Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

445 ಕಿಮೀಗಳನ್ನು ಒಂದೇ ಗಂಟೆಯಲ್ಲಿ ತಲುಪುತ್ತಾರಂತೆ ಈ ಸಚಿವರು!!!

October 6, 2018
in Special Articles
0 0
0
Share on facebookShare on TwitterWhatsapp
Read - 2 minutes

ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಹೇಗೆ ಎಲ್ಲವೂ ಸರಿ ಇಲ್ಲವೋ ಹಾಗೆಯೇ, ರಾಜ್ಯ ಸರ್ಕಾರದ ಅಧಿಕಾರಿಗಳ ವಲಯದಲ್ಲೂ ಸಹ ಹೇಗೆ ದಿವ್ಯ ನಿರ್ಲಕ್ಷ್ಯ ಮನೆ ಮಾಡಿದೆ ಎಂಬುದಕ್ಕೆ ಇದೊಂದು ಜ್ವಲಂತ ನಿದರ್ಶನ.

ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ. ಖಾದರ್ ಅವರು ಅ.8ರ ಸೋಮವಾರದಿಂದ ಅ.10ರವರೆಗೂ ರಾಜ್ಯದ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಹಲವು ಸಭೆಗಳನ್ನು ನಡೆಸಲಿದ್ದಾರೆ. ಇದು ಸಚಿವ ಅಧಿಕೃತ ಭೇಟಿಯಾಗಿರುವ ಹಿನ್ನೆಲೆಯಲ್ಲಿ ಸಚಿವರ ಟಿಪಿ ಯನ್ನು ಮುನ್ನವೇ ಸಿದ್ದಪಡಿಸಿ, ಸಂಬಂಧಿಸಿದ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ರವಾನಿಸಿ, ಸೂಕ್ತ ಸಿದ್ದತೆ ಮಾಡಿಕೊಳ್ಳಲು ಸೂಚಿಸಲಾಗುತ್ತದೆ.

ಅದೇ ರೀತಿಯಲ್ಲಿ ಖಾದರ್ ಅವರ ಮೂರು ದಿನಗಳ ಪ್ರವಾಸ ಕಾರ್ಯಕ್ರಮಗಳ ಪಟ್ಟಿಯನ್ನು ನಗರಾಭಿವೃದ್ಧಿ ಮತ್ತು ವಸತಿ ಸಚಿವರ ಆಪ್ತ ಕಾರ್ಯದರ್ಶಿ ಮಹೇಶ್ ಕರ್ಜಗಿ ಅವರ ಲೆಟರ್ ಹೆಡ್‌ನಲ್ಲಿ ಅಕ್ಟೋಬರ್ 5ರಂದು ಬಿಡುಗಡೆ ಮಾಡಿದ್ದು, ಇದರಲ್ಲಿ ನಮೂದಾಗಿರುವ ಸಚಿವರ ಪ್ರವಾಸದ ಮಾರ್ಗ, ಉನ್ನತ ಅಧಿಕಾರಿ ವರ್ಗದಲ್ಲಿ ಬೇರೂರಿರುವ ನಿರ್ಲಕ್ಷ್ಯವನ್ನು ಹೊರ ಹಾಕಿದೆ.

ನಿನ್ನೆ ಬಿಡುಗಡೆಯಾದ ಪ್ರವಾಸದ ಪಟ್ಟಿಯಂತೆ ಅ.8ರಂದು ಬೆಳಗ್ಗೆ 9.30ಕ್ಕೆ ರಸ್ತೆ ಮಾರ್ಗವಾಗಿ ಶಿವಮೊಗ್ಗಕ್ಕೆ ಆಗಮಿಸುವ ಸಚಿವರು, ಸ್ಮಾರ್ಟ್ ಸಿಟಿ ಕುರಿತಂತೆ ಸಭೆ ನಡೆಸಲಿದ್ದಾರೆ. ಆನಂತರ ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಿಂದ ನಿರ್ಗಮಿಸುವ ಸಚಿವರು ಹಿರಿಯೂರು-ಹೊಸಪೇಟೆ ಮಾರ್ಗವಾಗಿ ರಸ್ತೆ ಮೂಲಕ ದಾವಣಗೆರೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ನಮೂದಿಸಲಾಗಿದೆ. ಇದರಲ್ಲಿ ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗ ಬಿಡಲಿರುವ ಸಚಿವರ ಹಿರಿಯೂರು-ಹೊಸಪೇಟೆ ಮಾರ್ಗವಾಗಿ ರಸ್ತೆ ಮೂಲಕ ಮಧ್ಯಾಹ್ನ ಮೂರು ಗಂಟೆಗೆಲ್ಲಾ ದಾವಣಗೆರೆ ತಲುಪಲಿದ್ದಾರಂತೆ..

