Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉತ್ತರ ಕನ್ನಡ

ಕೋವಿಡ್’ನಿಂದ ಮೃತರಾದ ಶಿರಸಿಯ ವೃದ್ಧನ ತಲೆಯಿಂದ ರಕ್ತಸ್ರಾವ: ಕೊಲೆ ಆರೋಪಕ್ಕೆ ವೈದ್ಯರು ಹೇಳಿದ್ದೇನು?

April 28, 2021
in ಉತ್ತರ ಕನ್ನಡ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್

ಶಿರಸಿ: ನನ್ನ ಅಪ್ಪನಿಗೆ ತಲೆ ಮೇಲೆ ಹೊಡೆದು ಸಾಯ್ಸಿದ್ದಾರೆ… ರಕ್ತ ನೋಡಿ ಈ ಕಿಟ್‌ನಲ್ಲಿ… ಕೊರೋನಾ ಬಂದು ಸತ್ತಿದ್ದರೆ ತಲೆಯಲ್ಲಿ ರಕ್ತ ಹೇಗೆ ಬರ್ತದೆ…’- ಸ್ಮಶಾನದಲ್ಲಿ ಸೋಂಕಿತ ವೃದ್ಧರೊಬ್ಬರ ಶವದ ಅಂತ್ಯ ಸಂಸ್ಕಾರಕ್ಕೆ ಬಂದವರು ಮಾಡಿ ಹರಿಬಿಟ್ಟಿರುವ ವಿಡಿಯೋದಲ್ಲಿ ಈ ರೀತಿಯ ಮಾತುಗಳು ಕೇಳಿಬರುತ್ತವೆ. ಇದರ ಜೊತೆಗೆ, ಇದು ಶಿರಸಿ ಸಾರ್ವಜನಿಕ ಆಸ್ಪತ್ರೆಯಲ್ಲಾದ ಘಟನೆ ಎಂದು ಕೂಡ ಹೇಳಿರುವುದು ಇಡೀ ಜಿಲ್ಲೆಯ ಜನತೆಯನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ.

ದೇಶ, ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಯ ರೌದ್ರಾವತಾರ ಶುರುವಾಗಿದೆ. ಪ್ರತಿದಿನ ದೇಶದಲ್ಲಿ ಮೂರು ಸಾವಿರಕ್ಕೂ ಅಧಿಕ ಸೋಂಕಿತರು ಸಾವನ್ನಪ್ಪುತ್ತಿದ್ದು, ರಾಜ್ಯದಲ್ಲಿ ಈ ಸಂಖ್ಯೆ ಸಾವಿರ ಮೀರಿದೆ. ಇನ್ನು ಜಿಲ್ಲೆಯಲ್ಲಿ ಕೂಡ ದಿನಕ್ಕೆ 200ರಷ್ಟು ಪ್ರಕರಣಗಳು ಪತ್ತೆಯಾಗುತ್ತಿದ್ದರೂ ಕೇವಲ ಒಬ್ಬರು, ಇಬ್ಬರ ಸಾವುಗಳು ಉಂಟಾಗುತ್ತಿವೆ. ಈ ನಡುವೆ ಶಿರಸಿಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ತಲೆಯ ಮೇಲೆ ಹೊಡೆದು ಸಾಯಿಸಿ, ಬಳಿಕ ಸೋಂಕಿತನೆಂದು ಕಿಟ್‌ನಲ್ಲಿ ತುಂಬಿ ಕಳುಹಿಸಿಕೊಟ್ಟಿರುವುದಾಗಿ ವೈರಲ್ ಆಗಿರುವ ವಿಡಿಯೋದಿಂದಾಗಿ ಜನತೆ ಇನ್ನಷ್ಟು ಭಯಭೀತರಾಗಿದ್ದಾರೆ. ಆಸ್ಪತ್ರೆ, ವೈದ್ಯರುಗಳ ಮೇಲೆ ಅನುಮಾನ ಮೂಡುವಂತೆ ಮಾಡಿದೆ. ಹಾಗಿದ್ದರೆ ಅಸಲಿಗೆ ಈ ವಿಡಿಯೋದಲ್ಲಿ ಹೇಳಿದಂತೆ ನಡೆದಿರುವುದು ನಿಜವೇ? ಮುಂದೆ ಓದಿ…

ವೈರಲ್ ವಿಡಿಯೋ ಪ್ರಕಾರ ನಡೆದಿದ್ದೇನು?
ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಪ್ರಕಾರ, ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಸೋಂಕಿತರ ವೃದ್ಧರೊಬ್ಬರು ದಾಖಲು ಮಾಡಲಾಗಿದೆ. ಈ ವೇಳೆ ಅವರು ಮೃತಪಟ್ಟಿದ್ದಾರೆ. ಕೊರೋನಾದಿಂದಾಗಿ ಸೋಂಕಿತ ಮೃತಪಟ್ಟಿದ್ದಾರೆಂದು ಹೇಳಿ, ಕಿಟ್‌ನಲ್ಲಿ ಮೃತದೇಹವನ್ನು ತುಂಬಿ ಕುಟುಂಬಸ್ಥರಿಗೆ ನೀಡಿದ್ದಾರೆ. ಈ ನಡುವೆ ಕಿಟ್ ತೆರೆಯದಂತೆಯೂ ಹೇಳಿದ್ದಾರೆ. ಇನ್ನು ಕುಟುಂಬಸ್ಥರು ಪಿಪಿಇ ಕಿಟ್ ಧರಿಸಿ ಮೃತದೇಹವನ್ನು ಸ್ಮಶಾನಕ್ಕೆ ತಂದಿದ್ದಾರೆ. ಈ ವೇಳೆ ತಲೆಯ ಭಾಗದಿಂದ ರಕ್ತ ಸುರಿಯುತ್ತಿದ್ದುದನ್ನು ಮೃತನ ಪುತ್ರ, ಕುಟುಂಬಸ್ಥರು ನೋಡಿದ್ದು, ವೈದ್ಯರುಗಳೇ ತಲೆಯ ಮೇಲೆ ಹೊಡೆದು ಸಾಯಿಸಿ, ಬಳಿಕ ಅದು ಗೊತ್ತಾಗಬಾರದೆಂದು ಕೊರೋನಾದಿಂದಾಗಿ ಸತ್ತಿರುವುದಾಗಿ ಹೇಳಿ, ಕಿಟ್‌ನಲ್ಲಿ ತುಂಬಿ ಕೊಟ್ಟಿದ್ದಾರೆ. ಅಲ್ಲದೇ ತಲೆಯ ಮೇಲೆ ಹೊಡೆದಿದ್ದು ಗೊತ್ತಾಗುತ್ತದೆಂದು ಕಿಟ್ ತೆರೆಯದಂತೆ ಆಸ್ಪತ್ರೆಯವರು ಹೇಳಿ ಕಳುಹಿಸಿದ್ದಾರೆನ್ನುವುದು ವಿಡಿಯೋ ನೋಡಿದವರಿಗೆ ಅರ್ಥವಾಗುವ ವಿಷಯ.

ಆಸ್ಪತ್ರೆ ಅವರ ಹೇಳಿದ್ದು ಏನು ??
ಶಿರಸಿ ಪಂಡಿತ್ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಗಜಾನನ್ ಭಟ್ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡಿದೆ. ಮೊದಲಿಗೆ ಘಟನೆಯ ಕುರಿತು ಅವರಿಗೆ ವಿಷಯ ತಿಳಿದಿರಲಿಲ್ಲ. ಹೀಗಾಗಿ ವಿಡಿಯೋ ಕಳುಹಿಸಿದ ಬಳಿಕ ಅದನ್ನು ನೋಡಿ, ಇತರ ವೈದ್ಯರುಗಳೊಂದಿಗೆ ಸಂಪೂರ್ಣ ಮಾಹಿತಿ ಪಡೆದು ಘಟನೆಯ ಕುರಿತು ಸ್ಪಷ್ಟನೆ ನೀಡಿದ್ದಾರೆ.

‘ಮೊದಲಿಗೆ ವಿಡಿಯೋದಲ್ಲಿ ಹೇಳಿದಂತೆ ವೈದ್ಯರುಗಳು ಹೊಡೆದು ತಲೆಯಿಂದ ರಕ್ತ ಸುರಿಯುತ್ತಿರುವುದಲ್ಲ. ನಮ್ಮ ವೈದ್ಯರುಗಳು ಹಗಲಿರುಳು ಸೋಂಕಿತರ ಸೇವೆಗೆ ಶ್ರಮಿಸುತ್ತಿದ್ದಾರೆ. ಮಾನವೀಯ ನೆಲೆಗಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ರೀತಿ ನಮ್ಮ ಯಾವ ವೈದ್ಯರೂ ಮಾಡುವುದಿಲ್ಲ’ ಎಂದು ಡಾ.ಗಜಾನನ್ ಭಟ್ ತಿಳಿಸಿದ್ದಾರೆ.‘ನಿನ್ನೆ (ಏ.27) ಮಧ್ಯಾಹ್ನ ನಡೆದ ಘಟನೆಯಿದು. ಅಂದು ನಾನಿರಲಿಲ್ಲ. ಇತರ ಕೋವಿಡ್ ಚಿಕಿತ್ಸೆಗೆ ನಿಯೋಜಿತ ವೈದ್ಯರು ವೃದ್ಧರಿಗೆ ಚಿಕಿತ್ಸೆ ನೀಡುತ್ತಿದ್ದರು. ವೈದ್ಧ ಶಿರಸಿ ತಾಲೂಕಿನ ಅಮಿನಳ್ಳಿ ಭಾಗದವರಾಗಿದ್ದು, 70- 72 ವರ್ಷ ವಯಸ್ಸಾಗಿದೆ. ಅವರು ಫೀವರ್ ಕ್ಲಿನಿಕ್‌ಗೆ ಬರುವಾಗ ಶೇ.70ರಷ್ಟು ಸ್ಯಾಚುರೇಶನ್ ಇತ್ತು. ಆ ಸಂದರ್ಭದಲ್ಲಿ ಆಂಟಿಜೆನ್ ರ‍್ಯಾಪಿಡ್ ಪರೀಕ್ಷೆಗೊಳಪಡಿಸಿದ್ದು, ಸೋಂಕು ಇರುವುದಾಗಿ ದೃಢಪಟ್ಟಿದೆ. ಬಳಿಕ ಆಸ್ಪತ್ರೆಯ ವಾರ್ಡ್ ಗೆ ದಾಖಲಿಸಿಕೊಳ್ಳಲಾಗಿದೆ’ ಎಂದು ಅವರು ವಿವರಿಸಿದರು.

‘ವೃದ್ಧನಿಗೆ ರೆಮ್‌ಡಿಸಿವಿರ್ ಕೊಡಲಾಗಿದೆ. ಆಕ್ಸಿಜನ್ ಅನ್ನು ಕೂಡ ನೀಡಲಾಗುತ್ತಿತ್ತು. ಕೋವಿಡ್ ಸೋಂಕಿತರಿಗೆ ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟುವುದರಿಂದ, ಆ ರೀತಿ ಆಗದಂತೆ ತಡೆಯಲು ಅವರಿಗೆ ಹಿಪೆರಿನ್ ಇಂಜೆಕ್ಷನ್ ನೀಡಲಾಗಿದೆ. ಇಂಜೆಕ್ಷನ್ ಪಡೆದ ಬಳಿಕ ಅವರು ಮೂತ್ರ ಮಾಡಿ ಬರುತ್ತೇನೆಂದು ಶೌಚಾಲಯಕ್ಕೆ ಹೊರಟಿದ್ದಾರೆ. ಅಲ್ಲಿದ್ದ ನರ್ಸ್’ಗಳು ಬೇರೆ ಸೋಂಕಿತರಿಗೆ ಇಂಜೆಕ್ಷನ್‌ಗಳನ್ನು ಕೊಡಲು ಹೋದಾಗ ಶೌಚಕ್ಕೆ ತೆರಳಿದ್ದ ಸೋಂಕಿತ ವೃದ್ಧ ಕುಸಿದಿದ್ದಾರೆ (ಕೊಲ್ಯಾಪ್ಸ್). ಆ ವೇಳೆಯಲ್ಲಿ ತಕ್ಷಣ ಅವರನ್ನು ಎತ್ತುಕೊಂಡು ಬಂದು ಮರುಜೀವ ಕೊಡಲು ಪ್ರಯತ್ನಿಸಿದ್ದಾರೆ. ಆದರೆ ಅವರು ಬದುಕುಳಿಯಲಿಲ್ಲ. ಕೋವಿಡ್ ಸೋಂಕಿತರಾಗಿದ್ದರಿಂದ ಅವರು ಸೋಂಕಿನಿಂದ ಮೃತಪಟ್ಟಿದ್ದಾರೆಂದು ಘೋಷಿಸಲಾಗಿದೆ’ ಎಂದು ತಿಳಿಸಿದ್ದಾರೆ.‘ರಕ್ತ ಹೆಪ್ಪುಗಟ್ಟುವುದನ್ನು ತಡೆಯಲು ಹಿಪೆರಿನ್ ಕೊಟ್ಟಿದ್ದರಿಂದ, ಅಂಬ್ಯುಲೆನ್ಸ್ನಲ್ಲಿ ಮೃತದೇಹವನ್ನು ಕೊಂಡೊಯ್ಯುವಾಗ ಜಂಪ್‌ಗಳಿಂದಾಗಿ ತಲೆಯಿಂದ ರಕ್ತ ಸುರಿದಿದೆ ಹೊರತು ಬೇರಾವ ಕಾರಣಗಳಿಂದಲ್ಲ. ಹಿಪೆರಿನ್‌ನ ಪ್ರಭಾವ ಆರು ತಾಸುಗಳಷ್ಟು ಇರುತ್ತದೆ. ವೃದ್ಧ ಬಿದ್ದಾಗ ತಲೆಯಲ್ಲಿ ಚಿಕ್ಕ ಗಾಯವೊಂದು ಆಗಿದೆ. ಆದರೆ ಅವರು ಮೃತಪಟ್ಟಿದ್ದು ಆ ಗಾಯದಿಂದಲ್ಲ, ಬದಲಾಗಿ ಸೋಂಕಿನ ಪ್ರಭಾವದಿಂದಾಗಿ. ಹಿಪೆರಿನ್ ನೀಡಿದ್ದರಿಂದ ಅವರ ತಲೆ ಗಾಯದಲ್ಲಿ ರಕ್ತ ಹೆಪ್ಪುಗಟ್ಟದೇ ಒಂದೇ ಸಮನೆ ಸುರಿದಿದೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

‘ಅವರು ಸೋಂಕಿನ ತೀವ್ರತರ ಪ್ರಭಾವದಿಂದಾಗಿ ಕುಸಿದು ಮೃತಪಟ್ಟಿದ್ದಾರೆ ಹೊರತು, ತಲೆ ಗಾಯವಾಗಿರುವುದರಿಂದಲ್ಲ. ಈ ಬಗ್ಗೆ ಅವರ ಕುಟುಂಬಕ್ಕೂ ತಿಳಿಸಲಾಗಿದೆ. ಆದರೆ ಅವರಿಗೆ ವೈದ್ಯರು ಹೇಳಿರುವುದು ಅರ್ಥವಾಗಿರಲಿಲ್ಲ ಎಂದು ಕಾಣಿಸುತ್ತದೆ. ಆಕ್ಸಿಜನ್ ಕೊಡುತ್ತೇವೆಂದು ಹೇಳಿದಾಗ ಅವರು ಮೂತ್ರಕ್ಕೆ ಹೋಗಿ ಬರುವುದಾಗಿ ತಿಳಿಸಿದ್ದಾರೆ. ಒಮ್ಮೆ ಆಕ್ಸಿಜನ್ ಹಾಕಿದರೆ ಅದು ಶೇ 90ರಷ್ಟು ಮೇಲಕ್ಕೆ ಬರುವ ತನಕ ತೆಗೆಯಲಾಗುವುದಿಲ್ಲ. ಈ ಕಾರಣದಿಂದ ಅದಕ್ಕೂ ಮುನ್ನವೇ ಹೊಗಿಬರುವುದಾಗಿ ವೃದ್ಧ ಮೂತ್ರಕ್ಕೆ ಹೋಗಿದ್ದಾರೆ. ಇನ್ನು ಅವರು ವಯಸ್ಸಾಗಿದವರಾಗಿದ್ದರಿಂದ ಹಾಗೂ ಗ್ರಾಮೀಣ ಭಾಗದವರಾಗಿರುವ ಕಾರಣ ಅವರಿಗೆ ಮೂತ್ರಕ್ಕೆ ಪಾತ್ರೆ ಕೊಟ್ಟರೂ ಮಾಡಲು ಬರದ ಕಾರಣ ಅವರೇ ಶೌಚಕ್ಕೆ ತೆರಳಿದ್ದರು’ ಎಂದು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Covid DeathCovid19Covid19 DeathKannada News WebsiteLatest News KannadaLocal NewsMalnad NewsSirsiUttara Kannadaಉತ್ತರ ಕನ್ನಡಕೋವಿಡ್19ಶಿರಸಿ
Previous Post

ಭದ್ರಾವತಿಯ ಮದುವೆ ಮನೆಯಲ್ಲಿ ನಿಗದಿಗಿಂತಲೂ ಹೆಚ್ಚು ಜನ ಜಮಾವಣೆ: 5000 ರೂ. ದಂಡ

Next Post

ಕೊರೋನಾ 2ನೆಯ ಅಲೆ: ಅಧಿಕಾರಿಗಳು ಸೈನಿಕರಂತೆ ಕೆಲಸ ಮಾಡಿ: ಶಾಸಕ ರಘಮೂರ್ತಿ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೊರೋನಾ 2ನೆಯ ಅಲೆ: ಅಧಿಕಾರಿಗಳು ಸೈನಿಕರಂತೆ ಕೆಲಸ ಮಾಡಿ: ಶಾಸಕ ರಘಮೂರ್ತಿ ಕರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!