ಕಲ್ಪ ಮೀಡಿಯಾ ಹೌಸ್ | ಉಡುಪಿ |
ಮೂವರು ಮಕ್ಕಳು ಸೇರಿದಂತೆ ನಾಲ್ವರನ್ನು ಬರ್ಬರವಾಗಿ ಹತ್ಯೆ #Murder ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಅರುಣ್ ಚೌಗಲೆ(39) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ತನಿಖೆ ಮಹತ್ವದ ಹಂತ ತಲುಪಿದೆ.
ಪ್ರಕರಣದ ಬೆನ್ನು ಹತ್ತಿದ ಉಡುಪಿ #Udupi ಪೊಲೀಸರು, ಸಿಸಿಟಿವಿ ದೃಶ್ಯಾವಳಿ #CCTV ಹಾಗೂ ಫೋನ್ ಕರೆಗಳ ಜಾಡು ಹಿಡಿದು ಮಹಾರಾಷ್ಟ್ರದ #Maharastra ಸಾಂಗ್ಲಿ ಮೂಲದ ಶಂಕಿತ ವ್ಯಕ್ತಿಯನ್ನು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ವಶಕ್ಕೆ ಪಡೆದು ವಿಚಾರಣೆ ಒಳಪಡಿಸಿದ್ದಾರೆ.
ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಡಾ.ಕೆ. ಅರುಣ್, ಪ್ರಕರಣಕ್ಕೆ ಸಂಬಂಧಿಸಿ ಐದು ತಂಡಗಳನ್ನು ರಚನೆ ಮಾಡಿ ವಿವಿಧ ಆಯಮಗಳಲ್ಲಿ ತನಿಖೆ ನಡೆಸಲಾಗಿತ್ತು. ಮಾಹಿತಿಯಂತೆ ಆರೋಪಿಯನ್ನು ಕುಡುಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದು ಉಡುಪಿಗೆ ಕರೆದುಕೊಂಡು ಬರಲಾಗಿದೆ. ಇದೀಗ ಆತನನ್ನು ವಿಚಾರಣೆಗೊಳಪಡಿಸಿದ್ದು ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ ಎಂದರು.
ವಿಚಾರಣೆಯಲ್ಲಿ ಈ ಕೊಲೆ ಪ್ರಕರಣದಲ್ಲಿ ಆತನ ಪಾತ್ರ ಕಂಡುಬಂದಲ್ಲಿ ಆತನನ್ನು ಬಂಧಿಸಿ ಕಾನೂನು ಪ್ರಕಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದರು.
ಕೆಲವೊಂದು ತಾಂತ್ರಿಕ ಹಾಗೂ ಗುಪ್ತಚರ ಮಾಹಿತಿಯಂತೆ ಈ ವ್ಯಕ್ತಿ ಮೇಲೆ ಅನುಮಾನಗೊಂಡು ವಶಕ್ಕೆ ಪಡೆದುಕೊಳ್ಳಲಾಗಿದೆ. ಆತನ ವಿಚಾರಣೆಯಿಂದ ಕೊಲೆಗೆ ಕಾರಣ ಸೇರಿದಂತೆ ಹಲವು ಮಾಹಿತಿಗಳು ದೊರೆಯಲಿದೆ. ವಿಚಾರಣೆ ಮುಗಿದ ಬಳಿಕ ಕಾನೂನು ಪ್ರಕಾರ ಆತನನ್ನು ನ್ಯಾಯಕ್ಕೆ ಹಾಜರುಪಡಿಸಲಾಗುವುದು ಎಂದವರು ತಿಳಿಸಿದರು.
ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಸುಮಾರು 20 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post