No Result
View All Result
Ashwini Vaishnaw Flags Off Bengaluru–Mumbai Express; Announces Vande Bharat Sleeper Soon
English Articles

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

by ಕಲ್ಪ ನ್ಯೂಸ್
May 18, 2026
0

Kalpa Media House  |  Bengaluru | Union Railway Minister Ashwini Vaishnaw on Monday virtually flagged off the new Train No....

Read moreDetails
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
  • Advertise With Us
  • Grievances
  • About Us
  • Contact Us
Tuesday, May 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

ಕ್ಯಾಮೆರಾದ ಮೂಲಕ ಬದುಕಿನ ಕ್ಷಣಗಳನ್ನು ಶಾಶ್ವತಗೊಳಿಸಿದ ಸಾಧಕ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 19, 2026
in Special Articles
0
ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ತಮ್ಮ ಕ್ಯಾಮೆರಾ ಕಣ್ಣಿನ ಮೂಲಕ ಅನೇಕ ಕುಟುಂಬಗಳ ಸಂತೋಷದ ಕ್ಷಣಗಳನ್ನು ಶಾಶ್ವತ ನೆನಪಾಗಿ ಉಳಿಸುವಲ್ಲಿ ನಿರಂತರವಾಗಿ ತೊಡಗಿಸಿಕೊಂಡು, ಕರಾವಳಿಯ ಫೋಟೋಗ್ರಫಿಯಲ್ಲಿ ತಮ್ಮದೇ ಆದ ಮುದ್ರೆಯನ್ನು ಛಾಪಿಸಿರುವ ಉದಯ್‌ಶಂಕರ್ ಪಡಿಯಾರ್ ಸೃಜನಾತ್ಮಕ ಕಲಾವಿದನಾಗಿ ಹಾಗೂ ತಮ್ಮ ಕ್ಷೇತ್ರದಲ್ಲಿಯೇ ಅದ್ಭುತ ವಿಡಿಯೋಗ್ರಾಫರ್ ಆಗಿ ಗುರುತಿಸಿಕೊಂಡಿದ್ದಾರೆ.

ಕರಾವಳಿ ಪ್ರದೇಶದ ಬೈಂದೂರಿನ #Byndoor ಸುತ್ತಮುತ್ತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿರುವ ಹೆಸರು ಎಂದರೆ ಅದು ಉದಯ್‌ಶಂಕರ್ ಪಡಿಯಾರ್. ಬೈಂದೂರಿನ ಪ್ರಸಿದ್ಧ ಶೃಂಗಾರ್ ಸ್ಟುಡಿಯೋ ಮಾಲಕರಾಗಿರುವ ಅವರು, ಕ್ಯಾಮೆರಾ ಕಲೆಯನ್ನು ತಮ್ಮ ಜೀವನದ ವೃತ್ತಿಯನ್ನಾಗಿ ಮಾಡಿಕೊಂಡು ಅನೇಕ ವರ್ಷಗಳಿಂದ ಹಲವರ ಸಾವಿರಾರು ನೆನಪುಗಳನ್ನು ಶಾಶ್ವತಗೊಳಿಸುತ್ತಿದ್ದಾರೆ.

#Photography ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ #Videography ಕೇವಲ ಒಂದು ಉದ್ಯೋಗವಲ್ಲ, ಅದು ಒಂದು ಕಲೆ. ಈ ಕಲೆಯನ್ನು ಅತ್ಯಂತ ಪ್ರೀತಿ ಮತ್ತು ಸಮರ್ಪಣೆಯಿಂದ ಅಳವಡಿಸಿಕೊಂಡು ಬಂದವರು ಉದಯ್‌ಶಂಕರ್ ಪಡಿಯಾರ್. ಮದುವೆ ಸಮಾರಂಭ, ಧಾರ್ಮಿಕ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಸಾಮಾಜಿಕ ಸಂದರ್ಭಗಳಲ್ಲಿ ನಡೆಯುವ ಅನೇಕ ವಿಶೇಷ ಕ್ಷಣಗಳನ್ನು ಅತ್ಯಂತ ನೈಪುಣ್ಯದಿಂದ ಅವರು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

