ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಟಿ, ನಿರ್ಮಾಪಕಿ ಹಾಗೂ ನಿರ್ದೇಶಕಿ ಸುಷ್ಮಾ ವೀರ್ ರಂಗಗೀತೆ ಪರಂಪರೆಗೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ “ವೀರ ಕಥಾಕರ” ಸಂಸ್ಥೆಯ ಮೂಲಕ “ವೀರ ರಂಗ ಸಂಭ್ರಮ K5” ಎಂಬ ಸಮಾರಂಭವನ್ನು ಆಯೋಜಿಸಿದರು. ಈ ಸಂದರ್ಭದಲ್ಲಿ ಡಾ. ಚಂದ್ರಶೇಖರ್ ಕಂಬಾರ ಅವರ ಪ್ರಸಿದ್ಧ “ಮಾಯಾದ ಮನದ ಭಾರ” ಗೀತೆಯನ್ನು ಲೋಕಾರ್ಪಣೆ ಮಾಡಲಾಯಿತು.
ಹಾಡನ್ನು ವರನಟ ಡಾ. ರಾಜಕುಮಾರ್ ಪುತ್ರಿ ಲಕ್ಷ್ಮೀ ಗೋವಿಂದರಾಜು ಹಾಗೂ ಎಸ್.ಎ. ಗೋವಿಂದರಾಜು ಅನಾವರಣಗೊಳಿಸಿದರು. ಸಮಾರಂಭದಲ್ಲಿ ನಿರ್ದೇಶಕ ಪಿ. ಶೇಷಾದ್ರಿ, ನಟ ಸುಚೇಂದ್ರ ಪ್ರಸಾದ್, ಡಾ. ಸಿ. ಸೋಮಶೇಖರ್, ನಟ ಸುಂದರರಾಜ್, ಕೊಂಡಜ್ಜಿ ಮೋಹನ್, ಪ್ರಕಾಶ್ ರಾಘವಾಚಾರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಜೊತೆಗೆ ಗುಬ್ಬಿ ವೀರಣ್ಣ ಅವರ ಕುಟುಂಬದ ಸದಸ್ಯರು ಸಹ ಭಾಗವಹಿಸಿದ್ದರು.
Also Read>> ಶಿವಮೊಗ್ಗ | ಸುತ್ತುಕೋಟೆ ಕೊಲೆ ಪ್ರಕರಣ, ಎಸ್ಪಿ ನಿಖಿಲ್ ಹೇಳಿದ್ದೇನು?
ಈ ರಂಗಗೀತೆ ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನ ಬಳಸಿಕೊಂಡು ರೂಪುಗೊಂಡಿರುವುದು ವಿಶೇಷವಾಗಿದ್ದು, ಪ್ರೇಕ್ಷಕರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮೀ ಗೋವಿಂದರಾಜು, “ಸುಷ್ಮಾ ನಮ್ಮ ಕುಟುಂಬದವರಂತೆ. ಅವರ ಹೊಸ ಪ್ರಯತ್ನ ಯಶಸ್ವಿಯಾಗಲಿ” ಎಂದು ಹಾರೈಸಿದರು. ನಿರ್ದೇಶಕ ಪಿ. ಶೇಷಾದ್ರಿ ಅವರು ಸುಷ್ಮಾ ಅವರ ಪರಿಶ್ರಮವನ್ನು ಮೆಚ್ಚಿ, “ಅವರು ಸಕಲಕಲಾವಲ್ಲಭೆ” ಎಂದು ಹೇಳಿದರು.
ನಟ ಸುಚೇಂದ್ರ ಪ್ರಸಾದ್ ಮಾತನಾಡಿ, “ಕಾಲಗರ್ಭದಲ್ಲಿ ಕಳೆದುಹೋಗುತ್ತಿದ್ದ ರಂಗಗೀತೆಗಳನ್ನು ಸುಷ್ಮಾ ಮತ್ತೆ ಜನರಿಗೆ ತಲುಪಿಸುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟರು. ಡಾ. ಸಿ. ಸೋಮಶೇಖರ್ ಅವರು ಸುಷ್ಮಾ ಅವರ ಧ್ವನಿಯನ್ನು ಉಷಾ ಉತ್ತಪ್ಪ ಅವರ ಧ್ವನಿಗೆ ಹೋಲಿಕೆ ಮಾಡಿದರು.
ಸುಷ್ಮಾ ವೀರ್ ಮಾತನಾಡಿ, “K5 ಎಂದರೆ ಕರ್ನಾಟಕ, ಕನ್ನಡ, ಕಾರಂತ, ಕಾರ್ನಾಡ್ ಹಾಗೂ ಕಂಬಾರ. ಶಿವರಾಮ ಕಾರಂತ, ಗಿರೀಶ್ ಕಾರ್ನಾಡ್ ಹಾಗೂ ಚಂದ್ರಶೇಖರ್ ಕಂಬಾರರ ಕೃತಿಗಳನ್ನು ವಿಶೇಷವಾಗಿ ಯುವಜನತೆಗೆ ಪರಿಚಯಿಸುವುದು ನಮ್ಮ ಉದ್ದೇಶ” ಎಂದರು. ಮುಂದಿನ ದಿನಗಳಲ್ಲಿ ಈ ದಿಗ್ಗಜರ ಕುರಿತಾಗಿ ದೊಡ್ಡ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆಯೂ ಇದೆ ಎಂದು ತಿಳಿಸಿದರು.
Also Read>> ನೈರುತ್ಯ ರೈಲ್ವೆ ಪ್ರಯಾಣಿಕರ ಜಾಗೃತಿ ಅಭಿಯಾನ: ಓಡಿಹೋದ ಇಬ್ಬರು ಮಕ್ಕಳನ್ನು ರಕ್ಷಿಸಿದ RPF
ಈ ಗೀತೆಯನ್ನು ಮೂಲತಃ ಟಿ.ಎಸ್. ನಾಗಾಭರಣ ನಿರ್ದೇಶನದ “ನಾಗಮಂಡಲ” ಚಿತ್ರದಲ್ಲಿ ಬಳಸಲಾಗಿದ್ದು, ಮೂಲ ಸಂಗೀತ ಸಂಯೋಜನೆ ಸಿ. ಅಶ್ವಥ್ ಅವರದು. ಇದೀಗ ಅದೇ ಗೀತೆಯನ್ನು ಸುಷ್ಮಾ ವೀರ್ ತಮ್ಮದೇ ಕಂಠದಲ್ಲಿ ಹಾಡಿರುವುದು ವಿಶೇಷವಾಗಿದ್ದು, ಕಾರ್ಯಕ್ರಮದ ಆರಂಭದಲ್ಲೇ ತಮ್ಮ ಗಾಯನದಿಂದ ಮೆಚ್ಚುಗೆ ಪಡೆದರು.
ಯುವ ಗಾಯಕಿಯರಾದ ಕಾವ್ಯ ಮತ್ತು ಕವನ ಸಹ ಗಾಯನದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಸುಷ್ಮಾ ಅವರ ಕಂಠವನ್ನು “ಕಂಚಿನ ಕಂಠ” ಎಂದು ಕೊಂಡಾಡಿದ ಗಣ್ಯರು, ರಂಗಗೀತೆಗಳಿಗೆ ಅವರು ಅತ್ಯಂತ ಸೂಕ್ತ ಧ್ವನಿ ಹೊಂದಿದ್ದಾರೆ ಎಂದು ಶ್ಲಾಘಿಸಿದರು.
ನಮ್ಮ ವೀರ ಕಥಾಕರ ಸಂಸ್ಥೆಯಿಂದ “ವೀರ ಸಂಭ್ರಮ K5” ಎಂಬ ಸಮಾರಂಭ ಆಯೋಜಿಸಿದ್ದೇವೆ. ಇದು ರಂಗಗೀತೆಗಳ ಹೊಸ ಅಲೆ ಅನಾವರಣ. ಈಗಿನ ಯುವಜನತೆಗೆ ರಂಗಗೀತೆಗಳನ್ನು ಪರಿಚಯಿಸುವುದೇ “ವೀರ ಸಂಭ್ರಮ”ದ ಮೂಲ ಉದ್ದೇಶ. ಇನ್ನೂ, K5 ಅಂದರೆ, ಕರ್ನಾಟಕ, ಕನ್ನಡ, ಕಾರಂತ, ಕಾರ್ನಾಡ್ ಹಾಗೂ ಕಂಬಾರ ಎಂದು. ಶಿವರಾಮ ಕಾರಂತ, ಗಿರೀಶ್ ಕಾರ್ನಾಡ್ ಹಾಗೂ ಚಂದ್ರಶೇಖರ್ ಕಂಬಾರರ ಹಾಡುಗಳನ್ನು ಜನರಿಗೆ ತಲುಪಿಸುವ, ವಿಶೇಷವಾಗಿ ಯುವಜನತೆಗೆ ಮಟ್ಟಿಸುವ ಉದ್ದೇಶ. ಮುಂದಿನ ದಿನಗಳಲ್ಲಿ ಈ ಮೂವರು ದಿಗ್ಗಜರ ಕುರಿತು ದೊಡ್ದ ಸಮಾರಂಭ ಮಾಡುವ ಯೋಜನೆ ಕೂಡ ಇದೆ. ಇಂದು “ವೀರ ಸಂಭ್ರಮ”ದ ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬರರ ” ಮಾಯಾದ ಮನದ ಭಾರ” ಹಾಡನ್ನು ಬಿಡುಗಡೆ ಮಾಡಿದ್ದೇವೆ. ಜಂಕಾರ್ ಮ್ಯೂಸಿಕ್ ಮೂಲಕ ಈ ಹಾಡು ಬಿಡುಗಡೆಯಾಗಿದೆ.
ಈ ಹಾಡನ್ನು ಟಿ.ಎಸ್ ನಾಗಾಭರಣ ನಿರ್ದೇಶನದ “ನಾಗ ಮಂಡಲ” ಚಿತ್ರದಲ್ಲಿ ಬಳಸಿಕೊಳ್ಳಲಾಗಿತ್ತು. ಮೂಲ ಸ್ವರ ಸಂಯೋಜನೆ ಮಾಡಿದ್ದು ಸಿ.ಅಶ್ವಥ್ ಅವರು. ಈಗ ಈ ಹಾಡನ್ನು ನಾನು ಹಾಡುವ ಪ್ರಯತ್ನ ಮಾಡಿದ್ದೇನೆ. ನಿರ್ದೇಶಕ ನಾಗಾಭರಣ ಅವರು ಕೂಡ ನನ್ನ ಗಾಯನದ ಬಗ್ಗೆ ಮೆಚ್ಚುಗೆ ಸೂಚಿಸಿರುವುದು ಸಂತೋಷವಾಗಿದೆ. ಮುಂದೆ ಕೂಡ ಅನೇಕ ರಂಗಗೀತೆಗಳು ನಮ್ಮ ಸಂಸ್ಥೆಯ ಮೂಲಕ ಲೋಕಾರ್ಪಣೆಯಾಗಲಿದೆ.
Also Read>> ಕೊಲ್ಲಂ | ಬಸ್ ನಿಲ್ದಾಣಕ್ಕೆ ಟಿಪ್ಪರ್ ಲಾರಿ ಡಿಕ್ಕಿ, ಮಗು ಸೇರಿ ಮೂವರು ಸಾವು
ಸಮಾರಂಭಕ್ಕೆ ಆಗಮಿಸಿದ ಗಣ್ಯರಿಗೆ ಹಾಗೂ ಕುಟುಂಬ ಸದಸ್ಯರಿಗೆ ಧನ್ಯವಾದ ಎಂದರು ವೀರ ಕಥಾಕರ ಸಂಸ್ಥೆ ಸ್ಥಾಪಕಿ ಹಾಗೂ “ವೀರ ಸಂಭ್ರಮ K5” ಸಮಾರಂಭದ ಆಯೋಜಕಿ ಸುಷ್ಮಾ ವೀರ್. ತಮ್ಮದೇ ಕಂಠಸಿರಿಯಲ್ಲಿ ರಂಗಗೀತೆ ಹಾಡುವ ಮೂಲಕ ಸುಷ್ಮ ವೀರ್ ಸಮಾರಂಭಕ್ಕೆ ಚಾಲನೆ ನೀಡಿದ್ದು ವಿಶೇಷವಾಗಿತ್ತು. ಯುವ ಗಾಯಕಿಯರಾದ ಕಾವ್ಯ ಹಾಗೂ ಕವನ ಸಹ ಸುಷ್ಮಾ ಅವರ ಜೊತೆಗೆ ಗಾಯನಕ್ಕೆ ಜೊತೆಯಾದರು.
ಗುಬ್ಬಿ ವೀರಣ್ಣ ಅವರ ಕುಟುಂಬ ಕಂಚಿನ ಕಂಠಕ್ಕೆ ಹೆಸರುವಾಸಿ. ಅದೇ ಕಂಚಿನ ಕಂಠ ನಮ್ಮ ಸುಷ್ಮಾ ಅವರದು. ರಂಗಗೀತೆಗಳಿಗೆ ಹೇಳಿ ಮಾಡಿಸಿದ ಕಂಠ ಅವರದು ಎಂದು ಸಮಾರಂಭಕ್ಕೆ ಆಗಮಿಸಿದ್ದ ಎಲ್ಲಾ ಗಣ್ಯರು ಒಕ್ಕೊರಲ ಅಭಿಪ್ರಾಯ ಪಟ್ಟು, ಸುಷ್ಮಾ ಅವರ ಗಾಯನವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
(ಮಾಹಿತಿ: ರಾಘವೇಂದ್ರ ಅಡಿಗ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















