ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಉಡುಪಿ: ದೇಶದಲ್ಲಿ ಸಂಪೂರ್ಣವಾಗಿ ಅನ್’ಲಾಕ್ ಆದ ನಂತರವಷ್ಟೇ ಉಡುಪಿ ಶ್ರೀ ಕೃಷ್ಣ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದಂಗಳವರು ಹೇಳಿದ್ದಾರೆ.
ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ದೇಶದಲ್ಲಿ ಕೊರೋನಾ ಅನಾಹುತಗಳು ಕಡಿಮೆಯಾಗಿ ಪರಿಸ್ಥಿತಿ ಸುಧಾರಿಸಿದ ನಂತರವಷ್ಟೇ ಶ್ರೀಮಠಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗುವುದು ಎಂದರು.
ಇನ್ನು, ದೇಶಕ್ಕೆ ಬಂದೊರಗಿರುವ ಈ ಮಹಾಮಾರಿಯನ್ನು ಹೋಗಲಾಡಿಸಲು ಮಠದಲ್ಲಿ ಋತ್ವಿಜರು ಪ್ರತಿನಿತ್ಯ ಪ್ರಾರ್ಥನೆ ಹಾಗೂ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ ಎಂದರು.
Get In Touch With Us info@kalpa.news Whatsapp: 9481252093
Discussion about this post