ಶಿವಮೊಗ್ಗ: ಬಾಪೂಜಿ ನಗರ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಲೋಕಸಭಾ ಚುನಾವಣೆ-2019 ರ ಮತದಾನ ಜಾಗೃತಿ ಕಾರ್ಯಕ್ರಮ ಮತ್ತು ಮತದಾರರಿಗೆ ಅರಿವು ಮೂಡಿಸಲಾಯಿತು. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ ಶಿವೇಶಿ ಹಾಗೂ ರಾಜ್’ಕುಮಾರ್ ಮತ್ತು ಇತರ ಉಪನ್ಯಾಸಕರು ವಿದ್ಯಾರ್ಥಿಗಳಲ್ಲಿ ಮತದಾನದ ಮಹತ್ವ ಮತ್ತು ಅದರ ಅರಿವನ್ನು ಮೂಡಿಸಿದರು.
ಭದ್ರಾವತಿ:
ಭದ್ರಾವತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಭದ್ರಾವತಿ ನಗರ ಪಾಲಿಕೆಯ ಆಯುಕ್ತ ಮನೋಹರ್ ಹಾಗೂ ತಹಸೀಲ್ದಾರ್ ಸೋಮಶೇಖರ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಸಮನ್ವಯ ಕಾಶಿ ಅವರು ಮತದಾನದ ಅರಿವಿನ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎನ್’ಎಸ್’ಎಸ್ ಅಧಿಕಾರಿ ಗಂಗಾಧರ್ ಹಾಗೂ ಕಾಲೇಜಿನ ಪ್ರಭಾರಿ ಪ್ರಾಂಶುಪಾಲರು ಹಾಜರಿದ್ದರು.
ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಮತದಾನದ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲಾಡಳಿತ ಹಾಗೂ ಭದ್ರಾವತಿ ತಾಲೂಕು ಆಡಳಿತದ ಆಶ್ರಯದಲ್ಲಿ ನಡೆಸಲಾಯಿತು. ಮತ ಯಂತ್ರದ ಬಗ್ಗೆ ವಿವರವಾಗಿ ಪ್ರಾತ್ಯಕ್ಷತೆ ಮೂಲಕ ನಡೆಸಲಾಯಿತು.
Discussion about this post