ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬಳ್ಳಾರಿ: ದೆಹಲಿಯ ನಿಜಾಮುದ್ದೀನ್ ಜಮಾತ್ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡು ಬಂದವರಿಂದಲೇ ದೇಶದಲ್ಲಿ ಕರೋನಾ ವೈರಸ್ ಹೆಚ್ಚಾಗಲು ಕಾರಣವಾಗಿದೆ ಎಂದು ಬಿಜೆಪಿ ಶಾಸಕ ಜಿ. ಸೋಮಶೇಖರ್ ಹೇಳಿದ್ದಾರೆ.
ನಗರದಲ್ಲಿ ವಿವಿಧ ಪ್ರದೇಶಗಳಲ್ಲಿ ಹಮ್ಮಿಕೊಂಡಿರುವ ಉಚಿತ ಔಷಧಿ ವಿತರಣೆ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರ ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಶ್ರಮಿಸುತ್ತಿದ್ದು ಕರೋನಾ ವೈರಸ್ ತಡೆಗಟ್ಟಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಕರೋನ ವೈರಸ್ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ ಎಂದರು.
ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಈಗಾಗಲೇ ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಿಕೊಂಡು ಕಾರ್ಯನಿರ್ವಹಿಸಲಾಗುತ್ತಿದೆ. ಈಗಾಗಲೇ ಬಳ್ಳಾರಿಯಲ್ಲಿ ಆರನೆಯ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಬೆಳಿಗ್ಗೆ 8ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ ಎಂದರು.
ಬಳ್ಳಾರಿಯಲ್ಲಿ ಜಮಾತ್ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡು ಬಂದವರಿಂದಲೇ ವೈರಸ್ ಹೆಚ್ಚಾಗಿದ್ದು ಹೊರಗಿನಿಂದ ಒಳ್ಳೆಯವರಂತೆ ಕಂಡರು ಮನಸ್ಥಿತಿಗಳು ಮಾತ್ರ ಹಾಗೆಯೇ ಇವೆ. ಇವರಿಂದಾಗಿಯೇ ಆಂದ್ರ ತಮಿಳುನಾಡಿನಲ್ಲಿ ಕರೋನಾ ವೈರಸ್ ಹೆಚ್ಚಾಗಲು ಕಾರಣ ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ಬಳ್ಳಾರಿ ಹಾಸ್ಪಿಟಲ್ ನಲ್ಲಿ ಕರೋನಾ ವೈರಸ್ ಗೆ ಸಂಬಂಧಪಟ್ಟಂತಹ ಟೆಸ್ಟ್ ಮಾಡಲು ಸುಸಜ್ಜಿತವಾದ ಲ್ಯಾಬ್ ತೆರೆಯಲಾಗಿದೆ. ಲ್ಯಾಬ್ ಮೂಲಕ ಪ್ರತಿ ದಿನಕ್ಕೆ 110 ಟೆಸ್ಟ್ಗಳನ್ನು ಮಾಡಬಹುದು ಎಂದು ತಿಳಿಸಿದ್ದಾರೆ.
(ವರದಿ: ಎಂ.ಎಂ. ನಾಡಿಗೇರ್, ಬಳ್ಳಾರಿ)
Get in Touch With Us info@kalpa.news Whatsapp: 9481252093
Discussion about this post