No Result
View All Result
Deeksha Brahmavara | A Divine Synergy of Artistic Excellence and Intellectual Brilliance
English Articles

Deeksha Brahmavara | A Divine Synergy of Artistic Excellence and Intellectual Brilliance

by ಕಲ್ಪ ನ್ಯೂಸ್
February 10, 2026
0

Kalpa Media House  |  Special Article: Satish Shetty Cherkadi Doddamane  | The coastal soil of Karnataka is fertile with art, but...

Read moreDetails
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

A Second Chance at Life Through Deceased Organ Donation

February 3, 2026
  • Advertise With Us
  • Grievances
  • About Us
  • Contact Us
Tuesday, February 10, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

‘ಸಿರಿವಂತೆ’ಯ ಶ್ರೀಮಂತ ಬ್ರಹ್ಮ ರಥೋತ್ಸವಕ್ಕೆ ಸಕಲವೂ ಸಿದ್ಧ

ಮಾತುಗಾರಿಕೆ ಎಂಬ ವಿಶಿಷ್ಠ ಆಚರಣೆ! ಈ ಬಗ್ಗೆ ನೀವು ತಿಳಿಯಲೇಬೇಕು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 15, 2022
in Special Articles, ಸಾಗರ
0
‘ಸಿರಿವಂತೆ’ಯ ಶ್ರೀಮಂತ ಬ್ರಹ್ಮ ರಥೋತ್ಸವಕ್ಕೆ ಸಕಲವೂ ಸಿದ್ಧ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಿಂದ ನಾಲ್ಕು ಕಿಮೀ ದೂರದ ಹೆದ್ದಾರಿಯಲ್ಲಿರುವ ಒಂದು ಐತಿಹಾಸಿಕ ಸ್ಥಳ ಸಿರಿವಂತೆ. ಪೌರಾಣಿಕ ಹಾಗೂ ಸಾಂಸ್ಕೃತಿಕ ಪ್ರಸಿದ್ಧಿ ಹೊಂದಿ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ತ್ರಿಪುರಾಂತಕೇಶ್ವರ ಇಲ್ಲಿಯ ದೇವರು. ಹೆಸರಿಗೆ ತಕ್ಕಂತೆ ಪ್ರಾಕೃತಿಕ-ಸಾಂಸ್ಕೃತಿಕ-ಧಾರ್ಮಿಕ ಶ್ರೀಮಂತಿಕೆಯುಳ್ಳ ಶಕ್ತಿ ಸ್ಥಳವಿದು.

ಈ ದೇವಸ್ಥಾನವು ಸುಮಾರು ಹನ್ನೆರಡನೆಯ ಶತಮಾನದಲ್ಲಿ ಅಂದಿನ ಪಾಳೇಗಾರರಿಂದ ನಿರ್ಮಾಣವಾಗಿ 300 ವರ್ಷಗಳ ಕಾಲ ಭಕ್ತಾದಿಗಳ ಪಾಲಿಗೆ ಪುಣ್ಯನೆಲೆ ಅದಾಗಿತ್ತು. ನಂತರದ ದಿನಗಳಲ್ಲಿ ಕಾರಣಾಂತರಿಂದ ಅನಾಥ ಸ್ಥಿತಿಗೆ ತಲುಪಿದರೂ ಆ ನೆಲದ ದಿವ್ಯ ಶಕ್ತಿ ಜೀವಂತವಾಗಿದ್ದು ಅಂಕುರಗೊಳ್ಳಲು ಹವಣಿಸುತ್ತಿತ್ತು. ಸಮಯ ಸಂದರ್ಭಗಳು ಕೂಡಿ ಬಂದಾಗ ಮತ್ತೊಮ್ಮೆ ಆ ಗತಕಾಲದ ವೈಭವ ಮರುಕಳಿಸಿ ಸೀಮೆ ದೇವಸ್ಥಾನವಾಗಿ ಪ್ರಸಿದ್ಧಿಹೊಂದಿರುವುದು ಸ್ಥಳ ಮಹಿಮೆಗೆ ಸಾಕ್ಷಿಯಾಗಿ ನಿಲ್ಲುತ್ತದೆ. ವೈಶಾಖ ಶುದ್ಧ ಪೂರ್ಣಿಮೆ ಅಂದರೆ ಮೇ ೧೬ರ ನಾಳೆ ಬ್ರಹ್ಮರಥೋತ್ಸವ ಅತ್ಯಂತ ಸಂಭ್ರಮದಿಂದ ನಡೆಯುತ್ತದೆ.
ಪಾಂಚರಾತ್ರಾಗಮದ ರೀತಿಯಲ್ಲಿ ನಡೆಯುವ ಮೂರು ದಿವಸದ ಧಾರ್ಮಿಕ ಕಾರ್ಯಕ್ರಮಗಳು ಇಲ್ಲಿಯ ವಿಶೇಷ. ವಿಶಿಷ್ಠವಾಗಿ ನಿರ್ಮಿಸಿದ ಯಾಗಶಾಲೆಯಲ್ಲಿ ಕಂಕಣಧಾರರು ಮುಖ್ಯ ತಾಂತ್ರಿಕರೊಡಗೂಡಿ ಅಗ್ನಿ ಜನನ, ಬೀಜವಾಪನ, ಕೌತುಕಬಂಧನ, ಅಷ್ಟಾವಧಾನ ಸೇವೆ, ಭೇರಿತಾಡನ, ಶಿಬಿಕ ಯಂತ್ರೋತ್ಸವ ಹಾಗೂ ಮಹಾಬಲಿ ಕಾರ್ಯಕ್ರಮಗಳು ಇಡೀ ದೇಗುಲಕ್ಕೆ ಒಂದು ಧಾರ್ಮಿಕ ಹಾಗೂ ಸಾಂಸ್ಕೃತಿಕ ವಾತಾವರಣವನ್ನು ನಿರ್ಮಿಸುತ್ತದೆ.

Also Read: ರಥದ ಚಕ್ರದಡಿ ಸಿಲುಕಿ ಯುವಕ ಸಾವು

ಉತ್ಸವಗಳು ಧಾರ್ಮಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳಿಗೆ, ಸಂಘಟನೆಯ ಸಂವರ್ಧನೆಗೆ ಕಾರಣವಾಗುತ್ತವೆ ಎನ್ನುವುದಕ್ಕೆ ಈ ರಥೋತ್ಸವ ಒಂದು ನಿದರ್ಶನ. ಕಾಷ್ಠ ಶಿಲ್ಪಗಳಿಂದ ಕೂಡಿದ ಈ ರಥ, ಉತ್ಸವದ ಸಂದರ್ಭದಲ್ಲಿ ಪರಿಶಿಷ್ಠ ಜಾತಿ ಮತ್ತು ಒಕ್ಕಲಿಗರಿಂದ ವಿಶೇಷವಾಗಿ ಅಲಂಕಾರಗೊಳ್ಳುತ್ತದೆ.
ಉತ್ಸವ ಮೂರ್ತಿಯ ರಥಾರೋಹಣದ ನಂತರ ಅದರ ಒಂದೊಂದು ಗಾಲಿಗಳಿಗೆ ಅಲ್ಲಿಯ ಮಡಿವಾಳರು, ದೀವರು ತೆಂಗಿನಕಾಯನ್ನು ಕೊಟ್ಟು ಚಾಲನೆಗೆ ಅವಕಾಶ ಮಾಡಿಕೊಡುತ್ತಾರೆ. ಹೀಗೆ ಯಾವುದೇ ಒಂದು ಜಾತಿಗೆ ಸೀಮಿತಗೊಳ್ಳದೆ ಹತ್ತು ಹಲವು ಜಾತಿಗಳು ಸೇರಿ ಒಂದು ಸಮಗ್ರ ನೋಟದೊಂದಿಗೆ ಸಾಮಾಜಿಕ ನ್ಯಾಯಕ್ಕೆ ಕುಂದು ಬಾರದಂತೆ ತೇರನ್ನೆಳೆಯುವ ಸಂಭ್ರಮದಲ್ಲಿ ಎಲ್ಲಾ ಭಕ್ತರು ಒಟ್ಟಾಗಿ ಸೇರುತ್ತಾರೆ. ದೇವರಿಗೆ ನವಧಾನ್ಯವನ್ನು ಬೀರುತ್ತಾ ಭೂ ಸಂಪತ್ತು, ವ್ಯಾಪಾರ ವ್ಯವಹಾರ, ಕೌಟುಂಬಿಕ ನೆಮ್ಮದಿ ಮುಂತಾದವುಗಳನ್ನು ಈಡೇರಿಸಲು ಆ ಕರುಣಾಜನಕನನ್ನು ಭಕ್ತಿಯಿಂದ ಬೇಡಿಕೊಳ್ಳುತ್ತಾರೆ.
ಮಾತುಗಾರಿಕೆ
ರಥೋತ್ಸವದ ಮಾರನೆಯ ದಿನ ಕುಂಕುಮೋತ್ಸವ ನಡೆದು ಸಂಜೆ ಮಾತುಗಾರಿಕೆ ಎನ್ನುವ ಒಂದು ವಿಶಿಷ್ಟ ಸಾಂಸ್ಕೃತಿಕ ಕಾರ್ಯಕ್ರಮ ನೆಡೆಯುತ್ತದೆ. ಕಥನ-ಕವನ ರೂಪದಲ್ಲಿರುವ ಈ ಪ್ರಸಂಗ ಜಾನಪದ ಶೈಲಿಯಲ್ಲಿದ್ದು, ಪೌರಾಣಿಕ ಹಿನ್ನೆಲೆಯುಳ್ಳ ಒಂದು ಸುಂದರವಾದ ಕಥೆ ಬಿಚ್ಚಿಕೊಳ್ಳುತ್ತದೆ.

ಶಿವ ಪಾರ್ವತಿಯರು ಶಯನೋತ್ಸವದ ಸಂಭ್ರಮದಲ್ಲಿರುವ ಸಂದರ್ಭದಲ್ಲಿ ಮಂದರ ಪರ್ವತದಲ್ಲಿರುವ ಋಷಿಗಳು ಕೈಲಾಸಕ್ಕೆ ಬಂದು, ರಾಕ್ಷಸರ ಹಾವಳಿಯಿಂದ ತಮಗಾದ ಕಷ್ಟವನ್ನು ಹೋಗಲಾಡಿಸಲು ಶಿವನ ಮೊರೆ ಹೋಗುತ್ತಾರೆ, ಶಿವ ಪಾರ್ವತಿಗೆ ತಿಳಿಯದಂತೆ ಎದ್ದು ಹೋಗಿ ಲೋಕ ಕಲ್ಯಾಣಕ್ಕಾಗಿ ಋಷಿಗಳ ಸಂಕಷ್ಟವನ್ನು ಪರಿಹರಿಸಿದ ಭಕ್ತ ವತ್ಸಲನಾಗುತ್ತಾನೆ.
ಇತ್ತ ಪಾರ್ವತಿ ಎಚ್ಚೆತ್ತು ನೋಡಿದಾಗ ಶಿವ ಇಲ್ಲದಿರುವುದು ಅವಳ ಕೋಪಕ್ಕೆ ಕಾರಣವಾಗುತ್ತದೆ. ತನಗೆ ತಿಳಿಸದೆ ಹೋದ ಸಿಟ್ಟಿಗಾಗಿ ಬಾಗಿಲನ್ನು ಭದ್ರವಾಗಿ ಹಾಕಿ ಹುಸಿಮನಸ್ಸನ್ನು ತೋರಿಸುತ್ತಾ ಚಡಪಡಿಸುತ್ತಾಳೆ. ಶಿವ ತಿರುಗಿ ಬಂದು ಬಾಗಿಲು ಬಡಿಯುತ್ತಾ, ಎಷ್ಟೇ ಬೇಡಿಕೊಂಡರೂ ಬಾಗಿಲು ತೆರೆಯುವುದಿಲ್ಲ. ಆ ಸಂದರ್ಭದಲ್ಲಿ ಅವಳನ್ನು ಸಮಾಧಾನ ಪಡಿಸಲು ಶಿವ ಕೊಡುವ ಕಾರಣಗಳು, ಅದಕ್ಕೆ ಪ್ರತ್ಯುತ್ತರವಾಗಿ ಪಾರ್ವತಿಯ ಮಾತುಗಳು ವ್ಯಂಗ್ಯ ಹಾಗೂ ಹಾಸ್ಯದಿಂದೊಡಗೂಡಿ ಪ್ರೇಕ್ಷಕರಿಗೆ ರಂಜನೆಯನ್ನು ಒದಗಿಸುತ್ತದೆ. ಹೀಗೆ ಇವರಿಬ್ಬರ ಮಧ್ಯೆ ನಡೆಯುವ ಸ್ವಾರಸ್ಯಕರ ಸಂಭಾಷಣೆಯೇ ಈ ಮಾತುಗಾರಿಕೆ.
ಶಿವನ ಪರವಾಗಿ ಹಾಗೂ ಪಾರ್ವತಿಯ ಪರವಾಗಿ ಎರಡು ಗುಂಪು ಮಾಡಿಕೊಂಡು, ಹಾಡಿಗೆ ತಕ್ಕಂತೆ ಸಾಂದರ್ಭಿಕವಾಗಿ ಹೇಳುವ ಆಶು ಸಂಭಾಷಣೆ ಪಾತ್ರಧಾರಿಗಳ ನೈಪುಣ್ಯತೆಯನ್ನು ಎತ್ತಿ ತೋರಿಸುತ್ತದೆ. ಶಿವ ಪಾರ್ವತಿಯ ಪಾತ್ರಧಾರಿಗಳು ಆ ಪಾತ್ರಗಳಿಗೆ ಜೀವತುಂಬಿ, ಸನ್ನಿವೇಶ ಪ್ರಜ್ಞೆಯಿಂದ ಕಥೆಗೊಂದು ಕಳೆಕಟ್ಟಿ ಕಲಾಭಿಮಾನಿಗಳ ಕುತುಹೂಲವನ್ನು ಹೆಚ್ಚಿಸುತ್ತಾರೆ. ಇದು ಒಂದರ್ಥದಲ್ಲಿ ನಮ್ಮ ಯಕ್ಷಗಾನ ಹಾಗು ತಾಳಮದ್ದಳೆಯ ಪ್ರಸಂಗವನ್ನು ನೆನಪಿಸುತ್ತದೆ. ವೇಷ ಕಟ್ಟದಿದ್ದರೂ ಹಿಮ್ಮೇಳ-ಮುಮ್ಮೇಳಗಳನ್ನು ಹೊಂದಿ ಕಲಾಭಿಮಾನಿಗಳಿಗೆ ರಸದೌತಣವನ್ನು ನೀಡುವ ಒಂದು ಅಪೂರ್ವ ಕಾರ್ಯಕ್ರಮವಾಗಿ ಜನಮನದಲ್ಲಿ ಉಳಿದಿದೆ.

Also Read: ನಮ್ಮೆಲ್ಲಾ ದೇವಾಲಯಗಳನ್ನು ಕಾನೂನಾತ್ಮಕವಾಗಿಯೇ ಹಿಂಪಡೆಯುತ್ತೇವೆ: ಈಶ್ವರಪ್ಪ ವಿಶ್ವಾಸ

ರಥೋತ್ಸವದ ಮಾರನೆಯ ದಿವಸ ಅಂದರೆ ಕುಂಕುಮೋತ್ಸವದ ದಿನ ಹತ್ತಿರದಲ್ಲಿರುವ ನದಿಯಲ್ಲಿ ಉತ್ಸವ ಮೂರ್ತಿಯೊಂದಿಗೆ ಕಂಕಣಧಾರಿಗಳು ತಾಂತ್ರಿಕರು ಸ್ನಾನವನ್ನು ಮಾಡಿ ನಂತರ ದೇಗುಲಕ್ಕೆ ಬಂದು ಓಕುಳಿಯಾಡಿ ಅಷ್ಟಾಂಗ ಸೇವೆಯೊಂದಿಗೆ ಅಂದಿನ ಕಾರ್ಯಕ್ರಮಕ್ಕೆ ಮಂಗಳವನ್ನು ಹಾಡುತ್ತಾರೆ. ಅಂದೇ ಸಾಯಂಕಾಲ ಯಾವುದಾದರು ಒಂದು ಪೌರಾಣಿಕ ಯಕ್ಷಗಾನವನ್ನು ಹಮ್ಮಿಕೊಂಡು ಬೆಳಗಿನವರೆಗೂ ಅದು ನಡೆಯುತ್ತದೆ. ಕೊನೆಯ ದಿನ ಸಂಪ್ರೋಕ್ಷಣ್ಯದಲ್ಲಿ ಅಂಕುರಪ್ರಸಾದದ ವಿನಿಯೋಗದೊಂದಿಗೆ ರಥೋತ್ಸವ ನೆಲೆ ನಿಲ್ಲುತ್ತದೆ.

ಲೇಖನ: ನಾರಾಯಣ ಭಟ್ ಹುಳೇಗಾರು
(ಹವ್ಯಾಸಿ ಲೇಖಕರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: JogaKannada News WebsiteLatest News KannadaLocal NewsMalnad NewsRathotsavaSagaraSirivanteTripurantakeshwaraಉತ್ಸವಕುಂಕುಮೋತ್ಸವತ್ರಿಪುರಾಂತಕೇಶ್ವರರಥೋತ್ಸವಶಿವಮೊಗ್ಗಸಾಗರಸಿರಿವಂತೆ
Share197Tweet123Send
Previous Post

ರಥದ ಚಕ್ರದಡಿ ಸಿಲುಕಿ ಯುವಕ ಸಾವು

Next Post

ಗುಡ್ ನ್ಯೂಸ್: ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಯೋಜನೆ ಪುನರಾರಂಭ – ಸಿಎಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಗುಡ್ ನ್ಯೂಸ್: ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಯೋಜನೆ ಪುನರಾರಂಭ - ಸಿಎಂ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
ರೈಲ್ಒನ್ ಸೂಪರ್ ಆ್ಯಪ್ | ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ | ಏನೆಲ್ಲಾ ಅನುಕೂಲಗಳಿವೆ?

ರೈಲ್ಒನ್ ಸೂಪರ್ ಆ್ಯಪ್ | ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ | ಏನೆಲ್ಲಾ ಅನುಕೂಲಗಳಿವೆ?

February 10, 2026
ಚಂದ್ರಯಾನ-4 ಮಿಷನ್‌ ಲ್ಯಾಂಡಿಂಗ್ ಸ್ಥಳ ನಿಗದಿ: ಇಸ್ರೋ

ಚಂದ್ರಯಾನ-4 ಮಿಷನ್‌ ಲ್ಯಾಂಡಿಂಗ್ ಸ್ಥಳ ನಿಗದಿ: ಇಸ್ರೋ

February 10, 2026
ಹಾರನಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಲೋಕಾರ್ಪಣೆ

ಹಾರನಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಲೋಕಾರ್ಪಣೆ

February 10, 2026
ಕೊಳಚೆ ಪ್ರದೇಶ ನಿವಾಸಿಗಳ ಹಕ್ಕು ರಕ್ಷಣೆ | ಅಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ಸ್ಥಳ ಪರಿಶೀಲನೆ

ಕೊಳಚೆ ಪ್ರದೇಶ ನಿವಾಸಿಗಳ ಹಕ್ಕು ರಕ್ಷಣೆ | ಅಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ಸ್ಥಳ ಪರಿಶೀಲನೆ

February 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL