ಕಲ್ಪ ಮೀಡಿಯಾ ಹೌಸ್ | ವಯನಾಡ್ |
ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ #Wayanad Landslide ಮೃತಪಟ್ಟವರ ಸಂಖ್ಯೆ 73ಕ್ಕೆ ಏರಿಕೆಯಾಗಿದ್ದು, ಹಲವು ಕುಟುಂಬಗಳು ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದೆ.
ಕಂಡು ಕೇಳರಿಯದ ರೀತಿಯಲ್ಲಿ ಭೂಕುಸಿತ ಸಂಭವಿಸಿದ್ದು, ಕನಿಷ್ಠ 400ಕ್ಕೂ ಅಧಿಕ ಕುಟುಂಬಗಳು ದುರಂತದಲ್ಲಿ ಸಿಲುಕಿವೆ ಎಂದು ಹೇಳಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆದಿದೆ.
Also read: ಹಾಸನ | ಬೆಚ್ಚಿ ಬೀಳಿಸಿದ ಭಾರೀ ಭೂಕುಸಿತ | ಮಣ್ಣಿನೊಂದಿಗೆ ಪ್ರಪಾತ ಸೇರಿದ ರಸ್ತೆ
ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಾಗಿವೆ ಎಂದು ವರದಿಯಾಗಿದೆ. ಇಂದು ನಸುಕಿನ ಜಾವ ಭೂಕುಸಿತ ಸಂಭವಿಸಿದ್ದು, ಮನೆಗಳು ಮತ್ತು ಕುಟುಂಬಗಳು ಕೊಚ್ಚಿಕೊಂಡು ಹೋಗಿವೆ. ಪೋತುಕಲ್ ಗ್ರಾಮದ ಬಳಿಯ ನದಿಯ ದಡದಿಂದ ಐದು ವರ್ಷದ ಮಗು ಸೇರಿದಂತೆ ಮೂರು ಶವಗಳನ್ನು ಹೊರತೆಗೆಯಲಾಗಿದೆ.
ಮುಂಡಕ್ಕೆÊ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾಗಿ ಸಂಪರ್ಕ ಕಡಿತಗೊಂಡಿವೆ.
ಎನ್’ಡಿಆರ್’ಎಫ್, ಅಗ್ನಿಶಾಮಕ ದಳ, ಪೊಲೀಸ್, ಅರಣ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಸಾರ್ವಜನಿಕರು ಸಂಯುಕ್ತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.
ನಾಳೆ ರಾಹುಲ್ ಗಾಂಧಿ ಭೇಟಿ
ಇನ್ನು, ಘಟನೆ ಹಿನ್ನೆಲೆಯಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಮುಖಂಡರಾದ ಪ್ರಿಯಾಂಕಾ ವಾದ್ರಾ ಅವರುಗಳು ನಾಳೆ ವಯನಾಡ್’ಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post