ಕಲ್ಪ ಮೀಡಿಯಾ ಹೌಸ್ | ತುಮಕೂರು |
25 ವರ್ಷದ ಮೇಘನಾ ಎಂಬ ಹುಡುಗಿಯನ್ನು ವಿವಾಹವಾಗಿ ಇಡಿಯ ರಾಜ್ಯ ಮಾತ್ರವಲ್ಲ ರಾಷ್ಟ್ರ ಮಟ್ಟದಲ್ಲಿ ಸುದ್ಧಿಯಾಗಿದ್ದ 45 ವರ್ಷದ ಶಂಕರಪ್ಪ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆರು ತಿಂಗಳ ಹಿಂದೆ ಈ ಇಬ್ಬರ ವಿವಾಹವಾಗಿದ್ದು, ಈ ವಿಚಾರ ಸಾಮಾಜಿಕ ಜಾಲತಾಣ ಸೇರಿದಂತೆ ಮಾಧ್ಯಮಗಳಲ್ಲೂ ಭಾರೀ ಸುದ್ದಿಯಾಗಿತ್ತು. ಆದರೆ, ಇದೀಗ ಶಂಕರಪ್ಪ ತಮ್ಮ ತೋಟದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇವರ ವೈವಾಹಿಕ ಜೀವನ ದುರಂತ ಅಂತ್ಯವಾಗಿದೆ.
ತಮ್ಮ ಪತ್ನಿ ಮೇಘನಾ ಹಾಗೂ ತಾಯಿಯ ನಡುವೆ ಸಾಮರಸ್ಯ ಇಲ್ಲದೇ ಪ್ರತಿನಿತ್ಯ ಜಗಳವಾಡುತ್ತಿದ್ದರು. ತಾಯಿಯನ್ನು ತೊರೆದು ಬೆಂಗಳೂರಿನಲ್ಲಿ ಪ್ರತ್ಯೇಕ ಮನೆ ಮಾಡೋಣ ಎಂಬ ವಿಚಾರದಲ್ಲಿ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಈ ಜಗಳದಿಂದ ಬೇಸತ್ತು ಶಂಕರಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
Also read: ನೂತನ ಶಿಕ್ಷಣ ನೀತಿ ಪ್ರಾಯೋಗಿಕ ಕಲಿಕೆಗೆ ಒತ್ತು ನೀಡಿದೆ: ಪ್ರೊ. ಎಸ್. ಕೆ. ಸೈದಾಪುರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post