ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದರೂ ಅನಾವಶ್ಯಕವಾಗಿ ಮನೆಯಿಂದ ಹೊರಕ್ಕೆ ಬರುತ್ತಿದ್ದ ವಾಹನ ಸವಾರರಿಗೆ ಸ್ವತಃ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
ನಗರದ ಆಲ್ಕೊಳ ಸರ್ಕಲ್, ಎಪಿಎಂಸಿ ಬಳಿಯ ಸರ್ಕಲ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಖುದ್ದು ತೆರಳಿದ ಅಧಿಕಾರಿಗಳು ಸ್ವತಃ ವಾಹನಗಳನ್ನು ತಡೆದು ವಿಚಾರಿಸಿದರು.
ಅನಾವಶ್ಯಕವಾಗಿ ಹಾಗೂ ಸಣ್ಣ ಸಣ್ಣ ಕಾರಣಗಳಿಗಾಗಿ ಮನೆಯಿಂದ ಹೊರಕ್ಕೆ ಬಂದ ಕೆಲವು ಸವಾರರಿಗೆ ಖಡಕ್ ವಾರ್ನಿಂಗ್ ನೀಡಿದ ಅಧಿಕಾರಿಗಳು, ಕೆಲವು ವಾಹನಗಳನ್ನು ಮುಟ್ಟುಗೋಲು ಹಾಕಿಕೊಂಡರು.
ಇನ್ನು, ಅಧಿಕೃತ ಪಾಸ್ ಹೊಂದಿದ್ದ ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಅನಾವಶ್ಯಕವಾಗಿ ಯಾರೂ ತಿರುಗಾಡದಂತೆ ಕಟ್ಟುನಿಟ್ಟಾಗಿ
ಸೂಚಿಸಿದರು.
ಇನ್ನು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಸ್ವತಃ ಕಾರ್ಯಾಚರಣೆಗೆ ಇಳಿದಿರುವ ಹಿನ್ನೆಲೆಯಲ್ಲಿ ನಗರದಲ್ಲಿ ವಾಹನ ಸಂಚಾರ ಕ್ಷೀಣವಾಗಿತ್ತು.
ಇನ್ನು, ನಿನ್ನೆ ಭದ್ರಾವತಿಗೆ ದಿಢೀರ್ ಭೇಟಿ ನೀಡಿದ್ದ ಜಿಲ್ಲಾಧಿಕಾರಿಗಳು ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದು, ತಾಲೂಕು ಕೇಂದ್ರಗಳಿಗೂ ಸಹ ಭೇಟಿ ನೀಡುತ್ತಿದ್ದಾರೆ.
Get in Touch With Us info@kalpa.news Whatsapp: 9481252093





Discussion about this post