No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ವಾಣಿಜ್ಯ

ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರ ಸ್ಥಾಪಿಸಲು ಆಹ್ವಾನ: ಸಚಿವ ಎಂ. ಬಿ. ಪಾಟೀಲ

kalpa News by kalpa News
September 28, 2023
in ವಾಣಿಜ್ಯ
0
ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರ ಸ್ಥಾಪಿಸಲು ಆಹ್ವಾನ: ಸಚಿವ ಎಂ. ಬಿ. ಪಾಟೀಲ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ವಾಷಿಂಗ್ಟನ್ ಡಿಸಿ |

ಅಮೆರಿಕ ಪ್ರವಾಸದಲ್ಲಿರುವ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ MBPatil ಅವರ ನೇತೃತ್ವದ ನಿಯೋಗವು ಮಂಗಳವಾರ ಐಎಂಎಫ್ (ಅಂತರರಾಷ್ಟ್ರೀಯ ಹಣಕಾಸು ನಿಧಿ) ಜೊತೆ ಮಹತ್ವದ ಮಾತುಕತೆ ನಡೆಸಿತು. ಜಾಗತಿಕ ಕಂಪನಿಗಳು ಅನುಸರಿಸುತ್ತಿರುವ “ಚೀನಾ + ಒನ್” ಕಾರ್ಯಾಚರಣೆ ತಂತ್ರದ ಸದುಪಯೋಗ ಪಡೆಯಲು ಕರ್ನಾಟಕಕ್ಕೆ ಇರುವ ಅನುಕೂಲತೆಗಳ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.

ಐಎಂಎಫ್ ಉಪ ವ್ಯವಸ್ಥಾಪಕ ನಿರ್ದೇಶಕಿ ಗೀತಾ ಗೋಪಿನಾಥ್ ಮತ್ತಿತರರು ಪಾಲ್ಗೊಂಡಿದ್ದ ಉನ್ನತ ಮಟ್ಟದ ಸಭೆಯಲ್ಲಿ ಭಾರತದ ಬೆಳವಣಿಗೆ ಸಾಧ್ಯತೆಗಳ ಬಗ್ಗೆ ವಿಶ್ಲೇಷಣೆಯನ್ನೂ ನಡೆಸಲಾಯಿತು.
ಪ್ರಮುಖ ಎಂ ಎನ್ ಸಿ ಕಂಪನಿಗಳು ಚೀನಾದಲ್ಲಿ ತಾವು ಹೊಂದಿರುವ ತಯಾರಿಕಾ ಘಟಕದ ಜೊತೆಗೆ ಬೇರೆ ದೇಶದಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಯೋಜನೆಗಳನ್ನು ಹಾಕಿಕೊಳ್ಳುತ್ತಿವೆ (ಚೀನಾ + ಒನ್ ನೀತಿ). ಈ ಸಂಬಂಧ ಭಾರತವು ಜಾಗತಿಕ ಕಂಪನಿಗಳ ಗಮನ ಸೆಳೆದಿದ್ದು, ಕರ್ನಾಟಕವು ಆಯಕಟ್ಟಿನ ಸ್ಥಳವಾಗಿದೆ ಎಂಬ ಬಗ್ಗೆ ಎಂಬಿ ಪಾಟೀಲ ಅವರು ಸಭೆಯ ಗಮನ ಸೆಳೆದರು.

ಇದೆ ವೇಳೆ, ಬೆಂಗಳೂರಿಗೆ ಹೆಚ್ಚಿನ ಹೂಡಿಕೆಯನ್ನು ಸೆಳೆಯುವ ನಿಟ್ಟಿನಲ್ಲಿ ನಗರದ ದಟ್ಟಣೆಯನ್ನು ತಗ್ಗಿಸುವ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಸಚಿವ ಪಾಟೀಲ ಅವರು ಕೌಶಲ್ಯಯುಕ್ತ ಕಾರ್ಮಿಕರ ಸಂಖ್ಯೆಯಲ್ಲಿ ಕೊರತೆ ಉಂಟಾಗದಂತಹ ನೀತಿಯನ್ನು ರೂಪಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು.
ಮುಂಚೂಣಿ ವಿಮಾನ ತಯಾರಿಕಾ ಕಂಪನಿ ಬೋಯಿಂಗ್ ಜೊತೆ ನಡೆದ ಸಭೆಯಲ್ಲಿ ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರಗಳ ಸ್ಥಾಪನೆ, ಪೈಲಟ್ ಹಾಗೂ ವಿಮಾನ ಸಿಬ್ಬಂದಿ ತರಬೇತಿ ಕ್ಷೇತ್ರದಲ್ಲಿ ಇರುವ ಹೂಡಿಕೆ ಅವಕಾಶಗಳ ಬಗ್ಗೆ ಗಮನ ಸೆಳೆಯಲಾಯಿತು.

ಯುಎಸ್ಐಎಸ್ ಪಿಎಫ್ (ಯುಎಸ್- ಇಂಡಿಯಾ ಸ್ಟ್ರಾಟೆಜಿಕ್ ಪಾರ್ಟ್ನರ್ಶಿಪ್ ಫೋರಂ) ಜೊತೆ ನಡೆದ ಸಭೆಯಲ್ಲಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರ ನಿರ್ಮಾಣವಾಗಲಿರುವ ಆರೋಗ್ಯ ತಂತ್ರಜ್ಞಾನ ಪಾರ್ಕ್ ನಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಬಗ್ಗೆ ಅವಲೋಕಿಸಲಾಯಿತು.

ಕರ್ನಾಟಕದಲ್ಲಿ ವೈದ್ಯಕೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಪೂರಕವಾದ ನೀತಿಗಳನ್ನು ಅನುಸರಿಸುವ ಅಗತ್ಯವಿದೆ ಎಂಬ ಸಲಹೆ ಸಭೆಯಲ್ಲಿದ್ದವರಿಂದ ವ್ಯಕ್ತವಾಯಿತು.
ಯುಎಸ್ಐಎಸ್ ಪಿಎಫ್ ಪ್ರತಿನಿಧಿಗಳನ್ನು ಉದ್ದೇಶಿಸಿ ಎಂಬಿ ಪಾಟೀಲ ಅವರು ಮಾತನಾಡಿ, ಇ-ಆಡಳಿತ ಮತ್ತು ಸ್ಥಳೀಯ ಸಂಸ್ಥೆ ಗಳ ಮುಂದಿರುವ ಕೆಲವು ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬ್ಲಾಕ್ ಚೈನ್ ತಂತ್ರಜ್ಞಾನದ ನೆರವು ಪಡೆಯಲು ಸಮರ್ಥ ಪಾಲುದಾರಿಕೆಗಾಗಿ ಶೋಧನೆ ನಡೆಸಲಾಗುವುದು ಎಂದರು.

Also read: ನಿಖರ ಬೆಳೆ ಸಮೀಕ್ಷೆ ನಡೆಸಿ ರೈತರಿಗೆ ಆತ್ಮವಿಶ್ವಾಸ ತುಂಬಿ: ಅಧಿಕಾರಿಗಳಿಗೆ ಕೃಷಿ ಸಚಿವರ ಸೂಚನೆ

ಇಂಡಸ್ಟ್ರಿ 4.0 ಸಂಬಂಧಿಸಿದ ಕೌಶಲಗಳ ಕಲಿಕೆಗೆ ಪೂರಕವಾಗಿ ತರಬೇತಿ ಪಠ್ಯಕ್ರಮಗಳನ್ನು ಸಿದ್ದಪಡಿಸುವ ಬಗ್ಗೆಯೂ ವಿಚಾರ ವಿನಿಮಯ ನಡೆಯಿತು. ಜಿಇ ವೆರ್ನೋವ ಜೊತೆಗಿನ ಸಭೆಯಲ್ಲಿ ಕರ್ನಾಟಕದಲ್ಲಿ ಕಾಂಪೋನೆಂಟ್ ಗಳ ತಯಾರಿಕೆಗೆ ಇರುವ ಅವಕಾಶಗಳ ಬಗ್ಗೆ ಗಮನಹರಿಸಲಾಯಿತು. ಜೊತೆಗೆ, ಸೌರಶಕ್ತಿ, ಪವನ ಶಕ್ತಿ ಮತ್ತಿತರ ಪರ್ಯಾಯ ಇಂಧನಗಳ ಸಂಗ್ರಹ ವ್ಯವಸ್ಥೆ ಸ್ಥಾಪನೆ ಸಂಬಂಧ ಇರುವ ಹೂಡಿಕೆ ಅವಕಾಶಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ಜಿಇ ಹೆಲ್ತ್ ಕೇರ್ ದೊಂದಿಗಿನ ಸಭೆಯಲ್ಲಿ ಮುಂಬರುವ ದಶಕದಲ್ಲಿ ಜೀವ ವಿಜ್ಞಾನಗಳ ಕ್ಷೇತ್ರದಲ್ಲಿ ಎಐ/ಎಂಎಲ್ ನಿರ್ಣಾಯಕ ಪಾತ್ರ ವಹಿಸಲಿರುವ ನಿರೀಕ್ಷೆಯಿರುವುದರಿಂದ ಅದಕ್ಕೆ ತಕ್ಕಂತೆ ಉದ್ಯೋಗಿಗಳ ಕೌಶಲವನ್ನು ಮೇಲ್ದರ್ಜೆಗೇರಿಸಲು ಸಹಭಾಗಿತ್ವಗಳನ್ನು ಸಾಧಿಸುವ ಬಗ್ಗೆ ಚರ್ಚಿಸಲಾಯಿತು.

ಬೋಯಿಂಗ್ ಉಪಾಧ್ಯಕ್ಷರಾದ ಗ್ರೆಟಾ ಲಂಡ್ ಬರ್ಗ್, ನಿರ್ದೇಶಕರಾದ ನಿಕೋಲ ಪೊರ್ರೆಕಾ, ಯುಎಸ್ಐ ಪಿಎಫ್ ಸಿಇಒ ಮುಕೇಶ್ ಅಘಿ, ಉಪಾಧ್ಯಕ್ಷರಾದ ಸೂಸನ್ ರಿಚಿ, ಜಿಇ ವೆರ್ನೋವಾ ವ್ಯವಸ್ಥಾಪಕ ನಿರ್ದೇಶಕ ಜಾರ್ಜ್ ಪಿಕ್ಯಾರ್ಟ್ ಮತ್ತಿತರರು ಸಭೆಯಲ್ಲಿ ಪಾಲ್ಕೊಂಡಿದ್ದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಅವರು ಸಭೆಗಳಲ್ಲಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaWashington DCವಾಷಿಂಗ್ಟನ್ ಡಿಸಿ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿಖರ ಬೆಳೆ ಸಮೀಕ್ಷೆ ನಡೆಸಿ ರೈತರಿಗೆ ಆತ್ಮವಿಶ್ವಾಸ ತುಂಬಿ: ಅಧಿಕಾರಿಗಳಿಗೆ ಕೃಷಿ ಸಚಿವರ ಸೂಚನೆ

Next Post

ಕಿಕ್ಕಿರಿದ ಜನಸ್ತೋಮದ ನಡುವೆ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ಮೆರವಣಿಗೆ

kalpa News

kalpa News

Next Post
ಕಿಕ್ಕಿರಿದ ಜನಸ್ತೋಮದ ನಡುವೆ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ಮೆರವಣಿಗೆ

ಕಿಕ್ಕಿರಿದ ಜನಸ್ತೋಮದ ನಡುವೆ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ಮೆರವಣಿಗೆ

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL