Friday, October 3, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉಡುಪಿ

‘ಪಂಚಮಿ ಪುರಸ್ಕಾರ-2025’ ಪ್ರಶಸ್ತಿಗೆ ನಟ ಮಂಡ್ಯ ರಮೇಶ್ ಆಯ್ಕೆ

October 15, 2024
in ಉಡುಪಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ಪಂಚಮಿ ಟ್ರಸ್ಟ್ (ರಿ),ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ ಕೊಡಮಾಡುವ ‘ಪಂಚಮಿ ಪುರಸ್ಕಾರ- 2025’ಕ್ಕೆ #Panchami Puraskara-2025 ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ #Mandya Ramesh ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಸಂಚಾಲಕ ಎಚ್. ಪಿ. ರವಿರಾಜ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುರಸ್ಕಾರವು ಗೌರವ ಧನ 1,00,000 (ಒಂದು ಲಕ್ಷ ರೂಪಾಯಿ)ಯೊಂದಿಗೆ ಪ್ರಶಸ್ತಿ ಪತ್ರ, ಪದಕ ಒಳಗೊಂಡಿದೆ. ಜನವರಿ ತಿಂಗಳಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ), ಉಡುಪಿಯ ಗೌರವಾಧ್ಯಕ್ಷರಾದ ಉಡುಪಿ ವಿಶ್ವನಾಥ ಶೆಣೈ, ಉಪಾಧ್ಯಕ್ಷರಾದ ನಾಗರಾಜ್ ಹೆಬ್ಬಾರ್ ಮತ್ತು ವಿಘ್ನೇಶ್ವರ ಅಡಿಗ , ಪುರಸ್ಕಾರ ಸಮಿತಿಯ ಸಂಯೋಜಕರಾದ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.

ಮಂಡ್ಯ ರಮೇಶ್ ಪರಿಚಯ

ಮಂಡ್ಯ ರಮೇಶ್ ನಟ, ನಿರ್ದೇಶಕ, ರಂಗಶಿಕ್ಷಕ, ರಂಗ ಸಂಘಟಕ ಹಾಗೂ ಕಿರುತೆರೆ-ಚಲನಚಿತ್ರಗಳ ಹಿರಿಯ ಕಲಾವಿದ. ಮೈಸೂರಿನ ನಟನ ಸಂಸ್ಥೆ ಹಾಗೂ ರಂಗಶಾಲೆಯ ಸ್ಥಾಪಕ. ಹಿರಿಯ ರಂಗಕರ್ಮಿ. ನೀನಾಸಂ ರಂಗ ಶಿಕ್ಷಣ ಕೇಂದ್ರದಲ್ಲಿ ಅಧ್ಯಯನ ಮತ್ತು ನೀನಾಸಂ ತಿರುಗಾಟದ ಮೊದಲ ಮೂರು ವರ್ಷಗಳ ಕಲಾವಿದ.
ಮೈಸೂರಿನ ರಂಗಾಯಣದಲ್ಲಿ ಬಿ.ವಿ.ಕಾರಂತರ ಗರಡಿಯಲ್ಲಿ ರಂಗಕಾಯಕ. ಪ್ರಸನ್ನ, ಜಂಬೆ, ಕೆ.ವಿ.ಸುಬ್ಬಣ್ಣ, ಫಿಟ್ಸ್ ಬೆನೆವಿಟ್ಸ್ ಮುಂತಾದ ಗಣ್ಯ ನಿರ್ದೇಶಕರೊಂದಿಗೆ ದುಡಿದ ಅನುಭವ. ಕೇಂದ್ರ ಸಂಸ್ಕೃತಿ ಇಲಾಖೆಯ ರಂಗತಜ್ಞರ ಸಮಿತಿ ಸದಸ್ಯರಾಗಿ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾಗಿ, ರಂಗಾಯಣದ ರಂಗಸಮಾಜದ ಸದಸ್ಯರಾಗಿ, ಕಾರ‍್ಯ ನಿರ್ವಹಣೆ.

Also read: ಮಹಿಳೆಯರ ಅವಹೇಳನ ಹಿನ್ನೆಲೆ ಟಿ.ಡಿ. ಮೇಘರಾಜ್ ಸದಸ್ಯ ಸ್ಥಾನ ಅನರ್ಹಗೊಳಿಸಿ

ಭಾರತದ ಪುಟ್ಟ ಹಳ್ಳಿ – ಮಹಾನಗರಗಳಾದಿಯಾಗಿ ಅಮೇರಿಕಾದ ನ್ಯೂಯಾರ್ಕ್, ಕ್ಯಾಲಿಫೋರ್ನಿಯ, ವಾಷಿಂಗ್ಟನ್ ಡಿ.ಸಿ., ಆಸ್ಟೇಲಿಯಾ, ಜರ್ಮನಿ, ಆಸ್ಟ್ರಿಯಾ, ಲಂಡನ್, ರ‍್ಲೆಂಡ್, ದುಬೈ, ನೇಪಾಳ, ಥೈಲ್ಯಾಂಡ್, ಸಿಂಗಾಪುರ್, ಶ್ರೀಲಂಕಾ, ಜಪಾನ್ ಮುಂತಾದ ಅನೇಕ ರಾಷ್ಟ್ರಗಳಲ್ಲಿ ನಾಟಕ ಪ್ರದರ್ಶನ , ಶಿಬಿರಗಳನ್ನು ನಡೆಸಿದ ಅನುಭವ. 2018ರ ನವೆಂಬರ್ ತಿಂಗಳಲ್ಲಿ ಜಪಾನ್‌ನಲ್ಲಿ ನಡೆದ ಕನ್ನಡ ಹಬ್ಬದಲ್ಲಿ ಪಾಲ್ಗೊಂಡು ರಂಗಭೂಮಿ ಮತ್ತು ಕನ್ನಡದ ಕುರಿತಾಗಿ ಉಪನ್ಯಾಸ ನೀಡಿದ್ದಾರೆ.

ಸಂಕ್ರಾಂತಿ, ಮಹಿಮಾಪುರ, ಮಾರನಾಯಕ, ಊರುಭಂಗ, ಯುಯುತ್ಸು, ಚೋರ ಚರಣದಾಸ, ಮಣ್ಣಿನಗಾಡಿ, ನಾಗಮಂಡಲ, ಅಗ್ನಿ ಮತ್ತು ಮಳೆ, ಚಾಮ ಚಲುವೆ, ಸುಭದ್ರಾ ಕಲ್ಯಾಣ, ಈ ಕೆಳಗಿನವರು, ಸಾಯೋ ಆಟ, ಅಲೀಬಾಬಾ ನಾಯಿತಿಪ್ಪ, ರತ್ನಪಕ್ಸಿ, ರಾಮ ರಹೀಮ, ಮೃಚ್ಛಕಟಿಕ, ಬೆತ್ತಲೆ ಅರಸನ ರಾಜರಹಸ್ಯ, ಕೃಷ್ಣೇಗೌಡರ ಆನೆ, ಸ್ಥಾವರವೂ ಜಂಗಮ ಮುಂತಾದ ಅಸಂಖ್ಯಾತ ನಾಟಕಗಳ ನಿರ್ದೇಶನ. ಜನುಮದ ಜೋಡಿ, ನಾಗಮಂಡಲ, ಕನಸುಗಾರ, ಅಮೃತಧಾರೆ, ಮಠ, ರನ್ನ, ಒಗ್ಗರಣೆ, ಕಿರಗೂರಿನ ಗಯ್ಯಾಳಿಗಳು, ದಿ ವಿಲನ್, ಯಜಮಾನ, ಡೇರ್ ಡೆವಿಲ್ ಮುಸ್ತಾಫ, ತಲೆದ಼ಂಡ, ಫಿಸಿಕ್ಸ್ ಟೀಚರ್, ಕ್ರಾಂತಿ… ಮುಂತಾದ 310ಕ್ಕೂ ಹೆಚ್ಚಿನ ಚಲನಚಿತ್ರಗಳಲ್ಲಿ ಮತ್ತು ಕಿರುತೆರೆಯಲ್ಲಿ ಅಸಂಖ್ಯ ಧಾರಾವಾಹಿಗಳು, ಮಜಾ ಟಾಕೀಸ್ ಇತ್ಯಾದಿ ಕಿರುತೆರೆಯ ಕಾಮಿಡಿ ಶೋಗಳಲ್ಲಿ ಅಭಿನಯಿಸಿದ್ದಾರೆ.

ನಾಗಮಂಡಲದಲ್ಲಿನ ಅಭಿನಯಕ್ಕೆ ರಾಜ್ಯಸರ್ಕಾರದ ಶ್ರೇಷ್ಠ ಪೋಷಕನಟ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ರಂಗಭೀಷ್ಮ, ಕರ್ನಾಟಕ ನಾಟಕ ಅಕಾಡೆಮಿಯ ಪ್ರಶಸ್ತಿ ಮುಂತಾದವುಗಳು. ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಂತರಾಷ್ಟ್ರೀಯ ಜ್ಯೂರಿಗಳ ವಿಶೇಷ ಮನ್ನಣೆಗೆ ಪಾತ್ರವಾದ ಉಪ್ಪಿನ ಕಾಗದ ಚಿತ್ರದ ಮುಖ್ಯ ಪಾತ್ರ.

http://kalpa.news/wp-content/uploads/2024/04/VID-20240426-WA0008.mp4

ಮೈಸೂರಿನಲ್ಲಿ ‘ನಟನ’ ರಂಗಶಾಲೆ ಜೊತೆಯಲ್ಲೇ ನಟನ ರಂಗಮಂದಿರ ಕಟ್ಟಿ, ನೂರಾರು ಕಲಾವಿದರನ್ನು ಬೆಳೆಸಿ ಮೈಸೂರಿನಲ್ಲಿ ರಂಗಕಾಯಕಕ್ಕೆ ಒಂದು ಪ್ರತಿಷ್ಠೆಯನ್ನು ತಂದುಕೊಟ್ಟಿರುವ ಅಪರೂಪದ ಸಾಂಸ್ಕೃತಿಕ ಸಾಧಕ ಇವರು. ಇಂಥ ರಂಗ ಸಾಧಕ ಮಂಡ್ಯ ರಮೇಶ್ ಅವರಿಗೆ 2017ರ ವಾರ್ಷಿಕ ಪ್ರಶಸ್ತಿಯನ್ನು ನೀಡಿ ಕರ್ನಾಟಕ ನಾಟಕ ಅಕಾಡೆಮಿಯು ಗೌರವಿಸಿದೆ.

ಮೈಸೂರು ವಿಶ್ವವಿದ್ಯಾನಿಲಯದ ಗುಬ್ಬಿ ವೀರಣ್ಣ ರಂಗಪೀಠಕ್ಕೆ ಎರಡನೇ ಅವಧಿಗೂ ಸಂದರ್ಶಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಕೇಂದ್ರ ಸಂಸ್ಕೃತಿ ಇಲಾಖೆಯಲ್ಲಿ ಅವಜ್ಞಿತ ಕಲಾ ಪರಂಪರೆ ತಜ್ಞರ ಸಮಿತಿ ಸದಸ್ಯರಾಗಿ ಕೂಡ ಕಾರ್ಯನಿರ್ವಹಿಸಿದ್ದಾರೆ.

ಮಂಡ್ಯ ರಮೇಶ್ ಅವರ ನೇತೃತ್ವದ ನಟನ ರಂಗಶಾಲೆಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಮಾನ್ಯತೆ ದೊರೆತಿದೆ. ಮೈಸೂರಿನಲ್ಲಿ ನಟನ ರಂಗಮಂದಿರ ನಿರ್ಮಿಸಿ, ನಟನ ರಂಗಶಾಲೆ, ನಟನ ಮಕ್ಕಳ ರಂಗಶಾಲೆಯನ್ನು ನಿರಂತರವಾಗಿ ಪೋಷಿಸಿಕೊಂಡು ಬರುತ್ತಿದ್ದಾರೆ. ಜೀ ಕನ್ನಡದ ಪ್ರತಿಷ್ಠಿತ ಕಾರ್ಯಕ್ರಮ ರಮೇಶ್ ಅರವಿಂದ್ ಅವರು ನಡೆಸಿಕೊಡುವ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ತಮ್ಮ ರಂಗಭೂಮಿ ಸಾಧನೆಗಾಗಿ ಸಾಧಕರ ಕುರ್ಚಿಯನ್ನು ಅಲಂಕರಿಸಿರುತ್ತಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: 'ಪಂಚಮಿ ಪುರಸ್ಕಾರ- 2025coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKaravali newsLatest News KannadaMandya RameshMangaloreNews_in_KannadaNews_KannadaPanchami Puraskara-2025Udupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡನಟ ಮಂಡ್ಯ ರಮೇಶ್ಮಂಗಳೂರು
Previous Post

ಮಹಿಳೆಯರ ಅವಹೇಳನ ಹಿನ್ನೆಲೆ ಟಿ.ಡಿ. ಮೇಘರಾಜ್ ಸದಸ್ಯ ಸ್ಥಾನ ಅನರ್ಹಗೊಳಿಸಿ

Next Post

ಟ್ರೈನಿ ವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣ | ಸುಬ್ಬಯ್ಯ ಕಾಲೇಜಿನಲ್ಲಿ ವೈದ್ಯರಿಂದ ಒಂದು ದಿನ ಉಪವಾಸ ಸತ್ಯಾಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಟ್ರೈನಿ ವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣ | ಸುಬ್ಬಯ್ಯ ಕಾಲೇಜಿನಲ್ಲಿ ವೈದ್ಯರಿಂದ ಒಂದು ದಿನ ಉಪವಾಸ ಸತ್ಯಾಗ್ರಹ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಂಬು ಕಡಿದ ತಹಶೀಲ್ದಾರ್ ರಾಜೀವ್ | ಶಿವಮೊಗ್ಗ ದಸರಾಗೆ ವೈಭವದ ತೆರೆ | ಚಿತ್ರಗಳಲ್ಲಿ ನೋಡಿ

October 2, 2025

ಭೋಪಾಲ್ | 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ವೈಫಲ್ಯದಿಂದ ಸಾವು

October 2, 2025
Image Courtesy: Internet

ನವರಾತ್ರಿಯಲ್ಲಿ ಶ್ರೀನಿವಾಸ ಕಲ್ಯಾಣ ವಿಶೇಷ ಏನು ಗೊತ್ತಾ?

October 2, 2025

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ

October 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಂಬು ಕಡಿದ ತಹಶೀಲ್ದಾರ್ ರಾಜೀವ್ | ಶಿವಮೊಗ್ಗ ದಸರಾಗೆ ವೈಭವದ ತೆರೆ | ಚಿತ್ರಗಳಲ್ಲಿ ನೋಡಿ

October 2, 2025

ಭೋಪಾಲ್ | 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ವೈಫಲ್ಯದಿಂದ ಸಾವು

October 2, 2025
Image Courtesy: Internet

ನವರಾತ್ರಿಯಲ್ಲಿ ಶ್ರೀನಿವಾಸ ಕಲ್ಯಾಣ ವಿಶೇಷ ಏನು ಗೊತ್ತಾ?

October 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!