ಕಲ್ಪ ಮೀಡಿಯಾ ಹೌಸ್ | ಉತ್ತರ ಕನ್ನಡ |
ಹೃದಯಾಘಾತದ ಸುಳಿವು ಅರಿತ ಕೆಎಸ್ಆರ್ಟಿಸಿ ಬಸ್ ಚಾಲಕ ಕೂಡಲೇ ಬಸ್ ನಿಲ್ಲಿಸಿ ಸಮಯಪ್ರಜ್ಞೆಯಿಂದ ಆಗಬಹುದಾಗಿದ್ದ ಒಂದು ದೊಡ್ಡ ದುರಂತವನ್ನೆ ತಪ್ಪಿಸಿ, , ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಿಂದ ಯಲ್ಲಾಪುರಕ್ಕೆ ತೆರಳುವ ಬಸ್ ಅನ್ನು ಮಲ್ಲಪ್ಪ ಸೋಮಪ್ಪ (45) ಚಾಲನೆ ಮಾಡುತ್ತಿದ್ದರು. ತನಗೆ ಹೃದಯಾಘಾತವಾಗಿದೆ ಎಂಬ ಸುಳಿವು ಅರಿತ ಕೂಡಲೇ ಬಸ್ ಅನ್ನು ರಸ್ತೆಪಕ್ಕಕ್ಕೆ ನಿಲ್ಲಿಸಿದ್ದಾರೆ. ದುರಾದೃಷ್ಟವಶಾತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ದೈಹಿಕ ಕಠಿಣ ಸಂದರ್ಭದಲ್ಲಿಯೂ ಸಮಯಪ್ರಜ್ಞೆ ಮೆರೆದ ಚಾಲಕ ಮಲ್ಲಪ್ಪ ಅವರ ಸಾವಿಗೆ ಪ್ರಯಾಣಿಕರು ಕಂಬನಿ ಮಿಡಿದಿದ್ದಾರೆ.
ಸಚಿವ ಬಿ. ಶ್ರೀರಾಮುಲು ಸಂತಾಪ:
ವಿಷಯ ತಿಳಿದ ಸಾರಿಗೆ ಇಲಾಖೆ ಸಚಿವ ಬಿ. ಶ್ರೀರಾಮುಲು Minister Shriramulu ಸಂತಾಪ ಸೂಚಿಸಿದ್ದು, ಚಾಲಕನ ಮುಂಜಾಗ್ರತೆಯಿಂದ ಮುಂದಾಗಲಿದ್ದ ಭಾರೀ ಅನಾಹುತವನ್ನು ತಪ್ಪಿಸುವ ಮೂಲಕ ಕರ್ತವ್ಯ ನಿಷ್ಠೆ ಮೆರದಿರುವುದು ಹೆಮ್ಮೆಯ ಸಂಗತಿ.
Also read: ಆರ್ಎಸ್ಎಸ್ ತಂಟೆಗೆ ಬರಬೇಡಿ ಹುಷಾರ್: ಸಿದ್ಧರಾಮಯ್ಯಗೆ ಏಕವಚನದಲ್ಲೇ ಈಶ್ವರಪ್ಪ ಚಾಟಿ
ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬಸ್ಥರಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post