ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಉಡುಪಿ: ಕೊರೋನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಇಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ವಿದ್ಯುತ್ ದೀಪ ಆರಿಸಿ, ದೀಪ ಪ್ರಜ್ವಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕರೆಗೆ ಮಠ, ಮಂದಿರ ಹಾಗೂ ಧಾರ್ಮಿಕ ಕೇಂದ್ರಗಳು ದೀಪ ಪ್ರಜ್ವಲಿಸಿವೆ.
ಮಂತ್ರಾಲಯ ಶ್ರೀ ರಾಘವೇಂದ್ರ ತೀರ್ಥ ಶ್ರೀಪಾದಂಗಳವರ ಮಠದಲ್ಲಿ ಪೀಠಾಧಿಪತಿ ಶ್ರೀ ಸುಬುದೇಂಧ್ರ ಶ್ರೀಗಳು ಜ್ಯೋತಿ ಬೆಳಗಿ, ಜಗತ್ತಿಗೆ ಅಂಟಿರುವ ಕೊರೋನಾ ಮಹಾಮಾರಿ ದೂರವಾಗಲಿ ಎಂದು ಪ್ರಾರ್ಥಿಸಿದರು.
ಉಡುಪಿ ಶ್ರೀಕೃಷ್ಣ ಮಠ
ಇನ್ನು, ದೀಪ ಪ್ರಜ್ವಲನಕ್ಕೆ ಉಡುಪಿ ಶ್ರೀಕೃಷ್ಣ ಮಠದ ಪ್ರತಿ ಮೂಲೆ ಮೂಲೆಯಲ್ಲೂ ದೀಪ ಪ್ರಜ್ವಲಿಸಿ, ಕೊರೋನಾ ರೋಗದಿಂದ ಪ್ರಪಂಚವನ್ನು ಪಾರುಮಾಡುವಂತೆ ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಶ್ರೀಪಾದಂಗಳವರು ಶ್ರೀಕೃಷ್ಣನಲ್ಲಿ ಪ್ರಾರ್ಥಿಸಿದರು.
ರಥ ಬೀದಿಯಲ್ಲಿರುವ ಅಷ್ಟಮಠಗಳಲ್ಲಿ ಒಳಗೆ ಹಾಗೂ ಮುಂಭಾಗ, ರಥ ಬೀದಿಯಲ್ಲಿ ಸಂಪೂರ್ಣವಾಗಿ ಜ್ಯೋತಿ ಪ್ರಜ್ವಲಿಸಲಾಯಿತು.
Get in Touch With Us info@kalpa.news Whatsapp: 9481252093
Discussion about this post