ಈ ಮಾರ್ಗವಾಗಿ ಅದು ಹೇಗೆ ಒಂದು ಗಂಟೆಯಲ್ಲಿ ತಲುಪಲು ಸಾಧ್ಯ ಎನ್ನುವುದು ಈಗಿರುವ ಪ್ರಶ್ನೆ?

ಶಿವಮೊಗ್ಗದಿಂದ ಹಿರಿಯೂರಿಗೆ 141 ಕಿಮೀಗಳು, ಹಿರಿಯೂರಿನಿಂದ ಹೊಸಪೇಟೆಗೆ 183 ಕಿಮೀಗಳು, ಹೊಸಪೇಟೆಯಿಂದ ದಾವಣಗೆರೆಗೆ 121 ಕಿಮೀಗಳು. ಅಂದರೆ ಈ ಮಾರ್ಗದಲ್ಲಿ ಶಿವಮೊಗ್ಗದಿಂದ ದಾವಣಗೆರೆಗೆ 445 ಕಿಮೀಗಳಾಗುತ್ತವೆ? ರಸ್ತೆ ಮಾರ್ಗವಾಗಿ 445 ಕಿಮೀಗಳನ್ನು ಒಂದು ಗಂಟೆಯಲ್ಲಿ ತಲುಪಲು ಸಾಧ್ಯವೇ? ಗಂಟೆಗೆ ನೂರು ಕಿಮೀ ವೇಗದಲ್ಲಿ ತೆರಳಿದರೂ ಕನಿಷ್ಠ ನಾಲ್ಕು ಗಂಟೆ ಬೇಕಾಗುತ್ತದೆ.

ವಾಸ್ತವವಾಗಿ ಇಷ್ಟೇ ಆಗಿರುತ್ತದೆ. ಸಚಿವಾಲಯದ ಸಿಬ್ಬಂದಿಗಳು ಈ ಪಟ್ಟಿಯನ್ನು ಸಿದ್ದಪಡಿಸಿರುತ್ತಾರೆ. ಬಹುತೇಕ ಇದು ಸಚಿವರ ಗಮನಕ್ಕೇ ಬಂದಿರುವುದಿಲ್ಲ. ಆದರೆ, ಇದನ್ನು ಪರಿಶೀಲನೆ ನಡೆಸಿ ಸಹಿ ಹಾಕಿರುವುದು ಕೆಎಎಸ್ ಅಧಿಕಾರಿಯಾಗಿರುವ ಸಚಿವರ ಆಪ್ತ ಕಾರ್ಯದರ್ಶಿ ಮಹೇಶ್ ಕರ್ಜಗಿ.. ಸಿಬ್ಬಂದಿಗಳು ಮಾರ್ಗವನ್ನು ತಪ್ಪಾಗಿ ನಮೂದಿಸಿರುತ್ತಾರೆ ಒಪ್ಪಿಕೊಳ್ಳೋಣ. ಆದರೆ, ಇದನ್ನು ಕೂಲಂಕಶವಾಗಿ ಪರಿಶೀಲನೆ ನಡೆಸದೇ ತಪ್ಪಾಗಿರುವ ಈ ಪಟ್ಟಿಗೆ ಕೆಎಎಸ್ ದರ್ಜೆಯ ಅಧಿಕಾರಿಯೊಬ್ಬರು ಸಹಿ ಹಾಕಿ, ರವಾನಿಸಿದ್ದಾರೆ ಎಂದರೆ ಈ ಅಧಿಕಾರಿಯದ್ದು ಇನ್ನೆಂತಹ ನಿರ್ಲಕ್ಷ್ಯವಿರಬೇಕು? ಜವಾಬ್ದಾರಿ ಸ್ಥಾನದಲ್ಲಿ ಕುಳಿತ ಹಿರಿಯ ಅಧಿಕಾರಿಯಾಗಿ ಇಂತಹ ತಪ್ಪನ್ನು ಮಾಡಿದ್ದಾರೆ ಎಂದರೆ, ಸಚಿವಾಲಯದಲ್ಲಿ ಇನ್ನೆಷ್ಟು ತಪ್ಪುಗಳು, ಅಕ್ರಮಗಳು ನಡೆಯುತ್ತಿವೆ ಎಂಬ ಪ್ರಶ್ನೆಯನ್ನು ಹುಟ್ಟು ಹಾಕಿದೆ.

ಇದು ಆದ ನಂತರ ಅಕ್ಟೋಬರ್ 6ರ ಇಂದು ಮತ್ತೊಂದು ಟಿಪಿಯನ್ನು ಬಿಡುಗಡೆ ಮಾಡಲಾಗಿದ್ದು, ಇದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ. ಎಂ.ಎಸ್. ಮಂಜುನಾಥ್ ಅವರ ಹೆಸರಿನಲ್ಲಿದ್ದು, ಇದರಲ್ಲಿ ಶಿವಮೊಗ್ಗದಿಂದ ಹೊನ್ನಾಳಿ ಮಾರ್ಗವಾಗಿ ದಾವಣಗೆರೆ ತಲುಪಲಿದ್ದಾರೆ ಎಂದು ನಮೂದಾಗಿದೆ.

ತಪ್ಪಾಗಿದ್ದ ಪಟ್ಟಿಯನ್ನು ತಿದ್ದುಪಡಿ ಮಾಡಿ ಮತ್ತೆ ಬಿಡುಗಡೆ ಮಾಡಿದ್ದು ಸರಿ. ಆದರೆ, ಓರ್ವ ಕೆಎಎಸ್ ಅಧಿಕಾರಿಯಾಗಿ ಮಹೇಶ್ ಕರ್ಜಗಿ ಅವರು ಪಟ್ಟಿಯನ್ನು ಕೂಲಂಕಶವಾಗಿ ಪರಿಶೀಲನೆ ನಡೆಸದೇ ಅದು ಹೇಗೆ ಸಹಿ ಹಾಕಿದರು? ಇದನ್ನು ಕರ್ತವ್ಯ ನಿರ್ಲಕ್ಷ್ಯ ಎಂದೇ ಹೇಳಬೇಕಾಗುತ್ತದೆ. ಇಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿಚಾರದಲ್ಲಿ ಸಚಿವರು ಅಥವಾ ಸರ್ಕಾರ ಕ್ರಮಕ್ಕೆ ಮುಂದಾಗುತ್ತದೆಯೇ? ಪ್ರಮುಖವಾಗಿ ತಮ್ಮ ಆಪ್ತ ಕಾರ್ಯದರ್ಶಿ ಅವರ ಈ ನಿರ್ಲಕ್ಷ್ಯದ ಕರ್ತವ್ಯಕ್ಕೆ ಯು.ಟಿ. ಖಾದರ್ ಅವರು ಕ್ರಮ ಕೈಗೊಳ್ಳುವರೇ?

ಎಸ್.ಆರ್. ಅನಿರುದ್ಧ ವಸಿಷ್ಠ
ಮೊ: 9008761663

Tags: Minister TPMinister U T KhadarU T KhadharUrban development ministry karnataka
Previous Post

ಕೇರಳದ ಹಲವೆಡೆ ರೆಡ್ ಅಲರ್ಟ್, ಇಡುಕ್ಕಿ ಡ್ಯಾಂನಿಂದ ನೀರು ಹೊರಕ್ಕೆ

Next Post

ಗುರುವಿನ ಅತಿಚಾರ ಫಲ ಅತಿಯಾದೀತೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗುರುವಿನ ಅತಿಚಾರ ಫಲ ಅತಿಯಾದೀತೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!