ಕಲ್ಪ ಮೀಡಿಯಾ ಹೌಸ್ | ಉತ್ತರಾಖಂಡ್ |
ಐತಿಹಾಸಿಕ ಯುಸಿಸಿ #UCC ಮಸೂದೆಯ ನಂತರ ಮಹತ್ವದ ಹೆಜ್ಜೆಯನ್ನಿಟ್ಟಿರುವ ಉತ್ತರಾಖಂಡ್ #Uttarakhand ಸರ್ಕಾರ ದೇಶಕ್ಕೇ ಮಾದರಿಯಾಗುವ ನಿರ್ಧಾರಕ್ಕೆ ಮುಂದಾಗಿದೆ.
ಪ್ರತಿಭಟನಾಕಾರರು ಹಾಗೂ ಗಲಭೆಕೋರರಿಂದ #Roits ಹಾನಿಗೊಳಗಾದ ಆಸ್ತಿಯ ನಷ್ಟವನ್ನು ಅವರಿಂದಲೇ ವಸೂಲಿ ಮಾಡುವ ಮಹತ್ವದ ಮಸೂದೆ ಮಂಡಿಸಲು ಅಲ್ಲಿನ ಸರ್ಕಾರ ಮುಂದಾಗಿದೆ.
ಈ ಮಸೂದೆಯ ಅಡಿಯಲ್ಲಿ, ಪ್ರತಿಭಟನೆಗಳು ಮತ್ತು ಮುಷ್ಕರಗಳ ಸಮಯದಲ್ಲಿ ಉಂಟಾದ ನಷ್ಟವನ್ನು ಗೊಂದಲದಲ್ಲಿ ಭಾಗಿಯಾಗಿರುವ ಆರೋಪಿಗಳಿಂದ ವಸೂಲಿ ಮಾಡಲಾಗುತ್ತದೆ.
ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ತಿಗೆ ಹಾನಿ ಮಾಡುವ ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಾಗಿ ವ್ಯವಹರಿಸುವ ಮಸೂದೆ ಇದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















