No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Thursday, February 19, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಆನಂದ ಕಂದ

ಮರೆಯಲಾಗದ ಉದ್ಯಮ ರತ್ನ `ರತನ್ ಟಾಟಾ’

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 7, 2024
in ಆನಂದ ಕಂದ
0
ಮರೆಯಲಾಗದ ಉದ್ಯಮ ರತ್ನ `ರತನ್ ಟಾಟಾ’
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಆನಂದಕಂದ ಲೇಖನ ಮಾಲಿಕೆ-12  |
ಭಾರತೀಯರಿಗೂ ಹಾಗೂ ಆ ಹೆಸರಿಗೂ ಒಂದು ರೀತಿಯ ಅವಿನಾಭಾವ ಸಂಬಂಧ ಯಾವುದಾದರೂ ಒಂದು ರೀತಿಯಲ್ಲಿ ಇದ್ದೇ ಇರುತ್ತದೆ. ಯಾಕೆಂದರೆ ಆ ಹೆಸರಿನ ಮೌಲ್ಯವೇ ಅಂತಹುದ್ದು… ಅದೇ ಟಾಟಾ… ಅಂದರೆ ಹೆಮ್ಮೆಯ ರತನ್ ಟಾಟಾ.

ಹೌದು… ದೇಶದ ಎಲ್ಲರ ಮನೆಯಲ್ಲೂ ಕೂಡ ಒಂದಾದರು ಟಾಟಾ ಉತ್ಪನ್ನ ಇದ್ದೇ ಇರುತ್ತದೆ. ಕಾರಣ ಈ ಸಂಸ್ಥೆಯ ಸೇವೆಯೇ ಅಂತಹುದ್ದು.

ಮೂಲತಃವಾಗಿ ಟಾಟಾ ಸಂಸ್ಥೆಯನ್ನು ಅಷ್ಟು ಉನ್ನತ ಮಟ್ಟಕ್ಕೆ ಕರೆದೊಯ್ದವರು ರತನ್ ನೇವಲ್ ಟಾಟಾ. ಇವರು ಭಾರತದ ಅತ್ಯಂತ ಗೌರವಾನ್ವಿತ ದೂರದೃಷ್ಟಿಯ ವ್ಯಾಪಾರ ನಾಯಕರಲ್ಲಿ ಓರ್ವರು.

ಪ್ರತಿಷ್ಠಿತ ಟಾಟಾ ಕುಟುಂಬದಲ್ಲಿ ಡಿಸೆಂಬರ್ 28, 1937 ರಂದು ಜನಿಸಿದ ಇವರು ಟಾಟಾ ಸಮೂಹವನ್ನು ಸಂಘಟಿತ ಸಂಸ್ಥೆಯನ್ನಾಗಿ ಮಾಡಲು ಪ್ರಮುಖ ಪಾತ್ರ ವಹಿಸಿದರು. ಇವರ ಮಾರ್ಗದರ್ಶನದಲ್ಲಿ ಟಾಟಾ ಸಂಸ್ಥೆಯ ವಾಹನ, ಉಕ್ಕು, ತಂತ್ರಜ್ಞಾನ ಮತ್ತು ತಂಡ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗಳನ್ನು ಮಾಡಿದೆ. ರತನ್ ಟಾಟಾ ಅವರ ತಂದೆ ನೇವಲ್ ಟಾಟಾ ಭಾರತದ ವಾಯುಯಾನ ಉದ್ಯಮದ ಸಂಸ್ಥಾಪಕ ಜೆಆರ್’ಡಿ ಟಾಟಾ ಅವರ ಕಿರಿಯ ಸಹೋದರ.
ರತನ್ ಟಾಟಾ ಅವರು ತಮ್ಮ ಶಾಲಾ ಶಿಕ್ಷಣವನ್ನು ಮುಂಬೈನ ಕ್ಯಾಂಪಿಯನ್ ಶಾಲೆಯಲ್ಲಿ 8ನೇ ತರಗತಿಯವರೆಗೆ ಪೂರ್ಣಗೊಳಿಸಿದರು. ನಂತರ ಅವರು ಮುಂಬೈನ ಕ್ಯಾಥೆಡ್ರಲ್ ಮತ್ತು ಜಾನ್ ಕಾನನ್ ಶಾಲೆ, ಬಪ್ ಕಾಟನ್ ಶಾಲೆ ಮತ್ತು ನ್ಯೂಯಾರ್ಕ್ ನಗರದ ರಿವರ್ಡೇಲ್ ಕಂಟ್ರಿ ಸ್ಕೂಲಿನಲ್ಲಿ ತಮ್ಮ ಅಧ್ಯಯನವನ್ನು ಮುಂದುವರೆಸಿದರು. ತರುವಾಯ, ಅವರು ಯುನೈಟೆಡ್ ಸ್ಟೇಟ್ ಕಾರ್ವೆಲ್ ವಿಶ್ವವಿದ್ಯಾನಿಲಯದಲ್ಲ ತಮ್ಮ ಪದವಿ ಪೂರ್ವ ಅಧ್ಯಯನವನ್ನು ಮುಂದುವರೆಸಿದರು.

ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ ಅವರು 1961ರಲ್ಲಿ ಟಾಟಾ ಗ್ರೂಪ್ ಸೇರಿದರು. 2008ರಲ್ಲಿ ಫೋರ್ಡ್ ಮೋಟಾರ್ ಕಂಪೆನಿಯಿಂದ ಜಾಗ್ವಾರ್ ಲ್ಯಾಂಡ್ ರೋವರ್ ಅನ್ನು ಸ್ವಾಧೀನಪಡಿಸಿಕೊಂಡಿದ್ದು ರತನ್ ಟಾಟಾ ಅವರ ಅತ್ಯಂತ ಗಮನಾರ್ಹ ಸಾಧನೆಗಳಲ್ಲಿ ಒಂದಾಗಿದೆ.

ಇದರೊಂದಿಗೆ ಟೆಟ್ಲಿ ಟೀ ಮತ್ತು ಕೋರಸ್ ಆಂಗ್ಲೋ ಡಚ್ ಕಂಪೆನಿಯನ್ನು ಟಾಟಾ ಸ್ಟೀಲ್ ಸ್ವಾಧೀನಪಡಿಸಿಕೊಂಡಿದ್ದ ಮತ್ತೊಂದು ಪ್ರಮುಖ ಸಾಧನೆ. ಇದು ಟಾಟಾ ಗ್ರೂಪ್ ಅನ್ನು ಜಾಗತಿಕ ನಕ್ಷೆಯಲ್ಲಿ ಇರಿಸಿತು.

ಮಧ್ಯಮ ವರ್ಗದವರು ಮೂರ್ನಾಲ್ಕು ಜನ ಒಂದೇ ಬೈಕ್’ನಲ್ಲೇ ಹೋಗುತ್ತಿದ್ದನ್ನು ನೋಡಿದ ರತನ್ ಟಾಟಾ ಅವರು ಜನಸಾಮಾನ್ಯರಿಗೂ ಕೈಗೆಟುಕುವ ದರದಲ್ಲಿ ನ್ಯಾನೋ ಮತ್ತು ಇಂಡಿಕಾ ಕಾರುಗಳನ್ನು ನಿರ್ಮಿಸಿದರು. ಇದು ನವೀನ ಮನೋಭಾವ ಮತ್ತು ಸಾಮಾಜಿಕ ಜವಾಬ್ದಾರಿಗೆ ಅವರ ಬದ್ಧತೆಗೆ ಉದಾಹರಣೆಯಾಗಿದೆ.
ಅವರ ವ್ಯಾಪಾರ ಸಾಧನೆಗಳ ಹೊರತಾಗಿ, ರತನ್ ಟಾಟಾ ಅವರು ತಮ್ಮ ಸರಳ ವ್ಯಕ್ತಿತ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಅವರ ಹತ್ತಿರ ಎಷ್ಟೇ ಕೋಟಿ ಕೋಟಿ ಸಂಪತ್ತಿದ್ದರೂ ಸರಳತೆಯಿಂದ ಜೀವಿಸುತ್ತಿದ್ದರು. ಸಾಮಾನ್ಯ ಒಂದು ಅಪಾಟ್ಮೆಂಟ್’ನಲ್ಲಿ ಒಂಟಿಯಾಗಿ ತಮ್ಮ ಎರಡು ಜರ್ಮನ್ ಶೆಫರ್ಡ್ ನಾಯಿಗಳ ಜೊತೆ ಜೀವಿಸುತ್ತಿದ್ದರು. ಅವರ ಜೀವನ ಶೈಲಿ ತುಂಬಾ ಸರಳವಾಗಿತ್ತು. ಅವರು ಯಾವಾಗಲೂ ವೈಯಕ್ತಿಕ ಲಾಭಕ್ಕಿಂತ ಹೆಚ್ಚಾಗಿ ಇತರರ ಕಲ್ಯಾಣವನ್ನು ಬಯಸುತ್ತಿದ್ದರು.

ಮುಂಬೈನ ತಾಜ್ ಹೋಟೆಲ್ ಭಯೋತ್ಪಾದಕರ ದಾಳಿಗೆ ತುತ್ತಾದಾಗ ಹೊಟೇಲಿನ ನೌಕರರಿಗೆ ಅವರೇ ಕುತ್ತಾಗಿ ನೌಕರರ ಸಂಬಳವನ್ನು ಕೊಟ್ಟಿದ್ದರು. ಅಲ್ಲದೇ, ಅಲ್ಲಿಯೇ ಅಕ್ಕಪಕ್ಕ ತಿಂಡಿ ತಿನಿಸುಗಳನ್ನು ಮತ್ತು ಇತ್ಯಾದಿಗಳನ್ನು ಮಾರುತ್ತಿದ್ದವರಿಗೂ ಕೂಡ ಧನ ಸಹಾಯ ಮಾಡಿದ್ದರು. ಇದರಿಂದ ಅವರು ಎಷ್ಟು ಕರುಣಾಶಾಲಿ ಮನುಷ್ಯ ಎಂದು ತಿಳಿಯುತ್ತದೆ. ಹೀಗೆ ಅವರು ಪ್ರಪಂಚದಾದ್ಯಂತ ಜನರ ಗೌರವ ಮತ್ತು ಮೆಚ್ಚುಗೆಯನ್ನು ಗಳಿಸಿದ್ದಾರೆ.
ಭಾರತೀಯ ಉದ್ಯಮ ಮತ್ತು ಸಮಾಜಕ್ಕೆ ರತನ್ ಟಾಟಾ ಅವರ ಕೊಡುಗೆಗಳನ್ನು ವ್ಯಾಪಕ ಗುರುತಿಸಲಾಗಿದೆ. ಇವರ ಇಂತಹ ಸಾಧನೆಗಳನ್ನು ಗುರುತಿಸಿ ಹಲವಾರು ಪುರಸ್ಕಾರಗಳು ಇವರನ್ನು ಅಲಂಕರಿಸಿವೆ. ಕೆಲವು ಪ್ರತಿಷ್ಠಿತ ಪಶಸ್ತಿಗಳು 2000ರಲ್ಲಿ ಪದ್ಮಭೂಷಣ, 2008ರಲ್ಲಿ ಪದ್ಮವಿಭೂಷಣ, ಸೇರಿ ಭಾರತದ ಅತ್ಯುನ್ನತ ನಾರಿಕ ಗೌರವಗಳು ಸಂದಿವೆ. 2012ರಲ್ಲಿ ಟಾಟಾ ಗ್ರೂಪ್ ಅಧ್ಯಕ್ಷ ಪದವಿಯಿಂದ ನಿವೃತ್ತರಾದ ನಂತರ ರತನ್ ಟಾಟಾ ಅವರು ಯುವ ಉದ್ಯಮಿಗಳಿಗೆ ಮಾರ್ಗದರ್ಶನ ಮಾಡುವುದು ಮುಂತಾದ ಲೋಕೋಪಕಾರಿ ಕೆಲಸಗಳನ್ನು ಮಾಡುತ್ತಿದ್ದರು.

ರತನ್ ಟಾಟಾ ಕೇವಲ ಉದ್ಯಮಿಯಾಗಿರಲಿಲ್ಲ, ಅವರು ನೈತಿಕ ನಾಯಕತ್ವ ಮತ್ತು ಸಾಮಾಜಿಕ ಜವಾಬ್ದಾರಿಗೆ ಮಾದರಿಯಾಗಿದ್ದರು. ಅವರ ದೃಷ್ಟಿ, ಸಮಗ್ರತೆ ಮತ್ತು ನಮ್ರತೆಯಿಂದ ಕೂಡಿದ ವ್ಯಕ್ತಿತ್ವ ಎಲ್ಲರಿಗೂ ಕೂಡ ಉದಾಹರಣೆಯಾಗಿದೆ. ಪ್ರಾಮಾಣಿಕತೆ ಮತ್ತು ಸಹಾನುಭೂತಿಯ ಮೌಲ್ಯಗಳಿಗೆ ನಿಷ್ಠರಾಗಿ ಟಾಟಾ ಗ್ರೂಪ್ ಅವರ ನಾಯಕತ್ವ ಮತ್ತು ಸಾಮಾಜಿಕ ಕಾರಣಗಳಿಗಾಗಿ ಅವರ ಬದ್ಧತೆ ಎಂದೆದಿಗೂ ಮರೆಯಲಾಗದಂತದ್ದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: AnandakandaJRD TataKannada News WebsiteLatest News KannadaRatan TataTata Steelಆನಂದಕಂದಉದ್ಯಮ ರತ್ನಜೆಆರ್'ಡಿ ಟಾಟಾಟಾಟಾ ಸ್ಟೀಲ್ಟೆಟ್ಲಿ ಟೀರತನ್ ನೇವಲ್ ಟಾಟಾ
Share196Tweet123Send
Previous Post

ಶಿವಮೊಗ್ಗ | ಎಚ್ಚರ ನಾಗರಿಕರೇ, ಮೊಬೈಲ್ ಲಿಂಕ್ ಮಾಡಿದ ವ್ಯಕ್ತಿ ಕಳೆದುಕೊಂಡಿದ್ದು ಎಷ್ಟು ಹಣ?

Next Post

ಸೊರಬ | ಸಾಮಾಜಿಕ ಸಮತೋಲನಕ್ಕೆ ನೆರವಾಗಿ ನಿಲ್ಲುವ ಅಂಟಿಗೆ ಪಂಟಿಗೆ ಹೇಗಿತ್ತು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೊರಬ | ಸಾಮಾಜಿಕ ಸಮತೋಲನಕ್ಕೆ ನೆರವಾಗಿ ನಿಲ್ಲುವ ಅಂಟಿಗೆ ಪಂಟಿಗೆ ಹೇಗಿತ್ತು?

ಸೊರಬ | ಸಾಮಾಜಿಕ ಸಮತೋಲನಕ್ಕೆ ನೆರವಾಗಿ ನಿಲ್ಲುವ ಅಂಟಿಗೆ ಪಂಟಿಗೆ ಹೇಗಿತ್ತು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಫೆ.20-21 ರಂದು ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ | ವಿವೇಕ್ ಆಳ್ವಾ

ಫೆ.20-21 ರಂದು ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ | ವಿವೇಕ್ ಆಳ್ವಾ

February 18, 2026
ಚಿಕ್ಕೋಡಿ | ಭೀಕರ ರಸ್ತೆ ಅಪಘಾತ | ಒಂದೇ ಕುಟುಂಬದ ಮೂವರು ದಾರುಣ ಸಾವು

ಚಿಕ್ಕೋಡಿ | ಭೀಕರ ರಸ್ತೆ ಅಪಘಾತ | ಒಂದೇ ಕುಟುಂಬದ ಮೂವರು ದಾರುಣ ಸಾವು

February 18, 2026
ಭಜನೆ ಸಾಮಾಜಿಕ ಪರಿವರ್ತನೆಯ ಶಕ್ತಿ: ಶಬರೀಶ್ ಕಣ್ಣನ್

ಭಜನೆ ಸಾಮಾಜಿಕ ಪರಿವರ್ತನೆಯ ಶಕ್ತಿ: ಶಬರೀಶ್ ಕಣ್ಣನ್

February 18, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಫೆ.19-21ರವರೆಗೂ ಶಿವಮೊಗ್ಗ ಈ ಎಲ್ಲಾ ಕಡೆ ಕರೆಂಟ್ ಇರಲ್ಲ

February 18, 2026
ಫೆ.28ರಂದು ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ | ಶಿಕ್ಷಣ ಸಚಿವರಿಗೆ ಆಹ್ವಾನ

ಫೆ.28ರಂದು ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ | ಶಿಕ್ಷಣ ಸಚಿವರಿಗೆ ಆಹ್ವಾನ

February 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL