ಕಲ್ಪ ಮೀಡಿಯಾ ಹೌಸ್ | ಕೊಲ್ಕತ್ತಾ |
ಪಶ್ಚಿಮ ಬಂಗಾಳ #WestBengal ವಿಧಾನಸಭಾ ಚುನಾವಣೆ 2026 ರಲ್ಲಿ ತಮ್ಮ ಪಕ್ಷವು ಭಾರಿ ಹಿನ್ನಡೆ ಅನುಭವಿಸಿದ ಒಂದು ದಿನದ ನಂತರ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ #MamataBanarjee ಇಂದು ಹೊಸ ವರಸೆ ತೆಗೆದಿದ್ದು, ಯಾವು ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದಿದ್ದಾರೆ.
ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ನಾವು ಚುನಾವಣೆಯಲ್ಲಿ ಸೋತಿಲ್ಲ. ಹೀಗಾಗಿ, ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.
Also Read>> ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ | ಸಾರ್ವಜನಿಕರಲ್ಲಿ ಆತಂಕ ಬೇಡ: ಜಿಲ್ಲಾಧಿಕಾರಿ ಸ್ಪಷ್ಟನೆ
ಚುನಾವಣೆಯಲ್ಲಿ ನಮ್ಮನ್ನು ಸೋಲಿಸಲು ಅವರ ಬಲವಂತದ ಪ್ರಯತ್ನ. ಅಧಿಕೃತವಾಗಿ ಚುನಾವಣಾ ಆಯೋಗದ #ElectionCommission ಮೂಲಕ, ಅವರು ನಮ್ಮನ್ನು ಸೋಲಿಸಿರಬಹುದು. ಆದರೆ ನೈತಿಕವಾಗಿ ನಾನು ನಿಮಗೆ ಹೇಳುತ್ತಿದ್ದೇನೆ, ನಾವು ಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದರು.
ಸೋಮವಾರ ಎಣಿಕೆಯಾದ 293 ವಿಧಾನಸಭಾ ಸ್ಥಾನಗಳಲ್ಲಿ 207 ಸ್ಥಾನಗಳನ್ನು ಬಿಜೆಪಿ ಗೆದ್ದರೆ, ತೃಣಮೂಲ 80 ಸ್ಥಾನಗಳಿಗೆ ಇಳಿಯಿತು. ಬ್ಯಾನರ್ಜಿ ಭಬಾನಿಪುರ ಕ್ಷೇತ್ರವನ್ನು ಬಿಜೆಪಿ ನಾಯಕ ಸುವೇಂದು ಅಧಿಕಾರಿ #SuvenduAdhikari ವಿರುದ್ಧ 15,114 ಮತದಾರರ ಅಂತರದಿಂದ ಸೋತರು.
ಹೊಸ ಸರ್ಕಾರ ಪ್ರಮಾಣ ವಚನ ಸ್ವೀಕರಿಸಲು ನಿರ್ಗಮಿತ ಮುಖ್ಯಮಂತ್ರಿಗಳು ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುವುದು ಸಾಮಾನ್ಯ ಪದ್ಧತಿಯಾಗಿದೆ. 2021 ರಲ್ಲಿ ಅಧಿಕಾರಕ್ಕೆ ಬಂದ ಬ್ಯಾನರ್ಜಿ ನೇತೃತ್ವದ ಸರ್ಕಾರದ ಅವಧಿ ಮೇ 7 ರಂದು ಕೊನೆಗೊಳ್ಳುತ್ತದೆ.
Also Read>> ಗಮನಿಸಿ! ಈ ದಿನ ಬೆಂಗಳೂರಿನಿಂದ ಹೊರಡುವ ಈ ರೈಲುಗಳ ಸಂಚಾರದಲ್ಲಿ ಬದಲಾವಣೆ
ಚುನಾವಣಾ ಆಯೋಗವನ್ನು ಪದೇ ಪದೇ ಗುರಿಯಾಗಿಸಿಕೊಂಡು ಮಾತನಾಡಿದ ಬ್ಯಾನರ್ಜಿ, ನಿಜವಾದ ಸ್ಪರ್ಧೆ ಬಿಜೆಪಿಯೊಂದಿಗೆ ಅಲ್ಲ, ಚುನಾವಣಾ ಸಂಸ್ಥೆಯ ಜೊತೆಗೆ. ನಾವು ಸೋತಿಲ್ಲ, ಅವರು ರಾಜ್ಯವನ್ನು ಬಲವಂತವಾಗಿ ವಶಪಡಿಸಿಕೊಂಡಿದ್ದಾರೆ. ನಿಜವಾದ ಖಳನಾಯಕ ಚುನಾವಣಾ ಆಯೋಗ ಎಂದು ಕಿಡಿ ಕಾರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















