷನ್ 2020ಯ ಜನಕ ತುಟಿಯ ಮೇಲೆ ಸದಾ ಕಿರುನಗೆಯ, ಸದಾ ತಾಯ್ನಾಡಿಗಾಗಿ ಮಂಥನ ನಡೆಸುತ್ತಾ ವಿಧಿ ಕರೆದ ಒಂದೇ ಕರೆಗೆ ಇಲ್ಲಿದೆಲ್ಲವನ್ನೂ ಬಿಟ್ಟು ಅನಂತತೆಯೆಡೆಗೆ ಸರಸರನೆ ನಡೆದ ಕಲಾಂಜೀ ನೆನಪು ಸದಾ ಕಾಡುತ್ತಲೇ ಇರುತ್ತದೆ. ಇಂಗ್ಲೀಷ್‌ನಲ್ಲಿ ಹೇಳುವಂತೆ ‘ಎ ಕಲೋಸಲ್ ಎಂಡ್‌ಸ್ ದ ಜರ್ನಿ’ ಎಂದರೆ ಈ ಯುಗದಲ್ಲಿ ಒಮ್ಮೆ ಮಾತ್ರ ಜನಿಸುವ ಅದ್ಭುತ ವ್ಯಕ್ತಿತ್ವ ಎಂದರ್ಥ. ಅಂತಹಾ ಕಲಾಂ ನಮ್ಮನ್ನು ಅಗಲಿ ಇಂದಿಗೆ ಎರಡು ವರ್ಷ. ಅವರು ಮರುಹುಟ್ಟು ಪಡೆದು ಮತ್ತೆ ಈ ಪೃಥ್ವಿಯಲಿ ಜನಿಸಲಿ…ತನ್ಮೂಲಕ ಸತ್ಪಾತ್ರರ, ಸನ್ಮಾರ್ಗಿಗಳ, ಸದಾಚಾರಿಗಳ, ಸದ್ವಿವೇಕಿಗಳ, ಸುಶೀಲರ ಪರಂಪರೆ ಮತ್ತೆ ಉದಯಿಸಲಿ ಎಂಬುದೇ ಸಮಸ್ತ ಭಾರತೀಯರ ಆಶಯ.

 

ದೇಶಾಭಿವೃದ್ಧಿಯನ್ನೇ ಕಲ್‌ಮಾ(ಕಲ್‌ಮಾ ಎಂದರೆ ಉರ್ದು ಭಾಷೆಯಲ್ಲಿ ಮಂತ್ರ ಎಂದರ್ಥ) ಎಂದೇ ಪರಿಭಾವಿಸಿದ್ದ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್ ಕಲಾಂ ಭೌತಿಕವಾಗಿ ಇಲ್ಲ ಎಂದು ಊಹಿಸಿಕೊಳ್ಳಲು ಎಂದಿಗೂ ಅಗುವುದೇ ಇಲ್ಲ. ಸಜ್ಜನರಿಗೆ ಯಾವುದೇ ಜಾತಿ, ಧರ್ಮ, ಪಂಗಡದ ಸೀಮಾರೇಖೆ ಇರುವುದಿಲ್ಲ ಎಂಬುದಕ್ಕೆ ಅವರು ಉಪಮೆಯಾಗಿದ್ದರು. ಜುಲೈ 27 ಇಡೀ ದೇಶದ ಕಣ್ಣಾಲಿಗಳಲ್ಲಿ ನೀರಾಡಿಸಿ ಭಾರತಮಾತೆಯ ಮಡಿಲನ್ನು ಬರದಾಗಿಸಿ ಹೋದ, ತದನಂತರವೂ ದೇಶದಲ್ಲಿ ಸೂತಕದ ಛಾಯೆ ಅಡರುವಂತೆ ಬಾಳಿ ಬದುಕಿದ ಕಲಾಂ ಮೇಷ್ಟ್ರು ಮತ್ತೆ ನೆನಪಾಗಿದ್ದಾರೆ.

ಸರಳತೆ, ಸಜ್ಜನಿಕೆ, ಹೊಗಳಿಕೆಗೆ ಹಿಗ್ಗದ, ತೆಗಳಿಕೆಯನ್ನೇ ಕಾಣದ ಇಡೀ ಜಗತ್ತಿನ ಎಲ್ಲರ ಮನಗೆದ್ದ ಈ ಭಾರತೀಯ ಸುಪುತ್ರ ಮತ್ತೆ ಬರಲಿ, ತನ್ಮೂಲಕ ಭಾರತ ಮಾತೆಯ ಮುಕುಟದಲ್ಲಿ ಬಾಕಿ ಉಳಿದ ಮತ್ತೊಂದು ರತ್ನ ಶೋಭಿಸಲಿ ಎಂದು ಪ್ರಾರ್ಥಿಸುತ್ತಾ ‘ಕಲಾಂ’ರಿಗಾಗಿ ನನ್ನ ‘ಕಲಮ್’(ಪೆನ್ನು)ನಿಂದ ನಾಲ್ಕು ‘ಕಾಲಂ’ ಬರೆಯಬೇಕೆಂಬ ತುಡಿತ. ಹೀಗಾದರೂ ನನ್ನಲ್ಲಿರುವ ಅಸೀಮ ದುಃಖವನ್ನು ಹತ್ತಿಕ್ಕುವ ಪುಟ್ಟ ಪ್ರಯತ್ನ.

ಭಾರತ ಇಂದು ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಅದರಲ್ಲೂ ರಕ್ಷಣಾ ವ್ಯವಸ್ಥೆಯಲ್ಲಿ ತನ್ನ ಛಾಪನ್ನು ಮೂಡಿಸಿದೆ, ಪಾಕ್‌ನಂತಹಾ ಪಾತಕಿ ರಾಷ್ಟ್ರಗಳ ಎದೆಯಲ್ಲಿ ಅವಲಕ್ಕಿ ಕುಟ್ಟುತ್ತಿದೆ ಎಂದಾದರೆ ಅದಕ್ಕೆ ಮುಖ್ಯ ಕಾರಣ ಡಾ.ಎಪಿಜೆ ಅಬ್ದುಲ್ ಕಲಾಂ. ಇವರು ಕಂಡು ಹಿಡಿದ ಮಿಸೈಲ್‌ಗಳು ಭಾರತೀಯ ರಕ್ಷಣಾ ಇಲಾಖೆಯ ಗಟ್ಟಿತನದ ಪರಿಭಾಷೆಗೆ ಹೊಸ ಭಾಷ್ಯ ಬರೆದವು. ದೂರಗಾಮಿ ಕ್ಷಿಪಣಿಗಳ ತಯಾರಿಕೆಯಲ್ಲಿ ಅದರ ವಿನ್ಯಾಸದಲ್ಲಿ ಕಲಾಂ ಪಾತ್ರ ಬಹು ಮುಖ್ಯ.

ಈ ದೇಶ ಏನಾದರೂ ಅಭಿವೃದ್ಧಿ ಹೊಂದಿದರೆ ಅದು ಯುವಕರಿಂದ ಮಾತ್ರ ಸಾಧ್ಯ. ‘ಯೂತ್‌ಸ್ ಬಿಲ್‌ಡ್ ದ ಲೀಡರ್‌ಸ್ ಅಂಡ್ ದೆನ್ ದ ಲೀಡರ್‌ಸ್ ಬಿಲ್‌ಡ್ ದ ನೇಷನ್’ ಎಂದು ಬಲವಾಗಿ ನಂಬಿದ್ದವರು ಕಲಾಂ ಮೇಷ್ಟ್ರು. ಹಾಗಾಗಿ ಅವರು ಸದಾ ಮಕ್ಕಳು ಮತ್ತು ಯುವಶಕ್ತಿಯೊಂದಿಗೆ ಬೆರೆಯುತ್ತಿದ್ದರು. ಯುವಶಕ್ತಿ ಮೈಕೆಲ್ ಜಾಕ್ಸನ್, ಅಮೀರ್‌ಖಾನ್‌ರನ್ನು ಎಷ್ಟು ಇಷ್ಟಪಡುತ್ತಿದ್ದರೋ ಅದಕ್ಕಿಂತ ಹತ್ತು ಪಟ್ಟು ಕಲಾಂರ ಮೇಲೆ ಗೌರವ ಇರಿಸಿಕೊಂಡಿದ್ದೂ ಪ್ರಾಯಶಃ ಇದೇ ಕಾರಣಕ್ಕಾಗಿ.

ಅವರು ಬರೆದ ‘ಇಂಡಿಯಾ 2020’ ಪುಸ್ತಕದ ತುಂಬೆಲ್ಲಾ ಅವರು ಯುವಶಕ್ತಿಗೆ ಸಾಕಷ್ಟು ಮಾರ್ಗದರ್ಶನ ನೀಡಿದ್ದಾರೆ. ಆದರೆ ಹೊಸತು ಬಂದಾಕ್ಷಣ ಹಳೆಯದನ್ನು ಮರೆಯುವ ಮಾನವ ಸಹಜವಾಗಿ ಮರೆವಿನಿಂದಾಗಿ ಇಂದಿನ ಯುವಶಕ್ತಿ ಕಲಾಂರ ಈ ಪುಸ್ತಕವನ್ನು ಓದುವ ಪ್ರಯತ್ನವನ್ನೇ ಮಾಡಿಲ್ಲ. ದಟ್ಟ ದರಿದ್ರ ವ್ಯವಸ್ಥೆಯ, ಕೀಳು ಮಟ್ಟದ ರಾಜಕೀಯದ ನಡುವೆ ಇದ್ದರೂ ಅದರ ಲವಲೇಶವನ್ನೂ ಮೈಗೆ ಅಂಟಿಸಿಕೊಳ್ಳದ, ಅದರ ನಡುವೆಯೇ ಐದು ವರ್ಷಗಳ ತಮ್ಮ ರಾಷ್ಟ್ರಪತಿತ್ವದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಕಲಾಂ ಸರ್ವಧರ್ಮೀಯರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು ಎಂಬುದು ಅವರ ವ್ಯಕ್ತಿತ್ವವನ್ನು ಬಿಂಬಿಸುತ್ತದೆ.

ಸಲಾಂ ಹೊಡೆಯುವ ಸಂಸ್ಕೃತಿಗೆ ಕಲಾಂ ಕಿಡಿಯಾಗುತ್ತಿದ್ದರು. ಒಮ್ಮೆ ಹೀಗೇ ಕಾರ್ಯಕ್ರಮವೊಂದರಲ್ಲಿ ಯಾರೋ ಅಬ್ದುಲ್ ಕಲಾಂರ ಮೇಲಿನ ಗೌರವದಿಂದಲೋ ಅಥವಾ ನಮಗೆ ಅವರ ಮೇಲೆ ಗೌರವವಿದೆ ಎಂದು ಸಭೆಗೆ ತೋರಿಸುವ ಉದ್ದೇಶದಿಂದಲೋ ತುಂಬಿದ ಸಭೆಯಲ್ಲಿ ಕಲಾಂರ ಕಾಲಿಗೆರಗಿ ಆಶೀರ್ವಾದ ಪಡೆಯುವ ಪ್ರಯತ್ನ ಮಾಡಿದ್ದರು. ಇದರಿಂದ ಕೊಂಚ ವಿಚಲಿತರಾದ ಕಲಾಂರವರು ‘ನಿಮ್ಮ ಹೆತ್ತವರ ಕಾಲಿಗೆರಗಿ, ಕಲಿಸಿದ ಗುರುವಿಗೆ ನಮಸ್ಕರಿಸಿ, ಭಾರತಮಾತೆಗೆ ನಮಿಸಿ, ಹಾಗೆಯೇ ಕಾಲಿಗೆರಗಿ ವಿಧೇಯತೆಯನ್ನು ಪ್ರದರ್ಶಿಸುವ ಬದಲು ದೇಶಾಭಿವೃದ್ಧಿಯ ಕಡೆಗೆ ಚಿಂತನೆ ನಡೆಸಿ…ನಾನು ಓರ್ವ ಸಾಮಾನ್ಯ ಮನುಷ್ಯ’ ಎಂದು ಹೇಳಿದ್ದರು.
ಕರಿಬಿಳಿ ಮಿಶ್ರಿತ ಅರ್ಧ ಮುಖವನ್ನು ಮುಚ್ಚುತ್ತಿದ್ದ ಕೇಶರಾಶಿ, ಮುಖದ ಮೇಲೆ ಸದಾ ಮಿನುಗುತ್ತಿದ್ದ ಮಂದಹಾಸ ಕಲಾಂರ ಟ್ರೇಡ್‌ಮಾರ್ಕ್.

ಇಡೀ ಜೀವನವನ್ನು ಬ್ರಹ್ಮಚಾರಿಯಾಗಿಯೇ ಕಳೆದ ಅವರು ಎಂದೂ ಐಹಿಕ ಸುಖ ಭೋಗ ಲಾಲಸೆಗಳ ಕಡೆಗೆ ಮನಸ್ಸು ಮಾಡಲೇ ಇಲ್ಲ. ದೇಶದ ದಾರ್ಶನಿಕರೋರ್ವರು ಹೇಳಿದಂತೆ ಬ್ರಹ್ಮಚಾರಿಗಳು ಈ ದೇಶದಲ್ಲಿ ಸಖತ್ ಪ್ರಸಿದ್ಧರಾಗಿದ್ದಾರಂತೆ. ಅವರು ನೀಡುವ ಉದಾಹರಣೆ ಎಂದರೆ, ಡಾ. ಅಬ್ದುಲ್ ಕಲಾಂ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಮುಂಬೈ ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಜಿ.ಎ. ಖೈರ್ನಾರ್, ಚಂದ್ರಶೇಖರ ಆಜಾದ್, ಭಗತ್‌ಸಿಂಗ್, ಸ್ವಾಮಿ ವಿವೇಕಾನಂದ, ಆದಿಗುರು ಶ್ರೀ ಶಂಕರಾಚಾರ್ಯರು…ಹೀಗೆ ಅನೇಕ ಸಾಧಕರು ತಂತಮ್ಮ ಕಾಲಾವಧಿಯಲ್ಲಿ ಗುರುತರ ಜವಾಬ್ದಾರಿಯನ್ನು ನಿರ್ವಹಿಸಿ ಇಂದಿಗೂ ಅಜರಾಮರರಾಗಿದ್ದಾರೆ. ಪ್ರಸ್ತುತ ಪ್ರಧಾನಿ ನರೇಂದ್ರಮೋದಿ ಕೂಡಾ ಇದೇ ಹಾದಿಯಲ್ಲಿ ಭಾರತದ ವಿಶ್ವ ಗುರುತ್ವ ಶಕ್ತಿ ಪಡೆದುಕೊಳ್ಳುವ ನಿಟ್ಟಿನಲ್ಲಿ ಅಹರ್ನಿಶಿ ಶ್ರಮಿಸುತ್ತಿದ್ದಾರೆ.

ಆದರೆ ಒಂದಂತೂ ಸ್ಪಷ್ಟ, ಕಲಾಂರ ನಿರ್ಗಮನದ ನಂತರ ದೇಶದಲ್ಲಿ ತಾಯ್ನಾಡಿನ ಬಗ್ಗೆ ಚಿಂತಿಸುವ ಯುವ ಪೀಳಿಗೆಯ ಸಂತತಿ ಹೆಚ್ಚಿದೆ. ಮೊದಲು ಐಷಾರಾಮಿ ಬದುಕಿನ ಬಗ್ಗೆ, ಪ್ರೀತಿ ಪ್ರೇಮ ಎಂದು ಕಾಲಹರಣ ಮಾಡುವ ಪ್ರಕ್ರಿಯೆಗಿಂತ ಇತ್ತೀಚಿಗೆ ದೇಶದ ಕುರಿತು ಚಿಂತನೆ ನಡೆಸುವ ಜಾಡ್ಯ, ಗೀಳು ಯುವಶಕ್ತಿಯಲ್ಲಿ ಮೊಳಕೆಯೊಡೆದಿದೆ. ಇದಕ್ಕೆ ಕಾರಣ ಕಲಾಂ ಮೇಷ್ಟ್ರು ಎಂದು ನಿಸ್ಸಂದೇಹವಾಗಿ ಹೇಳಬಹುದು. ಯುವಶಕ್ತಿಯ ಪ್ರೇರಕ ಶಕ್ತಿ, ಚುಂಬಕ ಶಕ್ತಿ ಕಲಾಂ ಎಂದರೆ ಪ್ರಾಯಶಃ ಉತ್ಪ್ರೇಕ್ಷೆಯಾಗಲಾರದು.

ಕಲಾಂಜೀ ರಾಷ್ಟ್ರಪತಿಯಾಗಿದ್ದಾಗ ಪ್ರಸಿದ್ಧರಾದಷ್ಟು ಅವರು ಮಾಜಿಯಾದ ನಂತರವೇ ಸಮಾಜದೊಂದಿಗೆ ಹೆಚ್ಚಾಗಿ ಬೆರೆತು ಪ್ರಸಿದ್ಧಿ ಪಡೆದರು. ಅವರನ್ನು ಕರೆಯದ ದೇಶವಿಲ್ಲ, ಭಾರತದಲ್ಲಿ ಅವರು ಭೇಟಿ ಕೊಡದ ಸ್ಥಳವಿಲ್ಲ. ಅವರು ಅಸ್ತಂಗತರಾದಾಗ ಅಕ್ಷರಶಃ ಶಾಲಾ ಮಕ್ಕಳು ಕಣ್ಣೀರಿಟ್ಟಿದ್ದು ನನಗೆ ಇಂದಿಗೂ ನೆನಪಿದೆ. ಮೈಸೂರಿನ ಶಾಲೆಯೊಂದರ ಮಕ್ಕಳು ಕೈಯಲ್ಲಿ ಮೊಂಬತ್ತಿ ಹಿಡಿದು ಕಣ್ಣಲ್ಲಿ ನೀರು ತುಂಬಿಕೊಂಡು ಅಳುತ್ತಲೇ ಶ್ರದ್ಧಾಂಜಲಿ ಅರ್ಪಿಸಿದ್ದು ನಿಜಕ್ಕೂ ಹೃದಯಸ್ಪರ್ಶಿ. ಅಂತಹಾ ವರ್ಚಸ್ಸನ್ನು ಪ್ರಾಯಶಃ ದೇಶದ ಬೇರಾವ ರಾಷ್ಟ್ರಪತಿಯೂ ಪಡೆದುಕೊಂಡಿರಲಿಲ್ಲ ಎಂಬುದೂ ನಿರ್ವಿವಾದ.

ಮೈಸೂರಿನಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ನಾನು ವರದಿಗಾಗಿ ತೆರಳಿದ್ದ ಸಂದರ್ಭದಲ್ಲಿ ಪುಟ್ಟ ಬಾಲೆಯೊಬ್ಬಳು ಕಲಾಂರಿಗೆ ಕೇಳಿದ ಪ್ರಶ್ನೆ ಅವರೇ ಹೇಳಿಕೊಂಡಂತೆ ಅವರಿಗೆ ಬಹುವಾಗಿ ಕಾಡಿತ್ತಂತೆ…! ಅಂಕಲ್ ನೀವು ಕ್ಷಿಪಣಿ ತಯಾರಿಕೆಗೆ, ವೈಜ್ಞಾನಿಕ ಅಭಿವೃದ್ಧಿಗೆ ನೀಡಿದಷ್ಟು ಗಮನವನ್ನು ಭ್ರಷ್ಟಾಚಾರ ನಿರ್ಮೂಲನೆಗೆ ಯಾಕೆ ನೀಡುತ್ತಿಲ್ಲ…? ಎಂದು. ಅಕ್ಷರಶಃ ಕಲಾಂ ಮೇಷ್ಟ್ರು ಅಂದು ಕ್ಷಣಕಾಲ ನಿರುತ್ತರರಾಗಿದ್ದರು. ತಕ್ಷಣವೇ ಸಾವರಿಸಿಕೊಂಡು ಈ ಕಲಾಂ ಕ್ಷಿಪಣಿ, ಮಿಸೈಲ್‌ಗಳನ್ನು ತಯಾರಿಸಿ ದೇಶದ ರಕ್ಷಣೆಗೆ ಮುಂದಾಗುತ್ತಿದ್ದಾರೆ. ನೀವೆಲ್ಲಾ ಪುಟ್ಟ ಕಲಾಂಗಳು ಇಂದಿನಿಂದಲೇ ಭ್ರಷ್ಟಾಚಾರ ನಿರ್ಮೂಲನೆಗೆ ಮನಸ್ಸು ಮಾಡಿ ದೇಶ ರಕ್ಷಣೆಗೆ ಮುಂದಾಗಿ ಎಂದರು. ಇಡೀ ಸಭೆ ಕರತಾಡನದಿಂದ ಕಿವಿಗಡಚಿಕ್ಕಿತ್ತು.

ಭಾರತ ಸರ್ಕಾರ ಅವರಿಗೆ ಭಾರತರತ್ನದಂತಹ ಅತ್ಯುಚ್ಛ ಪ್ರಶಸ್ತಿ ನೀಡಿ ಗೌರವಿಸಿದೆ. ಆದರೆ ಅವರ ದಿವ್ಯಾತ್ಮಕ್ಕೆ ನಿಜವಾದ ಶಾಂತಿ, ಗೌರವ ಲಭಿಸಬೇಕಾದರೆ ಅವರು ಹಾಕಿಕೊಟ್ಟ ಮೇಲ್ಪಂಕ್ತಿಯಲ್ಲಿ ನಮ್ಮ ಯುವಶಕ್ತಿ ಮುನ್ನಡೆಯಬೇಕಿದೆ. ಸಿಎಜಿ ವರದಿ ಇತ್ತೀಚಿಗೆ ಹೇಳಿದಂತೆ ಯುದ್ಧ ನಡೆದರೆ ಹತ್ತು ದಿನಗಳಿಗಾಗುವಷ್ಟು ಶಸ್ತ್ರಾಸ್ತ್ರಗಳು ಮಾತ್ರ ನಮ್ಮಲ್ಲಿವೆ ಎಂಬಂತೆ ನಮ್ಮಲ್ಲಿ ಕಲಾಂ ಕನಸು ನನಸಾಗಬೇಕಾದರೆ ನಮ್ಮ ರಕ್ಷಣೆಗೆ ನಾವೇ ದೇಸೀ ಉತ್ಪಾದನೆಗೆ ತೊಡಗಬೇಕು. ಏಕೆಂದರೆ ಇತಿಹಾಸದಲ್ಲಿ ಹೇಳಿದಂತೆ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಲೆಂದು ತಮ್ಮ ಅರಮನೆಯ ನೆಲ ಮಾಳಿಗೆಯಲ್ಲಿ ಶಸ್ತ್ರಾಸ್ತ್ರಗಳನ್ನು ದೇಸೀ ಮಾದರಿಯಲ್ಲಿ ಸಿದ್ಧಪಡಿಸಿಟ್ಟುಕೊಂಡಿದ್ದಳಂತೆ. ನಾವೂ ಕೂಡಾ ಇದೇ ಮಾದರಿಯನ್ನು ಅನುಸರಿಸಬೇಕು. ಕಲಾಂಜೀ ಕನಸನ್ನು ನನಸುಗೊಳಿಸುವ ಮೂಲಕ ಅವರಿಗೆ ನಿಜವಾದ ಗೌರವ ಸಲ್ಲಿಸಬೇಕು. ಇಲ್ಲದಿದ್ದರೆ ಪ್ರತೀ ವರ್ಷ ಅಕ್ಟೋಬರ್ 2ರಂದು ಗಾಂಧೀಜಿ ಫೋಟೋ ಇಟ್ಟು ಗಾಂಧಿ ಜಯಂತಿಯ ಸಭಾ ಕಾರ್ಯಕ್ರಮ ನಡೆಸಿದಂತಾಗುತ್ತದೆ.

ಕೊನೆಯದಾಗಿ, ಕಲಾಂ ಮೇಷ್ಟ್ರೇ ನಿಮಗೊಂದು ಸಲಾಂ. ನಿಮ್ಮ ಬಗ್ಗೆ ಬರೆಯುವಷ್ಟು ಶಕ್ತಿ ನನ್ನ ಕಲಮ್‌ಗಿಲ್ಲ. ಎಷ್ಟೇ ಕಾಲಂ ಬರೆದರೂ ಪುಟ ಸಾಲದು. ನಿಮ್ಮ ಅಭಿವೃದ್ಧಿಯ ಕಲ್‌ಮಾ ನಮಗೆ ವೇದವಾಗಲಿ, ನಿಮ್ಮ ಬೋಧೆ ಉಪನಿಷತ್ ವಾಕ್ಯಗಳಾಗಲಿ. ಭಾರತಮಾತೆಯ ಮುಖದಲ್ಲಿ ನಿಮ್ಮಲ್ಲಿನ ಕಿರುನಗೆ ಸದಾ ಮಾಸದೇ ಮಿನುಗುತ್ತಿರಲಿ ಎಂದು ಪ್ರಾರ್ಥಿಸುತ್ತಾ ನಿಮ್ಮ ದಿವ್ಯಾತ್ಮಕ್ಕೆ ಭಗವಂತ ಚಿರಶಾಂತಿ ನೀಡಲೆಂದು ಕಾಯಾ ವಾಚಾ ಮನಸಾ ಹಾರೈಸುತ್ತೇನೆ. ನಮಸ್ಕಾರ…

 

-ಕೆ.ಎನ್. ಶಿವಪ್ರಸಾದ್ ಕೆಳದಿ

Tags: 11th President of IndiaA. P. J. Abdul KalamAbdul Kalamಎಪಿಜೆ ಅಬ್ದುಲ್ ಕಲಾಂ
Share196Tweet123Send
Previous Post

ಬಾನ್ಕುಳಿ ಬದಲಾಗಿ ಬೆಂಗಳೂರಿನಲ್ಲಿ ರಾಘವೇಶ್ವರ ಶ್ರೀಗಳ ಚಾರ್ತುಮಾಸ್ಯ

Next Post

Highlights: 27.07.2018

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Highlights: 27.07.2018

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

March 2, 2026
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

March 2, 2026
ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ | ಸಂಸದ ರಾಘವೇಂದ್ರರವರಿಗೆ ಅಭಿನಂದನೆ

ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ | ಸಂಸದ ರಾಘವೇಂದ್ರರವರಿಗೆ ಅಭಿನಂದನೆ

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
ಬಣ್ಣದ ಲೋಕದ ಕನಸುಗಾರ | ಕಲೆಗಾಗಿ ಮಿಡಿಯುವ ‘ಜೋಕಾಲಿ’ಯ ರಾಜಹಂಸ ಗೌರಿಶಂಕರ್!

ಬಣ್ಣದ ಲೋಕದ ಕನಸುಗಾರ | ಕಲೆಗಾಗಿ ಮಿಡಿಯುವ ‘ಜೋಕಾಲಿ’ಯ ರಾಜಹಂಸ ಗೌರಿಶಂಕರ್!

March 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL