No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಸದ್ವಿಚಾರಗಳ ಮೂಲಕ ಸಮಾಜ ಬೆಸೆಯುವ ಕಾರ್ಯವಾಗಲಿ: ಪುತ್ತಿಗೆ ಶ್ರೀಗಳ ಆಶಯ

'ಕರಾವಳಿ ವಿಕಾಸ ಸಂಭ್ರಮ'- ಸಮಾಜವನ್ನು ಒಗ್ಗೂಡಿಸುವಲ್ಲಿ ಅರ್ಥಪೂರ್ಣ ಪ್ರಯತ್ನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 8, 2025
in ಉಡುಪಿ
0
ಸದ್ವಿಚಾರಗಳ ಮೂಲಕ ಸಮಾಜ ಬೆಸೆಯುವ ಕಾರ್ಯವಾಗಲಿ: ಪುತ್ತಿಗೆ ಶ್ರೀಗಳ ಆಶಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ಮಾಧ್ಯಮಗಳಲ್ಲಿ ಸದ್ವಿಚಾರಗಳು ಮೂಡಿಬಂದು ಸಮಾಜವನ್ನು ಬೆಸೆಯುವ ಕಾರ್ಯವಾಗಬೇಕು ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಅಭಿಪ್ರಾಯ ವ್ಯಕ್ತಪಡಿಸಿದರು.

ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ‘ಸುಗುಣಮಾಲಾ’ ಮಾಸಪತ್ರಿಕೆ ಹಾಗೂ ಬೆಂಗಳೂರಿನ ಸಮಾನ ಮನಸ್ಕ ಮಾಧ್ಯಮ ಮಿತ್ರರ ವೇದಿಕೆ ‘ವಿಕಾಸ’ ನೇತೃತ್ವದಲ್ಲಿ ಶನಿವಾರ ಗೀತಾ ಮಂದಿರದ ಪುತ್ತಿಗೆ ಶ್ರೀನೃಸಿಂಹ ಸಭಾಭವನದಲ್ಲಿ ನಡೆದ ‘ಕರಾವಳಿ ವಿಕಾಸ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಬ್ರಾಹ್ಮಣ ಸಮುದಾಯದ ಬಗ್ಗೆ ಕೆಲವರು ತಪ್ಪು ಅಭಿಪ್ರಾಯ ಹೊಂದಿದ್ದಾರೆ. ಅದು ಸರಿಯಲ್ಲ. ಅದನ್ನು ಹೋಗಲಾಡಿಸಲು ಮಾಧ್ಯಮ ಕ್ಷೇತ್ರದಲ್ಲಿರುವ ವಿಪ್ರ ಪತ್ರಕರ್ತರೆಲ್ಲರೂ ಒಂದಾಗಬೇಕು ಎಂದು ಶ್ರೀಪಾದರು ಆಶಿಸಿದರು. ಪರ್ಯಾಯ ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಿದ್ದರು.

