ಕಲ್ಪ ಮೀಡಿಯಾ ಹೌಸ್ | ತುಮಕೂರು |
ನಾವು ಕರೆಂಟ್ ಬಿಲ್ ಕಟ್ಟಲ್ಲ. ಅದ್ಯಾವ್ ನನ್ಮಗ ಬರ್ತಾನೋ ಬರಲಿ ಎಂದು ಬೆಸ್ಕಾಂ ಸಿಬ್ಬಂದಿಗೆ ವೃದ್ಧೆ ಅವಾಜ್ ಹಾಕಿದ ಪ್ರಸಂಗ ಜಿ. ಪರಮೇಶ್ವರ್ ಕ್ಷೇತ್ರ ಕೊರಟಗೆರೆ ತಾಲೂಕಿನ ಟಿ.ಗೊಲ್ಲಹಳ್ಳಿಯಲ್ಲಿ ನಡೆದಿದೆ.
ಮೇ ತಿಂಗಳ ಬಿಲ್ ಕೊಡಲು ತೆರಳಿದ್ದ ಬೆಸ್ಕಾ ಸಿಬ್ಬಂದಿಗೆ ವೃದ್ಧೆ ತರಾಟೆ ತೆಗೆದುಕೊಂಡಿದ್ದು, ಕಾಂಗ್ರೆಸ್ ನವರು ಸರ್ಕಾರ ಬಂದರೆ ಕರೆಂಟ್ ಫ್ರೀ ಕೊಡ್ತಿನಿ ಅಂದಿದ್ರು. ಈಗ ನೀವು ಬಿಲ್ ಕೇಳೋಕೆ ಬಂದಿದ್ರಾ?. ನಾವು ಬಿಲ್ ಕಟ್ಟಲ್ಲ. ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ರನ್ನು ಕೇಳಿ ಎಂದು ಕಿಡಿಕಾರಿದ್ದಲ್ಲದೆ, ಇನ್ಮೆಲಿಂದ ನಮ್ಮೂರಿಗೆ ಬಿಲ್ ಕೇಳೋಕೆ ಬರಬೇಡಿ ಎಂದು ವೃದ್ಧೆ ಮತ್ತು ಮಹಿಳೆಯರು ಬೆಸ್ಕಾಂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post