No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ತುಮಕೂರು

ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ | ಸಿಎಂ ಸಿದ್ದರಾಮಯ್ಯ

ತುಮಕೂರು | ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 20, 2025
in ತುಮಕೂರು
0
ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ | ಸಿಎಂ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತುಮಕೂರು  |

ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ #CM Siddaramaiah ಅವರು ಕರೆ ನೀಡಿದರು.

ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು #Journalist 39th State Conference ಉದ್ಘಾಟಿಸಿ ಮಾತನಾಡಿದರು.

ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ ವೃತ್ತಿ ಇದ್ದಾಗ ಸಮಾಜಕ್ಕೆ ಅನುಕೂಲ. ಸಮಾಜದಲ್ಲಿರುವ ಮೇಲು, ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಕರೆ ನೀಡಿದರು.
ನಿಮ್ಮ ವಿಶೇಷ ಸಂಚಿಕೆ ನೀವೂ ಓದಿ

ಈಗ ವೇದಿಕೆಯಲ್ಲಿ ಬಿಡುಗಡೆಯಾದ ನಿಮ್ಮದೇ ವಿಶೇಷ ಸಂಚಿಕೆ ನೀವೂ ಓದಿ. ಪತ್ರಕರ್ತರ ಕರ್ತವ್ಯ , ಸವಾಲುಗಳ ಪಟ್ಟಿ ಇದೆ. ಅದನ್ನು ಓದಿ, ಪಾಲಿಸಿ ಎಂದರು,

ಜನ ಪತ್ರಕರ್ತರ #Journalist ಮೇಲೆ ನಂಬಿಕೆ ಇಟ್ಟಿದ್ದಾರೆ. ಮೌಡ್ಯದ ಸುದ್ದಿಗಳನ್ನು , ಚರ್ಚೆಗಳನ್ನು ನಡೆಸಿ ನೋಡುಗರ, ಓದುಗರ ದಾರಿ ತಪ್ಪಿಸಬೇಡಿ ಎಂದರು.

ವಿಜ್ಞಾನ, ತಂತ್ರಜ್ಞಾನದ ವೇಗದಲ್ಲೇ ಪತ್ರಿಕೋದ್ಯಮ ಬೆಳೆಯುತ್ತಿದೆ. ಇದು ಅವಕಾಶ , ಸವಾಲು ಎರಡೂ ಆಗಿದೆ ಎಂದರು.

ದೇಶದ ಪ್ರತಿಯೊಬ್ಬರೂ ಸಂವಿಧಾನ ಓದಬೇಕು. ಆಗ ಹಕ್ಕು-ಕರ್ತವ್ಯ ಎರಡೂ ಗೊತ್ತಾಗುತ್ತದೆ. ನಿಮ್ಮದು ಶಕ್ತಿಯುತ ಮಾಧ್ಯಮ. ಜನ ನಿಮ್ಮ ಕಡೆ ನೋಡ್ತಾ ಇದ್ದಾರೆ. ಈ ಎಚ್ಛರಿಕೆ ಸದಾ ಇರಲಿ ಎಂದರು.
ಕೆಲವೇ ದಿನದಲ್ಲಿ ಬಸ್ ಪಾಸ್

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ, ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ಪತ್ರಕರ್ತರ ಮಾಸಾಶನವನ್ನೂ 3 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದರು.

ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್, ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿ ಜಿಲ್ಲೆಯ ಶಾಸಕರುಗಳು ಹಾಗೂ ಹಲವು ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

ಮೊದಲಿಗೆ ಸಮ್ಮೇಳನದ ಆವರಣದಲ್ಲಿ ಆಯೋಜಿಸಿದ್ದ ಸ್ಟಾಲ್ ಗಳನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು ಮಹಿಳಾ ಸ್ವ ಸಹಾಯ ಸಂಘಗಳು ಸಿದ್ದಪಡಿಸಿದ ತಿಂಡಿ ಸವಿದರು.

ಕೆ.ವಿ.ಪ್ರಭಾಕರ್ ಅವರಿಗೆ ಅಭಿನಂಧಿಸಿದ ಸಮ್ಮೇಳನ

ರಾಜ್ಯದ ಪತ್ರಕರ್ತ ಸಮುದಾಯದ ವೃತ್ತಿಪರ ಸಮಸ್ಯೆಗಳಿಗೆ ಅತ್ಯಂತ ಸಹೃದಯತೆಯಿಂದ ಸ್ಪಂದಿಸಿ, ಪರಿಹಾರ ಒದಗಿಸಿಕೊಡುತ್ತಿರುವುದರ ಜೊತೆಗೆ ಸಮ್ಮೇಳನದ ಯಶಸ್ಸಿಗೆ ಸಕಲ ರೀತಿಯಲ್ಲಿ ಸಂಪೂರ್ಣ ಸಹಕಾರ ನೀಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಸಮ್ಮೇಳನ ವಿಶೇಷ ಅಭಿನಂದನೆ ಸಲ್ಲಿಸಿತು.

ರಾಜಣ್ಣ ನೀನು ಮನುಸ್ಮೃತಿ ಓದು

ಪತ್ರಕರ್ತರ 39ನೇ ರಾಜ್ಯ ಸಮ್ಮೇಳನದ ಉದ್ಘಾಟನಾ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಮನುಸ್ಮೃತಿ ಓದಲು ಹೇಳಿದ ಪ್ರಸಂಗ ನಡೆಯಿತು.

ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಸಮಾಜದಲ್ಲಿರುವ ಜಾತಿ ತಾರತಮ್ಯವನ್ನು ಉಲ್ಲೇಖಿಸಿ ಮಾತನಾಡುವಾಗ ಮೇಲು “ಜಾತಿ-ಕೆಳ ಜಾತಿ” ಎನ್ನುವ ಪದ ಬಳಸಿದರು. ಈ ವೇಳೆ ಸಚಿವ ರಾಜಣ್ಣ ಅವರು ಮೇಲುಜಾತಿ-ಕೆಳಜಾತಿ ಎನ್ನುವ ಬದಲಿಗೆ ಮುಂದುವರೆದವರು, ಹಿಂದುಳಿದವರು ಎಂದು ಹೇಳಬಹುದು ಎಂದರು.

ಇದಕ್ಕೆ ಆಕ್ಷೇಪಿಸಿದ ಸಿಎಂ, ಜಾತಿ ಅನ್ನುವುದು ಈ ಸಮಾಜದ ವಾಸ್ತವ. ನೀನು ಮನುಸ್ಮೃತಿ ಓದಿದರೆ ಈ ಬಗ್ಗೆ ಇನ್ನಷ್ಟು ಸ್ಪಷ್ಟವಾಗುತ್ತದೆ. ಜಾತಿಯ ತಾರತಮ್ಯ ಎಷ್ಟು ಭೀಕರವಾಗಿದೆ ಎಂದು ಗೊತ್ತಾಗಬೇಕಾದರೆ ಅದಕ್ಕೆ ಮನುಸ್ಮೃತಿ ಓದು ಎಂದರು.

ಈ ಬಗ್ಗೆ ಕೆಲ ಕ್ಷಣ ಇಬ್ಬರ ನಡುವೆ ಚರ್ಚೆ ನಡೆಯಿತು. ಬಳಿಕ, ಮುಖ್ಯಮಂತ್ರಿಗಳು “ನಾನು ಮೇಲು ಜಾತಿ-ಕೆಳ ಜಾತಿ ಅಂತಲೇ ಬಳಸ್ತೀನಿ. ಇದು ನನ್ನ‌ ಸ್ವಾತಂತ್ರ್ಯ, ನೀವು ಹಿಂದುಳಿದವರು-ಮುಂದುವರೆದವರು ಅಂತಲೇ ಬಳಸಿ ಎಂದು ನಗೆಚಟಾಕೆ ಹಾರಿಸಿ ಭಾಷಣ ಮುಂದುವರೆಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news       

http://kalpa.news/wp-content/uploads/2024/04/VID-20240426-WA0008.mp4

                         

Tags: JournalistJournalist 39th State ConferenceKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaTumkurತುಮಕೂರುಪತ್ರಕರ್ತರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನ
Share196Tweet123Send
Previous Post

ದಕ್ಷಿಣ ಭಾರತೀಯ ಮಹಿಳಾ ಸಾಧನೆ SWIAA 2024 ರಾಷ್ಟ್ರ ಪ್ರಶಸ್ತಿ ಭದ್ರಾವತಿಯ ಕಲಾವಿದೆಯ ಮುಡಿಗೆ

Next Post

ಸಂಗೀತದಿಂದ ಸೌಹಾರ್ದ ಸಾಧನೆ ಸುಲಭ: ಶ್ರೀ ವೀರೇಶಾನಂದ ಸ್ವಾಮೀಜಿ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಂಗೀತದಿಂದ ಸೌಹಾರ್ದ ಸಾಧನೆ ಸುಲಭ: ಶ್ರೀ ವೀರೇಶಾನಂದ ಸ್ವಾಮೀಜಿ ಅಭಿಮತ

ಸಂಗೀತದಿಂದ ಸೌಹಾರ್ದ ಸಾಧನೆ ಸುಲಭ: ಶ್ರೀ ವೀರೇಶಾನಂದ ಸ್ವಾಮೀಜಿ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

May 26, 2026
ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

May 26, 2026
ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

May 26, 2026
ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಹೋರಾಟ ಬೆಂಬಲಿಸಿದ ಎಂಪಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಹೋರಾಟ ಬೆಂಬಲಿಸಿದ ಎಂಪಿ ರಾಘವೇಂದ್ರ ಹೇಳಿದ್ದೇನು?

May 26, 2026
ವಿಧಾನಪರಿಷತ್ ಚುನಾವಣೆ ದಿನಾಂಕ ಪ್ರಕಟ | ಚುನಾವಣಾ ವೇಳಾಪಟ್ಟಿ ಇಲ್ಲಿದೆ

ವಿಧಾನಪರಿಷತ್ ಚುನಾವಣೆ ದಿನಾಂಕ ಪ್ರಕಟ | ಚುನಾವಣಾ ವೇಳಾಪಟ್ಟಿ ಇಲ್ಲಿದೆ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL