ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಗೌರಿಬಿದನೂರು: ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ಸಮಿತಿಯ ಕರ್ನಾಟಕ ಉಪಾಧ್ಯಕ್ಷರಾಗಿ ಕೆ.ಎಚ್. ಪದ್ಮರಾಜ ಜೈನ್ ಅವರನ್ನು ಸಮಿತಿಯ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಜಿ. ಸಂಜೀವ ರೆಡ್ಡಿ ನೇಮಕ ಮಾಡಿದ್ದಾರೆ.
ತಾಲೂಕಿನ ಹೊಸೂರು ಹೋಬಳಿಯ ಕುದುರೆಬ್ಯಾಲ್ಯ ಗ್ರಾಮದ ನಿವಾಸಿಯಾದ ಇವರು ಈ ಹಿಂದೆ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ರಾಜ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಕಾಂಗ್ರೆಸ್ ಪಕ್ಷದಲ್ಲಿ ಕೆಪಿಸಿಸಿ ಸದಸ್ಯರಾಗಿದ್ದು ಹಾಗೂ ಮಹಾಮಸ್ತಕಾಭಿಷೇಕ ಸಮಿತಿಯ ಸದಸ್ಯರಾಗಿದ್ದಾರೆ.

ರಾಜ್ಯ ಚಾಲಕರ ಟ್ರೇಡ್ ಯೂನಿಯನ್ ಸಮಿತಿಯ ಗೌರವಾಧ್ಯಕ್ಷರಾಗಿರುವ ಇವರು ಇದೇ ಸಂದರ್ಭದಲ್ಲಿ ಚಾಲಕರ ಹಿತ ಕಾಪಾಡಲು ಅವರ ಕುಟುಂಬಗಳಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಉಚಿತವಾಗಿ ಆಂಬುಲೆನ್ಸ್ ಸೇವೆಯನ್ನು ಆರಂಭಿಸಿದ್ದಾರೆ.
(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)
Get in Touch With Us info@kalpa.news Whatsapp: 9481252093






Discussion about this post