ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅನವರತ ಫೌಂಡೇಷನ್ನಿಂದ ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ವಿದ್ಯಾರ್ಥಿ ವೇತನ ನೀಡುವ ಸಲುವಾಗಿ ‘ವಿವೇಕ ವಿದ್ಯಾನಿಧಿ’ ಸ್ಥಾಪಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಫೌಂಡೇಷನ್ನ ಗೌರವಾಧ್ಯಕ್ಷ, ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಲೆನಾಡಿನ ಸಾಂಸ್ಕøತಿಕ ಹಾಗೂ ಶೈಕ್ಷಣಿಕ ರಾಜಧಾನಿಯಾದ ಶಿವಮೊಗ್ಗ ನಗರದ ಯುವಜನತೆಯ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ನಿಟ್ಟಿನಲ್ಲಿ ಅನವರತ ಫೌಂಡೇಶನ್ ನಿರಂತರವಾಗಿ ಶ್ರಮಿಸುತ್ತಿದೆ. ಸಂಸ್ಥೆಯ ಸಮಾಜಮುಖಿ ಕಳಕಳಿಯ ಭಾಗವಾಗಿ, ಕಳೆದ ವರ್ಷದ ಯಶಸ್ವಿ ಯೋಜನೆಯ ಮುಂದುವರಿದ ಭಾಗವಾಗಿ ಈ ವರ್ಷವೂ ಸಹ ಸಮಾಜದ ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳ ಅರ್ಹ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಉತ್ತೇಜನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಅಧಿಕೃತವಾಗಿ ಘೋಷಿಸಲಾಗಿದೆ ಎಂದರು.
ಈ ಯೋಜನೆಯಡಿಯಲ್ಲಿ ಪಾರದರ್ಶಕವಾಗಿ ಆಯ್ಕೆಯಾಗುವ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಲಾ 5,000 ರೂ. (ಐದು ಸಾವಿರ ರೂಪಾಯಿಗಳು) ವಿದ್ಯಾರ್ಥಿವೇತನವನ್ನು ನೇರವಾಗಿ ಪ್ರೋತ್ಸಾಹಧನವಾಗಿ ನೀಡಲಾಗುವುದು ಎಂದರು.
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ಇಲ್ಲಿಯವರಗೆ 50 ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, ಇದನ್ನು 200 ವಿದ್ಯಾರ್ಥಿಗಳಿಗೆ ಕೊಡಬೇಕೆಂದು ತೀರ್ಮಾನಿಸಲಾಗಿದೆ ಎಂದರು.
Also read>> ವೇಗ ಮತ್ತು ಪ್ರಗತಿಯ ಹೆಜ್ಜೆ | 2014ರ ನಂತರದಲ್ಲಿ ಭಾರತದ ಮೂಲಸೌಕರ್ಯ ಕ್ರಾಂತಿ
ಅಗತ್ಯ ದಾಖಲೆಗಳಾದ ವಿದ್ಯಾರ್ಥಿಯ ಆಧಾರ್ ಕಾರ್ಡ್, ವಿದ್ಯಾರ್ಥಿಯ ಭಾವಚಿತ್ರ, ಶಾಲಾ ಅಥವಾ ಕಾಲೇಜಿನ ಮಾಹಿತಿಗಳು(ಕೆಳಗಿನಂತೆ ಒಳಗೊಂಡಿರಬೇಕು), ಪ್ರಸ್ತುತ ಓದುತ್ತಿರುವ ಶಾಲೆ/ಕಾಲೇಜಿನ ಅಡ್ಮಿಷನ್ ಪ್ರವೇಶ ಪತ್ರ/ಪ್ರಮಾಣಪತ್ರ, ವೈಯಕ್ತಿಕ ಬ್ಯಾಂಕ್ ಅಕೌಂಟ್ ಹೆಸರು ಮತ್ತು ಅಕೌಂಟ್ ನ ವಿವರಗಳು. ಶುಲ್ಕ ಕಟ್ಟಲಾಗಿರುವ ರಶೀದಿ ಪತ್ರ.(30 ಸಾವಿರ ರೂ ಮೀರಿರಬಾರದು), ಹಿಂದಿನ ವರ್ಷದ ಮಾಕ್ರ್ಸ್ ಕಾರ್ಡ್ (ಶೇಕಡ 50% ರಿಂದ 75%ರ ಒಳಗೆ ಮಾಕ್ರ್ಸ್ ಹೊಂದಿರಬೇಕು), ಪೆÇೀಷಕರ ಬಿಪಿಎಲ್ ಕಾರ್ಡ್ ಅಥವಾ ಆದಾಯ ಪ್ರಮಾಣ ಪತ್ರ ( 1,80,000 ರೂ ಗಿಂತ ಕಡಿಮೆ ಇರಬೇಕು), ಪೋಷಕರ ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್(ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಮತದಾರರಾಗಿರಬೇಕು), ಸ್ಕಾಲರ್ಶಿಪ್ ಅರ್ಜಿಗಳನ್ನು ನೆಹರೂ ರಸ್ತೆಯಲ್ಲಿರುವ ಶಾಸಕರ ಕಛೇರಿ ಕರ್ತವ್ಯ ಭವನದಲ್ಲಿ ಮಾತ್ರ ನೀಡಲಾಗುವುದು. ಅರ್ಜಿ ಸಲ್ಲಿಸಲು ಕೊನೆ ದಿನಾಂಕ 5-9-2026 ಆಗಿದೆ ಎಂದರು.
ಆರ್ಥಿಕ ಹಿಂದುಳಿದ ಅರ್ಹ ಕುಟುಂಬಗಳ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಅವಕಾಶವನ್ನು ಬಳಸಿಕೊಳ್ಳಬೇಕೆಂದು ಅವರು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಗರಾಧ್ಯಕ್ಷ ಮೋಹನ್ ರೆಡ್ಡಿ, ಪ್ರಮುಖರಾದ ಎಸ್. ಜ್ಞಾನೇಶ್ವರ್, ಮಂಜುನಾಥ್ ನವುಲೆ, ಶಿವಕುಮಾರ್ ಡಿ.ಎಸ್., ಅನವರತ ಫೌಂಡೇಷನ್ನ ಸಹನಾ ಚೇತನ್, ಪೃಥ್ವೀ ಗೌಡ, ಪ್ರಜ್ವಲ್, ಸಂಗೀತ, ಗುರುರಾಜ್, ನವೀನ್, ಪ್ರಿಯಾ, ಸುನಿಲ್ ಅಂಬೋರೆ, ಆದರ್ಶ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









