No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Tuesday, March 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಡಾ. ಮೈತ್ರೇಯಿ ಆದಿತ್ಯಪ್ರಸಾದ್

ಕಲಾರಾಧನೆಯಲ್ಲಿ ವಿನಯ ಸಂಪನ್ನರಾದ ವಿನಯ್ ಶಿವಮೊಗ್ಗ

ಶಿವಮೊಗ್ಗೆಯಲ್ಲಿ ಅರಳಿದ ಮೊಗ್ಗುಗಳು - 4

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 12, 2026
in ಡಾ. ಮೈತ್ರೇಯಿ ಆದಿತ್ಯಪ್ರಸಾದ್
0
ಕಲಾರಾಧನೆಯಲ್ಲಿ ವಿನಯ ಸಂಪನ್ನರಾದ ವಿನಯ್ ಶಿವಮೊಗ್ಗ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ಸಾಹಿತ್ಯ ಸಂಗೀತ ಕಲಾವಿಹೀನಃ ಸಾಕ್ಷಾತ್ ಪಶುಃ ಪುಚ್ಛ ವಿಷಾಣ ಹೀನಃ ಎನ್ನುವ ಸಂಸ್ಕೃತದ ಸುಭಾಷಿತ ಮನುಷ್ಯನಿಗಿರಬೇಕಾದ ಕಲಾಸಕ್ತಿಯ ಕುಳಿತು ಕುರಿತು ತಿಳಿಸುತ್ತದೆ. ಇದನ್ನು ನೋಡಿದಾಗ ನನಗೆ ನೆನಪಾಗುವ ವ್ಯಕ್ತಿ ಕಲಾಕ್ಷೇತ್ರದಲ್ಲಿ ಅತಿ ಹೆಚ್ಚು ಆಸಕ್ತಿಯಿಂದಿದ್ದು ತಮ್ಮದೇ ಆದ ಕೊಡುಗೆ ನೀಡುತ್ತಲೇ ಶಿವಮೊಗ್ಗಕ್ಕೆ ಆಸ್ತಿಯಂತಾದ ಹೆಮ್ಮೆಯ ಪ್ರತಿಭೆ.

ಅದೇನೋ ಒಮ್ಮೊಮ್ಮೆ ಕಲಾ ಸರಸ್ವತಿ ತನ್ನೆಲ್ಲ ಪ್ರಾಕಾರಗಳನ್ನು ಒಬ್ಬರಿಗೆ ಧಾರೆ ಎರೆದು ಬಿಡುತ್ತಾಳೆನೋ? ಏಕೆ ಈ ಮಾತೆಂದರೆ ನಾನು ಅನೇಕರನ್ನು ನೋಡಿದ್ದೇನೆ ಕೆಲವರಿಗೆ ನೃತ್ಯ ಇಷ್ಟವಾದರೆ ಇನ್ನು ಕೆಲವರಿಗೆ ಸಂಗೀತ. ಮತ್ತೆ ಕೆಲವರಿಗೆ ಸಾಹಿತ್ಯ. ಒಂದಷ್ಟು ಜನಕ್ಕೆ ನಾಟಕ, ಯಕ್ಷಗಾನ, ಸಿನಿಮಾ. ಒಂದು ಕಡೆ ಕೇವಲ ಇಷ್ಟವಷ್ಟೇ ಅಲ್ಲ ಅದರ ಒಂದೊಂದು ವಿಭಾಗದಲ್ಲೂ ಜ್ಞಾನವನ್ನು ಪಡೆದಿರುವ ವ್ಯಕ್ತಿಗಳಿರುತ್ತಾರೆ. ಆದರೆ ಅಂಥವರು ಬೆರಳೆಣಿಕೆಯಷ್ಟು ಮಂದಿ ಮಾತ್ರ. ಎಲ್ಲವೂ ಇಷ್ಟ, ಎಲ್ಲದರಲ್ಲೂ ಆಳವಾದ ಜ್ಞಾನ ಅಂತಹ ಕೆಲವೇ ಕೆಲವು ವ್ಯಕ್ತಿಗಳಲ್ಲಿ ನಾನು ನೋಡಿದ ಒಬ್ಬ ವ್ಯಕ್ತಿ ವಿನಯ್ ಶಿವಮೊಗ್ಗ. ತನ್ನ ಹೆಸರಿಗೆ ಊರು ಸೇರಿಸಿ ಊರನ್ನು ಪ್ರಸಿದ್ಧಿಯಾಗಿಸಿದ ಹೆಮ್ಮೆ ಇವರದು.

ವಿನಯ್ ಶಿವಮೊಗ್ಗ #VinayShivamogga ಅವರ ಜನನ ಅಪ್ಪಟ ಮಲೆನಾಡಿನ ಭಾಗದಲ್ಲಾದರೆ ಓದಿದ್ದು ಶಿವಮೊಗ್ಗದಲ್ಲಿ. ತಂದೆ ಶಿವಮೊಗ್ಗದ ಪ್ರಖ್ಯಾತ ರಮ್ಯಾ ಮೆಡಿಕಲ್ಸ್ ನ ಮಾಲೀಕರೂ ಹಾಗೂ 100ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ ಶ್ರೀ ಯಜ್ಞನಾರಾಯಣ. ತಾಯಿ ವಿಜಯ ಆಕಾಶವಾಣಿಯಲ್ಲಿ ಅನೇಕ ಸುಗಮ ಸಂಗೀತಗಳನ್ನು ಹಾಡಿದ ಕಲಾವಿದೆಯಾಗಿದ್ದಾರೆ.

ವಿನಯ್ ಅವರು ಉನ್ನತ ಅಧ್ಯಯನದ ಕಾರಣದಿಂದ ಉದ್ಯೋಗ ಅರಸಿ ಹೋದದ್ದು ಬೆಂಗಳೂರಿಗೆ. ಅಲ್ಲದೇ ಹಲವಾರು ದೇಶ-ವಿದೇಶಗಳನ್ನು ಸುತ್ತಿದ ಅನುಭವ ಇವರಿಗಿದೆ. ಅಲ್ಲೇ ಹಲವಾರು ವರ್ಷಗಳು ಇದ್ದು ನಂತರ ತಂದೆಯ ಅನಾರೋಗ್ಯ ಎಂದು ತನ್ನ ಕೆಲಸವನ್ನು ತೊರೆದು ತಂದೆ ತಾಯಿಯ ಆರೈಕೆಗಾಗಿ ಶಿವಮೊಗ್ಗಕ್ಕೆ #Shivamogga ಬಂದರು.ಹೆತ್ತವರ ಮೇಲೆ ಅದೆಂತ ಪ್ರೀತಿ ಎಂದರೆ, ಇಳಿ ವಯಸ್ಸಿನಲ್ಲಿ ಅವರನ್ನು ನೋಡುತ್ತಾ ನೋಡುತ್ತಾ ತಮಗೂ ಜೀವನದ ವೈರಾಗ್ಯ ಬರಲು ಸಾರ್ಥಕ ಎನ್ನುವ ಭಾವದಿಂದ ಆರೈಕೆ ಮಾಡಿದರು. ಅವರದು ಸಂಗೀತ, ಸಾಹಿತ್ಯ ಕ್ಷೇತ್ರದಲ್ಲಿ ಒಳ್ಳೆಯ ಹೆಸರು ಮಾಡಿದ ಮನೆತನ. ಸುಗಮ ಸಂಗೀತ ಕ್ಷೇತ್ರದ ಗಾರುಡಿಗ ಶಿವಮೊಗ್ಗ ಸುಬ್ಬಣ್ಣ #ShivamoggaSubbanna ಇವರ ದೊಡ್ಡಪ್ಪನಾದರೆ, ತಾಯಿ ಸೋಜುಗಾದ ಸೂಜು ಮಲ್ಲಿಗೆ ಎಂಬ ಹಾಡನ್ನು ಬಹು ವರ್ಷಗಳ ಹಿಂದೆಯೇ ಪ್ರಥಮ ಬಾರಿಗೆ ಹಾಡಿದ ಹೆಗ್ಗಳಿಕೆ ಉಳ್ಳವರು. ಹಾಗಾಗಿ ಈ ಎಲ್ಲದರಲ್ಲೂ ಆಸಕ್ತಿ ರಕ್ತದಲ್ಲಿಯೇ ಇತ್ತೇನೋ. ತಂದೆಯ ಮೆಡಿಕಲ್ ಶಾಪ್ ಶಿವಮೊಗ್ಗಕ್ಕೆ ಪ್ರಸಿದ್ಧಿ ಆಗಿತ್ತು. ಹಾಗಾಗಿ ಇವರ ಉದ್ಯೋಗ ಅದೇ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದೆಯಾದರೂ ಇವರ ಒಲವು ಹೆಚ್ಚಿದ್ದಿದ್ದು ಕಲಾರಾಧನೆಯಲ್ಲಿ.

ಸಾಹಿತ್ಯ, ಹಾಡು, ನಾಟಕ, ಯಕ್ಷಗಾನ, ನೃತ್ಯ, ನಟನೆ ಹೀಗೆ ಎಲ್ಲ ಕಲಾ ಪ್ರಾಕಾರಗಳಲ್ಲೂ ಆಳವಾದ ಪಾಂಡಿತ್ಯ ಹಾಗೇ ಅವಿರತವಾಗಿ ದುಡಿದ ಪ್ರತಿಭೆ. ನನಗೆ ವಿನಯಣ್ಣ ಪರಿಚಿತರಾದದ್ದು ಚಕ್ರವರ್ತಿ ಅವರು ಗೀತೆಯ ಪುಸ್ತಕವನ್ನು ತಮ್ಮ #YuvaBrigade ಯುವಾ ಬ್ರಿಗೇಡ್ ವತಿಯಿಂದ ಬಿಡುಗಡೆ ಮಾಡಿ ಅದನ್ನು ಎಲ್ಲರಿಗೂ ತಲುಪಿಸಬೇಕೆಂಬ ಉದ್ದೇಶದಲ್ಲಿದ್ದಾಗ ನನ್ನ ಮಗನ ಚೌಲದ ಕಾರ್ಯಕ್ರಮಕ್ಕೆ ಉಡುಗೊರೆಯಾಗಿ ಅದನ್ನೇ ನೀಡೋಣ ಎಂದು ವಿಚಾರಿಸಿದಾಗ ದೊರೆತ ಸಂಖ್ಯೆಯೇ ವಿನಯಣ್ಣನದು. ಅಂದು ಮಾತನಾಡಿಸಿದಾಗ ಸಾಮಾನ್ಯರಂತೆ ಅನಿಸಿದ್ದು ಸುಳ್ಳಲ್ಲ. ನಂತರವೇ ತಿಳಿದದ್ದು ಇದು ಅಸಾಮಾನ್ಯ ಪ್ರತಿಭೆ ಎಂದು.

ಇವರು ಕವಿಗಳ, ಸಾಹಿತಿಗಳ ಕುರಿತು ಪರಿಚಯಿಸುವಾಗ ಅವರೆಲ್ಲರೂ ನಮ್ಮೆದುರಿಗೆ ಇದ್ದಾರೆಯೇನೋ ಎಂದು ಅನಿಸಿಬಿಡುವುದಂತೂ ಸುಳ್ಳಲ್ಲ. ತುಂಗಾರತಿಗಾಗಿ ಸಾಹಿತ್ಯ ರಚಿಸಿ ಹಾಡಿದ ಹಾಡಂತೂ ಅತ್ಯದ್ಭುತ. ಕನ್ನಡಕ್ಕಾಗಿ ಇವರು ವಿಕಸನದಲ್ಲಿ ಹಾಡಿದ ಹಾಡು, ಭಾಷೆಯ ಸೊಗಡು ಬಹು ಚೆನ್ನಾಗಿ ತಿಳಿಯುವಂತಿದೆ. ಮೋದಿ 2.0ನಲ್ಲಿ ಅವರಿಗಾಗಿ ರಚಿಸಿದ ಸಾಹಿತ್ಯ, ಅದರ ಸ್ವರ ಸಂಯೋಜನೆ ಮಾಡಿದ್ದಂತು ನಿಜಕ್ಕೂ ಮೋಡಿ ಮಾಡುತ್ತದೆ. ಪ್ರತಿ ಬಾರಿಯೂ ಹೊಸದರ ಆಲೋಚನೆ ಅಷ್ಟೇ ಅಲ್ಲ ಅದನ್ನು ಸಾಕಾರಗೊಳಿಸುವುದು ಇವರ ವಿಶೇಷ.

#Ayodhya ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯ ಸಮಯಕ್ಕೆ ರಾಮಾಯಣದ ಘಟನೆ ಆಧಾರಿತವಾಗಿ ಬರೆದ ಲೇಖನಗಳಂತೂ ಅದೆಷ್ಟೋ ಜನರನ್ನು ಸೆಳೆಯಿತು. ಆ ಸಮಯದಲ್ಲಿ ನಮ್ಮ ಮನೆಯಲ್ಲಿ ನಿತ್ಯ ಸಂಜೆ ರಾಮ ಭಜನೆ ಮಾಡುತ್ತಿದ್ದೆವು. ಆಗ ಈ ಲೇಖನದ ತುಣುಕನ್ನು ಓದಿದಾಗ ಎಲ್ಲರೂ ತಲೆದೂಗಿದವರೇ. ಇನ್ನು ಮನೆಯಲ್ಲಿಯೇ ಸ್ವಾತಂತ್ರ ದಿನವನ್ನು ಹಬ್ಬವಾಗಿ ಆಚರಿಸುವ ಚಂದ್ರಶೇಖರ್ ಬಾಯರ್ ಅವರ ಮನೆಗೆ ಹೊಸತನದ ಕಾರ್ಯಕ್ರಮಕ್ಕಾಗಿ ವಿನಯಣ್ಣನ ಸಂಪರ್ಕಿಸಿದರೆ, ಅವರು ನೀಡಿದ ತಾಯಿ ಭಾರತೀಯ ಗಾನಸುಧೆ ಎಲ್ಲರ ಮನಕಾವರಿಸಿತು.
ವಿನಯ್ ಅವರ ಗರಡಿಯಲ್ಲಿ ಅದೆಷ್ಟು ಶಿವಮೊಗ್ಗದ ದೈತ್ಯ ಪ್ರತಿಭೆಗಳು ಬೆಳೆದಿದ್ದಾರೋ! ಎಲ್ಲರ ಬೆಳವಣಿಗೆಗೆ ಬೆಂಬಲ ಇವರದು. ನಗರದ ವಿವಿಧ ಕಾರ್ಯಕ್ರಮಗಳಲ್ಲಿ ತಾಯಂದಿರಿಗಾಗಿ ಹಾಡಿಸಿದ ಸಾವರ್ಕರ ಹಾಡಿದ ಜಯೋಸ್ತುತೆ… ತುಂಬಾ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದು. ಕವಿ ಹೆಚ್ಚೆಸ್ವಿ ಅಗಲಿದಾಗ ಅವರ ನುಡಿ ನಮನವಂತು ಮನಮುಟ್ಟುವಂತಿತ್ತು. ಹಾಗೆ ನಗರದ ಅನೇಕ ಮಹನೀಯರ ಕುರಿತು ಬರೆದ ಲೇಖನಗಳು ಅವರ ಸಾಹಿತ್ಯದ ಆಳ ಹಾಗೂ ಭಾಷಾ ಪ್ರಯೋಗಗಳ ಪ್ರೌಢಿಮೆಗೆ ಹಿಡಿದ ಕೈಗನ್ನಡಿ.

ಸಾಂಸ್ಕೃತಿಕ ಪ್ರಪಂಚದ ದಿಗ್ಗಜರ ಒಡನಾಟ ಇವರಿಗೆ ತುಸು ಹೆಚ್ಚೇ. ಉಪನ್ಯಾಸಕಿ ವೀಣಾ ಬನ್ನಂಜೆ, ಶತಾವಧಾನಿ ರಾ. ಗಣೇಶ್, ಚಕ್ರವರ್ತಿ ಸೂಲಿಬೆಲೆ, ನಿರುಪಮಾ ರಾಜೇಂದ್ರ ಹೀಗೆ ಹಲವಾರು ಮಹನೀಯರು ಇವರಿಗೆ ಚಿರಪರಿತರು. ಯಾವುದೇ ಕಾರ್ಯಕ್ರಮಕ್ಕೆ ಒಳ್ಳೆಯ ಅತಿಥಿ ಬೇಕೆಂದರೆ ನಾನಿವರನ್ನೇ ಕೇಳುವುದು. ಏಕೆಂದರೆ ಅವರ ಸಂಪರ್ಕ ಇದ್ದೇ ಇರುತ್ತದೆ ಎಂದು.

ನಗರದ ಅನೇಕ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ನಿರಂತರವಾಗಿ ತೊಡಗಿಸಿಕೊಂಡು ಸೇವೆ ಸಲ್ಲಿಸುತ್ತಿರುವ ವಿನಯ್ ಶಿವಮೊಗ್ಗ, ಕಲಾತ್ಮ ಎಂಬ ಸಂಗೀತ ಶಾಲೆಯನ್ನು ನಡೆಸುತ್ತಿದ್ದಾರೆ. ಕಲಾ ಹಾಗೂ ಸಾಹಿತ್ಯ ಪ್ರಾಕಾರಗಳಿಗೆ ಇವರು ತೋರಿದ ಒಲವು ಹಾಗೂ ಜ್ಞಾನದ ಕಾರಣದಿಂದಾಗಿ ಕರ್ನಾಟಕ ಸಂಘದ ಸದಸ್ಯರಾಗಿ, ನಿರ್ದೇಶಕರಾಗಿ ಈಗ ಕಾರ್ಯದರ್ಶಿಯಾಗಿ ತಮ್ಮ ಸೇವೆ ಸಲ್ಲಿಸುವಂತಾಗಿದೆ. ಹಾಗಾಗಿ ವಿನೂತನವಾದ ಕಾರ್ಯಕ್ರಮಗಳು ಆಯೋಜನೆಯಾಗಿ ಜನರನ್ನು ಕರ್ನಾಟಕ ಸಂಘ ಸೆಳೆಯುತ್ತಿರುವುದು ಕಂಡಿದ್ದೇವೆ.

ಅಲ್ಲದೇ ನಗರದ #Srigandha ಶ್ರೀಗಂಧ, ಅಭಿರುಚಿ ಹಾಗೂ ಅಜೇಯ ಸಂಸ್ಕೃತಿ ಬಳಗ ಮತ್ತು ಜಿ.ಎಸ್.ಎಸ್. ಪ್ರತಿಷ್ಠಾನಗಳಲ್ಲಿ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. 30 ಕ್ಕೂ ಹೆಚ್ಚು ಕಿರುಚಿತ್ರಗಳಲ್ಲಿ ಅಭಿನಯಿಸಿದ ಇವರಿಗೆ `ಬೆಳ್ಳಿಮಂಡಲ’ದವರು ನೀಡುವ ಅಂಬೆಗಾಲು ಕಿರುಚಿತ್ರಕ್ಕೆ ನೀಡುವ ಪುರಸ್ಕಾರದಲ್ಲಿ ಉತ್ತಮ ಮೋಷಕ ನಟ ಎನ್ನುವ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಇನ್ನಷ್ಟು ಸಾಹಿತ್ಯ ಸೇವೆ ಇವರನ್ನು ಅರಸಿ ಬರಲಿ. ಪ್ರಶಸ್ತಿಗೆ ಭಾಜನರಾಗಿ ಕನ್ನಡದ ಹಿರಿಮೆ ಹೆಚ್ಚಿಸಲಿ ಎನ್ನುವ ಆಶಯ ನನ್ನದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/04/Christ-King-PU-College-Video-1.mp4

Tags: Kannada News WebsiteLatest News KannadaMalnadShimogaShivamoggaShivamogga NewsSpecial ArticleVinay Shivamoggaಕಲಾ ಸರಸ್ವತಿರಮ್ಯಾ ಮೆಡಿಕಲ್ಸ್ವಿನಯ್ ಶಿವಮೊಗ್ಗಶಿವಮೊಗ್ಗಸಂಗೀತಸಾಹಿತ್ಯ
Share222Tweet139Send
Previous Post

ನೀವು ಅಸಹಾಯಕರೆಂಬ ಭಾವನೆ ದೊಡ್ಡ ತಪ್ಪು | ಸ್ವಾಮಿ ವಿವೇಕಾನಂದರ ಚಿಂತನೆ ಆದರ್ಶವಾಗಲಿ

Next Post

ಸಂಕ್ರಾಂತಿ ಹಬ್ಬದ ಪ್ರಯುಕ್ತ ಮೈಸೂರು – ಟುಟಿಕೊರಿನ್ ನಡುವೆ ಎರಡು ವಿಶೇಷ ರೈಲುಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಂಕ್ರಾಂತಿ ಹಬ್ಬದ ಪ್ರಯುಕ್ತ ಮೈಸೂರು – ಟುಟಿಕೊರಿನ್ ನಡುವೆ ಎರಡು ವಿಶೇಷ ರೈಲುಗಳು

ಸಂಕ್ರಾಂತಿ ಹಬ್ಬದ ಪ್ರಯುಕ್ತ ಮೈಸೂರು - ಟುಟಿಕೊರಿನ್ ನಡುವೆ ಎರಡು ವಿಶೇಷ ರೈಲುಗಳು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಹಾಯವಾಣಿ | ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ

March 17, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL