ಕಲ್ಪ ಮೀಡಿಯಾ ಹೌಸ್ | ವಿಜಯಪುರ |
ದೈವ ಭಕ್ತಿ, ದೇಶ ಭಕ್ತಿ ಎರಡೂ ಒಂದೇ. ಶ್ರೀರಾಮನ ಹೆಸರಿನಲ್ಲಿ ಸೇವೆ ಮಾಡೋಣ, ಅದಕ್ಕಾಗಿ `ರಾಮನ ಸೇವೆಯೇ ದೇಶಸೇವೆ ಅನ್ನೋ ಅಭಿಯಾನ ಪ್ರಾರಂಭಿಸೋಣ. ಮುಂದಿನ ರಾಮನವಮಿ ಒಳಗಾಗಿ ಈ ಅಭಿಯಾನ ಹಮ್ಮಿಕೊಳ್ಳಲು ಪ್ರಧಾನಿ ಮೋದಿಗೆ PM Modi ಪತ್ರ ಬರೆಯುತ್ತೇವೆ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ Pejawara Shri ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಂಬಂಧಗಳಲ್ಲಿ ದ್ರೋಹ ಬಗೆಯುವ ಕೆಲಸ ಆಗಬಾರದು. ನಾವು ಸರಿಯಾಗಿ ಇದ್ದರೆ ಎಲ್ಲವೂ ಸರಿಯಾಗಿ ಇರುತ್ತೆ. ಕಾಲಕಾಲಕ್ಕೆ ಸಮಾಜ ಸ್ವಚ್ಛಗೊಳಿಸುವ ಕೆಲಸ ಆಗಬೇಕು. ಹಾಗಾಗಿ, ಮಠಗಳು, ರಾಜಕೀಯ ಪಕ್ಷಗಳು ಭೇದ-ಭಾವ ಮಾಡುವುದನ್ನು ನಿಲ್ಲಿಸಬೇಕು ಕರೆ ನೀಡಿದ್ದಾರೆ.
ಏಕ ವ್ಯಕ್ತಿ ತೀರ್ಮಾನದಿಂದ ಗೊಂದಲ ಸೃಷ್ಟಿ:
ಶಾಲಾ ಪಠ್ಯಪುಸ್ತಕದಲ್ಲಿ ಲೈಂಗಿಕ ಶಿಕ್ಷಣ ಅಳವಡಿಸುವ ಬಗ್ಗೆ ಪ್ರತಿಕ್ರಿಯಿಸಿದ ಶ್ರೀಗಳು, ಏಕ ವ್ಯಕ್ತಿ ತೀರ್ಮಾನದಿಂದ ಗೊಂದಲ ಸೃಷ್ಟಿ ಆಗುತ್ತದೆ. ಎಲ್ಲರೂ ಚರ್ಚಿಸಿ ತೀರ್ಮಾನ ಮಾಡಬೇಕು. ಶಿಕ್ಷಣ ತಜ್ಞರು ಹಾಗೂ ಮನಶಾಸ್ತ್ರಜ್ಞರೊಂದಿಗೂ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
Also read: ಬಾಲಕನ ಮೇಲೆ ಗೂಳಿ ದಾಳಿ: ಅದೃಷ್ಟವಶಾತ್ ತಪ್ಪಿದ ದುರ್ಘಟನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post