ಶಾಸಕ ಯಶಪಾಲ್ ಸುವರ್ಣ, ಮಾಜಿ ಶಾಸಕ ರಘುಪತಿ ಭಟ್, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ ಕಾರ್ಣಿಕ್, ಉದ್ಯಮಿ ರಘುನಾಥ ಸೋಮಯಾಜಿ ಮುಖ್ಯ ಅಭ್ಯಾಗತರಾಗಿ ಆಗಮಿಸಿ ಶುಭ ಹಾರೈಸಿದರು. ಪತ್ರಕರ್ತರಾದ ಪ್ರಕಾಶ್ ಇಳಂತಿಲ ಮತ್ತು ಜಿತೇಂದ್ರ ಕುಂದೇಶ್ವರ ಅಭ್ಯಾಗತರಾಗಿದ್ದರು.ಈ ಸಂದರ್ಭದಲ್ಲಿ ‘ಉಡುಪಿ ಶ್ರೀಕೃಷ್ಣ ಪೂಜಾ ಪರ್ಯಾಯ ವೈಭವ’ ಮತ್ತು ಶ್ರೀ ಶ್ರೀ ಸುಜ್ಞಾನೇಂದ್ರತೀರ್ಥ ಶ್ರೀಪಾದರು (ಸಂಪಾದಕ- ಓಂಪ್ರಕಾಶ್ ಭಟ್ ಉಡುಪಿ) ಕೃತಿ ಹಾಗೂ ಇಂದಿರಾ ನಾಡಿಗ್ ಅವರ ‘ಹಸಿಗನಸು’ ಕಾದಂಬರಿಯನ್ನು ಕಸಾಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು, ಆದಿತ್ಯ ಪ್ರಸಾದ್ ಅವರ ‘ಗೋಪಾಳದಿಂದ ನೇಪಾಳದೆಡೆಗೆ’ ಪ್ರವಾಸ ಕಥನವನ್ನು ಕಿನ್ನಿಗೋಳಿ ‘ಯುಗಪುರುಷ’ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಹಾಗೂ ಆಸ್ಟ್ರೇಲಿಯಾದ ಉಮೇಶ್ ದತ್ ಹಿಂದೂ ಧರ್ಮದ ಆಚರಣೆಗಳಿಗೆ ವೈಜ್ಞಾನಿಕ ತಳಹದಿಯ ಸಂಶೋಧನಾ ಪುಸ್ತಕ ‘ದಿ ಅಸ್ಟ್ರೋ ಕೊಡೆಸ್ಟ್ಸ್’ ಅನಾವರಣಗೊಳಿಸಲಾಯಿತು.

ಕಳೆದ 40 ವರ್ಷಗಳಿಂದ ಪುತ್ತಿಗೆ ಮಠದಿಂದ ಪ್ರಕಟವಾಗುತ್ತಿರುವ ಆಧ್ಯಾತ್ಮಿಕ ಮಾಸಪತ್ರಿಕೆ ‘ಸುಗುಣಮಾಲಾ ನಡೆದುಬಂದ ದಾರಿ’ ಕುರಿತು ಸಂಪಾದಕೀಯ ಸಲಹಾ ಮಂಡಳಿ ಸದಸ್ಯ ಓಂ ಪ್ರಕಾಶ್ ಭಟ್ ಮಾತನಾಡಿದರು. ಪುತ್ತಿಗೆ ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ವಿದ್ವಾನ್ ಎಂ. ಪ್ರಸನ್ನ ಆಚಾರ್ಯ, ಸುಗುಣಮಾಲಾ ಸಂಪಾದಕ ಮಹಿತೋಷ ಆಚಾರ್ಯ ಉಪಸ್ಥಿತರಿದ್ದರು.

‘ವಿಕಾಸ’ ಅಧ್ಯಕ್ಷ ಶ್ರೀನಾಥ ಜೋಶಿ ಮತ್ತು ಪ್ರಧಾನ ಕಾರ್ಯದರ್ಶಿ ಹನುಮೇಶ್ ಕೆ. ಯಾವಗಲ್ ವೇದಿಕೆಯಲ್ಲಿದ್ದರು. ಪ್ರಣವ ಮೀಡಿಯಾ ಹೌಸ್’ನ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಯೋಗ ಥೆರಪಿಸ್ಟ್ ಸ್ಫೂರ್ತಿ ಯಾವಗಲ್ ಅವರಿಂದ ಪ್ರಾರ್ಥನಾ ಕಥಕ್ ನೃತ್ಯ ನಡೆಯಿತು.ಈ ಸಂದರ್ಭದಲ್ಲಿ ‘ವಿಕಾಸ ಉಡುಪಿ ಶ್ರೀಕೃಷ್ಣ ಸದ್ಭಾವನಾ ಪ್ರಶಸ್ತಿ’ಯನ್ನು ಹಿರಿಯ ಭರತನಾಟ್ಯ ಕಲಾವಿದೆ ವಿದುಷಿ ಗಾಯತ್ರಿ ಚಂದ್ರಶೇಖರ್ ಮತ್ತು ದ್ರಾವಿಡ ವಿಶ್ವವಿದ್ಯಾಲಯದ ಡೀನ್ ಪ್ರೊ. ಬಿ.ಎಸ್. ಶಿವಕುಮಾರ್ ಅವರಿಗೆ, ವೈದ್ಯಲೋಕ- ಹೆಲ್ತ್ ವಿಷನ್ ಪ್ರಾಯೋಜಿತ ‘ವಿಕಾಸ ವೈದ್ಯರತ್ನ’ ಪ್ರಶಸ್ತಿಯನ್ನು ಡಾ.ಆನಂದ ಶೇಡ್ಬಾಳ, ಸಂಪದ ಸಾಲು ಪ್ರಾಯೋಜಿತ ‘ವಿಕಾಸ ಸಂಗೀತ ರತ್ನ’ ಪ್ರಶಸ್ತಿಯನ್ನು ವಿದುಷಿ ಪವನಾ ಬಿ. ಆಚಾರ್ ಮಣಿಪಾಲ ಅವರಿಗೆ ನೀಡಿ ಪುರಸ್ಕರಿಸಲಾಯಿತು.

‘ಮಾಧ್ಯಮ ಲೋಕದ ಸವಾಲುಗಳು’ ಕುರಿತ ವಿಚಾರಗೋಷ್ಠಿಯಲ್ಲಿ ಮಣಿಪಾಲ ಮಾಹೆ ಪ್ರೊ. ಸತ್ಯಬೋಧ ಜೋಶಿ, ಹಿರಿಯ ಪತ್ರಕರ್ತರಾದ ನಿತ್ಯಾನಂದ ಎಸ್. ಪಡ್ರೆ ಮತ್ತು ಡಾ.ಆಶಾ ಕೃಷ್ಣಸ್ವಾಮಿ ವಿಚಾರ ಮಂಡಿಸಿದರು. ಪತ್ರಕರ್ತ ಲಕ್ಷ್ಮೀ ಮಚ್ಚಿನ ನಿರೂಪಿಸಿದರು.

ಸ್ಮಾರಕ ಪ್ರಶಸ್ತಿ
ಹಲವಾರು ಹಿರಿಯ ಪತ್ರಕರ್ತರ ಸ್ಮರಣಾರ್ಥ ನೀಡುವ ‘ವಿಕಾಸ ಮಾಧ್ಯಮ ಸಾಧಕ ಪ್ರಶಸ್ತಿ’ಗಳಾದ ಪಾ.ವೆಂ. ಆಚಾರ್ಯ ಸ್ಮರಣಾರ್ಥ ಪ್ರಶಸ್ತಿ- ಕಿರಣ್ ಮಂಜನಬೈಲು ಉಡುಪಿ, ಬನ್ನಂಜೆ ಗೋವಿಂದಾಚಾರ್ಯ ಸ್ಮರಣಾರ್ಥ ಪ್ರಶಸ್ತಿ- ಡಾ.ಮಂದಾರ ರಾಜೇಶ ಭಟ್ ಮೂಡುಬಿದಿರೆ, ಬನ್ನಂಜೆ ರಾಮಾಚಾರ್ಯ ಸ್ಮರಣಾರ್ಥ ಪ್ರಶಸ್ತಿ- ಸಾಂತೂರು ಶ್ರೀನಿವಾಸ ತಂತ್ರಿ ಉಜಿರೆ, ದಾಮೋದರ ಕಕ್ರಣ್ಣಾಯ ಸ್ಮರಣಾರ್ಥ ಪ್ರಶಸ್ತಿ- ಚಂದ್ರಶೇಖರ ಕುಳಮರ್ವ ಮಂಗಳೂರು (ಉಪಯುಕ್ತ ನ್ಯೂಸ್ ಸಂಪಾದಕರು), ಸಂತೋಷ್ ಕುಮಾರ್ ಗುಲ್ವಾಡಿ ಸ್ಮರಣಾರ್ಥ ಪ್ರಶಸ್ತಿ- ವೆಂಕಟೇಶ ಪೈ ಬೆಂಗಳೂರು, ದಾಮೋದರ ಐತಾಳ ಸ್ಮರಣಾರ್ಥ ಪ್ರಶಸ್ತಿ- ಶ್ವೇತ ಇಂದಾಜೆ ಮಂಗಳೂರು, ಕೊಡೆತ್ತೂರು ಅನಂತಪದ್ಮನಾಭ ಉಡುಪ ಸ್ಮರಣಾರ್ಥ ಪ್ರಶಸ್ತಿ- ಶ್ಯಾಮ್ ಹೆಬ್ಬಾರ್ ಬೆಂಗಳೂರು, ಈಶ್ವರಯ್ಯ ಅನಂತಪುರ ಸ್ಮರಣಾರ್ಥ ಪ್ರಶಸ್ತಿ- ಶ್ರೀಕೃಷ್ಣ ಭಟ್ ಮಾಯ್ಲೆಂಗಿ ಹಾಗೂ ಮಂಜುನಾಥ ಭಟ್ ಸ್ಮರಣಾರ್ಥ ಪ್ರಶಸ್ತಿ- ಹರೀಶ್ ಕೆ. ಆದೂರು ಮೂಡುಬಿದಿರೆ ಅವರಿಗೆ ಸಾಹಿತಿ ಡಾ. ವೀಣಾ ಬನ್ನಂಜೆ ಮತ್ತು ಪುತ್ತಿಗೆ ಮಠದ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಪ್ರದಾನಿಸಿದರು. ಕ್ಯಾ. ಗಣೇಶ ಕಾರ್ಣಿಕ್, ಪತ್ರಕರ್ತ ಶ್ರೀನಿವಾಸ ನಾಯಕ್ ಇಂದಾಜೆ ಹಾಗೂ ಸುಧೀಂದ್ರ ಪ್ರಸಾದ್ ಇದ್ದರು.

‘ನಮ್ಮ ಹಿರಿಯರು- ನಮ್ಮ ಹೆಮ್ಮೆ’ ವಿಭಾಗದಲ್ಲಿ ವಿಜಯಕುಮಾರ್ ಹೊಳ್ಳ ಕೋಟ, ರಾಮಕೃಷ್ಣ ಮೈರುಗ ಕಾಸರಗೋಡು, ಜಿ.ಕೆ. ಭಟ್, ರಾಮಚಂದ್ರ ಆಚಾರ್ಯ ಪಡುಬಿದ್ರಿ, ಲಕ್ಷ್ಮಿ ಮಚ್ಚಿನ ಕುಂದಾಪುರ ಅವರನ್ನು ಗೌರವಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: coastal newsKannada News WebsiteKaravali newsKaravali Vikasa SambhramaLatest News KannadaMediaPuttige MathaUdupiVikasaಉಡುಪಿಕರಾವಳಿ ವಿಕಾಸ ಸಂಭ್ರಮಬ್ರಾಹ್ಮಣ ಸಮುದಾಯಮಾಧ್ಯಮಶ್ರೀ ಪುತ್ತಿಗೆ ಮಠಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರುಶ್ರೀಕೃಷ್ಣ ಮಠಸುಗುಣಮಾಲಾ
Share197Tweet123Send
Previous Post

ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ | ಸುಪ್ರೀಂ ಕೋರ್ಟ್ ನೋಟೀಸ್ | ಪ್ರಕರಣವೇನು?

Next Post

ಚಾಮರಾಜನಗರ, ನಂಜನಗೂಡು ಸೇರಿ ಹಲವು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಡಿಆರ್’ಎಂ ಭೇಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಾಮರಾಜನಗರ, ನಂಜನಗೂಡು ಸೇರಿ ಹಲವು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಡಿಆರ್’ಎಂ ಭೇಟಿ

ಚಾಮರಾಜನಗರ, ನಂಜನಗೂಡು ಸೇರಿ ಹಲವು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಡಿಆರ್'ಎಂ ಭೇಟಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

May 21, 2026
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

May 21, 2026
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL