No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ತುಮಕೂರು

ಯುವಕರು ಜಾಗೃತರಾದರೆ ದೇಶದ ಪ್ರಗತಿ: ವ್ಯಾಸರಾಜ ಮಠದ ವಿದ್ಯಾಶ್ರೀಶ ತೀರ್ಥಶ್ರೀ ಅಭಿಮತ

ಚಾತುರ್ಮಾಸ ಸಮಿತಿಯಿಂದ ಗೌರವ ಸಮರ್ಪಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 11, 2022
in ತುಮಕೂರು
0
ಯುವಕರು ಜಾಗೃತರಾದರೆ ದೇಶದ ಪ್ರಗತಿ: ವ್ಯಾಸರಾಜ ಮಠದ ವಿದ್ಯಾಶ್ರೀಶ ತೀರ್ಥಶ್ರೀ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತುಮಕೂರು  |

ಯುವಕರಲ್ಲಿ ಧಾರ್ಮಿಕ ಪ್ರಜ್ಞೆ ಜಾಗೃತಿಯಾದರೆ ಅದು ದೇಶದ ಪ್ರಗತಿಯ ಸೂಚಕ ಎಂದು ಸೋಸಲೆ ಶ್ರೀ ವ್ಯಾಸರಾಜರ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹೇಳಿದರು.

ನಗರದ ಚಿಕ್ಕಪೇಟೆಯಲ್ಲಿರುವ ಶ್ರೀ ವ್ಯಾಸರಾಜರ ಮಠದಲ್ಲಿ ಚಾತುರ್ಮಾಸ್ಯ ಸಮಿತಿ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಭಾಗವತ ಮಂಗಳ ಮಹೋತ್ಸವದಲ್ಲಿ ಅವರು ಆಶೀರ್ವಚನ ನೀಡಿದರು.
46 ದಿನಗಳ ಚಾತುರ್ಮಾಸ್ಯ ಸಂದರ್ಭ ಯುವಕರೇ ಹೆಚ್ಚಾಗಿ ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಇಂದು ಅನೇಕರು ಯುವಕರಿಗೆ ಧರ್ಮಪ್ರಜ್ಞೆ ಇಲ್ಲವೆಂದು ಟೀಕಿಸುತ್ತಾರೆ. ಆದರೆ ಅದು ಸುಳ್ಳು. ಯುವ ಸಮುದಾಯದಲ್ಲಿ ಇತ್ತೀಚಿನ ದಶಕದದಲ್ಲಿ ದೇಶ, ಧರ್ಮ ಮತ್ತು ಧಾರ್ಮಿಕ ಆಚರಣೆ ಬಗ್ಗೆ ವಿಶೇಷ ಆಸಕ್ತಿ ಬೆಳೆಯುತ್ತಿದೆ. ಇದು ಕೇವಲ ಆ ಯುವಕ, ಯುವತಿಯರ ಉದ್ಧಾರಕ್ಕೆ ಮಾತ್ರವಲ್ಲದೇ ನಮ್ಮ ನಾಡಿನ ಅಭ್ಯುದಯದ ಬಹುದೊಡ್ಡ ಸಂಕೇತವಾಗಿದೆ ಎಂದವರು ಶ್ಲಾಘಿಸಿದರು.

ಹಿರಿಯರು ಮತ್ತು ಗುರು ಸ್ಥಾನದಲ್ಲಿರುವವರು ಯುವ ಸಮುದಾಯಕ್ಕೆ ಹೆಚ್ಚಿನ ಜವಾಬ್ದಾರಿ ನೀಡಬೇಕು. ಹಿಂದೆ ಇದ್ದು ಯುವ ಪಡೆಗೆ ಉತ್ತೇಜನ ನೀಡಿ ಧಾರ್ಮಿಕ ಮತ್ತು ಸಾಂಸ್ಕೃತಿಕ ರಂಗದಲ್ಲಿ ಅವರು ಬೆಳೆಯುವಂತೆ ಪ್ರೇರಣೆ ನೀಡಬೇಕು. ಆಗ ಮಾತ್ರ ಸನಾತನ ಭಾರತೀಯ ಹಿಂದು ಧರ್ಮ, ಮಧ್ವಮತ, ಶ್ರೀಮದ್ ಆನಂದತೀರ್ಥರ ತತ್ವ, ವಿಚಾರ ಮತ್ತು ಹಾಕಿಕೊಟ್ಟ ಸಂಪ್ರದಾಯಗಳು ಮುಂದಿನ ಪೀಳಿಗೆಗೆ ಉಳಿಯುತ್ತದೆ ಎಂದು ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಸಲಹೆ ನೀಡಿದರು.

ತಾಯಂದಿರ ಕೊಡುಗೆ ಅಪಾರ
ಮನೆ, ಮನೆಯಲ್ಲಿ ಧರ್ಮ ಉಳಿಯಬೇಕು ಎಂದರೆ ಅದಕ್ಕೆ ತಾಯಂದಿರು, ಮಾತೆಯರ ಕೊಡುಗೆ ಅಪಾರವಾಗಿದೆ. ಚಾತುರ್ಮಾಸ ಅವಧಿಯಲ್ಲಿ ನೂರಾರು ಮಾತೆಯರು ಸೇವೆ ಸಲ್ಲಿಸಿದ್ದಾರೆ. ಅವರೆಲ್ಲರ ಮನೆಗಳು, ವಂಶಗಳು ಬೆಳಗಲಿ ಎಂದು ಸ್ವಾಮೀಜಿ ಹಾರೈಸಿದರು.

ಇದೇ ಸಂದರ್ಭ ವಿದ್ವಾನ್ ಮರುತಾಚಾರ್ಯ ಅವರನ್ನು ತುಮಕೂರು ವ್ಯಾಸರಾಜರ ಮಠದ ಪೀಠಾಧಿಕಾರಿಯನ್ನಾಗಿ ಶ್ರೀಗಳು ಘೋಷಣೆ ಮಾಡಿ ಅವರಿಗೆ ಗೌರವಾರ್ಪಣೆ ಮಾಡಿದರು. ಮಠದ ದಿವಾನರಾದ ವಿದ್ವಾನ್ ಬ್ರಹ್ಮಣ್ಯಾಚಾರ್, ಬಲಸೇವೆ ಕೃಷ್ಣಾಚಾರ್, ಚಾತುರ್ಮಾಸ ಸಮಿತಿ ಪ್ರಮುಖರಾದ ಜಯಸಿಂಹರಾವ್, ಕೌಶಿಕ್ ಸಿಂಹ, ಎಲ್.ಎಂ. ಕೃಷ್ಣ, ಹರೀಶ್, ಸತ್ಯನಾರಾಯಣ ರಾವ್, ವಸುಧಾ ಇತರರು ಹಾಜರಿದ್ದರು.
ಸೀಮೋಲ್ಲಂಘನ
ಚಾತುರ್ಮಾಸ್ಯ ಸೀಮೋಲ್ಲಂಘನ ಅಂಗವಾಗಿ ಶ್ರೀ ವಿದ್ಯಾಶ್ರೀಶ ತೀರ್ಥರು ಸಮೀಪದ ದೇವರಾಯನ ದುರ್ಗ ಮತ್ತು ಸೀಬಿ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ನರಸಿಂಹ ದೇವರ ದರ್ಶನ ಪಡೆದರು. ನೂರಾರು ಭಕ್ತರು ಇದಕ್ಕೆ ಸಾಕ್ಷಿಯಾದರು.

ಸಮಸ್ತ ಕಾಣಿಗೆ ಸಮರ್ಪಣೆ
ತುಮಕೂರಿನ ಚಾತುರ್ಮಾಸ್ಯ ವ್ರತದ 46 ದಿನಗಳ ಅವಧಿಯಲ್ಲಿ ತಮಗೆ ಭಕ್ತರು ಅರ್ಪಿಸಿದ ಪಾದಪೂಜೆ, ಭಿಕ್ಷೆ ಸೇರಿದಂತೆ ಹಲವು ಹತ್ತು ರೀತಿಯ ಕಾಣಿಕೆಯ ಸಂಗ್ರಹವನ್ನೆಲ್ಲಾ ಸ್ಥಳೀಯ ವ್ಯಾಸರಾಜರ ಮಠದ ಅಭಿವೃದ್ಧಿ ನಿಧಿಗೆ ಸಮರ್ಪಣೆ ಮಾಡಿದ್ದು ವಿಶೇಷವಾಗಿ ಗಮನ ಸೆಳೆಯಿತು. ಭಕ್ತರು ಶ್ರೀಗಳಿಗೆ ನಡೆಸಿದ ನಾಣ್ಯ ಮತ್ತು ಧಾನ್ಯಗಳ ತುಲಾಭಾರದ ನಂತರ `ಕಾಣಿಗೆ ಸಮರ್ಪಣೆ’ ವಿಶೇಷವಾಗಿತ್ತು.

ಸ್ಥಳೀಯ ಭಕ್ತರು ಪ್ರತಿದಿನವೂ ವಿಶೇಷವಾಗಿ ಸಂಸ್ಥಾನ ಪ್ರತಿಮಾ ಶ್ರೀ ಗೋಪಾಲಕೃಷ್ಣ ದೇವರ ಮತ್ತು ಪ್ರಾಣದೇವರ ಸೇವೆಯೊಂದಿಗೆ ಗುರುಭಕ್ತಿಯನ್ನೂ ಸಮರ್ಪಣೆ ಮಾಡಿದ್ದಾರೆ. ಹಾಗಾಗಿ ಇಲ್ಲಿನ ಕಾಣಿಕೆಗಳೆಲ್ಲವೂ ನಮಗೆ ಸೇರುವಂಥದ್ದಲ್ಲ. ಇವು ಇಲ್ಲಿನ ಮಠದ ಸಮಗ್ರ ಪ್ರಗತಿಗೆ ಬಳಕೆಯಾದರೆ ಮಾತ್ರ ನಮ್ಮ ಉಪಾಸ್ಯ ಮೂರ್ತಿ ಶ್ರೀ ಗೋಪಾಲಕೃಷ್ಣ ದೇವರಿಗೆ ಸಂಪ್ರೀತಿಯಾಗುತ್ತದೆ ಎಂದು ಶ್ರೀಗಳು ಭಾವುಕರಾಗಿ ನುಡಿದರು. ನೂರಾರು ಪಂಡಿತರು, ವಿದ್ವಾಂಸರು ಇದಕ್ಕೆ ಸಾಕ್ಷಿಯಾದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Chaturmasya VratamKannada News WebsiteLatest News KannadaSosale Vyasaraja MathTumkurಚಾತುರ್ಮಾಸ್ಯತುಮಕೂರುಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿಶ್ರೀ ವ್ಯಾಸರಾಜರ ಮಠಸೋಸಲೆ ವ್ಯಾಸರಾಜ ಮಠ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರ: ಅದ್ದೂರಿ ಶ್ರೀನಗರ ಗಣಪತಿ ವಿಸರ್ಜನೆ, ಗಮನ ಸೆಳೆದ ಬೆಂಕಿಯಾಟ ಪ್ರದರ್ಶನ

Next Post

ಹರಿಹರಪುರ ಸ್ವಯಂಪ್ರಕಾಶ ಶ್ರೀಗಳ ಚಾತುರ್ಮಾಸ್ಯ ಪರಿಸಮಾಪ್ತಿ: ರಾಜ್ಯಸಭಾ ಸದಸ್ಯ ಜಗ್ಗೇಶ್ ಗುರುವಂದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹರಿಹರಪುರ ಸ್ವಯಂಪ್ರಕಾಶ ಶ್ರೀಗಳ ಚಾತುರ್ಮಾಸ್ಯ ಪರಿಸಮಾಪ್ತಿ: ರಾಜ್ಯಸಭಾ ಸದಸ್ಯ ಜಗ್ಗೇಶ್ ಗುರುವಂದನೆ

ಹರಿಹರಪುರ ಸ್ವಯಂಪ್ರಕಾಶ ಶ್ರೀಗಳ ಚಾತುರ್ಮಾಸ್ಯ ಪರಿಸಮಾಪ್ತಿ: ರಾಜ್ಯಸಭಾ ಸದಸ್ಯ ಜಗ್ಗೇಶ್ ಗುರುವಂದನೆ

Leave a Reply Cancel reply

Your email address will not be published. Required fields are marked *

No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL