Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ತುಮಕೂರು

ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಡಾ: ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಸರು: ಸಿಎಂ ಬೊಮ್ಮಾಯಿ

April 1, 2022
in ತುಮಕೂರು
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ತುಮಕೂರು  |

ಶಿವಕುಮಾರ ಸ್ವಾಮೀಜಿಗಳ ಜಯಂತಿಯನ್ನು Shivakumara swamy Jayanthi ದಾಸೋಹ ದಿನ ಎಂದು ಈಗಾಗಲೇ ಸರ್ಕಾರ ಆಚರಿಸುತ್ತಿದೆ. ಮಧ್ಯಾಹ್ನದ ಬಿಸಿ ಊಟದ ಯೋಜನೆಗೆ ಡಾ: ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಸರನ್ನಿಡಲು ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.

ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಆಯೋಜಿಸಿದ್ದ ಡಾ: ಶ್ರೀ ಶಿವಕುಮಾರ *ಮಹಾಶಿವಯೋಗಿಗಳ 115ನೇ ಜಯಂತೋತ್ಸವ ಹಾಗೂ “ ಗುರುವಂದನಾ ಮಹೋತ್ಸವದಲ್ಲಿ ಕೇಂದ್ರದ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ Amith Shah ಅವರೊಂದಿಗೆ ಪಾಲ್ಗೊಂಡು ಮಾತನಾಡಿದರು.

ಆಡಳಿತಗಾರರು ಶ್ರೀ ಮಠವನ್ನು ಶ್ರದ್ಧಾ ಭಕ್ತಿಯಿಂದ ಕಂಡಿದ್ದಾರೆ. ನಮ್ಮ ಸರ್ಕಾರವೂ ಅತ್ಯಂತ ಶ್ರದ್ಧೆಯಿಂದ ಕಾಣುತ್ತಿದೆ. ಭಕ್ತಿಯಿಂದ ಬಸವಣ್ಣನವರ ದಾಸೋಹ, ಶಿಕ್ಷಣ, ಆರೋಗ್ಯ ತತ್ವಗಳಿಗೆ ನಮ್ಮ ಸರ್ಕಾರ ಮಹತ್ವ ನೀಡಿದೆ. ಸರ್ವೋದಯ ಕಾರ್ಯಕ್ರಮಕ್ಕೆ 60 ಸಾವಿರ ಕೋಟಿ ರೂ.ಗಳಿಗಿಂತ ಹೆಚ್ಚು ಅನುದಾನವನ್ನು ಈ ವರ್ಷದ ಬಜೆಟ್ ನಲ್ಲಿ ಮೀಸಲಿರಿಸಿದೆ. ಜನಕಲ್ಯಾಣಕ್ಕಾಗಿ ಹಾಗೂ ಜನರ ಪರವಾಗಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ನಿಮ್ಮ ವಿಶ್ವಾಸ ಗಳಿಸುವ ರೀತಿಯಲ್ಲಿ ಕೆಲಸ ಮಾಡುತ್ತದೆ . ಬಡವರು ದೀನದಲಿತರು, ಹೆಣ್ಣು ಮಕ್ಕಳಿಗೆ ಕಾರ್ಯಕ್ರಮಗಳ ಅನುಷ್ಠಾನ ಮಾಡಿ ನಿಮ್ಮ ಪ್ರೀತಿ ವಿಶ್ವಾಸವನ್ನು ಗಳಿಸಿ ನಿಮ್ಮ ಮುಂದೆ ಬರುತ್ತೇವೆ ಎಂದರು.

ಕೇಂದ್ರ ಸಚಿವರ ಆಗಮನ ನಮ್ಮಲ್ಲಿ ಸಂಚಲನ ಮೂಡಿಸಿದೆ. ಜನರು ಅವರ ಮೇಲೆ ಪ್ರೀತಿ ಇರಿಸಿದ್ದಾರೆ ಎಂದರು.

ಶಿವಕುಮಾರ ಸ್ವಾಮೀಜಿಗಳ ಸ್ಪೂರ್ತಿ:
ಈ ನೆಲದಲ್ಲಿ ಅವರ ಸ್ಫೂರ್ತಿ, ಪ್ರೇರಣೆ ಇದೆ. ಇಲ್ಲಿ ಬಂದರೆ ಮನಸ್ಸಿಗೆ ಶಾಂತಿ, ಬದುಕಿಗೆ ದಾರಿ ಸಿಗುವ ಶಕ್ತಿ ಸಿದ್ದಗಂಗಾ ಕ್ಷೇತ್ರದಲ್ಲಿ ಇದೆ. ಅದೇ ದಾರಿಯಲ್ಲಿ ಸಿದ್ದಲಿಂಗಸ್ವಾಮಿಗಳು ಶಿವಕುಮಾರ ಸ್ವಾಮಿಗಳ ಪರಂಪರೆಯನ್ನು ಅತ್ಯಂತ ಪ್ರಾಮಾಣಿಕವಾಗಿ ದಕ್ಷತೆಯಿಂದ ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಯೋಗ್ಯವಾಗಿ ಮುನ್ನಡೆಸುತ್ತಿದ್ದಾರೆ ಎಂದರು.

ಅನನ್ಯ ಸೇವೆಯ ದಾಖಲೆ:
ಶಿವಕುಮಾರ ಸ್ವಾಮೀಜಿ ಅವರು ಸುಮಾರು 88 ವರ್ಷಗಳ ಕಾಲ ಈ ನಾಡಿನ ಸೇವೆಯನ್ನು ಮಠದ ಮುಖಾಂತರ ಮಾಡಿರುವುದು ಒಂದು ದಾಖಲೆ. ಯಾವುದೇ ಪರಪೂಜ್ಯರು ಇಷ್ಟು ದೀರ್ಘಕಾಲದ ಸೇವೆಯನ್ನು ಇಡೀ ಭಾರತ ದೇಶದಲ್ಲಿ ಮಾಡಿಲ್ಲ ಎನ್ನುವುದು ನಮ್ಮೆಲ್ಲರಿಗೂ ಅಭಿಮಾನದ ಸಂಗತಿ. ಅದಕ್ಕಾಗಿಯೇ ಅವರಿಗೆ ನಡೆದಾಡುವ ದೇವರು ಎಂಬ ಬಿರುದು ಬಂದಿದೆ. ಅವರು ಹಚ್ಚಿದ ಒಲೆಯ ಕಿಚ್ಚು ಸುಮಾರು 100 ವರ್ಷಕ್ಕಿಂತ ಹೆಚ್ಚಿನದಾಗಿದ್ದು, ಇಂದಿಗೂ ಉರಿಯುತ್ತಿದೆ. ಎಲ್ಲಿಯವರೆಗೆ ಈ ಅಡಿಗೆ ಒಲೆಯ ಕಿಚ್ಚು ಉರಿಯುತ್ತಿರುತ್ತದೆ, ಅಲ್ಲಿಯವರೆಗೆ ಬಡ ಮಕ್ಕಳ ಹೊಟ್ಟೆ ತಣ್ಣಗಾಗುತ್ತದೆ ಎಂದರು. ನಾವೆಲ್ಲರೂ ಕೋಟಿ ಕೋಟಿ ಗುರುವಂದನೆಗಳನ್ನು ಸದಾ ಸಲ್ಲಿಸಬೇಕು. ಅನ್ನ, ಅಕ್ಷರ, ಆಶ್ರಯಗಳನ್ನು ಅಕ್ಷರಶಃ ಪಾಲಿಸಿದ ದೇವರು ಶಿವಕುಮಾರ ಸ್ವಾಮೀಜಿ ಅವರು. ಅವರು ನಮ್ಮ ನಡುವೆ ಜೀವಂತವಾಗಿದ್ದು, ಪ್ರೇರಣೆ, ಆಶೀರ್ವಾದ ನೀಡುತ್ತಿದ್ದಾರೆ.

Also read: ಸುಶಾಸನ್ ಯಾತ್ರಾ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ

ಸರ್ವೋದಯ ಮತ್ತು ಅಂತ್ಯೋದಯ ಪರಿಕಲ್ಪನೆ:
ಸಾಧಕನಿಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಬದುಕುವವನು ನಿಜ ಸಾಧಕ ಎಂದು ಸ್ವಾಮಿ ವಿವೇಕಾನಂದರು ಹೇಳಿದಂತೆ ಅವರು ಬದುಕಿದ್ದಾರೆ. ಶಿವಕುಮಾರ ಸ್ವಾಮೀಜಿ ಅವರು ಬದುಕಿನ ದಾರಿಯನ್ನು ಕಟ್ಟಿಕೊಟ್ಟಿರುವ ಸ್ವಾಮೀಜಿಗಳು. ದೂರದ ಉತ್ತರ ಕರ್ನಾಟಕದ ಮಕ್ಕಳು, ಎಲ್ಲಾ ಸಮುದಾಯದ 10 ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಸಲಹುವುದು ಸುಲಭದ ಮಾತಲ್ಲ. ದೈವಶಕ್ತಿ ನಮ್ಮೆಲ್ಲದಿಗೂ ಮಾರ್ಗದರ್ಶನ ಮಾಡುತ್ತಿದೆ. ಅವರ ಶ್ರದ್ಧೆ, ನಿಷ್ಠೆ ಮತ್ತು ಪರಿಶ್ರಮ ಅವರ ಧ್ಯೇಯ. ಅದರ ಪರಿಪಾಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಶಿವಕುಮಾರ ಸ್ವಾಮೀಜಿ ಅವರಿಗೆ ಜಾತಿ ಕುಲ ಎಂದು ನೋಡದೆ, ಎಲ್ಲ ವರ್ಗದ ಜನರನ್ನು ಪ್ರೀತಿ ಮಾಡಿ ಬದುಕನ್ನು ಕಟ್ಟಿಕೊಟ್ಟಿದ್ದಾರೆ. ಸರ್ವೋದಯ ಮತ್ತು ಅಂತ್ಯೋದಯ ಪರಿಕಲ್ಪನೆ ಈ ಮಠದಲ್ಲಿ ನಿತ್ಯ ನಿರಂತರವಾಗಿ ನಡೆಯುತ್ತಿದೆ. ಅಂತ್ಯೋದಯ ಪರಿಕಲ್ಪನೆಯಲ್ಲಿ ಅತ್ಯಂತ ಕಟ್ಟ ಕಡೆಯ ಮನುಷ್ಯನಿಗೆ ಇಲ್ಲಿ ಸ್ಥಾನವಿದೆ. ಅವನು ತನ್ನ ಬದುಕು ಪ್ರಾರಂಭಿಸಲು ಎಲ್ಲ ರೀತಿಯ ವ್ಯವಸ್ಥೆ ಶ್ರೀ ಮಠದಲ್ಲಿದೆ ಎಂದು ಸಿಎಂ ಹೇಳಿದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amith ShahCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaShivakumara swamy JayanthiState NewsTumkurಅಮಿತ್ ಶಾತುಮಕೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಶಿವಕುಮಾರ ಸ್ವಾಮೀಜಿಗಳ ಜಯಂತಿ
Previous Post

ಸುಶಾಸನ್ ಯಾತ್ರಾ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ

Next Post

ಮುಂಬರುವ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡು ಸಾಗಬೇಕು: ರಾಹುಲ್ ಗಾಂಧಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮುಂಬರುವ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡು ಸಾಗಬೇಕು: ರಾಹುಲ್ ಗಾಂಧಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!