ಅವರ ವಿಡಿಯೋಗ್ರಫಿಯ ವಿಶೇಷತೆ ಎಂದರೆ ಕೇವಲ ದೃಶ್ಯಗಳನ್ನು ದಾಖಲಿಸುವುದಲ್ಲ; ಆ ಕ್ಷಣದ ಭಾವನೆ, ಸಂತೋಷ ಮತ್ತು ಸೌಂದರ್ಯವನ್ನು ಜೀವಂತವಾಗಿ ಉಳಿಸುವ ಸಾಮರ್ಥ್ಯವಾಗಿದೆ. ಅದಕ್ಕಾಗಿಯೇ ಅವರ ಕ್ಯಾಮೆರಾದಲ್ಲಿ ಸೆರೆಹಿಡಿದ ಕ್ಷಣಗಳು ಎಷ್ಟೋ ಕುಟುಂಬಗಳಲ್ಲಿ ಅಮೂಲ್ಯ ನೆನಪುಗಳಾಗಿ ಉಳಿದಿವೆ.ಬೈಂದೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೃಂಗಾರ್ ಸ್ಟುಡಿಯೋ ಒಂದು ವಿಶ್ವಾಸಾರ್ಹ ಹೆಸರಾಗಿ ಬೆಳೆದಿದೆ. ಈ ಯಶಸ್ಸಿನ ಹಿಂದೆ ಉದಯ್ ಶಂಕರ್ ಪಡಿಯಾರ್ ಅವರ ಪರಿಶ್ರಮ, ಅನುಭವ ಮತ್ತು ಕಲಾತ್ಮಕ ದೃಷ್ಟಿಯೇ ಮುಖ್ಯ ಕಾರಣವಾಗಿದೆ. ಕಾಲದೊಂದಿಗೆ ಬರುವ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ತಮ್ಮ ಕೆಲಸದಲ್ಲಿ ಸದಾ ಹೊಸತನ ತರುವ ಪ್ರಯತ್ನವನ್ನು ಅವರು ಮುಂದುವರೆಸುತ್ತಿದ್ದಾರೆ.

ತಂದೆ ಉಪ್ಪುಂದದ ದೇವಿದಾಸ್ ಪಡಿಯಾರ್, ತಾಯಿ ಸುಗುಣಾ ಪಡಿಯಾರ್ ಅವರ ಮಗನಾಗಿ 1966 ರಲ್ಲಿ ಜನಿಸಿದ ಉದಯ್‌ಶಂಕರ್ ಅವರು ತಮ್ಮ ಬಾಲ್ಯವನ್ನು ಉಪ್ಪುಂದದಲ್ಲಿಯೇ ಕಳೆದರು. ವಿದ್ಯಾಭ್ಯಾಸ ಮುಗಿಸಿ ಮುಂದಿನ ಜೀವನ ನಿರ್ವಹಣೆಯ ಕನಸುಕಂಡಿದ್ದು ಛಾಯಾಗ್ರಹಣ ಕ್ಷೇತ್ರದಲ್ಲಿ. ಸಾಗರದ ಬಾಬುರಾವ್ ಅವರ ಬಸಂತ್ ಸ್ಟುಡಿಯೋ ಸೇರಿ, ಅಲ್ಲಿನ ಪ್ರಭಾಕರ್ ಅವರಲ್ಲಿ ಪ್ರಾಥಮಿಕ ಹಂತ ಕಲಿತು, ನಂತರ ಧಾರವಾಡದ ಶ್ರೀ ಚಂದ್ರಶೇಖರ್ ಚಿಕ್ಕೋಡಿ ಅವರ ಶೃಂಗಾರ್ ಸ್ಟುಡಿಯೋದಲ್ಲಿ ಛಾಯಾಗ್ರಹಣ ಕಲೆಯನ್ನ ಕಲಿತ ಅವರು 1984ರಲ್ಲಿ ಊರಿಗೆ ಬಂದು ಬೈಂದೂರಿನಲ್ಲಿ ಶೃಂಗಾರ್ ಸ್ಟುಡಿಯೋ ಎಂಬ ಹೆಸರಿನಲ್ಲೇ ತಮ್ಮ ವೃತ್ತಿಜೀವನ ಆರಂಭಿಸಿದರು.1987ರಲ್ಲಿ ಪ್ರಥಮಬಾರಿಗೆ ವಿಡಿಯೋ ಚಿತ್ರೀಕರಣಕ್ಕಾಗಿ ವಿಡಿಯೋ ಕೆಮೆರಾ ತಂದ ಹೆಗ್ಗಳಿಕೆ ಸ್ಥಳೀಯವಾಗಿ ಇವರಿಗೇ ದೊರೆಯುತ್ತದೆ. ಅಂದು ಆ ಭಾಗದಲ್ಲಿ ಯಾರಲ್ಲೂ ವಿಡಿಯೋ ಕೆಮೆರಾ ಇಲ್ಲವಾಗಿತ್ತು.

ಹಿಂದಿನ ತಮ್ಮ ವೃತ್ತಿ ಜೀವನದ ಅನುಭವಗಳನ್ನ ಹಂಚಿಕೊಳ್ಳುತ್ತಾ, ಹಿಂದೆ ಸಾಮಾನ್ಯರು ಈ ಕಲೆಗೆ ಬೇಕಾದ ವೆಚ್ಚ ಭರಿಸುವ ಶಕ್ತಿವಂತರಾಗಿ ಇರಲಿಲ್ಲವಾಗಿತ್ತು. ಛಾಯಾಚಿತ್ರ ಎಂದರೆ ಅದು ಯಾವುದೋ ಮಹತ್ತರವಾದ ಸಭೆಯದೋ, ಶಾಲಾ ಮಕ್ಕಳ ಸಮೂಹ ಚಿತ್ರವೋ ಆಗಿರುತ್ತಿದ್ದ ಕಾಲ. ಅಂದೆಲ್ಲ ಒಬ್ಬ ಛಾಯಾಗ್ರಾಹಕನಿಗೆ ತನ್ನದೇ ಆದ ವೃತ್ತಿಗೌರವ ಇರುತ್ತಿತ್ತು ಎನ್ನುವುದಕ್ಕೆ ಒಂದೊಂದು ಶಾಲೆಗಳಿಗೆ ಒಂದೊಂದು ದಿನ ನಿಗಧಿ ಮಾಡಿ ಅವರಿಗೆ ಸಮಯ ಕೊಡುತ್ತಿದ್ದುದು ಛಾಯಾಗ್ರಾಹಕನೇ ಆಗಿತ್ತು ಎಂಬುದೇ ಸಾಕ್ಷಿ. ದಾರಿಯೇ ಇಲ್ಲದ ಶಾಲೆಗಳಿಗೆ ತಲುಪಲು ನಡೆದೇ ಹೋಗಬೇಕಿದ್ದ ಅನಿವಾರ್ಯತೆಯ ಕಾಲವದು. ವಾಹನ ಇಳಿದ ಸ್ಥಳಗಳಿಂದ ಶಾಲೆಯ ಅಧ್ಯಾಪಕರುಗಳೇ ಸ್ವತಃ ಬಂದು ಕೆಮೆರಾ ಪೆಟ್ಟಿಗೆ ಹೊತ್ತೊಯ್ದು ಛಾಯಾಚಿತ್ರ ತೆಗೆಸಿಕೊಳ್ಳುತ್ತಿದ್ದ ಕಾಲದಿಂದ ಇಂದು ಜನಸಾಮಾನ್ಯರಿಗೂ ಕೈಗೆಟುಕುವಂತೆ ತಂತ್ರಜ್ಞಾನಗಳು ಮುಂದುವರಿದಿದೆ.120 ಎಂ. ಎಂ. ಹಾಗೂ 35 ಎಂ. ಎಂ. ನೆಗೆಟಿವ್‌ನಲ್ಲಿ ಛಾಯಾಗ್ರಹಣದ ಕಷ್ಟಕರವಾದ ಸವಾಲಿನ ಕೆಲಸಗಳನ್ನ ತಮ್ಮ ಕೌಶಲ್ಯದಿಂದ ಕರಗತ ಮಾಡಿಕೊಂಡು ನಡೆದವನು ಮಾತ್ರ ವೃತ್ತಿಯಲ್ಲಿ ಹೆಸರು ಮಾಡಲು ಸಾಧ್ಯವಾಗಿತ್ತು. ಹೀಗೆ ಕಪ್ಪು-ಬಿಳುಪು ಛಾಯಾಚಿತ್ರಗಳ ಕಾಲಗಳ ವೈಭವವನ್ನ ನೆನಪುಮಾಡಿಕೊಳ್ಳುತ್ತಾರೆ. ಹೀಗೆ ಸವಾಲಿನ ಕಾರ್ಯಗಳಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ಕಲಿಯುವಿಕೆಗೆ ಬೇಕಾಗಿ ಮನುಷ್ಯನ ದೇಹದ ಅತಿ ಸೂಕ್ಷ್ಮ ಅಂಗಾಗಳ ಚಿತ್ರೀಕರಣವನ್ನೂ ಮಾಡಿಕೊಟ್ಟು ಸೈ ಎನಿಸಿಕೊಂಡಿದ್ದಾರೆ. ನಿರಂತರ ಕಲಿಕೆಯಿಂದಾಗಿ ಹೊಸ ಹೊಸ ತಂತ್ರಜ್ಞಾನಗಳನ್ನು ಕರಗತಮಾಡಿಕೊಂಡು ಮುನ್ನಡೆಯುವಲ್ಲಿ ಉದಯ್ ಪಡಿಯಾರ್ ಅವರು ಯಶಸ್ವಿಯಾಗಿದ್ದಾರೆ.

ಇದರೊಂದಿಗೆ ಕನ್ನಡದ ಹಲವು ಪತ್ರಿಕೆಗಳಿಗೆ ಚುಟುಕು ಹಾಗೂ ಕವನಗಳನ್ನ ಬರೆಯುವ ಹವ್ಯಾಸವನ್ನೂ ಬೆಳೆಸಿಕೊಂಡಿರುವುದು ಇವರ ಸಾಹಿತ್ಯಾಸಕ್ತಿಯನ್ನು ತೋರಿಸುತ್ತದೆ.ಪ್ರಸ್ತುತ ಬೈಂದೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವುದರೊಂದಿಗೆ ಸ್ಥಳೀಯ ಧಾರ್ಮಿಕ ಹಾಗೂ ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಸಾರಭಾರತಿ #PrasaraBharathi ಕೊಡಮಾಡುವ ಉತ್ತಮ ವರದಿಗೆ ರಾರಾಷ್ಟ್ರೀಯ ಪ್ರಶಸ್ತಿಯ ಗೌರವ, ಉತ್ತಮ ವರದಿಗಾರಿಕೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಹಾಗೆಯೇ ಈ ಟಿವಿಯ ಅನ್ನದಾತ ಕಾರ್ಯಕ್ರಮದಲ್ಲಿ ಸ್ಥಳೀಯ ಕುಂದಾಪುರ ಸೇರಿದಂತೆ #UttaraKannada ಉತ್ತರಕನ್ನಡದ ಕಾರವಾರ, ಯಲ್ಲಾಪುರ. ಹೊನ್ನಾವರ ಹಾಗೂ ಭಟ್ಕಳ ತಾಲೂಕು ಹಾಗೂ #Shivamogga ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ತಾಲೂಕುಗಳಲ್ಲಿ ಪ್ರಾಮಾಣಿಕ ವರದಿ ಹಾಗೂ ಅಪ್ರತಿಮ ಚಿತ್ರೀಕರಣದಿಂದಾಗಿ 150 ರಿಂದ 200ರ ವರೆಗೆ ಅನ್ನದಾತ ಕಾರ್ಯಕ್ರಮ ನಿರ್ವಹಿಸಿ ಗೌರವ ಸಂಪಾದಿಸಿಕೊಂಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಲೇಬೇಕು.ಸತತ 29 ವರ್ಷಗಳಿಂದ ದೂರದರ್ಶನದ ಚಂದನ ವಾಹಿನಿಯಲ್ಲಿ ಪ್ರತಿನಿಧಿಯಾಗಿ ಕೆಲಸ ನಿರ್ವಹಿಸುತ್ತಿರುವುದು ಅವರ ಕಾರ್ಯನಿಷ್ಠೆಗೆ ಸಂದ ಗೌರವ ಎನ್ನಬಹುದು.

ಇಂದು ಅವರು ಕೇವಲ ಸ್ಟುಡಿಯೋ ಮಾಲಕರಷ್ಟೇ ಅಲ್ಲ, ಸೃಜನಾತ್ಮಕ ಕಲಾವಿದನಾಗಿ ಹಾಗೂ ತಮ್ಮ ಕ್ಷೇತ್ರದಲ್ಲಿಯೇ ಅದ್ಭುತ ವಿಡಿಯೋಗ್ರಾಫರ್ ಆಗಿ ಗುರುತಿಸಿಕೊಂಡಿದ್ದಾರೆ. ತಮ್ಮ ಕ್ಯಾಮೆರಾ ಕಣ್ಣಿನ ಮೂಲಕ ಅನೇಕ ಕುಟುಂಬಗಳ ಸಂತೋಷದ ಕ್ಷಣಗಳನ್ನು ಶಾಶ್ವತ ನೆನಪಾಗಿ ಉಳಿಸುವಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಕರಾವಳಿಯ ಫೋಟೋಗ್ರಫಿ ಕ್ಷೇತ್ರದಲ್ಲಿ ತಮ್ಮದೇ ಆದ ಮುದ್ರೆಯನ್ನು ಛಾಪಿಸಿರುವ ಉದಯ್‌ಶಂಕರ್ ಪಡಿಯಾರ್ ಅವರ ಸಾಧನೆ, ಮುಂದಿನ ತಲೆಮಾರಿನ ಯುವಕರಿಗೆ ಪ್ರೇರಣೆಯಾಗಲಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

Tags: BhatkalbyndoorCoastal ArticleKannada News WebsiteKaravaliLatest News KannadaphotographyShivamoggaUday Shankar PadiyarUdupiUppundaUttara Kannadaಉದಯ್ ಶಂಕರ್ ಪಡಿಯಾರ್ಉಪ್ಪುಂದಫೋಟೋಗ್ರಫಿಬೈಂದೂರುವಿಡಿಯೋಗ್ರಫಿಶೃಂಗಾರ್ ಸ್ಟುಡಿಯೋ
Share208Tweet130Send
Previous Post

National Safety Week 2026 Observed at Carriage Repair Workshop, Hubballi

Next Post

ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಸಿಡಿಲು ಬಡಿದು 50 ಕುರಿಗಳು ಸಾವು

ಶಿವಮೊಗ್ಗ | ಸಿಡಿಲು ಬಡಿದು 50 ಕುರಿಗಳು ಸಾವು

May 18, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಬೆಂಗಳೂರು | ಹೂಡಿ ಹಾಲ್ಟ್ ನಿಲ್ದಾಣದಲ್ಲಿ ಮೆಮು ರೈಲುಗಳ ನಿಲುಗಡೆ ತಾತ್ಕಾಲಿಕ ರದ್ದು

May 18, 2026
ಬೆಳಗಾವಿಯಲ್ಲಿ ಬೆಂಗಳೂರು – ಲೋಕಮಾನ್ಯ ತಿಲಕ ಟರ್ಮಿನಸ್ ರೈಲಿಗೆ ಚಾಲನೆ

ಬೆಳಗಾವಿಯಲ್ಲಿ ಬೆಂಗಳೂರು – ಲೋಕಮಾನ್ಯ ತಿಲಕ ಟರ್ಮಿನಸ್ ರೈಲಿಗೆ ಚಾಲನೆ

May 18, 2026
ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು?

ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು?

May 18, 2026
ವಿಶ್ವ ಪರಿಸರ ದಿನ | ಬೆಂಗಳೂರು ರೈಲು ನಿಲ್ದಾಣದಲ್ಲಿ ಪ್ಲಾಗಿಂಗ್ ಅಭಿಯಾನ ಯಶಸ್ವಿ

ವಿಶ್ವ ಪರಿಸರ ದಿನ | ಬೆಂಗಳೂರು ರೈಲು ನಿಲ್ದಾಣದಲ್ಲಿ ಪ್ಲಾಗಿಂಗ್ ಅಭಿಯಾನ ಯಶಸ್ವಿ

May 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL