No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆತ್ಮಶುದ್ಧಿ ಇರುವುದರಿಂದ ನಮಗೆ ಯಾವುದರ ಭಯವೂ ಇಲ್ಲ : ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 26, 2018
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಬೆಂಗಳೂರು: ಆತ್ಮಶುದ್ಧಿ ಇರುವುದರಿಂದ ನಮಗೆ ಯಾವುದರ ಭಯವೂ ಇಲ್ಲ, ಶ್ರೀರಾಮಚಂದ್ರಾಪುರಮಠವೆಂಬ  ಶಂಕರಾಚಾರ್ಯ ಸ್ಥಾಪಿತ ಸಂಸ್ಥೆಯನ್ನು ಯಾರು ಏನು ಮಾಡಲು ಪ್ರಯತ್ನಪಟ್ಟರೂ ಏನೂ ಆಗದು. ಸಮಾಜದ ಪರಿವರ್ತನೆಯಲ್ಲಿ ತೊಡಗಿಕೊಂಡವರು ವಿಷಕಂಠರಾಗಿ ಎಲ್ಲವನ್ನೂ ಎದುರಿಸಲು ಸಿದ್ದರಾಗಿರಬೇಕಾಗುತ್ತದೆ ಎಂದು ಜಗದ್ಗುರು ಶಂಕರಾಚಾರಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು.

ಗಿರಿನಗರದ ಶಾಖಾಮಠದಲ್ಲಿ ತಮ್ಮ 25ನೇ ಚಾತುರ್ಮಾಸ್ಯ ವ್ರತ ಸಮಾಪ್ತಿಯ ಸೀಮೋಲ್ಲಂಘನದ ಧರ್ಮ ಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಪೂಜ್ಯ ಶ್ರೀಗಳು, ಚಾತುರ್ಮಾಸ್ಯ ಭಾನ್ಕುಳಿಯ ‘ಗೋಸ್ವರ್ಗ’ದಲ್ಲಿ ನಡೆಯಬೇಕಿತ್ತು, ಆದರೆ ದೈವೇಚ್ಛೆಂತೆ ‘ಗುರುಸ್ವರ್ಗ’ ಗಿರಿನಗರದ ಶ್ರೀರಾಮಶ್ರಮದಲ್ಲಿ ನಡೆದಿದೆ.  ಇದು ಪೂರ್ವಾಚಾರ್ಯರು ಬ್ರಹ್ಮೈಕ್ಯರಾದ ಸ್ಥಳ ಇಲ್ಲಿ ಅವರ ಸಮಾಧಿ ಮಂದಿರವಿದೆ. ನಮಗೂ ಗಿರಿನಗರ ಮಠಕ್ಕೂ ಆತ್ಮಸಂಬಂಧವಿದೆ. ನಾವು ಇಲ್ಲಿಯೇ ಸಂನ್ಯಾಸ ಸ್ವೀಕಾರ ಮಾಡಿರುವುದಾಗಿದ್ದು, ಇಲ್ಲಿಯೇ 25 ನೇ ಚಾತುರ್ಮಾಸ್ಯವನ್ನು ಪೂರೈಸಿರುವುದು ಸಂತಸ ತಂದಿದೆ. ಸೇವೆ ಮಾಡಲು ದೇಹಕ್ಕೆ ಬಲ ಬೇಕಾದರೆ, ಮನಸ್ಸಿಗೆ ಭಾವ ಬೇಕು. ಭಾವ – ಬಲಗಳು ಸೇರೆದಾಗ ಮಾತ್ರ ಸೇವೆ ಸಲ್ಲಿಸಲು ಸಾಧ್ಯ. ಇಂದು ಹೆಮ್ಮೆಯ ಕಾರ್ಯಕರ್ತೆ ಶಾರದಾ ಜಯಗೋವಿಂದ ‘ಚಾತುರ್ಮಾಸ್ಯ ಪ್ರಶಸ್ತಿ’ಯನ್ನು ಸ್ವೀಕರಿಸಿರುವುದು ಸಂತಸ ತಂದಿದೆ ಎಂದರು.

ಚಾತುರ್ಮಾಸ್ಯಕ್ಕೆ ವಿಘ್ನ: 

ಇತ್ತೀಚಿಗೆ ನಮ್ಮ ಚಾತುರ್ಮಾಸ್ಯ ವ್ರತಕ್ಕೆ ತೊಂದರೆ ನೀಡುವ ಪರಂಪರೆಯೇ ಆರಂಭವಾಗಿದೆ. ನಾವು ಚಾತುರ್ಮಾಸ್ಯ ಮಾಡುವಾಗ ಮಠದ ಶತ್ರುಗಳೂ ಚಾತುರ್ಮಾಸ್ಯ ಮಾಡುತ್ತಾರೆ. ನಾವು ರಾಮ ಸ್ಮರಣೆಯಲ್ಲಿದ್ದರೆ, ಅವರು ನಮ್ಮದೇ ಸ್ಮರಣೆಯಲ್ಲಿ ಇರುತ್ತಾರೆ. ಚಾತುರ್ಮಾಸ್ಯಕ್ಕೆ ಇರುವ ನಮ್ಮ ಬದ್ಧತೆಗಿಂತ, ಚಾತುರ್ಮಾಸ್ಯ ಭಂಗಕ್ಕೆ ಅದಕ್ಕಿಂತ ಹೆಚ್ಚು ಪ್ರಯತ್ನ ನಡೆಯುತ್ತಿದೆ. ಇಷ್ಟೆಲ್ಲಾ ವಿಘ್ನಗಳ ನಡುವೆಯೂ ಚಾತುರ್ಮಾಸ್ಯ ಸುಸಂಪನ್ನವಾಗಿದೆ. ಅದಕ್ಕೆ ದೇವರ ದಯೆ ಮಾತ್ರ ಕಾರಣ.

ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ಮಠದಲ್ಲಿ ಯಾವ ಲೋಪವೂ ಇಲ್ಲ. ಆದರೆ ಯಾರು ಇಂತಹ ಮಠಮಾನ್ಯಗಳಿಗೆ ರಕ್ಷಣೆ ಕೊಡಬೇಕೋ ಅವರೇ ಭಕ್ಷಣೆಗೆ ಮುಂದಾಗಿದ್ದಾರೆ. ಚಾತುರ್ಮಾಸ್ಯ ವ್ರತ ಭಂಗಕ್ಕೆ ವ್ಯಯಿಸಿದ ಶಕ್ತಿ – ಹಣ – ಶ್ರಮಗಳನ್ನು ಉತ್ತಮ ಕಾರ್ಯಗಳಿಗೆ ಬಳಸಿದ್ದರೆ ಜಗತ್ತಿಗೆ ಒಳಿತಾಗುತ್ತಿತ್ತು. ಆದರೆ ಲೋಕದ ಕೆಡುಕಿಗೆ , ಶಂಕರಾಚಾರ್ಯರು ಸ್ಥಾಪಿಸಿದ ದಿವ್ಯ ಸಂಸ್ಥೆಯನ್ನು ಒಡೆಯಲು ಬಳಸುತ್ತಿರುವುದು ಖೇದಕರ. ಆದರೂಯಾರ ಬಗ್ಗೆಯೂ ಪ್ರತೀಕಾರ ಭಾವನೆ ನಮಗಿಲ್ಲ, ಈ ಕ್ಷಣಕ್ಕೂ ಮಠದ ವಿರೋಧಿಗಳ ಕೇಡನ್ನು ನಾವು ಬಯಸಿಲ್ಲ ಎಂದು ತಿಳಿಸಿದರು.  

ಚಾತುರ್ಮಾಸ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಶಾರದಾ ಜಯಗೋವಿಂದ, ಪೂಜ್ಯ ರಾಘವೇಶ್ವರ ಶ್ರೀಗಳಂತಹ ಗುರುಗಳು ಸಿಕ್ಕಿರುವುದು ಸಮಾಜದ ಪುಣ್ಯ, ಶ್ರೀಗಳ ಕಾರ್ಯಯೋಜನೆಗಳಲ್ಲಿ ಸೇವೆ ಸಲ್ಲಿಸುವ ಅವಕಾಶಗಳು ಸಿಕ್ಕಿದ್ದು ನನ್ನ ಪುಣ್ಯದ ಫಲ. ಶ್ರೀಮಠದ ಸಮಾಜಮುಖೀ ಕಾರ್ಯಗಳಲ್ಲಿ ಕಾರ್ಯಕರ್ತರಾದ ನಾವೆಲ್ಲರೂ ಸಹ ಪ್ರಯಾಣಿಕರು, ಗುರುಗಳು ಗುರಿಯತ್ತ ಮಾರ್ಗದರ್ಶನ ಮಾಡುತ್ತಿದ್ದು, ನಾವೆಲ್ಲ ಜೀವನದ ಗುರಿಯತ್ತ ಮುಂದೆ ಸಾಗೋಣ. ಪ್ರಶಸ್ತಿಯನ್ನು ಎಲ್ಲಾ ಕಾರ್ಯಕರ್ತರ ಪರವಾಗಿ ಸ್ವೀಕರಿಸುತ್ತೇನೆ ಎಂದರು.

ಡಾ. ಶಾರದಾ ಜಯಗೋವಿಂದ ಅವರು ಶಿಕ್ಷಣ ತಜ್ಞೆಯಾಗಿ, ಲೇಖಕಿಯಾಗಿ ಗುರುತಿಸಿಕೊಂಡವರು. ಅಷ್ಟೆಲ್ಲಾ ಸಾಧನೆ ಮಾಡಿದವರಾದರೂ ಇಂದಿಗೂ ಮಗುವಿನ ಹೃದಯವನ್ನು ಹೊಂದಿದವರಾಗಿದ್ದಾರೆ. ಶ್ರೀಮಠದ ವಿದ್ಯಾಸಂಸ್ಥೆಗಳಿಗೆ ಅಪಾರವಾದ ಸೇವೆಯನ್ನು ಅವರು ಸಲ್ಲಿಸಿದ್ದಾರೆ ಎಂದು ವಿದ್ಯಾ ವಿಭಾಗದ ಕಾರ್ಯದರ್ಶಿಗಳಾದ ಪ್ರಮೋದ್ ಪಂಡಿತ್ ಅಭಿನಂದನ ನುಡಿಗಳನ್ನು ಹೇಳಿದರು.

ಪ್ರಸ್ತಾವಿಕ ಮಾತನಾಡಿದ ಉದ್ಯಮಿಗಳು ಹಾಗೂ ಚಾತುರ್ಮಾಸ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ವಾದಿರಾಜ ಸಾಮಗ, ಕಾರ್ಯಕರ್ತರ ಸಾಂಘಿಕ ಸೇವೆಯಿಂದ ಚಾತುರ್ಮಾಸ್ಯ ನಡೆಯಿತು. ತತ್ವ ಭಾಗವತ ಪ್ರವಚನ, ಕೃಷ್ಣಕಥಾ, ವೇದಪದ, ಶ್ರೀರಾಮಸಾಮ್ರಾಜ್ಯ ಪಟ್ಟಾಭಿಷೇಕ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಯಥಾಯೋಗ್ಯವಾಗಿ ಚಾತುರ್ಮಾಸ್ಯದಲ್ಲಿ ಸಂಪನ್ನವಾದವು ಎಂದು ತಿಳಿಸಿದರು.

ಡಾ. ಶಾರದಾ ಜಯಗೋವಿಂದ ಅವರಿಗೆ ‘ಚಾತುರ್ಮಾಸ್ಯ ಪ್ರಶಸ್ತಿ’ ಪ್ರದಾನಮಾಡಲಾಯಿತು. ಶ್ರೀಭಾರತೀ ಪ್ರಕಾಶನ ಹೊರತಂದ ‘ತತ್ವ ಭಾಗವತಮ್’ ಪ್ರವಚನ ಮಾಲಿಕೆಯ ಪೆನ್ ಡ್ರೈವನ್ನು ಲೋಕಾರ್ಪಿತವಾಯಿತು. ಶ್ರೀಮಠದ ಶಾಸನತಂತ್ರ ವ್ಯವಸ್ಥೆಯಿಂದ ಇಂದಿನ ಸರ್ವಸೇವೆ ಸಮರ್ಪಣೆಯಾಯಿತು. ಇದಕ್ಕೂ ಮೊದಲು ಧಾರ್ಮಿಕ ವಿಧಿವಿಧಾನಗಳೊಂದಿಗೆ ಚಾತುರ್ಮಾಸ್ಯ ವ್ರತ ಸಮಾಪ್ತಿ – ಸೀಮೋಲ್ಲಂಘನ ಕಾರ್ಯಕ್ರಮಗಳು ನಡೆದವು.

ಕಾರ್ಯಕ್ರಮದಲ್ಲಿ ಶ್ರೀಮಠದ ಸಮ್ಮುಖ ಸರ್ವಾಧಿಕಾರಿಗಳಾದ ತಿಮ್ಮಪ್ಪಯ್ಯ ಮಡಿಯಾಲ್, ಐ.ಪಿ.ಎಸ್., ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ ಜಿ ಭಟ್, ಕ್ಯಾಂಪ್ಕೊ ಮಾಜಿ ಅಧ್ಯಕ್ಷರಾದ ಕೊಂಕೋಡಿ ಪದ್ಮನಾಭ ಭಟ್, ಗೋಸ್ವರ್ಗದ ಅಧ್ಯಕ್ಷರಾದ ಆರ್ ಎಸ್ ಹೆಗಡೆ, ಹವ್ಯಕ ಮಹಾಮಂಡಲದ ಈಶ್ವರೀ ಬೇರ್ಕಡವು, ಹರಿಪ್ರಸಾದ್ ಪೆರಿಯಪ್ಪು, ಚಾತುರ್ಮಾಸ್ಯ ಸಮಿತಿಯ ರಮೇಶ್ ಕೊರಮಂಗಲ, ವಾದಿರಾಜ ಸಾಮಗ ಸೇರಿದಂತೆ ಪದಾಧಿಕಾರಿಗಳು ಹಾಗೂ ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಶಿಷ್ಯಭಕ್ತರು ಫಲಕಾಣಿಕೆ ಸಮರ್ಪಿಸಿ, ಆಶೀರ್ವಾದ ಪಡೆದರು.

ಸೀಮೋಲ್ಲಂಘನವಾಗುತ್ತಿದ್ದಂತೆ ತೆರೆವಾದ ತಡೆಯಾಜ್ಞೆ
 

ಗಿರಿನಗರ ಶ್ರೀರಾಮಚಂದ್ರಾಪುರಮಠದ ‘ಪುನರ್ವಸು’ ಕಟ್ಟಡದ ನಿರ್ಮಾಣಕ್ಕೆ ನೀಡಲಾಗಿದ್ದ ತಡೆಯನ್ನು ರಾಜ್ಯ ಉಚ್ಚ ನ್ಯಾಯಾಲಯ ತೆರವುಗಳಿಸಿದ್ದು, ಘನ ನ್ಯಾಯಾಲಯ ತನ್ನ ಮಧ್ಯಂತರ ಆದೇಶದ ಮೂಲಕ ಕಟ್ಟ ನಿರ್ಮಾಣವನ್ನು ಮುಂದುವರಿಸುವಂತೆ ಸೂಚಿಸಿದೆ.

ಈ ಸಂಬಂಧ ಹಿಂದೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದ ಕರ್ಣಂ ಪವನ್ ಪ್ರಸಾದ್ ಮತ್ತು ಕಮಿಟಿ ಫಾರ್ ಜುಡಿಶಿಯಲ್ ಆ್ಯಕ್ಟಿವಿಸಂ ಇವರುಗಳು ಪ್ರಸ್ತುತ ಪ್ರಕರಣದಲ್ಲಿ ಪ್ರತಿವಾದಿಗಳಾಗಿ ಮುಂದುವರಿಯುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ ಅವರುಗಳನ್ನು ಪ್ರಕರಣದಿಂದ ಕೈಬಿಟ್ಟು ಆದೇಶಿಸಿರುತ್ತದೆ. ಹಾಗೆಯೇ ತನ್ನನ್ನು ಪ್ರಕರಣದಲ್ಲಿ ಪ್ರತಿವಾದಿಯಾಗಿ ಸೇರಿಸಬೇಕು ಎಂಬ ವಿಶ್ವಭಾರತೀ ಗೃಹ ನಿರ್ಮಾಣ ಸಂಘದ ಅರ್ಜಿಯನ್ನು ನ್ಯಾಯಪೀಠ ತಿರಸ್ಕರಿಸಿದೆ.

ಬಿಬಿಎಂಪಿ ಆಯುಕ್ತರ ಆದೇಶಕ್ಕೆ ಸಂಪೂರ್ಣ ತಡೆಯಾಜ್ಞೆ ನೀಡಿದ್ದು, ಶ್ರೀಮಠವು ಗಿರಿನಗರದಲ್ಲಿ ಪುನರ್ವಸು ಕಟ್ಟಡದ ಕಾಮಗಾರಿಯನ್ನು ಮುಂದುವರಿಸಲು ಆದೇಶ ನೀಡಿದೆ.

ಸೀಮೋಲ್ಲಂಘನ ಕಾರ್ಯಕ್ರಮ ನಡೆಯಿತ್ತಿರುವ ಸಂದರ್ಭದಲ್ಲೇ, ಈ ಆದೇಶ ಸಿಕ್ಕಿದ್ದು ವಿಶೇಷವಾಗಿದ್ದು, ಮಠದ ಭಕ್ತರಲ್ಲಿ ಸಂತಸವನ್ನು ಉಂಟುಮಾಡಿತು.

Tags: BENGALURURaghaveshwara Sri ChaturmasyaRaghaveshwara Swamijiಚಾತುರ್ಮಾಸ್ಯಸೀಮೋಲ್ಲಂಘನ
Share196Tweet123Send
Previous Post

Where Aadhaar is required and not required? Here is the list

Next Post

ಬೆಂಗಳೂರಿನಲ್ಲಿ ಭಾರೀ ಜಿಎಸ್‌ಟಿ ವಂಚನೆ ಬೆಳಕಿಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರಿನಲ್ಲಿ ಭಾರೀ ಜಿಎಸ್‌ಟಿ ವಂಚನೆ ಬೆಳಕಿಗೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಭದ್ರಾವತಿ, ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದ ಐವರಿಗೆ ಜೈಲು!

April 17, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮಂಗಳೂರು-ಸುಬ್ರಹ್ಮಣ್ಯ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ಮಹತ್ವದ ಅಪ್ಡೇಟ್

April 16, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಮದುವೆ ಸಮಾರಂಭದಲ್ಲಿ ಗೃಹಿಣಿಯ ಸೊಂಟ ಮುಟ್ಟಿದ ಯುವಕ | ಪ್ರಶ್ನಿಸಿದವರ ಮೇಲೆ ಹಲ್ಲೆ

April 16, 2026
ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

April 16, 2026
ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

April 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL