No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಇಂದಿನ ಸುದ್ಧಿ | ಬಂದೂಕು ಒಪ್ಪಿಸಲು ಸೂಚನೆ ಹಿನ್ನೆಲೆ: ಪರವಾನಿಗೆದಾರ ರೈತರ ಖಂಡನೆ

ಮಾ.25ರಂದು ರಾಗಿಗುಡ್ಡ ಉಳಿಸಿ ಅಭಿಯಾನ | ಅತಿಥಿ ಉಪನ್ಯಾಸಕರಿಗೆ 7ನೇ ವೇತನ ಆಯೋಗ ಜಾರಿಗೆ ಆಗ್ರಹ | ನಂದಿತಾ ಅಸಹಜ ಸಾವಿನ ಕುರಿತು ಸಿಬಿಐ ತನಿಖೆಗೆ ಎನ್‌ಎಸ್‌ಯುಐ ಒತ್ತಾಯ |

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 24, 2023
in ಶಿವಮೊಗ್ಗ
0
ಶಿವಮೊಗ್ಗದ ಇಂದಿನ ಸುದ್ಧಿ | ಬಂದೂಕು ಒಪ್ಪಿಸಲು ಸೂಚನೆ ಹಿನ್ನೆಲೆ: ಪರವಾನಿಗೆದಾರ ರೈತರ ಖಂಡನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ ಎಂದು ಪೊಲೀಸ್ ಇಲಾಖೆಯವರು ಬಂದೂಕುಗಳನ್ನು ಠಾಣೆಯಲ್ಲಿ ಇಡಬೇಕೆಂದು ಪರವಾನಗಿದಾರರಿಗೆ ಸೂಚಿಸುತ್ತಿರುವುದು ಸರಿಯಾದ ಕ್ರಮವಲ್ಲವೆಂದು  ಜಿಲ್ಲಾ ಮಲೆನಾಡು ಭಾಗದ ಬಂದೂಕು ಪರವಾನಿಗೆದಾರ ರೈತರು ಹೇಳಿದ್ದಾರೆ.

ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಕೋಡ್ಲು ವೆಂಕಟೇಶ್, ಮಲೆನಾಡಿನ ಬಹುತೇಕ ಊರುಗಳು, ವಾಸದ ಮನೆಗಳು ಅದರಲ್ಲೂ ರೈತರ ಮನೆಗಳು ಚದರಿದಂತೆ ಇದ್ದು ಒಂಟಿ ಮನೆಗಳು ಹೆಚ್ಚು, ಆಹಾರ ಧಾನ್ಯಗಳು, ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ಬೆಳೆಗಳ ಕೊಯ್ದು ಮುಗಿದು ಹೆಚ್ಚಿನ ಬೆಲೆಗಾಗಿ ಮನೆಯಲ್ಲಿ ದಾಸ್ತಾನು ಇರುತ್ತದೆ. ಕಳ್ಳತನ, ದರೋಡೆ ಭಯದಿಂದಲೇ ಬದುಕು ಸಾಗಿಸುತ್ತೇವೆ. ಕೃಷಿ ಭೂಮಿಯಲ್ಲಿ ನಿರಂತರ ಪ್ರಾಣಿಗಳ ಕಾಟದಿಂದ ಹಗಲು ರಾತ್ರಿ ಎನ್ನದೆ ಕಾವಲು ಮಾಡುವುದು ನಿರಂತರ ಕಾಯಕ. ಹೀಗಿರುವಾಗ ನಮ್ಮ ಜೀವ, ಆಸ್ತಿ, ಬೆಳೆ ರಕ್ಷಣೆಗೆ ಅನಿವಾರ್ಯ ಆಸರೆಯಾಗಿರುವ ಬಂದೂಕುಗಳನ್ನು ಚುನಾವಣೆ ನೆಪದಲ್ಲಿ ಪೊಲೀಸರಿಗೆ ಒಪ್ಪಿಸಿ ಎಂದು ಆದೇಶಿಸುವುದು ನಮ್ಮ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳುವ ಜನವಿರೋಧಿ ನೀತಿ ಆಗುತ್ತದೆ ಎಂದಿದ್ದಾರೆ.

ರೈತರು ಚಳವಳಿ ಮಾಡುವಾಗ ಲಾಠಿ ಚಾರ್ಜ್, ಗೋಲಿಬಾರುಗಳು ಆದಾಗಲೂ ರೈತರು ಹಿಂಸಾತ್ಮಕವಾಗಿ ವರ್ತಿಸಿರುವುದಿಲ್ಲ. ಇಂತಹ ಸಂಯಮ ಹೊಂದಿದ ಸಮುದಾಯದ ಬಗ್ಗೆ ಪೂರ್ಣ ಮಾಹಿತಿ ಹೊಂದಿರುವ ಚುನಾವಣಾ ಆಯೋಗದ ನಡೆಯನ್ನು ನಾವು ಖಂಡಿಸುತ್ತೇವೆ. ನಮ್ಮ ಹಕ್ಕುಗಳಿಗೆ ಚ್ಯುತಿ ತರುತ್ತಿರುವ ಚುನಾವಣಾ ಆಯೋಗದ ಇಂತಹ ನಿರ್ಧಾರಗಳ ವಿರುದ್ಧ ಬರುವ ಚುನಾವಣೆಯಲ್ಲಿ ಜನತಂತ್ರದ ಅತ್ಯಂತ ಮಹತ್ವದ ಮತ ಚಲಾವಣೆಯನ್ನು ಬಹಿಷ್ಕರಿಸುವಂತಹ ಕಠಿಣ ತೀರ್ಮಾನಗಳಿಗೆ ಮುಂದಾಗುತ್ತೇವೆ. ಮತದಾರರ ಇಂತಹ ನಕಾರಾತ್ಮಕ ತೀರ್ಪುಗಳಿಗೆ ಚುನಾವಣಾ ಆಯೋಗವೇ ಹೊಣೆಗಾರ ಎಂದು ವಿವರಿಸಿದರು.

ಮುಖ್ಯವಾಗಿ, ಸ್ಥಳೀಯ ಪರಿಸ್ಥಿತಿಗಳನ್ನು ಅವಲೋಕಿಸಿ ಈ ಸಂಬಂಧ ತೀರ್ಮಾನ ಕೈಗೊಳ್ಳಲು ಆಯಾ ಜಿಲ್ಲಾ, ಸಬ್ ಡಿವಿಸನ್ ಮತ್ತು ತಾಲ್ಲೂಕಿನ ಕಾರ್ಯನಿರ್ವಾಹಕ ದಂಡಾಧಿಕಾರಿಗಳ ವಿವೇಚನ ಅಧಿಕಾರಕ್ಕೆ ವಹಿಸುವುದು ಅಗತ್ಯ ಎಂದರು.

ವಕೀಲ ನಾಗೇಶ್ ಮಾತನಾಡಿ, ಚುನಾವಣೆಯಲ್ಲಿ ನಡೆಯುವ ಗಲಭೆಗಳಿಗೂ ರೈತರು ಬಂದೂಕು ಹೊಂದುವುದಕ್ಕೂ ಸಂಬಂಧವಿಲ್ಲ. ಗಲಭೆಕೋರನ್ನು, ಕ್ರಿಮಿನಲ್ ಗಳನ್ನು ಹದ್ದುಬಸ್ತಿನಲ್ಲಿಡಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವ ಅಂಗವಾಗಿ ರಾಜಕೀಯ ನಾಯಕರುಗಳಿಗೆ, ಅಭ್ಯರ್ಥಿಗಳಿಗೆ ಹೆಚ್ಚು ರೋಡ್ ಶೋಗಳನ್ನು-ರಾಲಿಗಳನ್ನು ನಡೆಸದಂತೆ ತಡೆಯುವುದು, ಹಣ-ಹೆಂಡದ ವ್ಯವಹಾರಗಳನ್ನು ತಡೆಯುವುದು ಚುನಾವಣಾ ಆಯೋಗದ ಪ್ರಾಶಸ್ತ್ಯದ ಕರ್ತವ್ಯ ಆಗಬೇಕು. ಚುನಾವಣಾ ವೇಳಾಪಟ್ಟಿ ಕಡಿಮೆ ಅವಧಿಯಲ್ಲಿ ಮುಗಿಯುವಂತಿರಬೇಕು. ಇಂತಹ ಹತ್ತು ಹಲವು ಮಹತ್ವದ ವಿಷಯಗಳನ್ನು ಬದಿಗೊತ್ತಿ ರೈತರಿಗೆ ಕಿರುಕುಳ ಕೊಡುವ ಚುನಾವಣಾ ಆಯೋಗದ ಕ್ರಮವನ್ನು ನಾವು ಖಂಡಿಸುತ್ತೇವೆ.

ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರಾದ ಹೊರಬೈಲು ರಾಮಕೃಷ್ಣ್ಣ, ಪಿ ಎಸ್ ರಾಜೇಂದ್ರ ಹಾಜರಿದ್ದರು.
ಮಾ.25ರಂದು ರಾಗಿಗುಡ್ಡ ಉಳಿಸಿ ಅಭಿಯಾನ
ನಗರದ ಏಕೈಕ ದಟ್ಟ ಹಸಿರಿನ ತಾಣವಾದ ರಾಗಿಗುಡ್ಡ ಉಳಿಸಲು ಆಗ್ರಹಿಸಿ ಮಾ.25ರಂದು ಬೆಳಿಗ್ಗೆ 9-30ಕ್ಕೆ ರಾಗಿಗುಡ್ಡದ ಉತ್ತರ ಭಾಗದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಕಾಲ್ನಡಿಗೆ ಹಾಗೂ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ರಾಗಿಗುಡ್ಡ ಉಳಿಸಿ ಅಭಿಯಾನದ ಸಂಚಾಲಕ ಕೆ.ವಿ. ವಸಂತಕುಮಾರ್ ಹೇಳಿದರು.

ಅವರು ಇಂದು ನವ್ಯಶ್ರೀ ಸಭಾಂಗಣದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗ ನಗರಕ್ಕೆ ರಾಗಿಗುಡ್ಡ ಒಂದು ಕಳಸಪ್ರಾಯದಂತೆ ಇದೆ. ನೀರಿನ ಸೆಲೆಯಾಗಿದೆ. ಹಸಿರಿನ ತಾಣವಾಗಿದೆ. ಧಾರ್ಮಿಕ ಪವಿತ್ರ ಕ್ಷೇತ್ರವೂ ಆಗಿದೆ. ಆದರೆ ಈಗ ಅದರ ನಾಶ ಆರಂಭವಾಗಿದೆ. ಶಿವಮೊಗ್ಗದ ಪರಿಸರಕ್ಕೆ ರಾಗಿಗುಡ್ಡ ನಾಶ ಘೋರ ಶಾಶ್ವತ ಅನ್ಯಾಯ ಮಾಡುತ್ತಿದೆ. ಇದನ್ನು ಉಳಿಸಲು ಪರಿಸರಾಸಕ್ತರು ಒಂದು ಅಭಿಯಾನವನ್ನೇ ಆರಂಭ ಮಾಡಿದ್ದೇವೆ. ಅಭಿಯಾನದ ಮುಂದುವರಿದ ಭಾಗವಾಗಿ ಈ ಜಾಥಾ ಹಮ್ಮಿಕೊಂಡಿದ್ದೇವೆ ಎಂದರು.

ರಾಗಿಗುಡ್ಡ 108 ಎಕರೆ ವಿಸ್ತೀರ್ಣ ಪ್ರದೇಶವಾಗಿದೆ. ಆದರೆ ಈಗಾಗಲೇ ವಿವಿಧ ಯೋಜನೆಗಳಿಗಾಗಿ ಸುಮಾರು 74 ಎಕರೆ ಜಾಗವನ್ನು ಪರಭಾರೆ ಮಾಡಲಾಗಿದೆ. ಇದರಲ್ಲಿ 5 ಎಕರೆ ಇಎಸ್‍ಐ ಆಸ್ಪತ್ರೆಗೆ ಬಳಸಿಕೊಂಡಿದ್ದು, 50 ಅಡಿಯವರೆಗೆ ಗುಡ್ಡ ಕಡಿಯಲಾಗಿದೆ. ಲಕ್ಷಾಂತರ ರೂ. ಮೌಲ್ಯದ ಫಲವತ್ತಾದ ಮಣ್ಣು, ಕಲ್ಲು ಲೂಟಿಯಾಗಿದೆ. ಉಳಿದ 69 ಎಕರೆ ಗುಡ್ಡವೂ ಸಹ ನೆಲಸಮವಾಗಲಿದೆ. ಒಟ್ಟಾರೆ ಇಡೀ ರಾಗಿಗುಡ್ಡವೇ ನಾಶವಾಗಲಿದೆ. ಹಾಗಾಗಿ ಈಗಲೇ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದರು.

ವಿವಿಧ ಯೋಜನೆಗಳಿಗೆ ನೀಡಿರುವ ಜಾಗದ ಮಂಜೂರಾತಿ ಪತ್ರ ಕೂಡಲೇ ರದ್ದುಮಾಡಬೇಕು. ರಾಗಿಗುಡ್ಡ ಪ್ರದೇಶವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಿ ಸಂರಕ್ಷಿತ ಅರಣ್ಯವಾಗಿ ಘೋಷಿಸಬೇಕು. ರಾಗಿಗುಡ್ಡವನ್ನು ಗುಡ್ಡದ ಕಾಡಾಗಿಯೇ ಉಳಿಸಬೇಕು ಎಂಬುದು ನಮ್ಮ ಆಗ್ರಹ ಎಂದರು.

ಈ ಬೃಹತ್ ಜಾಥಾಕ್ಕೆ ಈಗಾಗಲೇ ಸುಮಾರು 10ಸಾವಿರಕ್ಕೂ ಹೆಚ್ಚು ಪರಿಸರಾಸಕ್ತರು ಸಹಿ ಮಾಡಿದ್ದಾರೆ. ಶಿವಮೊಗ್ಗದ ಹಲವಾರು ಸಂಘ ಸಂಸ್ಥೆಗಳು ಯೋಗಕೇಂದ್ರಗಳು, ಜಿಲ್ಲಾ ಮತ್ತು ವಾಣಿಜ್ಯ ಕೈಗಾರಿಕಾ ಸಂಘ ಮುಂತಾದ ಹಲವು ಸಂಸ್ಥೆಗಳು ಬೆಂಬಲ ನೀಡಿವೆ. ಸುಮಾರು 10ಸಾವಿರ ಜನರು ಇದನ್ನು ವಿರೋಧಿಸಿ ಸಹಿ ಹಾಕಿದ್ದಾರೆ. ಸಂಘಸಂಸ್ಥೆಗಳು ಬೆಂಬಲ ನೀಡಿರುವ ಮನವಿ ಪತ್ರವನ್ನು ಜಾಥಾದ ನಂತರ ಜಿಲ್ಲಾಧಿಕಾರಿಗಳಿಗೆ ಸಲ್ಲಿಸುತ್ತೇವೆ ಎಂದರು.

ಜಾಥಾಕ್ಕೆ ಬರುವವರಿಗೆ ಸೂಚನೆ:  ಜಾಥಾಕ್ಕೆ ಬರುವವರಿಗೆ ಅನುಕೂಲವಾಗುವಂತೆ ನೆಹರೂ ಸ್ಟೇಡಿಯಂನಿಂದ ಬೆಳಿಗ್ಗೆ 9ಗಂಟೆಗೆ ವಾಹನ ವ್ಯವಸ್ಥೆ ಮಾಡಲಾಗಿದೆ. ಒಂದುಪಕ್ಷ ರಾಗಿಗುಡ್ಡದಲ್ಲಿಯೇ ತಮ್ಮ ವಾಹನ ನಿಲ್ಲಿಸಿ ಜಾಥಾದಲ್ಲಿ ಭಾಗವಹಿಸುವವರಿಗೆ ಜಾಥಾದ ನಂತರ ವಾಪಾಸು ಹೋಗಲು ಸಹ ವಾಹನ ವ್ಯವಸ್ಥೆ ಕಲ್ಪಿಸಲಾಗಿದೆ. ಜಾಥಾವು ಸುಮಾರು 4.5ಕಿಮೀ. ಉದ್ದದ ನಡಿಗೆಯಾಗಿದೆ. ಬಿಸಿಲೂ ಇರುತ್ತದೆ ಹಾಗಾಗಿ ತಲೆಗೆ ಕ್ಯಾಪ್ ಮತ್ತು ವಾಕಿಂಗ್ ಶೂ ಧರಿಸಬೇಕು. ಸೈಕಲ್‍ನಲ್ಲಿ ಕೂಡ ಭಾಗವಹಿಸಬಹುದು. ಅಕಸ್ಮಾತ್ ನಡೆಯಲು ಸಾಧ್ಯವಾಗದವರು ಬೆಳಿಗ್ಗೆ 10-30ಕ್ಕೆ ಉಷಾ ನರ್ಸಿಂಗ್ ಹೋಂ ಸರ್ಕಲ್‍ನಿಂದ ಜಾಥಾಕ್ಕೆ ಸೇರಿಕೊಳ್ಳಬಹುದಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಭಿಯಾನದ ಪ್ರಮುಖರಾದ ನಾಗೇಶ್ ನವ್ಯಶ್ರೀ, ಶ್ರೀಪತಿ, ಪರಿಸರ ನಾಗರಾಜ್, ಶೇಖರಗೌಳೇರ್, ಜೋಯ್ಸ್., ಚನ್ನವೀರ ಗಾಮನಕಟ್ಟೆ ಇದ್ದರು.
Kalahamsa Infotech private limitedಅತಿಥಿ ಉಪನ್ಯಾಸಕರಿಗೆ 7ನೇ ವೇತನ ಆಯೋಗ ಜಾರಿಗೆ ಆಗ್ರಹ
ಅತಿಥಿ ಉಪನ್ಯಾಸಕರಿಗೆ ಏಳನೇ ವೇತನ ಆಯೋಗದ ಶಿಫಾರಸನ್ನು ಜಾರಿಮಾಡಬೇಕು ಎಂದು ಆಗ್ರಹಿಸಿ ಅತಿಥಿ ಉಪನ್ಯಾಸಕರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 9461 ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ. ಕನಿಷ್ಠ ಗೌರವ ಧನಕ್ಕೆ ಯಾವ ರೀತಿಯ ಸೌಲಭ್ಯಗಳೂ ಇವರಿಗೆ ಇಲ್ಲ. ಹಲವು ವರ್ಷಗಳಿಂದ ಪ್ರತಿಭಟನೆ, ಹೋರಾಟ ಮಾಡುತ್ತಲೇ ಬಂದಿದ್ದಾರೆ. ಆದರೆ ಸರ್ಕಾರ ಸ್ಪಂದನೆ ನೀಡುತ್ತಿಲ್ಲ ಎಂದು ದೂರಿದರು.

ಸರ್ಕಾರ ಅತಿಥಿ ಉಪನ್ಯಾಸಕ ಎಂಬ ಆಧುನಿಕ ಜೀತ ಪದ್ಧತಿಯೊಳಗೆ ನಮ್ಮನ್ನು ಬಂಧಿಸಿದ್ದಾರೆ. ಗುಲಾಮಿ ಜೀತಪದ್ಧತಿ ಜೀವಂತವಾಗಿರುವದಕ್ಕೆ ನಾವೇ ಉದಾಹರಣೆಯಾಗಿದ್ದೇವೆ. ಇದು ಸಂವಿಧಾನ ವಿರೋಧಿಯೂ ಆಗಿದೆ. ಕಲ್ಯಾಣ ಸರ್ಕಾರದ ವಇರೋಧಿಯೂ ಆಗಿದೆ. ಕನಿಷ್ಠ ಮಾನವೀಯ ಸೌಲಭ್ಯಗಳೂ ಇಲ್ಲದೆ ಕರ್ತವ್ಯ ನಿರ್ವಹಿಸಬೇಕಾದ ದುಸ್ಥಿತಿ ನಮಗೆ ಬಂದಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಅತಿಥಿ ಉಪನ್ಯಾಸಕರ ಸೇವಾ ವಿಲೀನ ವಿಚಾರವನ್ನು ನಾಗರಿಕ ಸೇವಾ ನೇಮಕಾತಿ ನಿಯಮದಡಿ ಸಂಪುಟದಲ್ಲಿ ಮಂಡಿಸಿ ಸೂಕ್ತ ನಿರ್ಣಯ ತೆಗೆದುಕೊಳ್ಳಬೇಕು ಏಳನೇ ವೇತನ ಆಯೋಗದ ಶಿಫಾರಸನ್ನು ಅನುಷ್ಠಾನ ಮಾಡಬೇಕು. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಸಾರ ಕಾರ್ಯಭಾರ ಹೆಚ್ಚಿಸಬೇಕು. ಮೈಸೂರು ವಿವಿಯ ಕೆಸೆಟ್ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಅಲ್ಲಿಯವರೆಗೆ ನೂತನ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿಯಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಪ್ರತಿಭಟನೆಯಲ್ಲಿ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ ರಾಜ್ಯಾಧ್ಯಕ್ಷ ಡಾ ಸೋಮಶೇಖರ ಹೆಚ್.ಶಿವಮೊಗ್ಗಿ, ನಾಗರಾಜ್ ಮದ್ದೂರು, ಡಾ. ರವೀಂದ್ರ ಜೆ.ಸಿ., ಡಾ. ದಿವಾಕರ್, ಮಾನಸ ಮೈಸೂರು, ಹರ್ಷಿತ ಮಂಡ್ಯ, ವಿನಯ್ ಮೂಡಿಗೆರೆ, ರಾಘವೇಂದ್ರ, ಸೌಭಾಗ್ಯ ಸೇರಿದಂತೆ ಹಲವರಿದ್ದರು.
ನಂದಿತಾ ಅಸಹಜ ಸಾವಿನ ಕುರಿತು ಸಿಬಿಐ ತನಿಖೆಗೆ ಎನ್‌ಎಸ್‌ಯುಐ ಒತ್ತಾಯ
ತೀರ್ಥಹಳ್ಳಿಯ ಮುಗ್ಧ ಬಾಲಕಿಯ ನಂದಿತಾಳ ಅಸಹಜ ಸಾವಿನ ಕುರಿತು ಸಿಬಿಐ ತನಿಖೆಗೆ ಒತ್ತಾಯಿಸಿ ಇಂದು ಎನ್‍ಎಸ್‍ಯುಐ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

2013ರಲ್ಲಿ ತೀರ್ಥಹಳ್ಳಿಯಲ್ಲಿ ಹಿಂದೂ ಸಮಾಜಕ್ಕೆ ಸೇರಿದ ವಿದ್ಯಾರ್ಥಿನಿ ಕುಮಾರಿ ನಂದಿತಾ ಅಸಹಜ ಸಾವಿಗೀಡಾಗಿದ್ದಳು. ವಿದ್ಯಾರ್ಥಿನಿಯ ಅಸಹಜ ಸಾವಿನ ಕುರಿತು ಅಂದಿನ ಕಾಂಗ್ರೆಸ್ ನೇತೃತ್ವದ ರಾಜ್ಯಸರ್ಕಾರ ಸಿಒಡಿ ತನಿಖೆ ನಡೆಸಿತ್ತು. ಆದರೆ ಸಿಐಡಿ ವರದಿ ಬಗ್ಗೆ ಬಿಜೆಪಿ ನಾಯಕರು ಆಕ್ಷೇಪಣೆ ವ್ಯಕ್ತಪಡಿಸಿ, ಸಿಬಿಐ ತನಿಖೆಗೆ ಒತ್ತಾಯಿಸಿದ್ದರು.

ಅಂದಿನ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಇಂದಿನ ಕೇಂದ್ರ ಗೃಹ ಸಚಿವರಾಗಿರುವ ಅಮಿತ್ μÁರವರು 2018ರ ಕರ್ನಾಟಕ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕುಮಾರಿ ನಂದಿತಾಳ ಮನೆಗೆ ಭೇಟಿ ನೀಡಿ,ಸಿಬಿಐ ತನಿಖೆ ನಡೆಸಿ ಮುಗ್ಧ ಬಾಲಕಿಯ ಸಾವಿಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದರು.

ಆದರೆ ಈಗಿನ ಬಿಜೆಪಿ ನೇತೃತ್ವದ ಕರ್ನಾಟಕ ಸರ್ಕಾರ ಹಾಗೂ ತಮ್ಮದೇ ಕೇಂದ್ರ ಬಿಜೆಪಿ ಸರ್ಕಾರ ಮೇಲ್ಕಂಡ ಮುಗ್ಧ ಬಾಲಕಿಯ ಅಸಹಜ ಸಾವಿನ ಕುರಿತು ಸಿಬಿಐ ತನಿಖೆ ನಡೆಸದೆ ಮುಗ್ಧ ಬಾಲಕಿಯ ಸಾವಿಗೆ ನ್ಯಾಯ ದೊರಕಿಸಲು ನಿರ್ಲಕಲ್ಷ್ಯತನ ತೋರಿರುತ್ತಾರೆ ಎಂದು ಆರೋಪಿಸಿದರು.

ನಂದಿತಾ ಸಾವಿನ ಕುರಿತು ಸಿಬಿಐ ತನಿಖೆಗೆ ಆದೇಶಿ ಬಾಲಕಿಯ ಸಾವಿಗೆ ನ್ಯಾಯಕೊಡಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ

ಈ ಸಂದರ್ಭದಲ್ಲಿ ಪ್ರಮುಖರಾದ ರವಿ ಕಾಟಿಕೆರೆ, ಚರಣ, ಹರ್ಷಿತ್, ವಿಜಯಕುಮಾರ್ ಎಸ್.ಎನ್., ಕುಮಾರ್, ಚಂದ್ರೋಜಿರಾವ್ ಆಕಾಶ್ ಬಸವರಾಜ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share238Tweet123Send
Previous Post

ಮಾನಹಾನಿ ಪ್ರಕರಣದಲ್ಲಿ ಶಿಕ್ಷೆ ಹಿನ್ನೆಲೆ: ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ

Next Post

ಜಿಲ್ಲೆಯಲ್ಲಿ ಎಷ್ಟು ವಿದ್ಯಾರ್ಥಿಗಳು ಎಸ್’ಎಸ್’ಎಲ್’ಸಿ ಪರೀಕ್ಷೆ ಬರೆಯಲಿದ್ದಾರೆ? ಏನೆಲ್ಲಾ ಸಿದ್ದತೆಯಾಗಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜಿಲ್ಲೆಯಲ್ಲಿ ಎಷ್ಟು ವಿದ್ಯಾರ್ಥಿಗಳು ಎಸ್’ಎಸ್’ಎಲ್’ಸಿ ಪರೀಕ್ಷೆ ಬರೆಯಲಿದ್ದಾರೆ? ಏನೆಲ್ಲಾ ಸಿದ್ದತೆಯಾಗಿದೆ?

ಜಿಲ್ಲೆಯಲ್ಲಿ ಎಷ್ಟು ವಿದ್ಯಾರ್ಥಿಗಳು ಎಸ್'ಎಸ್'ಎಲ್'ಸಿ ಪರೀಕ್ಷೆ ಬರೆಯಲಿದ್ದಾರೆ? ಏನೆಲ್ಲಾ ಸಿದ್ದತೆಯಾಗಿದೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 25, 2026
ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

April 25, 2026
ಮಹಿಳಾ ಮೀಸಲಾತಿ ಮಸೂದೆ ಸೋಲಿಸಿದ್ದೇ ಬಿಜೆಪಿ: ಭವ್ಯನರಸಿಂಹಮೂರ್ತಿ ತಿರುಗೇಟು

ಮಹಿಳಾ ಮೀಸಲಾತಿ ಮಸೂದೆ ಸೋಲಿಸಿದ್ದೇ ಬಿಜೆಪಿ: ಭವ್ಯನರಸಿಂಹಮೂರ್ತಿ ತಿರುಗೇಟು

April 25, 2026
ಏ.27ರಂದು ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಸಾವಯವ ಕೃಷಿಕರ ಟ್ರಸ್ಟ್ ಉದ್ಘಾಟನೆ

ಏ.27ರಂದು ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಸಾವಯವ ಕೃಷಿಕರ ಟ್ರಸ್ಟ್ ಉದ್ಘಾಟನೆ

April 25, 2026
ಒಳಮೀಸಲಾತಿ ಪ್ರಕಟಣೆ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ: ಕೆ.ಎಸ್. ಈಶ್ವರಪ್ಪ ಗುಡುಗು

ಒಳಮೀಸಲಾತಿ ಪ್ರಕಟಣೆ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ: ಕೆ.ಎಸ್. ಈಶ್ವರಪ್ಪ ಗುಡುಗು

April 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL