ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಹಲವು ತಿಂಗಳುಗಳಿಂದ ಪ್ರತಿಪಕ್ಷಗಳು ತೀವ್ರವಾಗಿ ವಿರೋಧಿಸಿದ್ದ ವಕ್ಫ್ ತಿದ್ದುಪಡಿ ಮಸೂದೆಯನ್ನು #WaqfAmendmentBill ಕೊನೆಗೂ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದು, ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು.
ಕೇಂದ್ರ ಸಂಸದೀಯ ವ್ಯವಹಾರಗಳ ಮತ್ತು ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಸೂದೆಯನ್ನು ಮಂಡಿಸಿದ್ದು, ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದವು.
Also Read>> ಚಿಕ್ಕಮಗಳೂರು | ಮೂವರ ಹತ್ಯೆಗೈದು ವ್ಯಕ್ತಿ ಆತ್ಮಹತ್ಯೆ
ಮಸೂದೆಯ ಕುರಿತು ಎಂಟು ಗಂಟೆಗಳ ಚರ್ಚೆಗೆ ಅವಕಾಶವಿದ್ದು, ಹೆಚ್ಚುವರಿ ಮೊತ್ತಕ್ಕೆ ಅವಕಾಶ ನೀಡಲಾಗಿದೆ. ಮಸೂದೆಯನ್ನು ಸದನದ ಗಮನಕ್ಕೆ ತಂದಾಗಿನಿಂದ ತಿದ್ದುಪಡಿಗಳಿಗೆ ಸಮಯ ನೀಡಿಲ್ಲ ಎಂದು ಆರೋಪಿಸಿ ಕೇಂದ್ರವು ಕಾನೂನನ್ನು ಬುಲ್ಡೋಜರ್ ಪದ್ದತಿ ಅನುಸರಿಸುತ್ತಿದೆ ಎಂದು ವಿರೋಧ ಪಕ್ಷವು ಆರೋಪಿಸಿದೆ.

1995ರಲ್ಲಿ ಈ ಮಸೂದೆಯನ್ನು ಪರಿಚಯಿಸಿದಾಗ ಯಾರು ವಿರೋಧಿಸಿರಲಿಲ್ಲ. ಈ ಹಿಂದೆಯೂ ಹಲವು ಬಾರಿ ತಿದ್ದುಪಡಿಯಾಗಿದ್ದು ವಿರೋಧಗಳು ಬಂದಿರಲಿಲ್ಲ. ಈಗ ನಾವು ತಿದ್ದುಪಡಿ ಮಾಡಿದಾಕ್ಷಣ ಅಸಂವಿಧಾನಿಕ ಎಂದು ಅರಚುತ್ತಿದ್ದಾರೆ. ರಾಜಕೀಯ ಉದ್ದೇಶದಿಂದ ಮಸೂದೆ ವಿರೋಧಿಸುತ್ತಿದ್ದಾರೆ ಎಂದರು.
ಮಂಗಳವಾರ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ವಿಧೇಯಕ ಮಂಡನೆ ವಿಷಯವನ್ನು ಕೇಂದ್ರ ಸರ್ಕಾರ ಪ್ರಕಟಿಸಿತ್ತು. ವಿಧೇಯಕದ ಕುರಿತು ಉಭಯ ಸದನದಲ್ಲೂ ತಲಾ 8 ಗಂಟೆಗಳ ಕಾಲ ಚರ್ಚೆಗೆ ಸಮಯ ಕಲ್ಪಿಸುವುದಾಗಿ ಸರ್ಕಾರ ಮಾಹಿತಿ ನೀಡಿತ್ತು.
ಮಂಗಳವಾರ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಹಾಜರಿದ್ದ ವಿಪಕ್ಷಗಳ ಸದಸ್ಯರು ಸದಸ್ಯರು 12 ಗಂಟೆಗಳ ಅವಕಾಶಕ್ಕೆ ಮನವಿ ಮಾಡಿದರು. ಆದರೆ, ಬೇಡಿಕೆ ತಿರಸ್ಕರಿಸಿದ ಸರ್ಕಾರ, ಮತ್ತೊಂದು ಮಹತ್ವದ ವಿಷಯವಾದ ಮಣಿಪುರದ ಕುರಿತೂ ಬುಧವಾರ ಚರ್ಚೆಗೆ ಅವಕಾಶ ನೀಡಬೇಕಿದೆ. ಹೀಗಾಗಿ ವಕ್ಫ್ ತಿದ್ದುಪಡಿ ವಿಧೇಯಕದ ಕುರಿತು 8 ಗಂಟೆಗಳ ಚರ್ಚೆಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿತು. ಹೀಗಾಗಿ ವಿಪಕ್ಷಗಳ ಸದಸ್ಯರು ಅಸಮಾಧಾನಗೊಂಡಿದ್ದರು ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರವು ಮಂಗಳವಾರ ಮೊದಲು ವಕ್ಫ್ (ತಿದ್ದುಪಡಿ) ಮಸೂದೆ 2025 ಅನ್ನು ಪರಿಚಯಿಸುವುದಾಗಿ ಘೋಷಿಸಿತು. ಪ್ರಶ್ನೋತ್ತರ ಅವಧಿಯ ನಂತರ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗುವುದು ಎಂದು ಬಹಿರಂಗಪಡಿಸಿತು. ಮಸೂದೆಯ ನಂತರ ಎಂಟು ಗಂಟೆಗಳವರೆಗೆ ವಿವರವಾದ ಚರ್ಚೆ ನಡೆಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post