No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆತ್ಮಶುದ್ಧಿ ಇರುವುದರಿಂದ ನಮಗೆ ಯಾವುದರ ಭಯವೂ ಇಲ್ಲ : ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 26, 2018
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಬೆಂಗಳೂರು: ಆತ್ಮಶುದ್ಧಿ ಇರುವುದರಿಂದ ನಮಗೆ ಯಾವುದರ ಭಯವೂ ಇಲ್ಲ, ಶ್ರೀರಾಮಚಂದ್ರಾಪುರಮಠವೆಂಬ  ಶಂಕರಾಚಾರ್ಯ ಸ್ಥಾಪಿತ ಸಂಸ್ಥೆಯನ್ನು ಯಾರು ಏನು ಮಾಡಲು ಪ್ರಯತ್ನಪಟ್ಟರೂ ಏನೂ ಆಗದು. ಸಮಾಜದ ಪರಿವರ್ತನೆಯಲ್ಲಿ ತೊಡಗಿಕೊಂಡವರು ವಿಷಕಂಠರಾಗಿ ಎಲ್ಲವನ್ನೂ ಎದುರಿಸಲು ಸಿದ್ದರಾಗಿರಬೇಕಾಗುತ್ತದೆ ಎಂದು ಜಗದ್ಗುರು ಶಂಕರಾಚಾರಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು.

ಗಿರಿನಗರದ ಶಾಖಾಮಠದಲ್ಲಿ ತಮ್ಮ 25ನೇ ಚಾತುರ್ಮಾಸ್ಯ ವ್ರತ ಸಮಾಪ್ತಿಯ ಸೀಮೋಲ್ಲಂಘನದ ಧರ್ಮ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಪೂಜ್ಯ ಶ್ರೀಗಳು, ಚಾತುರ್ಮಾಸ್ಯ ಭಾನ್ಕುಳಿಯ ‘ಗೋಸ್ವರ್ಗ’ದಲ್ಲಿ ನಡೆಯಬೇಕಿತ್ತು, ಆದರೆ ದೈವೇಚ್ಛೆಂತೆ ‘ಗುರುಸ್ವರ್ಗ’ ಗಿರಿನಗರದ ಶ್ರೀರಾಮಶ್ರಮದಲ್ಲಿ ನಡೆದಿದೆ.  ಇದು ಪೂರ್ವಾಚಾರ್ಯರು ಬ್ರಹ್ಮೈಕ್ಯರಾದ ಸ್ಥಳ ಇಲ್ಲಿ ಅವರ ಸಮಾಧಿ ಮಂದಿರವಿದೆ. ನಮಗೂ ಗಿರಿನಗರ ಮಠಕ್ಕೂ ಆತ್ಮಸಂಬಂಧವಿದೆ. ನಾವು ಇಲ್ಲಿಯೇ ಸಂನ್ಯಾಸ ಸ್ವೀಕಾರ ಮಾಡಿರುವುದಾಗಿದ್ದು, ಇಲ್ಲಿಯೇ 25 ನೇ ಚಾತುರ್ಮಾಸ್ಯವನ್ನು ಪೂರೈಸಿರುವುದು ಸಂತಸ ತಂದಿದೆ. ಸೇವೆ ಮಾಡಲು ದೇಹಕ್ಕೆ ಬಲ ಬೇಕಾದರೆ, ಮನಸ್ಸಿಗೆ ಭಾವ ಬೇಕು. ಭಾವ – ಬಲಗಳು ಸೇರೆದಾಗ ಮಾತ್ರ ಸೇವೆ ಸಲ್ಲಿಸಲು ಸಾಧ್ಯ. ಇಂದು ಹೆಮ್ಮೆಯ ಕಾರ್ಯಕರ್ತೆ ಶಾರದಾ ಜಯಗೋವಿಂದ ‘ಚಾತುರ್ಮಾಸ್ಯ ಪ್ರಶಸ್ತಿ’ಯನ್ನು ಸ್ವೀಕರಿಸಿರುವುದು ಸಂತಸ ತಂದಿದೆ ಎಂದರು.

ಚಾತುರ್ಮಾಸ್ಯಕ್ಕೆ ವಿಘ್ನ: 

ಇತ್ತೀಚಿಗೆ ನಮ್ಮ ಚಾತುರ್ಮಾಸ್ಯ ವ್ರತಕ್ಕೆ ತೊಂದರೆ ನೀಡುವ ಪರಂಪರೆಯೇ ಆರಂಭವಾಗಿದೆ. ನಾವು ಚಾತುರ್ಮಾಸ್ಯ ಮಾಡುವಾಗ ಮಠದ ಶತ್ರುಗಳೂ ಚಾತುರ್ಮಾಸ್ಯ ಮಾಡುತ್ತಾರೆ. ನಾವು ರಾಮ ಸ್ಮರಣೆಯಲ್ಲಿದ್ದರೆ, ಅವರು ನಮ್ಮದೇ ಸ್ಮರಣೆಯಲ್ಲಿ ಇರುತ್ತಾರೆ. ಚಾತುರ್ಮಾಸ್ಯಕ್ಕೆ ಇರುವ ನಮ್ಮ ಬದ್ಧತೆಗಿಂತ, ಚಾತುರ್ಮಾಸ್ಯ ಭಂಗಕ್ಕೆ ಅದಕ್ಕಿಂತ ಹೆಚ್ಚು ಪ್ರಯತ್ನ ನಡೆಯುತ್ತಿದೆ. ಇಷ್ಟೆಲ್ಲಾ ವಿಘ್ನಗಳ ನಡುವೆಯೂ ಚಾತುರ್ಮಾಸ್ಯ ಸುಸಂಪನ್ನವಾಗಿದೆ. ಅದಕ್ಕೆ ದೇವರ ದಯೆ ಮಾತ್ರ ಕಾರಣ.

ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ಮಠದಲ್ಲಿ ಯಾವ ಲೋಪವೂ ಇಲ್ಲ. ಆದರೆ ಯಾರು ಇಂತಹ ಮಠಮಾನ್ಯಗಳಿಗೆ ರಕ್ಷಣೆ ಕೊಡಬೇಕೋ ಅವರೇ ಭಕ್ಷಣೆಗೆ ಮುಂದಾಗಿದ್ದಾರೆ. ಚಾತುರ್ಮಾಸ್ಯ ವ್ರತ ಭಂಗಕ್ಕೆ ವ್ಯಯಿಸಿದ ಶಕ್ತಿ – ಹಣ – ಶ್ರಮಗಳನ್ನು ಉತ್ತಮ ಕಾರ್ಯಗಳಿಗೆ ಬಳಸಿದ್ದರೆ ಜಗತ್ತಿಗೆ ಒಳಿತಾಗುತ್ತಿತ್ತು. ಆದರೆ ಲೋಕದ ಕೆಡುಕಿಗೆ , ಶಂಕರಾಚಾರ್ಯರು ಸ್ಥಾಪಿಸಿದ ದಿವ್ಯ ಸಂಸ್ಥೆಯನ್ನು ಒಡೆಯಲು ಬಳಸುತ್ತಿರುವುದು ಖೇದಕರ. ಆದರೂಯಾರ ಬಗ್ಗೆಯೂ ಪ್ರತೀಕಾರ ಭಾವನೆ ನಮಗಿಲ್ಲ, ಈ ಕ್ಷಣಕ್ಕೂ ಮಠದ ವಿರೋಧಿಗಳ ಕೇಡನ್ನು ನಾವು ಬಯಸಿಲ್ಲ ಎಂದು ತಿಳಿಸಿದರು.  

ಚಾತುರ್ಮಾಸ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಶಾರದಾ ಜಯಗೋವಿಂದ, ಪೂಜ್ಯ ರಾಘವೇಶ್ವರ ಶ್ರೀಗಳಂತಹ ಗುರುಗಳು ಸಿಕ್ಕಿರುವುದು ಸಮಾಜದ ಪುಣ್ಯ, ಶ್ರೀಗಳ ಕಾರ್ಯಯೋಜನೆಗಳಲ್ಲಿ ಸೇವೆ ಸಲ್ಲಿಸುವ ಅವಕಾಶಗಳು ಸಿಕ್ಕಿದ್ದು ನನ್ನ ಪುಣ್ಯದ ಫಲ. ಶ್ರೀಮಠದ ಸಮಾಜಮುಖೀ ಕಾರ್ಯಗಳಲ್ಲಿ ಕಾರ್ಯಕರ್ತರಾದ ನಾವೆಲ್ಲರೂ ಸಹ ಪ್ರಯಾಣಿಕರು, ಗುರುಗಳು ಗುರಿಯತ್ತ ಮಾರ್ಗದರ್ಶನ ಮಾಡುತ್ತಿದ್ದು, ನಾವೆಲ್ಲ ಜೀವನದ ಗುರಿಯತ್ತ ಮುಂದೆ ಸಾಗೋಣ. ಪ್ರಶಸ್ತಿಯನ್ನು ಎಲ್ಲಾ ಕಾರ್ಯಕರ್ತರ ಪರವಾಗಿ ಸ್ವೀಕರಿಸುತ್ತೇನೆ ಎಂದರು.

ಡಾ. ಶಾರದಾ ಜಯಗೋವಿಂದ ಅವರು ಶಿಕ್ಷಣ ತಜ್ಞೆಯಾಗಿ, ಲೇಖಕಿಯಾಗಿ ಗುರುತಿಸಿಕೊಂಡವರು. ಅಷ್ಟೆಲ್ಲಾ ಸಾಧನೆ ಮಾಡಿದವರಾದರೂ ಇಂದಿಗೂ ಮಗುವಿನ ಹೃದಯವನ್ನು ಹೊಂದಿದವರಾಗಿದ್ದಾರೆ. ಶ್ರೀಮಠದ ವಿದ್ಯಾಸಂಸ್ಥೆಗಳಿಗೆ ಅಪಾರವಾದ ಸೇವೆಯನ್ನು ಅವರು ಸಲ್ಲಿಸಿದ್ದಾರೆ ಎಂದು ವಿದ್ಯಾ ವಿಭಾಗದ ಕಾರ್ಯದರ್ಶಿಗಳಾದ ಪ್ರಮೋದ್ ಪಂಡಿತ್ ಅಭಿನಂದನ ನುಡಿಗಳನ್ನು ಹೇಳಿದರು.

ಪ್ರಸ್ತಾವಿಕ ಮಾತನಾಡಿದ ಉದ್ಯಮಿಗಳು ಹಾಗೂ ಚಾತುರ್ಮಾಸ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ವಾದಿರಾಜ ಸಾಮಗ, ಕಾರ್ಯಕರ್ತರ ಸಾಂಘಿಕ ಸೇವೆಯಿಂದ ಚಾತುರ್ಮಾಸ್ಯ ನಡೆಯಿತು. ತತ್ವ ಭಾಗವತ ಪ್ರವಚನ, ಕೃಷ್ಣಕಥಾ, ವೇದಪದ, ಶ್ರೀರಾಮಸಾಮ್ರಾಜ್ಯ ಪಟ್ಟಾಭಿಷೇಕ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಯಥಾಯೋಗ್ಯವಾಗಿ ಚಾತುರ್ಮಾಸ್ಯದಲ್ಲಿ ಸಂಪನ್ನವಾದವು ಎಂದು ತಿಳಿಸಿದರು.

ಡಾ. ಶಾರದಾ ಜಯಗೋವಿಂದ ಅವರಿಗೆ ‘ಚಾತುರ್ಮಾಸ್ಯ ಪ್ರಶಸ್ತಿ’ ಪ್ರದಾನಮಾಡಲಾಯಿತು. ಶ್ರೀಭಾರತೀ ಪ್ರಕಾಶನ ಹೊರತಂದ ‘ತತ್ವ ಭಾಗವತಮ್’ ಪ್ರವಚನ ಮಾಲಿಕೆಯ ಪೆನ್ ಡ್ರೈವನ್ನು ಲೋಕಾರ್ಪಿತವಾಯಿತು. ಶ್ರೀಮಠದ ಶಾಸನತಂತ್ರ ವ್ಯವಸ್ಥೆಯಿಂದ ಇಂದಿನ ಸರ್ವಸೇವೆ ಸಮರ್ಪಣೆಯಾಯಿತು. ಇದಕ್ಕೂ ಮೊದಲು ಧಾರ್ಮಿಕ ವಿಧಿವಿಧಾನಗಳೊಂದಿಗೆ ಚಾತುರ್ಮಾಸ್ಯ ವ್ರತ ಸಮಾಪ್ತಿ – ಸೀಮೋಲ್ಲಂಘನ ಕಾರ್ಯಕ್ರಮಗಳು ನಡೆದವು.

ಕಾರ್ಯಕ್ರಮದಲ್ಲಿ ಶ್ರೀಮಠದ ಸಮ್ಮುಖ ಸರ್ವಾಧಿಕಾರಿಗಳಾದ ತಿಮ್ಮಪ್ಪಯ್ಯ ಮಡಿಯಾಲ್, ಐ.ಪಿ.ಎಸ್., ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ ಜಿ ಭಟ್, ಕ್ಯಾಂಪ್ಕೊ ಮಾಜಿ ಅಧ್ಯಕ್ಷರಾದ ಕೊಂಕೋಡಿ ಪದ್ಮನಾಭ ಭಟ್, ಗೋಸ್ವರ್ಗದ ಅಧ್ಯಕ್ಷರಾದ ಆರ್ ಎಸ್ ಹೆಗಡೆ, ಹವ್ಯಕ ಮಹಾಮಂಡಲದ ಈಶ್ವರೀ ಬೇರ್ಕಡವು, ಹರಿಪ್ರಸಾದ್ ಪೆರಿಯಪ್ಪು, ಚಾತುರ್ಮಾಸ್ಯ ಸಮಿತಿಯ ರಮೇಶ್ ಕೊರಮಂಗಲ, ವಾದಿರಾಜ ಸಾಮಗ ಸೇರಿದಂತೆ ಪದಾಧಿಕಾರಿಗಳು ಹಾಗೂ ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಶಿಷ್ಯಭಕ್ತರು ಫಲಕಾಣಿಕೆ ಸಮರ್ಪಿಸಿ, ಆಶೀರ್ವಾದ ಪಡೆದರು.

ಸೀಮೋಲ್ಲಂಘನವಾಗುತ್ತಿದ್ದಂತೆ ತೆರೆವಾದ ತಡೆಯಾಜ್ಞೆ
 

ಗಿರಿನಗರ ಶ್ರೀರಾಮಚಂದ್ರಾಪುರಮಠದ ‘ಪುನರ್ವಸು’ ಕಟ್ಟಡದ ನಿರ್ಮಾಣಕ್ಕೆ ನೀಡಲಾಗಿದ್ದ ತಡೆಯನ್ನು ರಾಜ್ಯ ಉಚ್ಚ ನ್ಯಾಯಾಲಯ ತೆರವುಗಳಿಸಿದ್ದು, ಘನ ನ್ಯಾಯಾಲಯ ತನ್ನ ಮಧ್ಯಂತರ ಆದೇಶದ ಮೂಲಕ ಕಟ್ಟ ನಿರ್ಮಾಣವನ್ನು ಮುಂದುವರಿಸುವಂತೆ ಸೂಚಿಸಿದೆ.

ಈ ಸಂಬಂಧ ಹಿಂದೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದ ಕರ್ಣಂ ಪವನ್ ಪ್ರಸಾದ್ ಮತ್ತು ಕಮಿಟಿ ಫಾರ್ ಜುಡಿಶಿಯಲ್ ಆ್ಯಕ್ಟಿವಿಸಂ ಇವರುಗಳು ಪ್ರಸ್ತುತ ಪ್ರಕರಣದಲ್ಲಿ ಪ್ರತಿವಾದಿಗಳಾಗಿ ಮುಂದುವರಿಯುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ ಅವರುಗಳನ್ನು ಪ್ರಕರಣದಿಂದ ಕೈಬಿಟ್ಟು ಆದೇಶಿಸಿರುತ್ತದೆ. ಹಾಗೆಯೇ ತನ್ನನ್ನು ಪ್ರಕರಣದಲ್ಲಿ ಪ್ರತಿವಾದಿಯಾಗಿ ಸೇರಿಸಬೇಕು ಎಂಬ ವಿಶ್ವಭಾರತೀ ಗೃಹ ನಿರ್ಮಾಣ ಸಂಘದ ಅರ್ಜಿಯನ್ನು ನ್ಯಾಯಪೀಠ ತಿರಸ್ಕರಿಸಿದೆ.

ಬಿಬಿಎಂಪಿ ಆಯುಕ್ತರ ಆದೇಶಕ್ಕೆ ಸಂಪೂರ್ಣ ತಡೆಯಾಜ್ಞೆ ನೀಡಿದ್ದು, ಶ್ರೀಮಠವು ಗಿರಿನಗರದಲ್ಲಿ ಪುನರ್ವಸು ಕಟ್ಟಡದ ಕಾಮಗಾರಿಯನ್ನು ಮುಂದುವರಿಸಲು ಆದೇಶ ನೀಡಿದೆ.

ಸೀಮೋಲ್ಲಂಘನ ಕಾರ್ಯಕ್ರಮ ನಡೆಯಿತ್ತಿರುವ ಸಂದರ್ಭದಲ್ಲೇ, ಈ ಆದೇಶ ಸಿಕ್ಕಿದ್ದು ವಿಶೇಷವಾಗಿದ್ದು, ಮಠದ ಭಕ್ತರಲ್ಲಿ ಸಂತಸವನ್ನು ಉಂಟುಮಾಡಿತು.

Tags: BENGALURURaghaveshwara Sri ChaturmasyaRaghaveshwara Swamijiಚಾತುರ್ಮಾಸ್ಯಸೀಮೋಲ್ಲಂಘನ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Where Aadhaar is required and not required? Here is the list

Next Post

ಬೆಂಗಳೂರಿನಲ್ಲಿ ಭಾರೀ ಜಿಎಸ್‌ಟಿ ವಂಚನೆ ಬೆಳಕಿಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರಿನಲ್ಲಿ ಭಾರೀ ಜಿಎಸ್‌ಟಿ ವಂಚನೆ ಬೆಳಕಿಗೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
Yoga Day in SWR Hubli

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಉತ್ಸಾಹಭರಿತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

June 23, 2026
Indian Railway Fine Hike

ಟಿಕೆಟ್ ರಹಿತ ರೈಲು ಪ್ರಯಾಣಕ್ಕೆ ಕನಿಷ್ಠ ದಂಡ ದರ ಏರಿಕೆ | ಎಷ್ಟು ಹೆಚ್ಚಳ?

June 23, 2026
ಸೈಬರ್ ಅಪರಾಧ | ಕೋಟ್ಯಂತರ ರೂ. ವಂಚನೆಯ ವಿರುದ್ಧ ಸದನದಲ್ಲಿ ಧ್ವನಿ ಎತ್ತಿದ ಡಿ.ಎಸ್. ಅರುಣ್

ಪರಿಷತ್ ಚುನಾವಣೆಗೆ ಮುಕ್ತ ಮತದಾನ ಪದ್ಧತಿ ಜಾರಿಗೆ MLC ಡಿ.ಎಸ್. ಅರುಣ್ ಆಗ್ರಹ

June 23, 2026
ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ

ಬಿಪಿಎಲ್ ಕಾರ್ಡ್ ರದ್ದತಿ ವಿರುದ್ಧ ಶಾಸಕ ಚೆನ್ನಿ ಆಕ್ರೋಶ | ತಕ್ಷಣ ಮರುಪರಿಶೀಲನೆಗೆ ಸೂಚನೆ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL