ಕಲ್ಪ ಮೀಡಿಯಾ ಹೌಸ್ | ಉಡುಪಿ |
ಮುರುಘಾ ಶ್ರೀ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಹಳ ದಿನಗಳ ನಂತರ ಮೌನ ಮುರಿದಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ B S Yadiyurappa ಅವರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಲ್ಲೂರಿಗೆ ಭೇಟಿ ನೀಡಿದ ವೇಳೆ ಮಾತನಾಡಿರುವ ಅವರು, ಚಿತ್ರದುರ್ಗದ ಮುರುಘಾ ಶ್ರೀ ಮಾಡಿರುವುದು ಕ್ಷಮಿಸಲಾರದ ಅಕ್ಷಮ್ಯ ಅಪರಾಧ. ಅವರು ಇಷ್ಟು ಕೆಳ ಮಟ್ಟಕ್ಕೆ ಇಳಿಯುತ್ತಾರೆ ಎಂದು ಯಾರೂ ಸಹ ನಿರೀಕ್ಷೆ ಮಾಡಿರಲಿಲ್ಲ. ಇದು ಅತ್ಯಂತ ಅಕ್ಷಮ್ಯ ಅಪರಾಧವಾಗಿದ್ದು, ಇವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಕಿಡಿ ಕಾರಿದರು.
Also read: ಗಮನಿಸಿ! ನ.9ರಂದು ಶಿವಮೊಗ್ಗದ ವಿವಿಧೆಡೆ ವಿದ್ಯುತ್ ಇರುವುದಿಲ್ಲ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post